Homeಕರ್ನಾಟಕಹಿಂಜಾವೇ ಕಾರ್ತಿಕ್ ಕಗ್ಗೊಲೆಯೂ ಸಂಘಿಗಳ ಮುಗಮ್ ಮೌನವೂ!!

ಹಿಂಜಾವೇ ಕಾರ್ತಿಕ್ ಕಗ್ಗೊಲೆಯೂ ಸಂಘಿಗಳ ಮುಗಮ್ ಮೌನವೂ!!

- Advertisement -
- Advertisement -

| ಶುದ್ದೋಧನ |

ಪುತ್ತೂರು ಹೇಳಿಕೇಳಿ ಸಂಘಪರಿವಾರದ ಆಡಂಬೋಲ. ಸಣ್ಣಪುಟ್ಟ ವೈಯಕ್ತಿಕ ತಂಟೆ-ತಕರಾರಿಗೂ ಕೋಮುದ್ವೇಷದ ಕಲರ್ ಬಳಿದು ಬಿಜೆಪಿಯ ಮಾತೃ “ಸಂಘ” ಧರ್ಮಕಾರಣದ ಮೈಲೇಜ್ ಪಡೆಯುತ್ತಲೇ ಇದೆ. ಮಾಯಾಭಟ್ ಎಂಬ ಹವ್ಯಕರ ಹೆಣ್ಣಿನ ಪ್ರೇಮ್ ಕಹಾನಿಗೆ ಮತೀಯ ವೈಷಮ್ಯದ ಆಯಾಮ ಕೊಟ್ಟು ಹಲವು ವರ್ಷ ಕೇಸರಿ ಬೆಳೆ ತೆಗೆದ ಪರಿವಾರಕ್ಕೆ ಸೌಮ್ಯಭಟ್ ಎಂಬ ಮತ್ತೊಂದು ಹಾರವ ಹುಡುಗಿಯನ್ನು ಸಾಬರ ವಿಕೃತ ಹುಡುಗನೊಬ್ಬ ಕೊಂದು ಹಾಕಿದ್ದು “ಅಗತ್ಯವಿದ್ದಾಗೆಲ್ಲ” ಪುತ್ತೂರಿಗೆ ಬೆಂಕಿಹಾಕಲು ನೆಪವಾಗಿತ್ತು.

ಇಂದು ಕೇಂದ್ರ ಮಂತ್ರಿಯಾಗಿರುವ ಸುಳ್ಯದ ಸದಾನಂದಗೌಡ ಅಂದು ಪುತ್ತೂರಿನಲ್ಲಿ ಶಾಸಕರಾದದ್ದಾಗಲಿ, ಸದ್ಯ ಕಾಂಗ್ರೆಸ್‍ನಲ್ಲಿರುವ ಶಕುಂತಲಾ ಶೆಟ್ಟಿ ಹಿಂದೆ ಬಿಜೆಪಿಯಿಂದ ಗೆದ್ದದ್ದಾಗಲಿ, ಮತ್ತೀಗ ಎಮ್ಮೆಲ್ಲೆ ದರ್ಬಾರು ನಡೆಸಿರುವ ಸಂಜೀವ ಮಠಂದೂರು ಎಂಬ ಸದಾನಂದ ಗೌಡರ ನೆಂಟ ವಿಧಾನಸೌಧದ ಭಾಗ್ಯ ಕಂಡಿರುವುದಾಗಲಿ ಎಲ್ಲವೂ ಸಂಘ ಸಾಹಸದಿಂದಲೇ!!

