Homeಕರ್ನಾಟಕಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ - ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

- Advertisement -
- Advertisement -

ವಿಜಯ ನಗರ ಜಿಲ್ಲಾ ಉದ್ಘಾಟನೆಯ ಸಮಾರೋಪ ಸಮಾರಂಭದಲ್ಲಿ, ವೇದಿಕೆಯಲ್ಲಿ ಹಾಡು ಹಾಡುತ್ತಿದ್ದ ಗಾಯಕಿ ಹಿಂದುತ್ವದ ಪರವಾಗಿ ಘೋಷಣೆ ಕೂಗಿದ ಕಾರಣಕ್ಕೆ, ಕಾರ್ಯಕ್ರಮವನ್ನು ಮೊಟಕುಗೊಳಿಸಿರುವ ಘಟನೆ ಭಾನುವಾರ ವಿಜಯನಗರದಲ್ಲಿ ನಡೆದಿದೆ.

ನೂತನ ಜಿಲ್ಲೆ ಉದ್ಘಾಟನೆಯ ಸಮಾರೋಪ ಸಮಾರಂಭವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿತ್ತು. ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಹಲವಾರು ಸಾಂಸ್ಕೃತಿಕ ಪ್ರದರ್ಶನಗಳನ್ನೂ ಏರ್ಪಡಿಸಲಾಗಿತ್ತು. ಆದರೆ ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಹಾಡುಗಾರ್ತಿ ಲಕ್ಷ್ಮಿದುಬೆ ಅವರು ಹಿಂದುತ್ವದ ಪರವಾಗಿ ಘೋಷಣೆಗಳನ್ನು ಕೂಗಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌‌ ಕಾರ್ಯಕ್ರಮವನ್ನು ಮೊಟಕುಗೊಳಿಸಲು ಆದೇಶಿದ್ದಾರೆ.

ಇದನ್ನೂ ಓದಿ: ಯುಪಿ ಸರ್ಕಾರದ ದಬ್ಬಾಳಿಕೆ ತಡೆಯಲು ಜಂಟಿ ವಿರೋಧದ ಅವಶ್ಯಕತೆಯಿದೆ- ಸಂಜಯ್ ರಾವತ್

ಲಕ್ಷ್ಮಿ ದುಬೆ ಅವರನ್ನು ಭಕ್ತಿಗೀತೆ ಹಾಡಿಸುವುದಾಗಿ ಗೊತ್ತು ಮಾಡಲಾಗಿತ್ತು. ಆದರೆ ಅವರು ವೇದಿಕೆಗೆ ಬರುವ ಮೊದಲೆ ಅವರದೇ ಕಲಾವಿದನೊಬ್ಬ ಲಕ್ಷ್ಮಿ ದುಬೆ ಮತ್ತು ಹಿಂದುತ್ವದ ಬಗ್ಗೆ ಹೊಗಳುವುದು ಸೇರಿದಂತೆ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದನು. (ವಿಡಿಯೊ ನೋಡಿ)

ನಂತರ ವೇದಿಕೆಗೆ ಆಗಮಿಸಿದ ಲಕ್ಷ್ಮಿ ದುಬೆ ಅವರು, ಅವಕಾಶ ನೀಡಿದ ಆನಂದ್ ಸಿಂಗ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಹಾಡುವುದಕ್ಕೆ ಮುಂಚೆಯೆ, ಅವರು ಕೂಡಾ ಹಿಂದುತ್ವದ ಗುಣಗಾಣ ಮಾಡುವುದಾಗಿ ಹೇಳಿದ್ದಾರೆ.

