Homeಕರ್ನಾಟಕಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ - ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

- Advertisement -
- Advertisement -

ವಿಜಯ ನಗರ ಜಿಲ್ಲಾ ಉದ್ಘಾಟನೆಯ ಸಮಾರೋಪ ಸಮಾರಂಭದಲ್ಲಿ, ವೇದಿಕೆಯಲ್ಲಿ ಹಾಡು ಹಾಡುತ್ತಿದ್ದ ಗಾಯಕಿ ಹಿಂದುತ್ವದ ಪರವಾಗಿ ಘೋಷಣೆ ಕೂಗಿದ ಕಾರಣಕ್ಕೆ, ಕಾರ್ಯಕ್ರಮವನ್ನು ಮೊಟಕುಗೊಳಿಸಿರುವ ಘಟನೆ ಭಾನುವಾರ ವಿಜಯನಗರದಲ್ಲಿ ನಡೆದಿದೆ.

ನೂತನ ಜಿಲ್ಲೆ ಉದ್ಘಾಟನೆಯ ಸಮಾರೋಪ ಸಮಾರಂಭವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿತ್ತು. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಹಲವಾರು ಸಾಂಸ್ಕೃತಿಕ ಪ್ರದರ್ಶನಗಳನ್ನೂ ಏರ್ಪಡಿಸಲಾಗಿತ್ತು. ಆದರೆ ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಹಾಡುಗಾರ್ತಿ ಲಕ್ಷ್ಮಿದುಬೆ ಅವರು ಹಿಂದುತ್ವದ ಪರವಾಗಿ ಘೋಷಣೆಗಳನ್ನು ಕೂಗಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌‌ ಕಾರ್ಯಕ್ರಮವನ್ನು ಮೊಟಕುಗೊಳಿಸಲು ಆದೇಶಿದ್ದಾರೆ.

ಇದನ್ನೂ ಓದಿ: ಯುಪಿ ಸರ್ಕಾರದ ದಬ್ಬಾಳಿಕೆ ತಡೆಯಲು ಜಂಟಿ ವಿರೋಧದ ಅವಶ್ಯಕತೆಯಿದೆ- ಸಂಜಯ್ ರಾವತ್

ಲಕ್ಷ್ಮಿ ದುಬೆ ಅವರನ್ನು ಭಕ್ತಿಗೀತೆ ಹಾಡಿಸುವುದಾಗಿ ಗೊತ್ತು ಮಾಡಲಾಗಿತ್ತು. ಆದರೆ ಅವರು ವೇದಿಕೆಗೆ ಬರುವ ಮೊದಲೆ ಅವರದೇ ಕಲಾವಿದನೊಬ್ಬ ಲಕ್ಷ್ಮಿ ದುಬೆ ಮತ್ತು ಹಿಂದುತ್ವದ ಬಗ್ಗೆ ಹೊಗಳುವುದು ಸೇರಿದಂತೆ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದನು. (ವಿಡಿಯೊ ನೋಡಿ)

ನಂತರ ವೇದಿಕೆಗೆ ಆಗಮಿಸಿದ ಲಕ್ಷ್ಮಿ ದುಬೆ ಅವರು, ಅವಕಾಶ ನೀಡಿದ ಆನಂದ್ ಸಿಂಗ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಹಾಡುವುದಕ್ಕೆ ಮುಂಚೆಯೆ, ಅವರು ಕೂಡಾ ಹಿಂದುತ್ವದ ಗುಣಗಾಣ ಮಾಡುವುದಾಗಿ ಹೇಳಿದ್ದಾರೆ.

ಇದಾದ ನಂತರ ಹಾಡುವುದಕ್ಕೆ ಶುರುಮಾಡಿದ ಲಕ್ಷ್ಮಿ ಅವರು, ಹಾಡಿನ ಮಧ್ಯೆ, ‘‘ಶ್ರೀರಾಮನ ದರ್ಶನ ಪಡೆಯಲು ಸ್ವಲ್ಪ ಹೊತ್ತಾಗುತ್ತದೆ. ಭಗವಾಧ್ವಜದ ಬಲದ ಎದುರು ಬ್ರಹ್ಮಾಂಡವೆ ತಲೆಬಾಗಿಸುತ್ತದೆ. ಹೀಗಾಗಿಯೆ ನನ್ನ ಭಗವಾಧ್ವಜ ಎತ್ತರದಲ್ಲಿ ಹಾರಾಡುತ್ತಾ ಇರುತ್ತದೆ. ಕಣಕಣದಲ್ಲೂ ಶ್ರೀರಾಮ್‌ ಎಂದು ಬರೆಯುತ್ತೇವೆ. ಇಲ್ಲಿ ನನ್ನ ಅಣ್ಣ ಆನಂದ್ ಸಿಂಗ್‌ ಕೂತಿದ್ದಾರೆ” ಎಂದೆಲ್ಲಾ ಹೇಳಿದ್ದಾರೆ. (ವಿಡಿಯೊ ನೋಡಿ)

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ನಂತರ ಮತ್ತೆ ಹಾಡಲು ಶುರು ಮಾಡಿದ ಲಕ್ಷ್ಮಿ ಹಾಡಿನ ಮಧ್ಯೆ, “ಗೋ ಹತ್ಯೆಯನ್ನು ನಿಲ್ಲಿಸಿ, ಇದು ಪ್ರತಿ ಹಿಂದೂಗಳ ಮಾತಾಗಿದೆ. ಹಿಂದೂಸ್ಥಾನದಲ್ಲಿ ಇರಬೇಕೆಂದರೆ ವಂದೇ ಮಾತರಂ ಹೇಳಬೇಕು” ಎಂದು ಹೇಳಿದ್ದಲ್ಲದೆ, ಬಹಳ ದೇಶದ್ರೋಹಿಗಳು ಭಾರತದಲ್ಲಿ ಇದ್ದಾರೆ ಎಂದು ಅವರು ಹೇಳಿದ್ದಾರೆ.

