Homeಕರ್ನಾಟಕಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ - ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

- Advertisement -
- Advertisement -

ವಿಜಯ ನಗರ ಜಿಲ್ಲಾ ಉದ್ಘಾಟನೆಯ ಸಮಾರೋಪ ಸಮಾರಂಭದಲ್ಲಿ, ವೇದಿಕೆಯಲ್ಲಿ ಹಾಡು ಹಾಡುತ್ತಿದ್ದ ಗಾಯಕಿ ಹಿಂದುತ್ವದ ಪರವಾಗಿ ಘೋಷಣೆ ಕೂಗಿದ ಕಾರಣಕ್ಕೆ, ಕಾರ್ಯಕ್ರಮವನ್ನು ಮೊಟಕುಗೊಳಿಸಿರುವ ಘಟನೆ ಭಾನುವಾರ ವಿಜಯನಗರದಲ್ಲಿ ನಡೆದಿದೆ.

ನೂತನ ಜಿಲ್ಲೆ ಉದ್ಘಾಟನೆಯ ಸಮಾರೋಪ ಸಮಾರಂಭವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿತ್ತು. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಹಲವಾರು ಸಾಂಸ್ಕೃತಿಕ ಪ್ರದರ್ಶನಗಳನ್ನೂ ಏರ್ಪಡಿಸಲಾಗಿತ್ತು. ಆದರೆ ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಹಾಡುಗಾರ್ತಿ ಲಕ್ಷ್ಮಿದುಬೆ ಅವರು ಹಿಂದುತ್ವದ ಪರವಾಗಿ ಘೋಷಣೆಗಳನ್ನು ಕೂಗಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌‌ ಕಾರ್ಯಕ್ರಮವನ್ನು ಮೊಟಕುಗೊಳಿಸಲು ಆದೇಶಿದ್ದಾರೆ.

ಇದನ್ನೂ ಓದಿ: ಯುಪಿ ಸರ್ಕಾರದ ದಬ್ಬಾಳಿಕೆ ತಡೆಯಲು ಜಂಟಿ ವಿರೋಧದ ಅವಶ್ಯಕತೆಯಿದೆ- ಸಂಜಯ್ ರಾವತ್

ಲಕ್ಷ್ಮಿ ದುಬೆ ಅವರನ್ನು ಭಕ್ತಿಗೀತೆ ಹಾಡಿಸುವುದಾಗಿ ಗೊತ್ತು ಮಾಡಲಾಗಿತ್ತು. ಆದರೆ ಅವರು ವೇದಿಕೆಗೆ ಬರುವ ಮೊದಲೆ ಅವರದೇ ಕಲಾವಿದನೊಬ್ಬ ಲಕ್ಷ್ಮಿ ದುಬೆ ಮತ್ತು ಹಿಂದುತ್ವದ ಬಗ್ಗೆ ಹೊಗಳುವುದು ಸೇರಿದಂತೆ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದನು. (ವಿಡಿಯೊ ನೋಡಿ)

ನಂತರ ವೇದಿಕೆಗೆ ಆಗಮಿಸಿದ ಲಕ್ಷ್ಮಿ ದುಬೆ ಅವರು, ಅವಕಾಶ ನೀಡಿದ ಆನಂದ್ ಸಿಂಗ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಹಾಡುವುದಕ್ಕೆ ಮುಂಚೆಯೆ, ಅವರು ಕೂಡಾ ಹಿಂದುತ್ವದ ಗುಣಗಾಣ ಮಾಡುವುದಾಗಿ ಹೇಳಿದ್ದಾರೆ.

ಇದಾದ ನಂತರ ಹಾಡುವುದಕ್ಕೆ ಶುರುಮಾಡಿದ ಲಕ್ಷ್ಮಿ ಅವರು, ಹಾಡಿನ ಮಧ್ಯೆ, ‘‘ಶ್ರೀರಾಮನ ದರ್ಶನ ಪಡೆಯಲು ಸ್ವಲ್ಪ ಹೊತ್ತಾಗುತ್ತದೆ. ಭಗವಾಧ್ವಜದ ಬಲದ ಎದುರು ಬ್ರಹ್ಮಾಂಡವೆ ತಲೆಬಾಗಿಸುತ್ತದೆ. ಹೀಗಾಗಿಯೆ ನನ್ನ ಭಗವಾಧ್ವಜ ಎತ್ತರದಲ್ಲಿ ಹಾರಾಡುತ್ತಾ ಇರುತ್ತದೆ. ಕಣಕಣದಲ್ಲೂ ಶ್ರೀರಾಮ್‌ ಎಂದು ಬರೆಯುತ್ತೇವೆ. ಇಲ್ಲಿ ನನ್ನ ಅಣ್ಣ ಆನಂದ್ ಸಿಂಗ್‌ ಕೂತಿದ್ದಾರೆ” ಎಂದೆಲ್ಲಾ ಹೇಳಿದ್ದಾರೆ. (ವಿಡಿಯೊ ನೋಡಿ)

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ನಂತರ ಮತ್ತೆ ಹಾಡಲು ಶುರು ಮಾಡಿದ ಲಕ್ಷ್ಮಿ ಹಾಡಿನ ಮಧ್ಯೆ, “ಗೋ ಹತ್ಯೆಯನ್ನು ನಿಲ್ಲಿಸಿ, ಇದು ಪ್ರತಿ ಹಿಂದೂಗಳ ಮಾತಾಗಿದೆ. ಹಿಂದೂಸ್ಥಾನದಲ್ಲಿ ಇರಬೇಕೆಂದರೆ ವಂದೇ ಮಾತರಂ ಹೇಳಬೇಕು” ಎಂದು ಹೇಳಿದ್ದಲ್ಲದೆ, ಬಹಳ ದೇಶದ್ರೋಹಿಗಳು ಭಾರತದಲ್ಲಿ ಇದ್ದಾರೆ ಎಂದು ಅವರು ಹೇಳಿದ್ದಾರೆ.