ಹಿಂದೂತ್ವದ ಹೆಸರಲ್ಲಿ ಬಿಲ್ಲವರು, ಬಂಟರಂತಹ ಶೂದ್ರ ಸಮುದಾಯದ ಬಿಸಿರಕ್ತದ ಯುವಕರ ತಲೆಕೆಡಿಸಿ ಅವರಿಂದ ಗಲಾಟೆ, ದೊಂಬಿ ಮಾಡಿಸುವ ಬಿಜೆಪಿಗರು ಹೆಣಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದರಲ್ಲಿ ನಿಸ್ಸೀಮರು. ಕಾಂಗ್ರೆಸ್ ಸರ್ಕಾರವಿದ್ದಾಗ ಪರೇಶ್ ಮೇಸ್ತನ ಸಾವನ್ನು ಮುಂದಿಟ್ಟುಕೊಂಡು `ಇಡೀ ಕರಾವಳಿಗೆ ಬೆಂಕಿಹಚ್ಚುತ್ತೇವೆ’ ಎಂಬಂತೆ ಮಾತನಾಡಿ, ಹಿಂದೂತ್ವ ಸಂಘಟನೆಗಳ ಕಾರ್ಯಕರ್ತರ ಮಾರಣಹೋಮ ನಡೆಯುತ್ತಿದೆ ಅಂತೆಲ್ಲ ಬೊಬ್ಬಿಟ್ಟು ಕೇಂದ್ರಕ್ಕೆ ದೂರು ಕೊಡುವಷ್ಟರಮಟ್ಟಿಗೆ ಬಿಜೆಪಿಗರು ಹಾರಾಡಿದ್ದು ನೆನಪಿರಬಹುದು. ಆದರೆ ಅದೇ ಕರಾವಳಿಯಲ್ಲಿ ಈಗ ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲ್ಲೂಕು ಪ್ರಧಾನ ಕಾರ್ಯದರ್ಶಿಯನ್ನೇ ಹತ್ಯೆ ಮಾಡಲಾಗಿದೆ. ಕಾರಣ ಏನೇ ಇರಲಿ, ತನಿಖೆಗೂ ಮೊದಲೇ ಬೀದಿಗಿಳಿದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು, ಬೆಂಕಿ ಹಚ್ಚುತ್ತಿದ್ದ ಸಂಘ ಪರಿವಾರ ಇದೀಗ ತುಟಿ ಎರಡು ಮಾಡುತ್ತಿಲ್ಲ. ಯಾಕೆಂದರೆ, ಈಗ ರಾಜ್ಯದಲ್ಲಿ ಅಧಿಕಾರದಲ್ಲಿರೋದು ಅವರದೇ ಬಿಜೆಪಿ ಸರ್ಕಾರ! ಧರ್ಮವನ್ನು ನೆಪ ಮಾಡಿಕೊಳ್ಳುವ ಇವರ ರಾಜಕಾರಣದ ವರಸೆ ಇಂತದ್ದು!

ಪುತ್ತೂರಿನ ಕಾರ್ತಿಕ್ ಸುವರ್ಣ ಆ ದುರ್ದೈವಿ. ಹಿಂದೂ ಜಾಗರಣಾ ವೇದಿಕೆಯ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಆಗಿದ್ದವ. ಅವನನ್ನು ಪೊಲೀಸ್ ಠಾಣೆಯ ಬಳಿಯೇ ಸಾರ್ವಜನಿಕರ ಕಣ್ಣೆದುರೇ ಚಾಕುವಿನಿಂದ ಬರ್ಬರವಾಗಿ ಇರಿದು ಸಾಯಿಸಲಾಗಿದೆ. ಆದರೆ ಹಿಂದೂ ಸಂಘಟನೆಯ ಪ್ರಮುಖ ಮುಂದಾಳಿನ ಹತ್ಯೆಯಾದರೂ ಸಂಘ ಪರಿವಾರದ ರಣಧೀರರ ಅಡ್ರಸ್ಸೇ ಇಲ್ಲಾ! ಕೊಲೆಯಾದವನು ಅಲ್ಪಸಂಖ್ಯಾತ ಸಮುದಾಯದವನೆಂಬಂತೆ ಪುತ್ತೂರು ತಣ್ಣಗಿದೆ!! ಹತ್ತಿರದಲ್ಲೇ ಇರುವ ಕಲ್ಲಡ್ಕದ ಕೇಸರಿ ಕಮಾಂಡರ್ ಪ್ರಭಾಕರ ಭಟ್, ಇದೇ ಏರಿಯಾದ ಕೂಗುಮಾರಿ ಶೋಭಾ ಕರಂದ್ಲಾಜೆ ಮತ್ತು ಸದಾನಂದಗೌಡರು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ!!

