Homeಕರ್ನಾಟಕಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ - ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

- Advertisement -
- Advertisement -

ವಿಜಯ ನಗರ ಜಿಲ್ಲಾ ಉದ್ಘಾಟನೆಯ ಸಮಾರೋಪ ಸಮಾರಂಭದಲ್ಲಿ, ವೇದಿಕೆಯಲ್ಲಿ ಹಾಡು ಹಾಡುತ್ತಿದ್ದ ಗಾಯಕಿ ಹಿಂದುತ್ವದ ಪರವಾಗಿ ಘೋಷಣೆ ಕೂಗಿದ ಕಾರಣಕ್ಕೆ, ಕಾರ್ಯಕ್ರಮವನ್ನು ಮೊಟಕುಗೊಳಿಸಿರುವ ಘಟನೆ ಭಾನುವಾರ ವಿಜಯನಗರದಲ್ಲಿ ನಡೆದಿದೆ.

ನೂತನ ಜಿಲ್ಲೆ ಉದ್ಘಾಟನೆಯ ಸಮಾರೋಪ ಸಮಾರಂಭವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿತ್ತು. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಹಲವಾರು ಸಾಂಸ್ಕೃತಿಕ ಪ್ರದರ್ಶನಗಳನ್ನೂ ಏರ್ಪಡಿಸಲಾಗಿತ್ತು. ಆದರೆ ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಹಾಡುಗಾರ್ತಿ ಲಕ್ಷ್ಮಿದುಬೆ ಅವರು ಹಿಂದುತ್ವದ ಪರವಾಗಿ ಘೋಷಣೆಗಳನ್ನು ಕೂಗಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌‌ ಕಾರ್ಯಕ್ರಮವನ್ನು ಮೊಟಕುಗೊಳಿಸಲು ಆದೇಶಿದ್ದಾರೆ.

ಇದನ್ನೂ ಓದಿ: ಯುಪಿ ಸರ್ಕಾರದ ದಬ್ಬಾಳಿಕೆ ತಡೆಯಲು ಜಂಟಿ ವಿರೋಧದ ಅವಶ್ಯಕತೆಯಿದೆ- ಸಂಜಯ್ ರಾವತ್

ಲಕ್ಷ್ಮಿ ದುಬೆ ಅವರನ್ನು ಭಕ್ತಿಗೀತೆ ಹಾಡಿಸುವುದಾಗಿ ಗೊತ್ತು ಮಾಡಲಾಗಿತ್ತು. ಆದರೆ ಅವರು ವೇದಿಕೆಗೆ ಬರುವ ಮೊದಲೆ ಅವರದೇ ಕಲಾವಿದನೊಬ್ಬ ಲಕ್ಷ್ಮಿ ದುಬೆ ಮತ್ತು ಹಿಂದುತ್ವದ ಬಗ್ಗೆ ಹೊಗಳುವುದು ಸೇರಿದಂತೆ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದನು. (ವಿಡಿಯೊ ನೋಡಿ)

ನಂತರ ವೇದಿಕೆಗೆ ಆಗಮಿಸಿದ ಲಕ್ಷ್ಮಿ ದುಬೆ ಅವರು, ಅವಕಾಶ ನೀಡಿದ ಆನಂದ್ ಸಿಂಗ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಹಾಡುವುದಕ್ಕೆ ಮುಂಚೆಯೆ, ಅವರು ಕೂಡಾ ಹಿಂದುತ್ವದ ಗುಣಗಾಣ ಮಾಡುವುದಾಗಿ ಹೇಳಿದ್ದಾರೆ.

ಇದಾದ ನಂತರ ಹಾಡುವುದಕ್ಕೆ ಶುರುಮಾಡಿದ ಲಕ್ಷ್ಮಿ ಅವರು, ಹಾಡಿನ ಮಧ್ಯೆ, ‘‘ಶ್ರೀರಾಮನ ದರ್ಶನ ಪಡೆಯಲು ಸ್ವಲ್ಪ ಹೊತ್ತಾಗುತ್ತದೆ. ಭಗವಾಧ್ವಜದ ಬಲದ ಎದುರು ಬ್ರಹ್ಮಾಂಡವೆ ತಲೆಬಾಗಿಸುತ್ತದೆ. ಹೀಗಾಗಿಯೆ ನನ್ನ ಭಗವಾಧ್ವಜ ಎತ್ತರದಲ್ಲಿ ಹಾರಾಡುತ್ತಾ ಇರುತ್ತದೆ. ಕಣಕಣದಲ್ಲೂ ಶ್ರೀರಾಮ್‌ ಎಂದು ಬರೆಯುತ್ತೇವೆ. ಇಲ್ಲಿ ನನ್ನ ಅಣ್ಣ ಆನಂದ್ ಸಿಂಗ್‌ ಕೂತಿದ್ದಾರೆ” ಎಂದೆಲ್ಲಾ ಹೇಳಿದ್ದಾರೆ. (ವಿಡಿಯೊ ನೋಡಿ)

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ನಂತರ ಮತ್ತೆ ಹಾಡಲು ಶುರು ಮಾಡಿದ ಲಕ್ಷ್ಮಿ ಹಾಡಿನ ಮಧ್ಯೆ, “ಗೋ ಹತ್ಯೆಯನ್ನು ನಿಲ್ಲಿಸಿ, ಇದು ಪ್ರತಿ ಹಿಂದೂಗಳ ಮಾತಾಗಿದೆ. ಹಿಂದೂಸ್ಥಾನದಲ್ಲಿ ಇರಬೇಕೆಂದರೆ ವಂದೇ ಮಾತರಂ ಹೇಳಬೇಕು” ಎಂದು ಹೇಳಿದ್ದಲ್ಲದೆ, ಬಹಳ ದೇಶದ್ರೋಹಿಗಳು ಭಾರತದಲ್ಲಿ ಇದ್ದಾರೆ ಎಂದು ಅವರು ಹೇಳಿದ್ದಾರೆ.