ಇದರ ನಂತರ ಹಾಡು ಮುಗಿಸಿದ ಅವರು, “ಕರ್ನಾಟಕದಲ್ಲಿ ಮೊದಲ ಬಾರಿಗೆ ಹಿಂದುತ್ವದ ದೀಪ ಬೆಳಗಿಸಲು ನನ್ನ ಅಣ್ಣ ಆನಂದ್‌ ಸಿಂಗ್‌ ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

“ಶ್ರೀರಾಮನ ಮಂದಿರ ನಿರ್ಮಾಣದ ಬಗ್ಗೆ ಜನ ಹಲವು ವರ್ಷಗಳಿಂದ ಕನಸು ಕಾಣುತ್ತಿದ್ದರು. ಅದನ್ನು ಪ್ರಧಾನಿ ಮೋದಿಯವರು ಸಾಧ್ಯವಾಗಿಸಿದ್ದಾರೆ. ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಮಾಡಿದ್ದಾರೆ… ಮೋದಿಯವರಿಗೆ ಇಲ್ಲಿಂದಲೇ ಸಾಷ್ಟಾಂಗ ನಮಸ್ಕಾರ ಮಾಡುವೆ. ಭಾರತದಲ್ಲಿ ಇರುವ ಶತ್ರುಗಳನ್ನು ಒದ್ದೋಡಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ. ಇದಕ್ಕೆ ಕಾರ್ಯಕ್ರಮದ ಸಂಘಟಕರು ಆಕ್ಷೇಪ ವ್ಯಕ್ತಪಡಿಸಿ, ಪದ ಬಳಕೆ ಮಾಡಬಾರದು ಎಂದು ಸೂಚಿಸಿದ್ದಾರೆ.

ಅದಾಗ್ಯೂ, ಇಷ್ಟಕ್ಕೆ ನಿಲ್ಲದ ಲಕ್ಷ್ಮಿ ಅವರು, ಮತ್ತೆ ಎರಡು ಲೈನ್ ಭಜನೆ ಹಾಡುವುದಾಗಿ ಅನುಮತಿ ಕೇಳಿದ್ದಾರೆ. ಈ ಸಮಯದಲ್ಲೂ ಲಕ್ಷ್ಮಿ ಅವರು, “ಎಲ್ಲೆಡೆ ಗೋ ಹತ್ಯೆ ನಿಲ್ಲಿಸುತ್ತೇವೆ, ಅದು ನಮ್ಮ ಸಂಕಿಲ್ಪ. ಅದು ಭಾರತದ ಫೋಷಣೆಯೂ ಹೌದು. ಭಾರತದ ಅಭಿಮಾನ ಹಿಂದೂ” ಎಂದು ಹಾಡಿದ್ದಾರೆ. (ವಿಡಿಯೊ ನೋಡಿ)

ಇದನ್ನೂ ಓದಿ: ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ಪ್ರಿಯಾಂಕ ಗಾಂಧಿ ಆಕ್ರೋಶ

ಈ ವೇಳೆ ಬಹಳ ಸಿಟ್ಟಾದ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಅವರು ಅವರ ಕಾರ್ಯಕ್ರಮ ಮೊಟಕುಗೊಳಿಸಲು ಆದೇಶ ನೀಡಿದ್ದಾರೆ. ಜೊತೆಗೆ ಮುಖ್ಯವೇದಿಕೆಯ ವಿದ್ಯುತ್‌ ದೀಪ ಆರಿಸಲಾಗಿದೆ. ಬಳಿಕ ಲಕ್ಷ್ಮಿದುಬೆ ಮತ್ತು ಅವರ ತಂಡದವರು ವೇದಿಕೆಯಿಂದ ನಿರ್ಗಮಿಸಿದರು ಎಂದು ವರದಿಯಾಗಿದೆ. ಇದರ ನಂತರ ಕಾರ್ಯಕ್ರಮ ಮುಗಿದಿದೆ ಎಂದು ಸಂಘಟಕರು ಘೋಷಿಸಿದ್ದಾರೆ.

“ಲಕ್ಷ್ಮಿ ದುಬೆ ಅವರು ಭಕ್ತಿ ಗೀತೆ ಹಾಡುವುದಾಗಿ ಹೇಳಿದ್ದರು. ಆದರೆ ವೇದಿಕೆಯಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಈ ಬಗ್ಗೆ ಅವರನ್ನು ವಿವರಣೆ ಕೇಳಲಾಗಿದೆ” ಎಂದು ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಅನಿರುದ್ದ್ ಪಿ. ಶ್ರವಣ್ ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಉಂಟಾಗಿದ್ದು ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಘೋಷಣೆ ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಸಮಯಕ್ಕೆ ಸರಿಯಾಗಿ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗೆ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಜನರು ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ವೈರುಧ್ಯಗಳ ನಡುವೆ ’ಪರ್ಯಾಯವಾಗಲು ಹೆಣಗುತ್ತಿರುವ’ ಕಾಂಗ್ರೆಸ್; ’ಪ್ರಾದೇಶಿಕ ಪಕ್ಷವಾಗದ’ ಜೆಡಿಎಸ್

ಇದನ್ನೂ ಓದಿ: ಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...