ಹಿಂದೂ ಗಂಡಿನ ಜೀವ, ಹಿಂದೂ ಹೆಣ್ಣಿನ ಮಾನ ಬಂಡವಾಳ ಮಾಡಿಕೊಂಡು ರಾಜಕಾರಣ ಮಾಡುವ ಸಂಘಪರಿವಾರದ ಘಟಾನುಘಟಿ ಬೆಂಕಿ ನವಾಬರೆಲ್ಲಾ ಏಕಿಂಥ ಘನಘೋರ ಮೌನದಲ್ಲಿದ್ದಾರೆ. ಹಿಂದೂ ಹೆಣ ಬಿದ್ದಾಗ ಧರ್ಮ ರಕ್ಷಣೆಯ ದೈವ ಆವಾಹನೆಯಾದಂತೆ ಹಾರಾಡುತ್ತಿದ್ದ ಬಿಜೆಪಿ-ಆರೆಸ್ಸೆಸ್-ಹಿಂಜಾವೇ…… ಮುಂತಾದ ಗ್ಯಾಂಗಿನ ಭಜರಂಗ ಬಲಿಗಳ ನಿಗೂಢ ಮೌನದ ಜಾಡು ಹಿಡಿದು ಹೊರಟರೆ ಕಾರ್ತಿಕ್‍ನನ್ನು ಕೊಂದ ಕೊಲೆಗಡುಕರು ಹಿಂದೂತ್ವದ ಅಭಿಯಾನದಲ್ಲಿ ಅರ್ಪಣಾಭಾವದಿಂದ ತೊಡಗಿಸಿಕೊಂಡವರೇ ಆಗಿದ್ದಾರೆಂಬ ಅಚ್ಚರಿ ಬೆಳಕಿಗೆ ಬರುತ್ತದೆ. ಪಾತಕಿಗಳಾದ ಕಿರಣ್ ರೈ ಮತ್ತು ಚರಣ್ ರೈ ಸಹೋದರರು ಹಾಗೂ ಪ್ರಿತೇಶ್ ಶೆಟ್ಟಿಗೆ ಬಿಜೆಪಿಯ ಆಯಕಟ್ಟಿನ ಅಧಿಕಾರಸ್ಥರ ಸಂಪರ್ಕವೂ ಇದೆಯೆಂಬ ಪುಕಾರುಗಳು ಎದ್ದಿವೆ. ಪವರ್‍ಫುಲ್ ಹಿಂಜಾವೇ ನಾಯಕ ತಾನೆಂಬ ಹುಂಬ ಅಹಮಿಕೆಯಲ್ಲಿ ಲೇವಾದೇವಿ, ಕೌಟುಂಬಿಕ ವ್ಯಾಜ್ಯ, ಚಿಟ್‍ಫಂಡ್, ಹೊಡಪೆಟ್‍ಗಳಲ್ಲಿ ಸಂಧಾನಕಾರನಾಗಿ ಮೂಗುತೂರಿಸುತ್ತಿದ್ದ ಕಾರ್ತಿಕ್‍ನ ಹತ್ಯೆ ಸುತ್ತ ಮೂರು ಸಾಧ್ಯತೆಯನ್ನು ಪೊಲೀಸರು ತರ್ಕಿಸುತ್ತಿದ್ದಾರೆ.

