Homeಮುಖಪುಟಹಿಂದುತ್ವ ವಾರ್‌: ‘ಶಿವಸೇನೆ ಹುಟ್ಟೇ ಇರಲಿಲ್ಲ’ ಎಂದ ಬಿಜೆಪಿ

ಹಿಂದುತ್ವ ವಾರ್‌: ‘ಶಿವಸೇನೆ ಹುಟ್ಟೇ ಇರಲಿಲ್ಲ’ ಎಂದ ಬಿಜೆಪಿ

- Advertisement -
- Advertisement -

ಮುಂಬೈ: ರಾಜಕೀಯ ಅನುಕೂಲಕ್ಕಾಗಿ ಬಿಜೆಪಿ ಹಿಂದುತ್ವವನ್ನು ಬಳಸಿಕೊಂಡಿದೆ ಎಂಬ ಮಾಜಿ ಮಿತ್ರ ಪಕ್ಷ ಶಿವಸೇನೆಯ ನಾಯಕ, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿದ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ನೀಡಿದೆ.

“ಶಿವಸೇನೆ ಆಯ್ದ ವಿಷಯಗಳನ್ನಷ್ಟೇ ಸ್ಮರಿಸುತ್ತದೆ. ಮುಂಬೈ ನಾಗರಿಕ ಸಂಸ್ಥೆಯಲ್ಲಿ ಬಿಜೆಪಿ ಸದಸ್ಯರಿದ್ದಾಗ ಶಿವಸೇನೆ ಹುಟ್ಟೇ ಇರಲಿಲ್ಲ. 1984ರ ಚುನಾವಣೆಯಲ್ಲಿ ಅವರ ಪಕ್ಷದ ಅಭ್ಯರ್ಥಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು” ಎಂದು ಬಿಜೆಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಭಾನುವಾರ ನಡೆದ ಶಿವಸೇನೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದ ಉದ್ಧವ್ ಠಾಕ್ರೆ, “ಬಿಜೆಪಿಯೊಂದಿಗೆ ಮಿತ್ರಪಕ್ಷವಾಗಿದ್ದರಿಂದ ಶಿವಸೇನೆಯ ಕಳೆದ 25 ವರ್ಷಗಳು ವ್ಯರ್ಥವಾದವು” ಎಂದು ಹೇಳಿದ್ದರು.

ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆಯು ಬಿಜೆಪಿಯ ಜತೆ ಹೊಂದಾಣಿಕೆ ಮಾಡಿಕೊಂಡಿತ್ತು. ಸೇನೆ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ ಎಂದು ಉದ್ಧವ್ ಠಾಕ್ರೆ ಹೇಳಿದ್ದರು.

“ನಮ್ಮ ಪಕ್ಷವು ರಾಜ್ಯದ ಹೊರಗೆ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತದೆ. ರಾಷ್ಟ್ರ ರಾಜಕಾರಣಕ್ಕೂ ಕಾಲಿಡಲಿದೆ. ಅಕಾಲಿದಳ ಮತ್ತು ಶಿವಸೇನೆಯಂತಹ ಪಕ್ಷಗಳು ಈಗಾಗಲೇ ಹೊರನಡೆದಿರುವುದರಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಶಕ್ತಿ ಕುಗ್ಗಿದೆ” ಎಂದಿದ್ದರು.

“ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು. ಸೇನೆ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ. ಶಿವಸೇನೆ ಬಿಜೆಪಿಯನ್ನು ಬಿಟ್ಟಿದೆಯೇ ಹೊರತು ಹಿಂದುತ್ವವನ್ನಲ್ಲ. ಬಿಜೆಪಿಯ ಅವಕಾಶವಾದಿ ಹಿಂದುತ್ವ ಅಧಿಕಾರಕ್ಕಾಗಿ ಮಾತ್ರ ಎಂದು ನಾನು ನಂಬುತ್ತೇನೆ. ಶಿವಸೇನೆಯು ಬಿಜೆಪಿಯೊಂದಿಗೆ ಮಿತ್ರಪಕ್ಷವಾಗಿ ಕಳೆದ 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ” ಎಂದು ಹೇಳಿಕೆ ನೀಡಿದ್ದರು.

“ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ನಾವು ಬಿಜೆಪಿಯನ್ನು ಪೂರ್ಣ ಹೃದಯದಿಂದ ಬೆಂಬಲಿಸಿದೆವು. ಮಹಾರಾಷ್ಟ್ರದಲ್ಲಿ ನಾವಿದ್ದರೆ, ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂಬು ಭಾವಿಸಿದ್ದೆವು. ಆದರೆ ನಮಗೆ ದ್ರೋಹ ಬಗೆದರು. ನಮ್ಮ ಮನೆಯಲ್ಲಿ ನಮ್ಮನ್ನು ನಾಶಮಾಡಲು ಪ್ರಯತ್ನಿಸಲಾಯಿತು. ಆದ್ದರಿಂದ ನಾವು ಉಲ್ಟಾ ಹೊಡೆಯಬೇಕಾಯಿತು” ಎನ್ನುವ ಮೂಲಕ 2019ರ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ತಮ್ಮ ನಿರ್ಧಾರವನ್ನು ಠಾಕ್ರೆ ಸಮರ್ಥಿಸಿದ್ದರು. ಜೊತೆಗೆ ನಿರ್ಲಕ್ಷ್ಯ ವಹಿಸಿದ್ದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶಿವಸೇನೆಗೆ ಹಿನ್ನಡೆಯಾಗಿದೆ ಎಂದೂ ಹೇಳಿದ್ದರು.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ದೇವೇಂದ್ರ ಫಡ್ನವಿಸ್‌, “ಇತ್ತೀಚಿನ ನಗರ ಪಂಚಾಯತ್ ಅಥವಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಪಕ್ಷವು ನಾಲ್ಕನೇ ಸ್ಥಾನ ಗಳಿಸಿದ್ದರಿಂದ ಅವರು ಹತಾಶರಾಗಿದ್ದಾರೆ. ಈ ಮೂಲಕ ಹೊರ ಹಾಕುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

“ರಾಮ ಜನ್ಮಭೂಮಿ ಅಭಿಯಾನದಲ್ಲಿ ನೀವು ಎಲ್ಲಿದ್ದೀರಿ? ನಾವು ಗುಂಡುಗಳು ಮತ್ತು ಲಾಠಿಗಳನ್ನು ಎದುರಿಸಿದ್ದೇವೆ. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಯುಪಿ ಚುನಾವಣೆ: ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...