Homeಕರ್ನಾಟಕಹಿಂಜಾವೇ ಕಾರ್ತಿಕ್ ಕಗ್ಗೊಲೆಯೂ ಸಂಘಿಗಳ ಮುಗಮ್ ಮೌನವೂ!!

ಹಿಂಜಾವೇ ಕಾರ್ತಿಕ್ ಕಗ್ಗೊಲೆಯೂ ಸಂಘಿಗಳ ಮುಗಮ್ ಮೌನವೂ!!

- Advertisement -
- Advertisement -

| ಶುದ್ದೋಧನ |

ಪುತ್ತೂರು ಹೇಳಿಕೇಳಿ ಸಂಘಪರಿವಾರದ ಆಡಂಬೋಲ. ಸಣ್ಣಪುಟ್ಟ ವೈಯಕ್ತಿಕ ತಂಟೆ-ತಕರಾರಿಗೂ ಕೋಮುದ್ವೇಷದ ಕಲರ್ ಬಳಿದು ಬಿಜೆಪಿಯ ಮಾತೃ “ಸಂಘ” ಧರ್ಮಕಾರಣದ ಮೈಲೇಜ್ ಪಡೆಯುತ್ತಲೇ ಇದೆ. ಮಾಯಾಭಟ್ ಎಂಬ ಹವ್ಯಕರ ಹೆಣ್ಣಿನ ಪ್ರೇಮ್ ಕಹಾನಿಗೆ ಮತೀಯ ವೈಷಮ್ಯದ ಆಯಾಮ ಕೊಟ್ಟು ಹಲವು ವರ್ಷ ಕೇಸರಿ ಬೆಳೆ ತೆಗೆದ ಪರಿವಾರಕ್ಕೆ ಸೌಮ್ಯಭಟ್ ಎಂಬ ಮತ್ತೊಂದು ಹಾರವ ಹುಡುಗಿಯನ್ನು ಸಾಬರ ವಿಕೃತ ಹುಡುಗನೊಬ್ಬ ಕೊಂದು ಹಾಕಿದ್ದು “ಅಗತ್ಯವಿದ್ದಾಗೆಲ್ಲ” ಪುತ್ತೂರಿಗೆ ಬೆಂಕಿಹಾಕಲು ನೆಪವಾಗಿತ್ತು.

ಇಂದು ಕೇಂದ್ರ ಮಂತ್ರಿಯಾಗಿರುವ ಸುಳ್ಯದ ಸದಾನಂದಗೌಡ ಅಂದು ಪುತ್ತೂರಿನಲ್ಲಿ ಶಾಸಕರಾದದ್ದಾಗಲಿ, ಸದ್ಯ ಕಾಂಗ್ರೆಸ್‍ನಲ್ಲಿರುವ ಶಕುಂತಲಾ ಶೆಟ್ಟಿ ಹಿಂದೆ ಬಿಜೆಪಿಯಿಂದ ಗೆದ್ದದ್ದಾಗಲಿ, ಮತ್ತೀಗ ಎಮ್ಮೆಲ್ಲೆ ದರ್ಬಾರು ನಡೆಸಿರುವ ಸಂಜೀವ ಮಠಂದೂರು ಎಂಬ ಸದಾನಂದ ಗೌಡರ ನೆಂಟ ವಿಧಾನಸೌಧದ ಭಾಗ್ಯ ಕಂಡಿರುವುದಾಗಲಿ ಎಲ್ಲವೂ ಸಂಘ ಸಾಹಸದಿಂದಲೇ!!

