Homeಮುಖಪುಟಹಿಂದುತ್ವ ವಾರ್‌: ‘ಶಿವಸೇನೆ ಹುಟ್ಟೇ ಇರಲಿಲ್ಲ’ ಎಂದ ಬಿಜೆಪಿ

ಹಿಂದುತ್ವ ವಾರ್‌: ‘ಶಿವಸೇನೆ ಹುಟ್ಟೇ ಇರಲಿಲ್ಲ’ ಎಂದ ಬಿಜೆಪಿ

- Advertisement -
- Advertisement -

ಮುಂಬೈ: ರಾಜಕೀಯ ಅನುಕೂಲಕ್ಕಾಗಿ ಬಿಜೆಪಿ ಹಿಂದುತ್ವವನ್ನು ಬಳಸಿಕೊಂಡಿದೆ ಎಂಬ ಮಾಜಿ ಮಿತ್ರ ಪಕ್ಷ ಶಿವಸೇನೆಯ ನಾಯಕ, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿದ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ನೀಡಿದೆ.

“ಶಿವಸೇನೆ ಆಯ್ದ ವಿಷಯಗಳನ್ನಷ್ಟೇ ಸ್ಮರಿಸುತ್ತದೆ. ಮುಂಬೈ ನಾಗರಿಕ ಸಂಸ್ಥೆಯಲ್ಲಿ ಬಿಜೆಪಿ ಸದಸ್ಯರಿದ್ದಾಗ ಶಿವಸೇನೆ ಹುಟ್ಟೇ ಇರಲಿಲ್ಲ. 1984ರ ಚುನಾವಣೆಯಲ್ಲಿ ಅವರ ಪಕ್ಷದ ಅಭ್ಯರ್ಥಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು” ಎಂದು ಬಿಜೆಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಭಾನುವಾರ ನಡೆದ ಶಿವಸೇನೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದ ಉದ್ಧವ್ ಠಾಕ್ರೆ, “ಬಿಜೆಪಿಯೊಂದಿಗೆ ಮಿತ್ರಪಕ್ಷವಾಗಿದ್ದರಿಂದ ಶಿವಸೇನೆಯ ಕಳೆದ 25 ವರ್ಷಗಳು ವ್ಯರ್ಥವಾದವು” ಎಂದು ಹೇಳಿದ್ದರು.

ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆಯು ಬಿಜೆಪಿಯ ಜತೆ ಹೊಂದಾಣಿಕೆ ಮಾಡಿಕೊಂಡಿತ್ತು. ಸೇನೆ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ ಎಂದು ಉದ್ಧವ್ ಠಾಕ್ರೆ ಹೇಳಿದ್ದರು.

“ನಮ್ಮ ಪಕ್ಷವು ರಾಜ್ಯದ ಹೊರಗೆ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತದೆ. ರಾಷ್ಟ್ರ ರಾಜಕಾರಣಕ್ಕೂ ಕಾಲಿಡಲಿದೆ. ಅಕಾಲಿದಳ ಮತ್ತು ಶಿವಸೇನೆಯಂತಹ ಪಕ್ಷಗಳು ಈಗಾಗಲೇ ಹೊರನಡೆದಿರುವುದರಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಶಕ್ತಿ ಕುಗ್ಗಿದೆ” ಎಂದಿದ್ದರು.

“ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು. ಸೇನೆ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ. ಶಿವಸೇನೆ ಬಿಜೆಪಿಯನ್ನು ಬಿಟ್ಟಿದೆಯೇ ಹೊರತು ಹಿಂದುತ್ವವನ್ನಲ್ಲ. ಬಿಜೆಪಿಯ ಅವಕಾಶವಾದಿ ಹಿಂದುತ್ವ ಅಧಿಕಾರಕ್ಕಾಗಿ ಮಾತ್ರ ಎಂದು ನಾನು ನಂಬುತ್ತೇನೆ. ಶಿವಸೇನೆಯು ಬಿಜೆಪಿಯೊಂದಿಗೆ ಮಿತ್ರಪಕ್ಷವಾಗಿ ಕಳೆದ 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ” ಎಂದು ಹೇಳಿಕೆ ನೀಡಿದ್ದರು.

“ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ನಾವು ಬಿಜೆಪಿಯನ್ನು ಪೂರ್ಣ ಹೃದಯದಿಂದ ಬೆಂಬಲಿಸಿದೆವು. ಮಹಾರಾಷ್ಟ್ರದಲ್ಲಿ ನಾವಿದ್ದರೆ, ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂಬು ಭಾವಿಸಿದ್ದೆವು. ಆದರೆ ನಮಗೆ ದ್ರೋಹ ಬಗೆದರು. ನಮ್ಮ ಮನೆಯಲ್ಲಿ ನಮ್ಮನ್ನು ನಾಶಮಾಡಲು ಪ್ರಯತ್ನಿಸಲಾಯಿತು. ಆದ್ದರಿಂದ ನಾವು ಉಲ್ಟಾ ಹೊಡೆಯಬೇಕಾಯಿತು” ಎನ್ನುವ ಮೂಲಕ 2019ರ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ತಮ್ಮ ನಿರ್ಧಾರವನ್ನು ಠಾಕ್ರೆ ಸಮರ್ಥಿಸಿದ್ದರು. ಜೊತೆಗೆ ನಿರ್ಲಕ್ಷ್ಯ ವಹಿಸಿದ್ದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಶಿವಸೇನೆಗೆ ಹಿನ್ನಡೆಯಾಗಿದೆ ಎಂದೂ ಹೇಳಿದ್ದರು.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ದೇವೇಂದ್ರ ಫಡ್ನವಿಸ್‌, “ಇತ್ತೀಚಿನ ನಗರ ಪಂಚಾಯತ್ ಅಥವಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಪಕ್ಷವು ನಾಲ್ಕನೇ ಸ್ಥಾನ ಗಳಿಸಿದ್ದರಿಂದ ಅವರು ಹತಾಶರಾಗಿದ್ದಾರೆ. ಈ ಮೂಲಕ ಹೊರ ಹಾಕುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

“ರಾಮ ಜನ್ಮಭೂಮಿ ಅಭಿಯಾನದಲ್ಲಿ ನೀವು ಎಲ್ಲಿದ್ದೀರಿ? ನಾವು ಗುಂಡುಗಳು ಮತ್ತು ಲಾಠಿಗಳನ್ನು ಎದುರಿಸಿದ್ದೇವೆ. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಯುಪಿ ಚುನಾವಣೆ: ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿ ಅಭ್ಯರ್ಥಿ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...