ಪೊಲೀಸರು ಅಂದಾಜಿಸಿರುವಂತೆ ಚಿಟ್‍ಫಂಡ್ ವ್ಯವಹಾರದ ಸೇಡು ಬರೀ ಇಪ್ಪತ್ತೇಳು ವರ್ಷದ ಕಾರ್ತಿಕ್‍ನನ್ನು ಬಲಿ ಹಾಕಿದೆ. ಪುತ್ತೂರಿನ ದರ್ಬೆಯಲ್ಲಿ ಮಾತೃಛಾಯ ಎಂಬ ಹೆಸರಿನ ಚಿಟ್‍ಫಂಡ್ ದಂಧೆ ಕಿರಣ್-ಚರಣ್ ಸಹೋದರರು ನಡೆಸಿಕೊಂಡಿದ್ದರು. ಕಿಶೋರ್ ಎಂಬಾತ ಬರೋಬ್ಬರಿ ನಾಲ್ಕು ಲಕ್ಷ ಹಣವನ್ನು ಚರಣ್ ರೈಗೆ ಕೊಡಬೇಕಿತ್ತು. ಆದರೆ ಆತ ಕೊಡದೆ ಸತಾಯಿಸುತ್ತಿದ್ದ. ಹಾಗಾಗಿ ಚರಣ್ ಆತನಿಗೆ ಲಾಯರ್ ನೋಟಿಸ್ ಕೊಟ್ಟಿದ್ದ. ಇದರಿಂದ ಕೆರಳಿದ ಕಿಶೋರ್ ಸುಜಿತ್ ಬಂಗೇರ, ಮನೀಶ್ ಕುಮಾರ್, ಪ್ರೀತಮ್ ಶೆಟ್ಟಿಯೊಂದಿಗೆ ಗ್ಯಾಂಗ್ ಕಟ್ಟಿಕೊಂಡು ಚರಣ್‍ಗೆ ಹಲ್ಲೆ ಮಾಡಿ ಹೆದರಿಸಿದ್ದ. ಈ ಪುಂಡರ ಪಟಾಲಂಗೆ ಹಿಂಜಾವೇ ಕಿಂಗ್ ಕಾರ್ತಿಕ್ ಸುವರ್ಣ ತನ್ನ ರಾಜಕೀಯ ಬಲದಿಂದ ನೆರವಾಗುತ್ತಿದ್ದ. ಹೀಗಾಗಿ ಕಿರಣ್-ಚರಣ್ ತಂಡ ಮತ್ತು ಕಾರ್ತಿಕ್ ಗುಂಪಿನ ನಡುವೆ 2018ರ ಜನವರಿಯಿಂದ ಆಗಾಗ ಜಗಳ-ಕದನ ಆಗುತ್ತಲೇ ಇತ್ತು. ಮೊನ್ನೆ ಸೆಪ್ಟೆಂಬರ್ 3ರಂದು ಚೌತಿಯ ಗಣೇಶ ವಿಸರ್ಜನೆ ಬಳಿಕ ಸಂಪ್ಯದಲ್ಲಿ ನಡೆದ ಯಕ್ಷಗಾನ ನೋಡುತ್ತಾ ನಿಂತಿದ್ದ ಕಾರ್ತಿಕ್ ಸುವರ್ಣನ ಮುಂದೆ ಕಿರಣ್-ಚರಣ್ ಪ್ರತ್ಯಕ್ಷರಾಗಿದ್ದಾರೆ. ಎರಡೂ ಕಡೆಯವರು ಗುರಾಯಿಸಿದ್ದಾರೆ. ಮಾತಿಗೆ ಮಾತಾಗಿದೆ. ಇದೇ ಸಂದರ್ಭವೆಂದು ವೈರಿ ಪಡೆ ಕಾರ್ತಿಕ್‍ನನ್ನು ಇರಿದು ಕೊಂದು ಪರಾರಿಯಾಗಿದ್ದಾರೆ.

ಮತ್ತೊಂದು ಅನುಮಾನದ ಸಾಧ್ಯತೆಯಲ್ಲಿ ಗಾಂಜಾ ದಂಧೆಯ ಅಮಲೇರಿದೆ! ಗಾಂಜಾ ವ್ಯವಹಾರದ ವೈಷಮ್ಯದಿಂದ ಕಿರಣ್-ಚರಣ್ ಮತ್ತು ಕಾರ್ತಿಕ್ ಸುವರ್ಣ ಬದ್ಧವೈರಿಗಳಾಗಿದ್ದರೆಂಬ ಮಾತು ಪುತ್ತೂರಲ್ಲಿ ಪಿಸುಗುಡುತ್ತಿದೆ. ಕಾರ್ತಿಕ್‍ಗೆ ರಾಜಕೀಯ ಪ್ರಭಾವ ಇದ್ದುದರಿಂದ ಆತನದೇ ಮೇಲುಗೈ ಆಗುತ್ತಿದ್ದುದು ಎದುರಾಳಿಗಳನ್ನು ಕೊಲೆ ಸ್ಕೆಚ್‍ಗೆ ಪ್ರಚೋದಿಸಿರಬಹುದೆಂಬ ಲೆಕ್ಕಾಚಾರ ಹಾಕಲಾಗುತ್ತಿದೆ. ಆದರೆ ಕಾರ್ತಿಕ್‍ನ ತಾಯಿ ಆಡಿರುವ ಮಾತುಗಳು ಸಂಘಪರಿವಾರದ ಜನಿವಾರಿಗಳು ಶೂದ್ರ ಹುಡುಗರನ್ನು ಬೇಕಾದಂತೆ ಬಳಸಿಕೊಂಡು ಬಲಿ ಹಾಕುತ್ತಿರುವ ಧರ್ಮೋನ್ಮಾದ ಹಿಕಮತ್ತುಗಳನ್ನು ಬಿಚ್ಚಿಟ್ಟಿದೆ!! “ನನ್ನ ಮಗ ಅಮಾಯಕ. ಯಾರ ತಂಟೆಗೂ ಹೋದವನಲ್ಲ. ಆದರೆ ಯಾವಾಗ ಹಿಂದೂ ಜಾಗರಣ ವೇದಿಕೆ ಸೇರಿಕೊಂಡನೋ, ಬಿಜೆಪಿ ರಾಜಕಾರಣಿಗಳೊಂದಿಗೆ ಒಡನಾಟ ತೊಡಗಿದನೋ ಆಗಾತ ಕೆಲವರ ಕೆಂಗಣ್ಣಿಗೆ ತುತ್ತಾಗಿದ್ದ; ವೈಷಮ್ಯ ಬೆಳೆಸಿಕೊಂಡಿದ್ದ….. ಆತ ಸಂಘಟನೆ(ಹಿಂಜಾವೇ) ರಾಜಕೀಯ(ಬಿಜೆಪಿ) ಸೇರಿಕೊಂಡು ಒಂದಿಷ್ಟು ದ್ವೇಷ, ಹಗೆತನ ಸಂಪಾದಿಸಿದ್ದನಷ್ಟೇ… ಅದೇ ಆತನ ಕೊಲೆ ಮಾಡಲಾಗಿದೆ….. ಪೊಲೀಸ್ ಠಾಣೆ ಎದುರೇ ಕೊಲೆ ಮಾಡುತ್ತಾರೆಂದರೆ ರಾಜಕಾರಣಿಗಳ ಬೆಂಬಲ ಇರಲೇಬೇಕು…. ಇಲ್ಲದಿದ್ದರೆ ಪಾತಕಿಗಳಿಗೆ ಅಷ್ಟು ಧೈರ್ಯ ಎಲ್ಲಿಂದ ಬರಬೇಕು?” ಎಂದು ಬಿಕ್ಕುತ್ತಾರೆ ಕಾರ್ತಿಕ್‍ನ ತಾಯಿ.