ಇದಾದ ನಂತರ ಹಾಡುವುದಕ್ಕೆ ಶುರುಮಾಡಿದ ಲಕ್ಷ್ಮಿ ಅವರು, ಹಾಡಿನ ಮಧ್ಯೆ, ‘‘ಶ್ರೀರಾಮನ ದರ್ಶನ ಪಡೆಯಲು ಸ್ವಲ್ಪ ಹೊತ್ತಾಗುತ್ತದೆ. ಭಗವಾಧ್ವಜದ ಬಲದ ಎದುರು ಬ್ರಹ್ಮಾಂಡವೆ ತಲೆಬಾಗಿಸುತ್ತದೆ. ಹೀಗಾಗಿಯೆ ನನ್ನ ಭಗವಾಧ್ವಜ ಎತ್ತರದಲ್ಲಿ ಹಾರಾಡುತ್ತಾ ಇರುತ್ತದೆ. ಕಣಕಣದಲ್ಲೂ ಶ್ರೀರಾಮ್‌ ಎಂದು ಬರೆಯುತ್ತೇವೆ. ಇಲ್ಲಿ ನನ್ನ ಅಣ್ಣ ಆನಂದ್ ಸಿಂಗ್‌ ಕೂತಿದ್ದಾರೆ” ಎಂದೆಲ್ಲಾ ಹೇಳಿದ್ದಾರೆ. (ವಿಡಿಯೊ ನೋಡಿ)

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಮರಣೋತ್ತರ ಪರೀಕ್ಷೆ ವರದಿ ಬರುವವರೆಗೂ ಅಂತ್ಯಸಂಸ್ಕಾರಕ್ಕೆ ಒಪ್ಪದ ಕುಟುಂಬ

ನಂತರ ಮತ್ತೆ ಹಾಡಲು ಶುರು ಮಾಡಿದ ಲಕ್ಷ್ಮಿ ಹಾಡಿನ ಮಧ್ಯೆ, “ಗೋ ಹತ್ಯೆಯನ್ನು ನಿಲ್ಲಿಸಿ, ಇದು ಪ್ರತಿ ಹಿಂದೂಗಳ ಮಾತಾಗಿದೆ. ಹಿಂದೂಸ್ಥಾನದಲ್ಲಿ ಇರಬೇಕೆಂದರೆ ವಂದೇ ಮಾತರಂ ಹೇಳಬೇಕು” ಎಂದು ಹೇಳಿದ್ದಲ್ಲದೆ, ಬಹಳ ದೇಶದ್ರೋಹಿಗಳು ಭಾರತದಲ್ಲಿ ಇದ್ದಾರೆ ಎಂದು ಅವರು ಹೇಳಿದ್ದಾರೆ.

ಇದರ ನಂತರ ಹಾಡು ಮುಗಿಸಿದ ಅವರು, “ಕರ್ನಾಟಕದಲ್ಲಿ ಮೊದಲ ಬಾರಿಗೆ ಹಿಂದುತ್ವದ ದೀಪ ಬೆಳಗಿಸಲು ನನ್ನ ಅಣ್ಣ ಆನಂದ್‌ ಸಿಂಗ್‌ ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

“ಶ್ರೀರಾಮನ ಮಂದಿರ ನಿರ್ಮಾಣದ ಬಗ್ಗೆ ಜನ ಹಲವು ವರ್ಷಗಳಿಂದ ಕನಸು ಕಾಣುತ್ತಿದ್ದರು. ಅದನ್ನು ಪ್ರಧಾನಿ ಮೋದಿಯವರು ಸಾಧ್ಯವಾಗಿಸಿದ್ದಾರೆ. ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಮಾಡಿದ್ದಾರೆ… ಮೋದಿಯವರಿಗೆ ಇಲ್ಲಿಂದಲೇ ಸಾಷ್ಟಾಂಗ ನಮಸ್ಕಾರ ಮಾಡುವೆ. ಭಾರತದಲ್ಲಿ ಇರುವ ಶತ್ರುಗಳನ್ನು ಒದ್ದೋಡಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ. ಇದಕ್ಕೆ ಕಾರ್ಯಕ್ರಮದ ಸಂಘಟಕರು ಆಕ್ಷೇಪ ವ್ಯಕ್ತಪಡಿಸಿ, ಪದ ಬಳಕೆ ಮಾಡಬಾರದು ಎಂದು ಸೂಚಿಸಿದ್ದಾರೆ.