ಹಿಂದೂತ್ವದ ಹೆಸರಲ್ಲಿ ಬಿಲ್ಲವರು, ಬಂಟರಂತಹ ಶೂದ್ರ ಸಮುದಾಯದ ಬಿಸಿರಕ್ತದ ಯುವಕರ ತಲೆಕೆಡಿಸಿ ಅವರಿಂದ ಗಲಾಟೆ, ದೊಂಬಿ ಮಾಡಿಸುವ ಬಿಜೆಪಿಗರು ಹೆಣಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದರಲ್ಲಿ ನಿಸ್ಸೀಮರು. ಕಾಂಗ್ರೆಸ್ ಸರ್ಕಾರವಿದ್ದಾಗ ಪರೇಶ್ ಮೇಸ್ತನ ಸಾವನ್ನು ಮುಂದಿಟ್ಟುಕೊಂಡು `ಇಡೀ ಕರಾವಳಿಗೆ ಬೆಂಕಿಹಚ್ಚುತ್ತೇವೆ’ ಎಂಬಂತೆ ಮಾತನಾಡಿ, ಹಿಂದೂತ್ವ ಸಂಘಟನೆಗಳ ಕಾರ್ಯಕರ್ತರ ಮಾರಣಹೋಮ ನಡೆಯುತ್ತಿದೆ ಅಂತೆಲ್ಲ ಬೊಬ್ಬಿಟ್ಟು ಕೇಂದ್ರಕ್ಕೆ ದೂರು ಕೊಡುವಷ್ಟರಮಟ್ಟಿಗೆ ಬಿಜೆಪಿಗರು ಹಾರಾಡಿದ್ದು ನೆನಪಿರಬಹುದು. ಆದರೆ ಅದೇ ಕರಾವಳಿಯಲ್ಲಿ ಈಗ ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲ್ಲೂಕು ಪ್ರಧಾನ ಕಾರ್ಯದರ್ಶಿಯನ್ನೇ ಹತ್ಯೆ ಮಾಡಲಾಗಿದೆ. ಕಾರಣ ಏನೇ ಇರಲಿ, ತನಿಖೆಗೂ ಮೊದಲೇ ಬೀದಿಗಿಳಿದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು, ಬೆಂಕಿ ಹಚ್ಚುತ್ತಿದ್ದ ಸಂಘ ಪರಿವಾರ ಇದೀಗ ತುಟಿ ಎರಡು ಮಾಡುತ್ತಿಲ್ಲ. ಯಾಕೆಂದರೆ, ಈಗ ರಾಜ್ಯದಲ್ಲಿ ಅಧಿಕಾರದಲ್ಲಿರೋದು ಅವರದೇ ಬಿಜೆಪಿ ಸರ್ಕಾರ! ಧರ್ಮವನ್ನು ನೆಪ ಮಾಡಿಕೊಳ್ಳುವ ಇವರ ರಾಜಕಾರಣದ ವರಸೆ ಇಂತದ್ದು!

ಪುತ್ತೂರಿನ ಕಾರ್ತಿಕ್ ಸುವರ್ಣ ಆ ದುರ್ದೈವಿ. ಹಿಂದೂ ಜಾಗರಣಾ ವೇದಿಕೆಯ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಆಗಿದ್ದವ. ಅವನನ್ನು ಪೊಲೀಸ್ ಠಾಣೆಯ ಬಳಿಯೇ ಸಾರ್ವಜನಿಕರ ಕಣ್ಣೆದುರೇ ಚಾಕುವಿನಿಂದ ಬರ್ಬರವಾಗಿ ಇರಿದು ಸಾಯಿಸಲಾಗಿದೆ. ಆದರೆ ಹಿಂದೂ ಸಂಘಟನೆಯ ಪ್ರಮುಖ ಮುಂದಾಳಿನ ಹತ್ಯೆಯಾದರೂ ಸಂಘ ಪರಿವಾರದ ರಣಧೀರರ ಅಡ್ರಸ್ಸೇ ಇಲ್ಲಾ! ಕೊಲೆಯಾದವನು ಅಲ್ಪಸಂಖ್ಯಾತ ಸಮುದಾಯದವನೆಂಬಂತೆ ಪುತ್ತೂರು ತಣ್ಣಗಿದೆ!! ಹತ್ತಿರದಲ್ಲೇ ಇರುವ ಕಲ್ಲಡ್ಕದ ಕೇಸರಿ ಕಮಾಂಡರ್ ಪ್ರಭಾಕರ ಭಟ್, ಇದೇ ಏರಿಯಾದ ಕೂಗುಮಾರಿ ಶೋಭಾ ಕರಂದ್ಲಾಜೆ ಮತ್ತು ಸದಾನಂದಗೌಡರು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ!!