ದಕ್ಷಿಣ ಕನ್ನಡದ ಸಂಘಪರಿವಾರದ ಭಜರಂಗದಳ, ಆರೆಸ್ಸೆಸ್, ಹಿಂಜಾವೇ, ವಿಶ್ವ ಹಿಂದೂ ಪರಿಷತ್, ಮಹಿಳಾ ಸಂಘಟನೆಗಳಲ್ಲಿ ಲೀಡರಿಕೆ, ಹಿಡಿತ ಸಾಧಿಸುವಿಕೆಯ ಮೇಲಾಟದ ಸಂಘರ್ಷ ಮಾಮೂಲಿ ಎಂಬಂತಾಗಿದೆ. ಪಾಪದ ಶೂದ್ರ ಹುಡುಗ, ಹುಡುಗಿಯರಿಗೆ ಹಿಂದೂತ್ವದ ಪುಂಡಾಟದಿಂದ ಪ್ರಾಪ್ತವಾಗುವ ಸಾಮಾಜಿಕ ಇಮೇಜ್‍ನ ಆಕರ್ಷಣೆಗೆ ಒಳಗಾಗುವಂತೆ ಮಾಡಲಾಗುತ್ತದೆ. ಈ ಆ್ಯಂಟಿ ಹೀರೋಯಿಸಮ್ ಜತೆಗೆ ರಾಜಕೀಯ ಗೌರವ, ಹಣಕಾಸಿನ ಲಾಭ, ತಾಪಂ-ಜಿಪಂ ಮುಂತಾದ ಸ್ಥಳೀಯ ಸಂಸ್ಥೆ ಸದಸ್ಯರ ಸೆಳೆತಕ್ಕೆ ಹಿಂದುಳಿದ ವರ್ಗದ ತರುಣ-ತರುಣಿಯರು ಬೀಳುವಂತೆ ನಾಜೂಕಾಗಿ ಮಾಡಲಾಗುತ್ತಿದೆ. ಈ ಆಮಿಷ ಸಂಘಪರಿವಾರದ ತರಹೇವಾರಿ ತಂಡಗಳಲ್ಲಿ ಸೇಡು-ದ್ವೇಷ-ಹಗೆತನದ ಶೀತಲ ಸಂಘರ್ಷವಾಗಿ ಮಾರ್ಪಟ್ಟಿದೆ. ಇದು ಕಾರ್ತಿಕ್ ಸುವರ್ಣನಂಥ ಧಾಡಸಿ ಯುವಕರನ್ನು ಆಪೋಷನ ಪಡೆಯುತ್ತಿದೆ! ಕರಾವಳಿಯ ಕೇಸರಿ ಪರಿವಾರದ ಯಾವ್ಯಾವ ಪಡೆಯಲ್ಲಿ ಯಾರ್ಯಾರಿಗೆ ಎಂತೆಂಥ ಕೇಡು ಕಾದಿದೆಯೋ?!!