ಇದರ ನಂತರ ಹಾಡು ಮುಗಿಸಿದ ಅವರು, “ಕರ್ನಾಟಕದಲ್ಲಿ ಮೊದಲ ಬಾರಿಗೆ ಹಿಂದುತ್ವದ ದೀಪ ಬೆಳಗಿಸಲು ನನ್ನ ಅಣ್ಣ ಆನಂದ್‌ ಸಿಂಗ್‌ ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

“ಶ್ರೀರಾಮನ ಮಂದಿರ ನಿರ್ಮಾಣದ ಬಗ್ಗೆ ಜನ ಹಲವು ವರ್ಷಗಳಿಂದ ಕನಸು ಕಾಣುತ್ತಿದ್ದರು. ಅದನ್ನು ಪ್ರಧಾನಿ ಮೋದಿಯವರು ಸಾಧ್ಯವಾಗಿಸಿದ್ದಾರೆ. ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಮಾಡಿದ್ದಾರೆ… ಮೋದಿಯವರಿಗೆ ಇಲ್ಲಿಂದಲೇ ಸಾಷ್ಟಾಂಗ ನಮಸ್ಕಾರ ಮಾಡುವೆ. ಭಾರತದಲ್ಲಿ ಇರುವ ಶತ್ರುಗಳನ್ನು ಒದ್ದೋಡಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ. ಇದಕ್ಕೆ ಕಾರ್ಯಕ್ರಮದ ಸಂಘಟಕರು ಆಕ್ಷೇಪ ವ್ಯಕ್ತಪಡಿಸಿ, ಪದ ಬಳಕೆ ಮಾಡಬಾರದು ಎಂದು ಸೂಚಿಸಿದ್ದಾರೆ.

ಅದಾಗ್ಯೂ, ಇಷ್ಟಕ್ಕೆ ನಿಲ್ಲದ ಲಕ್ಷ್ಮಿ ಅವರು, ಮತ್ತೆ ಎರಡು ಲೈನ್ ಭಜನೆ ಹಾಡುವುದಾಗಿ ಅನುಮತಿ ಕೇಳಿದ್ದಾರೆ. ಈ ಸಮಯದಲ್ಲೂ ಲಕ್ಷ್ಮಿ ಅವರು, “ಎಲ್ಲೆಡೆ ಗೋ ಹತ್ಯೆ ನಿಲ್ಲಿಸುತ್ತೇವೆ, ಅದು ನಮ್ಮ ಸಂಕಿಲ್ಪ. ಅದು ಭಾರತದ ಫೋಷಣೆಯೂ ಹೌದು. ಭಾರತದ ಅಭಿಮಾನ ಹಿಂದೂ” ಎಂದು ಹಾಡಿದ್ದಾರೆ. (ವಿಡಿಯೊ ನೋಡಿ)

ಇದನ್ನೂ ಓದಿ: ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ಪ್ರಿಯಾಂಕ ಗಾಂಧಿ ಆಕ್ರೋಶ

ಈ ವೇಳೆ ಬಹಳ ಸಿಟ್ಟಾದ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಅವರು ಅವರ ಕಾರ್ಯಕ್ರಮ ಮೊಟಕುಗೊಳಿಸಲು ಆದೇಶ ನೀಡಿದ್ದಾರೆ. ಜೊತೆಗೆ ಮುಖ್ಯವೇದಿಕೆಯ ವಿದ್ಯುತ್‌ ದೀಪ ಆರಿಸಲಾಗಿದೆ. ಬಳಿಕ ಲಕ್ಷ್ಮಿದುಬೆ ಮತ್ತು ಅವರ ತಂಡದವರು ವೇದಿಕೆಯಿಂದ ನಿರ್ಗಮಿಸಿದರು ಎಂದು ವರದಿಯಾಗಿದೆ. ಇದರ ನಂತರ ಕಾರ್ಯಕ್ರಮ ಮುಗಿದಿದೆ ಎಂದು ಸಂಘಟಕರು ಘೋಷಿಸಿದ್ದಾರೆ.

“ಲಕ್ಷ್ಮಿ ದುಬೆ ಅವರು ಭಕ್ತಿ ಗೀತೆ ಹಾಡುವುದಾಗಿ ಹೇಳಿದ್ದರು. ಆದರೆ ವೇದಿಕೆಯಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಈ ಬಗ್ಗೆ ಅವರನ್ನು ವಿವರಣೆ ಕೇಳಲಾಗಿದೆ” ಎಂದು ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಅನಿರುದ್ದ್ ಪಿ. ಶ್ರವಣ್ ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಉಂಟಾಗಿದ್ದು ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಘೋಷಣೆ ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಸಮಯಕ್ಕೆ ಸರಿಯಾಗಿ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗೆ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಜನರು ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ವೈರುಧ್ಯಗಳ ನಡುವೆ ’ಪರ್ಯಾಯವಾಗಲು ಹೆಣಗುತ್ತಿರುವ’ ಕಾಂಗ್ರೆಸ್; ’ಪ್ರಾದೇಶಿಕ ಪಕ್ಷವಾಗದ’ ಜೆಡಿಎಸ್

ಇದನ್ನೂ ಓದಿ: ಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....