ಅದಾಗ್ಯೂ, ಇಷ್ಟಕ್ಕೆ ನಿಲ್ಲದ ಲಕ್ಷ್ಮಿ ಅವರು, ಮತ್ತೆ ಎರಡು ಲೈನ್ ಭಜನೆ ಹಾಡುವುದಾಗಿ ಅನುಮತಿ ಕೇಳಿದ್ದಾರೆ. ಈ ಸಮಯದಲ್ಲೂ ಲಕ್ಷ್ಮಿ ಅವರು, “ಎಲ್ಲೆಡೆ ಗೋ ಹತ್ಯೆ ನಿಲ್ಲಿಸುತ್ತೇವೆ, ಅದು ನಮ್ಮ ಸಂಕಿಲ್ಪ. ಅದು ಭಾರತದ ಫೋಷಣೆಯೂ ಹೌದು. ಭಾರತದ ಅಭಿಮಾನ ಹಿಂದೂ” ಎಂದು ಹಾಡಿದ್ದಾರೆ. (ವಿಡಿಯೊ ನೋಡಿ)

ಇದನ್ನೂ ಓದಿ: ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ಪ್ರಿಯಾಂಕ ಗಾಂಧಿ ಆಕ್ರೋಶ

ಈ ವೇಳೆ ಬಹಳ ಸಿಟ್ಟಾದ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಅವರು ಅವರ ಕಾರ್ಯಕ್ರಮ ಮೊಟಕುಗೊಳಿಸಲು ಆದೇಶ ನೀಡಿದ್ದಾರೆ. ಜೊತೆಗೆ ಮುಖ್ಯವೇದಿಕೆಯ ವಿದ್ಯುತ್‌ ದೀಪ ಆರಿಸಲಾಗಿದೆ. ಬಳಿಕ ಲಕ್ಷ್ಮಿದುಬೆ ಮತ್ತು ಅವರ ತಂಡದವರು ವೇದಿಕೆಯಿಂದ ನಿರ್ಗಮಿಸಿದರು ಎಂದು ವರದಿಯಾಗಿದೆ. ಇದರ ನಂತರ ಕಾರ್ಯಕ್ರಮ ಮುಗಿದಿದೆ ಎಂದು ಸಂಘಟಕರು ಘೋಷಿಸಿದ್ದಾರೆ.

“ಲಕ್ಷ್ಮಿ ದುಬೆ ಅವರು ಭಕ್ತಿ ಗೀತೆ ಹಾಡುವುದಾಗಿ ಹೇಳಿದ್ದರು. ಆದರೆ ವೇದಿಕೆಯಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಈ ಬಗ್ಗೆ ಅವರನ್ನು ವಿವರಣೆ ಕೇಳಲಾಗಿದೆ” ಎಂದು ಘಟನೆಯ ಬಗ್ಗೆ ಜಿಲ್ಲಾಧಿಕಾರಿ ಅನಿರುದ್ದ್ ಪಿ. ಶ್ರವಣ್ ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಉಂಟಾಗಿದ್ದು ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಘೋಷಣೆ ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, ಸಮಯಕ್ಕೆ ಸರಿಯಾಗಿ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಗೆ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಜನರು ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ: ವೈರುಧ್ಯಗಳ ನಡುವೆ ’ಪರ್ಯಾಯವಾಗಲು ಹೆಣಗುತ್ತಿರುವ’ ಕಾಂಗ್ರೆಸ್; ’ಪ್ರಾದೇಶಿಕ ಪಕ್ಷವಾಗದ’ ಜೆಡಿಎಸ್

ಇದನ್ನೂ ಓದಿ: ಬೆಳಗಾವಿ ಮುಸ್ಲಿಂ ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...