ಅದೇನೇ ಇರಲಿ, ಒಂದಂತೂ ಸತ್ಯ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಲ್ಲದೇ, ಕಾಂಗ್ರೆಸ್ಸೊ, ಜೆಡಿಎಸ್ಸೊ ಅಥವಾ ಮೈತ್ರಿ ಸರ್ಕಾರವೋ ಇದ್ದಿದ್ದರೆ ಕಾರ್ತಿಕ್ ಕೊಲೆಯಾದ ಇಷ್ಟೊತ್ತಿಗಾಗಲೇ ಬಿಜೆಪಿ-ಸಂಘ ಪರಿವಾರದ ಜಂಟಿ `ಬೆಂಕಿ’ ಕಾರ್ಯಾಚರಣೆಗಳು ಶುರುವಾಗಿರುತ್ತಿತ್ತು. ಪೊಲೀಸರು ಇದೇ ಆರೋಪಿಗಳನ್ನು ಬಂಧಿಸಿದ್ದರೂ `ಸಾಬರನ್ನು ಬಚಾವು ಮಾಡುವ ಸಲುವಾಗಿ ಅಮಾಯಕ ಹಿಂದೂ ಹುಡುಗರನ್ನು ಫಿಟ್ ಮಾಡಿದ್ದಾರೆ’ ಅಂತ ಭೀಕರ ಭಾಷಣಗಳು ಉದುರುತ್ತಿದ್ದವು. ಹಿಂದೂಗಳ ಮಾರಣಹೋಮ ನಡೆಯುತ್ತಿದೆ ಅಂತ ಬದುಕಿರುವವರ ಹೆಸರನ್ನೂ ಸೇರಿಸಿ ಒಂದು `ಹುತಾತ್ಮರ ಪಟ್ಟಿ’ ತಯಾರಿಸಿಕೊಂಡು ಊರೂರು ಅಲೆದಾಡುತ್ತಿದ್ದರು. ಆದರೀಗ ಗಪ್‍ಚುಪ್. ಇದು ಸಂಘ ಪರಿವಾರಕ್ಕೆ ಹೊಸದೇನೂ ಅಲ್ಲ. ತೀರ ಈಚೆಗೆ ವಿವೇಕಾನಂದ ಕಾಲೇಜಿನ ಎಬಿವಿಪಿಯ ನಾಲ್ಕೈದು ನೀಚ ಹುಡುಗರು ಪಾಪದ ಬುಡಕಟ್ಟು ಹುಡುಗಿಯನ್ನು ಕಾಡಿಗೆ ಕರೆದೊಯ್ದು ಕಾರಲ್ಲೇ ಸರದಿಯಲ್ಲಿ ರೇಪ್ ಮಾಡಿದಾಗಲೂ ಎಬಿವಿಪಿಗಳು `ಈ ರೇಪಿಸ್ಟ್‍ಗಳು ತಮ್ಮವರಲ್ಲ’ ಎಂದಿದ್ದಷ್ಟೇ ಅಲ್ಲ, ಆ ಹುಡುಗಿಯ ನಡತೆಯೇ ಸರಿ ಇಲ್ಲ ಎಂದು ಸಮರ್ಥನೆಗೆ ಇಳಿದಿದ್ದರು. ತಮ್ಮ ಮಕ್ಕಳನ್ನು ಬೇಕಾದಂತೆ ಬಳಸಿಕೊಂಡು ಅವರ ಭವಿಷ್ಯವನ್ನೇ ಹಾಳುಗೆಡಹುವ ಇವರ ಹುನ್ನಾರಗಳನ್ನು ಹೆತ್ತವರು ಈಗಲಾದರು ಅರ್ಥಮಾಡಿಕೊಳ್ಳದಿದ್ದರೆ ಕಾರ್ತಿಕ್‍ನ ತಾಯಿಯಂತೆ ತಮ್ಮದೇ ಮಕ್ಕಳ ಹೆಣದ ಮುಂದೆ ಗೋಳಾಡುವಂತಹ ದುರ್ವಿಧಿಯೇ ಗತಿ!

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...