Homeಕರ್ನಾಟಕಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ - ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

- Advertisement -
- Advertisement -

ವಿಜಯ ನಗರ ಜಿಲ್ಲಾ ಉದ್ಘಾಟನೆಯ ಸಮಾರೋಪ ಸಮಾರಂಭದಲ್ಲಿ, ವೇದಿಕೆಯಲ್ಲಿ ಹಾಡು ಹಾಡುತ್ತಿದ್ದ ಗಾಯಕಿ ಹಿಂದುತ್ವದ ಪರವಾಗಿ ಘೋಷಣೆ ಕೂಗಿದ ಕಾರಣಕ್ಕೆ, ಕಾರ್ಯಕ್ರಮವನ್ನು ಮೊಟಕುಗೊಳಿಸಿರುವ ಘಟನೆ ಭಾನುವಾರ ವಿಜಯನಗರದಲ್ಲಿ ನಡೆದಿದೆ.

ನೂತನ ಜಿಲ್ಲೆ ಉದ್ಘಾಟನೆಯ ಸಮಾರೋಪ ಸಮಾರಂಭವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿತ್ತು. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಹಲವಾರು ಸಾಂಸ್ಕೃತಿಕ ಪ್ರದರ್ಶನಗಳನ್ನೂ ಏರ್ಪಡಿಸಲಾಗಿತ್ತು. ಆದರೆ ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಹಾಡುಗಾರ್ತಿ ಲಕ್ಷ್ಮಿದುಬೆ ಅವರು ಹಿಂದುತ್ವದ ಪರವಾಗಿ ಘೋಷಣೆಗಳನ್ನು ಕೂಗಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌‌ ಕಾರ್ಯಕ್ರಮವನ್ನು ಮೊಟಕುಗೊಳಿಸಲು ಆದೇಶಿದ್ದಾರೆ.

ಇದನ್ನೂ ಓದಿ: ಯುಪಿ ಸರ್ಕಾರದ ದಬ್ಬಾಳಿಕೆ ತಡೆಯಲು ಜಂಟಿ ವಿರೋಧದ ಅವಶ್ಯಕತೆಯಿದೆ- ಸಂಜಯ್ ರಾವತ್

ಲಕ್ಷ್ಮಿ ದುಬೆ ಅವರನ್ನು ಭಕ್ತಿಗೀತೆ ಹಾಡಿಸುವುದಾಗಿ ಗೊತ್ತು ಮಾಡಲಾಗಿತ್ತು. ಆದರೆ ಅವರು ವೇದಿಕೆಗೆ ಬರುವ ಮೊದಲೆ ಅವರದೇ ಕಲಾವಿದನೊಬ್ಬ ಲಕ್ಷ್ಮಿ ದುಬೆ ಮತ್ತು ಹಿಂದುತ್ವದ ಬಗ್ಗೆ ಹೊಗಳುವುದು ಸೇರಿದಂತೆ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದನು. (ವಿಡಿಯೊ ನೋಡಿ)

ನಂತರ ವೇದಿಕೆಗೆ ಆಗಮಿಸಿದ ಲಕ್ಷ್ಮಿ ದುಬೆ ಅವರು, ಅವಕಾಶ ನೀಡಿದ ಆನಂದ್ ಸಿಂಗ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಹಾಡುವುದಕ್ಕೆ ಮುಂಚೆಯೆ, ಅವರು ಕೂಡಾ ಹಿಂದುತ್ವದ ಗುಣಗಾಣ ಮಾಡುವುದಾಗಿ ಹೇಳಿದ್ದಾರೆ.

ಇದಾದ ನಂತರ ಹಾಡುವುದಕ್ಕೆ ಶುರುಮಾಡಿದ ಲಕ್ಷ್ಮಿ ಅವರು, ಹಾಡಿನ ಮಧ್ಯೆ, ‘‘ಶ್ರೀರಾಮನ ದರ್ಶನ ಪಡೆಯಲು ಸ್ವಲ್ಪ ಹೊತ್ತಾಗುತ್ತದೆ. ಭಗವಾಧ್ವಜದ ಬಲದ ಎದುರು ಬ್ರಹ್ಮಾಂಡವೆ ತಲೆಬಾಗಿಸುತ್ತದೆ. ಹೀಗಾಗಿಯೆ ನನ್ನ ಭಗವಾಧ್ವಜ ಎತ್ತರದಲ್ಲಿ ಹಾರಾಡುತ್ತಾ ಇರುತ್ತದೆ. ಕಣಕಣದಲ್ಲೂ ಶ್ರೀರಾಮ್‌ ಎಂದು ಬರೆಯುತ್ತೇವೆ. ಇಲ್ಲಿ ನನ್ನ ಅಣ್ಣ ಆನಂದ್ ಸಿಂಗ್‌ ಕೂತಿದ್ದಾರೆ” ಎಂದೆಲ್ಲಾ ಹೇಳಿದ್ದಾರೆ. (ವಿಡಿಯೊ ನೋಡಿ)

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ನಂತರ ಮತ್ತೆ ಹಾಡಲು ಶುರು ಮಾಡಿದ ಲಕ್ಷ್ಮಿ ಹಾಡಿನ ಮಧ್ಯೆ, “ಗೋ ಹತ್ಯೆಯನ್ನು ನಿಲ್ಲಿಸಿ, ಇದು ಪ್ರತಿ ಹಿಂದೂಗಳ ಮಾತಾಗಿದೆ. ಹಿಂದೂಸ್ಥಾನದಲ್ಲಿ ಇರಬೇಕೆಂದರೆ ವಂದೇ ಮಾತರಂ ಹೇಳಬೇಕು” ಎಂದು ಹೇಳಿದ್ದಲ್ಲದೆ, ಬಹಳ ದೇಶದ್ರೋಹಿಗಳು ಭಾರತದಲ್ಲಿ ಇದ್ದಾರೆ ಎಂದು ಅವರು ಹೇಳಿದ್ದಾರೆ.