ಇದರ ನಂತರ ಹಾಡು ಮುಗಿಸಿದ ಅವರು, “ಕರ್ನಾಟಕದಲ್ಲಿ ಮೊದಲ ಬಾರಿಗೆ ಹಿಂದುತ್ವದ ದೀಪ ಬೆಳಗಿಸಲು ನನ್ನ ಅಣ್ಣ ಆನಂದ್‌ ಸಿಂಗ್‌ ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

“ಶ್ರೀರಾಮನ ಮಂದಿರ ನಿರ್ಮಾಣದ ಬಗ್ಗೆ ಜನ ಹಲವು ವರ್ಷಗಳಿಂದ ಕನಸು ಕಾಣುತ್ತಿದ್ದರು. ಅದನ್ನು ಪ್ರಧಾನಿ ಮೋದಿಯವರು ಸಾಧ್ಯವಾಗಿಸಿದ್ದಾರೆ. ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಮಾಡಿದ್ದಾರೆ… ಮೋದಿಯವರಿಗೆ ಇಲ್ಲಿಂದಲೇ ಸಾಷ್ಟಾಂಗ ನಮಸ್ಕಾರ ಮಾಡುವೆ. ಭಾರತದಲ್ಲಿ ಇರುವ ಶತ್ರುಗಳನ್ನು ಒದ್ದೋಡಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ. ಇದಕ್ಕೆ ಕಾರ್ಯಕ್ರಮದ ಸಂಘಟಕರು ಆಕ್ಷೇಪ ವ್ಯಕ್ತಪಡಿಸಿ, ಪದ ಬಳಕೆ ಮಾಡಬಾರದು ಎಂದು ಸೂಚಿಸಿದ್ದಾರೆ.

ಅದಾಗ್ಯೂ, ಇಷ್ಟಕ್ಕೆ ನಿಲ್ಲದ ಲಕ್ಷ್ಮಿ ಅವರು, ಮತ್ತೆ ಎರಡು ಲೈನ್ ಭಜನೆ ಹಾಡುವುದಾಗಿ ಅನುಮತಿ ಕೇಳಿದ್ದಾರೆ. ಈ ಸಮಯದಲ್ಲೂ ಲಕ್ಷ್ಮಿ ಅವರು, “ಎಲ್ಲೆಡೆ ಗೋ ಹತ್ಯೆ ನಿಲ್ಲಿಸುತ್ತೇವೆ, ಅದು ನಮ್ಮ ಸಂಕಿಲ್ಪ. ಅದು ಭಾರತದ ಫೋಷಣೆಯೂ ಹೌದು. ಭಾರತದ ಅಭಿಮಾನ ಹಿಂದೂ” ಎಂದು ಹಾಡಿದ್ದಾರೆ. (ವಿಡಿಯೊ ನೋಡಿ)

ಇದನ್ನೂ ಓದಿ: ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ಪ್ರಿಯಾಂಕ ಗಾಂಧಿ ಆಕ್ರೋಶ

ಈ ವೇಳೆ ಬಹಳ ಸಿಟ್ಟಾದ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಅವರು ಅವರ ಕಾರ್ಯಕ್ರಮ ಮೊಟಕುಗೊಳಿಸಲು ಆದೇಶ ನೀಡಿದ್ದಾರೆ. ಜೊತೆಗೆ ಮುಖ್ಯವೇದಿಕೆಯ ವಿದ್ಯುತ್‌ ದೀಪ ಆರಿಸಲಾಗಿದೆ. ಬಳಿಕ ಲಕ್ಷ್ಮಿದುಬೆ ಮತ್ತು ಅವರ ತಂಡದವರು ವೇದಿಕೆಯಿಂದ ನಿರ್ಗಮಿಸಿದರು ಎಂದು ವರದಿಯಾಗಿದೆ. ಇದರ ನಂತರ ಕಾರ್ಯಕ್ರಮ ಮುಗಿದಿದೆ ಎಂದು ಸಂಘಟಕರು ಘೋಷಿಸಿದ್ದಾರೆ.

“ಲಕ್ಷ್ಮಿ ದುಬೆ ಅವರು ಭಕ್ತಿ ಗೀತೆ ಹಾಡುವುದಾಗಿ ಹೇಳಿದ್ದರು. ಆದರೆ ವೇದಿಕೆಯಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಈ ಬಗ್ಗೆ ಅವರನ್ನು ವಿವರಣೆ ಕೇಳಲಾಗಿದೆ” ಎಂದು ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಅನಿರುದ್ದ್ ಪಿ. ಶ್ರವಣ್ ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಉಂಟಾಗಿದ್ದು ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಘೋಷಣೆ ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಸಮಯಕ್ಕೆ ಸರಿಯಾಗಿ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗೆ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಜನರು ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ವೈರುಧ್ಯಗಳ ನಡುವೆ ’ಪರ್ಯಾಯವಾಗಲು ಹೆಣಗುತ್ತಿರುವ’ ಕಾಂಗ್ರೆಸ್; ’ಪ್ರಾದೇಶಿಕ ಪಕ್ಷವಾಗದ’ ಜೆಡಿಎಸ್

ಇದನ್ನೂ ಓದಿ: ಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....