ಇದರ ನಂತರ ಹಾಡು ಮುಗಿಸಿದ ಅವರು, “ಕರ್ನಾಟಕದಲ್ಲಿ ಮೊದಲ ಬಾರಿಗೆ ಹಿಂದುತ್ವದ ದೀಪ ಬೆಳಗಿಸಲು ನನ್ನ ಅಣ್ಣ ಆನಂದ್‌ ಸಿಂಗ್‌ ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

“ಶ್ರೀರಾಮನ ಮಂದಿರ ನಿರ್ಮಾಣದ ಬಗ್ಗೆ ಜನ ಹಲವು ವರ್ಷಗಳಿಂದ ಕನಸು ಕಾಣುತ್ತಿದ್ದರು. ಅದನ್ನು ಪ್ರಧಾನಿ ಮೋದಿಯವರು ಸಾಧ್ಯವಾಗಿಸಿದ್ದಾರೆ. ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಮಾಡಿದ್ದಾರೆ… ಮೋದಿಯವರಿಗೆ ಇಲ್ಲಿಂದಲೇ ಸಾಷ್ಟಾಂಗ ನಮಸ್ಕಾರ ಮಾಡುವೆ. ಭಾರತದಲ್ಲಿ ಇರುವ ಶತ್ರುಗಳನ್ನು ಒದ್ದೋಡಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ. ಇದಕ್ಕೆ ಕಾರ್ಯಕ್ರಮದ ಸಂಘಟಕರು ಆಕ್ಷೇಪ ವ್ಯಕ್ತಪಡಿಸಿ, ಪದ ಬಳಕೆ ಮಾಡಬಾರದು ಎಂದು ಸೂಚಿಸಿದ್ದಾರೆ.

ಅದಾಗ್ಯೂ, ಇಷ್ಟಕ್ಕೆ ನಿಲ್ಲದ ಲಕ್ಷ್ಮಿ ಅವರು, ಮತ್ತೆ ಎರಡು ಲೈನ್ ಭಜನೆ ಹಾಡುವುದಾಗಿ ಅನುಮತಿ ಕೇಳಿದ್ದಾರೆ. ಈ ಸಮಯದಲ್ಲೂ ಲಕ್ಷ್ಮಿ ಅವರು, “ಎಲ್ಲೆಡೆ ಗೋ ಹತ್ಯೆ ನಿಲ್ಲಿಸುತ್ತೇವೆ, ಅದು ನಮ್ಮ ಸಂಕಿಲ್ಪ. ಅದು ಭಾರತದ ಫೋಷಣೆಯೂ ಹೌದು. ಭಾರತದ ಅಭಿಮಾನ ಹಿಂದೂ” ಎಂದು ಹಾಡಿದ್ದಾರೆ. (ವಿಡಿಯೊ ನೋಡಿ)

ಇದನ್ನೂ ಓದಿ: ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ಪ್ರಿಯಾಂಕ ಗಾಂಧಿ ಆಕ್ರೋಶ

ಈ ವೇಳೆ ಬಹಳ ಸಿಟ್ಟಾದ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಅವರು ಅವರ ಕಾರ್ಯಕ್ರಮ ಮೊಟಕುಗೊಳಿಸಲು ಆದೇಶ ನೀಡಿದ್ದಾರೆ. ಜೊತೆಗೆ ಮುಖ್ಯವೇದಿಕೆಯ ವಿದ್ಯುತ್‌ ದೀಪ ಆರಿಸಲಾಗಿದೆ. ಬಳಿಕ ಲಕ್ಷ್ಮಿದುಬೆ ಮತ್ತು ಅವರ ತಂಡದವರು ವೇದಿಕೆಯಿಂದ ನಿರ್ಗಮಿಸಿದರು ಎಂದು ವರದಿಯಾಗಿದೆ. ಇದರ ನಂತರ ಕಾರ್ಯಕ್ರಮ ಮುಗಿದಿದೆ ಎಂದು ಸಂಘಟಕರು ಘೋಷಿಸಿದ್ದಾರೆ.

“ಲಕ್ಷ್ಮಿ ದುಬೆ ಅವರು ಭಕ್ತಿ ಗೀತೆ ಹಾಡುವುದಾಗಿ ಹೇಳಿದ್ದರು. ಆದರೆ ವೇದಿಕೆಯಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಈ ಬಗ್ಗೆ ಅವರನ್ನು ವಿವರಣೆ ಕೇಳಲಾಗಿದೆ” ಎಂದು ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಅನಿರುದ್ದ್ ಪಿ. ಶ್ರವಣ್ ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಉಂಟಾಗಿದ್ದು ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಘೋಷಣೆ ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಸಮಯಕ್ಕೆ ಸರಿಯಾಗಿ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗೆ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಜನರು ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ವೈರುಧ್ಯಗಳ ನಡುವೆ ’ಪರ್ಯಾಯವಾಗಲು ಹೆಣಗುತ್ತಿರುವ’ ಕಾಂಗ್ರೆಸ್; ’ಪ್ರಾದೇಶಿಕ ಪಕ್ಷವಾಗದ’ ಜೆಡಿಎಸ್

ಇದನ್ನೂ ಓದಿ: ಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...