ಹಿಂದೂ ಗಂಡಿನ ಜೀವ, ಹಿಂದೂ ಹೆಣ್ಣಿನ ಮಾನ ಬಂಡವಾಳ ಮಾಡಿಕೊಂಡು ರಾಜಕಾರಣ ಮಾಡುವ ಸಂಘಪರಿವಾರದ ಘಟಾನುಘಟಿ ಬೆಂಕಿ ನವಾಬರೆಲ್ಲಾ ಏಕಿಂಥ ಘನಘೋರ ಮೌನದಲ್ಲಿದ್ದಾರೆ. ಹಿಂದೂ ಹೆಣ ಬಿದ್ದಾಗ ಧರ್ಮ ರಕ್ಷಣೆಯ ದೈವ ಆವಾಹನೆಯಾದಂತೆ ಹಾರಾಡುತ್ತಿದ್ದ ಬಿಜೆಪಿ-ಆರೆಸ್ಸೆಸ್-ಹಿಂಜಾವೇ…… ಮುಂತಾದ ಗ್ಯಾಂಗಿನ ಭಜರಂಗ ಬಲಿಗಳ ನಿಗೂಢ ಮೌನದ ಜಾಡು ಹಿಡಿದು ಹೊರಟರೆ ಕಾರ್ತಿಕ್‍ನನ್ನು ಕೊಂದ ಕೊಲೆಗಡುಕರು ಹಿಂದೂತ್ವದ ಅಭಿಯಾನದಲ್ಲಿ ಅರ್ಪಣಾಭಾವದಿಂದ ತೊಡಗಿಸಿಕೊಂಡವರೇ ಆಗಿದ್ದಾರೆಂಬ ಅಚ್ಚರಿ ಬೆಳಕಿಗೆ ಬರುತ್ತದೆ. ಪಾತಕಿಗಳಾದ ಕಿರಣ್ ರೈ ಮತ್ತು ಚರಣ್ ರೈ ಸಹೋದರರು ಹಾಗೂ ಪ್ರಿತೇಶ್ ಶೆಟ್ಟಿಗೆ ಬಿಜೆಪಿಯ ಆಯಕಟ್ಟಿನ ಅಧಿಕಾರಸ್ಥರ ಸಂಪರ್ಕವೂ ಇದೆಯೆಂಬ ಪುಕಾರುಗಳು ಎದ್ದಿವೆ. ಪವರ್‍ಫುಲ್ ಹಿಂಜಾವೇ ನಾಯಕ ತಾನೆಂಬ ಹುಂಬ ಅಹಮಿಕೆಯಲ್ಲಿ ಲೇವಾದೇವಿ, ಕೌಟುಂಬಿಕ ವ್ಯಾಜ್ಯ, ಚಿಟ್‍ಫಂಡ್, ಹೊಡಪೆಟ್‍ಗಳಲ್ಲಿ ಸಂಧಾನಕಾರನಾಗಿ ಮೂಗುತೂರಿಸುತ್ತಿದ್ದ ಕಾರ್ತಿಕ್‍ನ ಹತ್ಯೆ ಸುತ್ತ ಮೂರು ಸಾಧ್ಯತೆಯನ್ನು ಪೊಲೀಸರು ತರ್ಕಿಸುತ್ತಿದ್ದಾರೆ.

ಪೊಲೀಸರು ಅಂದಾಜಿಸಿರುವಂತೆ ಚಿಟ್‍ಫಂಡ್ ವ್ಯವಹಾರದ ಸೇಡು ಬರೀ ಇಪ್ಪತ್ತೇಳು ವರ್ಷದ ಕಾರ್ತಿಕ್‍ನನ್ನು ಬಲಿ ಹಾಕಿದೆ. ಪುತ್ತೂರಿನ ದರ್ಬೆಯಲ್ಲಿ ಮಾತೃಛಾಯ ಎಂಬ ಹೆಸರಿನ ಚಿಟ್‍ಫಂಡ್ ದಂಧೆ ಕಿರಣ್-ಚರಣ್ ಸಹೋದರರು ನಡೆಸಿಕೊಂಡಿದ್ದರು. ಕಿಶೋರ್ ಎಂಬಾತ ಬರೋಬ್ಬರಿ ನಾಲ್ಕು ಲಕ್ಷ ಹಣವನ್ನು ಚರಣ್ ರೈಗೆ ಕೊಡಬೇಕಿತ್ತು. ಆದರೆ ಆತ ಕೊಡದೆ ಸತಾಯಿಸುತ್ತಿದ್ದ. ಹಾಗಾಗಿ ಚರಣ್ ಆತನಿಗೆ ಲಾಯರ್ ನೋಟಿಸ್ ಕೊಟ್ಟಿದ್ದ. ಇದರಿಂದ ಕೆರಳಿದ ಕಿಶೋರ್ ಸುಜಿತ್ ಬಂಗೇರ, ಮನೀಶ್ ಕುಮಾರ್, ಪ್ರೀತಮ್ ಶೆಟ್ಟಿಯೊಂದಿಗೆ ಗ್ಯಾಂಗ್ ಕಟ್ಟಿಕೊಂಡು ಚರಣ್‍ಗೆ ಹಲ್ಲೆ ಮಾಡಿ ಹೆದರಿಸಿದ್ದ. ಈ ಪುಂಡರ ಪಟಾಲಂಗೆ ಹಿಂಜಾವೇ ಕಿಂಗ್ ಕಾರ್ತಿಕ್ ಸುವರ್ಣ ತನ್ನ ರಾಜಕೀಯ ಬಲದಿಂದ ನೆರವಾಗುತ್ತಿದ್ದ. ಹೀಗಾಗಿ ಕಿರಣ್-ಚರಣ್ ತಂಡ ಮತ್ತು ಕಾರ್ತಿಕ್ ಗುಂಪಿನ ನಡುವೆ 2018ರ ಜನವರಿಯಿಂದ ಆಗಾಗ ಜಗಳ-ಕದನ ಆಗುತ್ತಲೇ ಇತ್ತು. ಮೊನ್ನೆ ಸೆಪ್ಟೆಂಬರ್ 3ರಂದು ಚೌತಿಯ ಗಣೇಶ ವಿಸರ್ಜನೆ ಬಳಿಕ ಸಂಪ್ಯದಲ್ಲಿ ನಡೆದ ಯಕ್ಷಗಾನ ನೋಡುತ್ತಾ ನಿಂತಿದ್ದ ಕಾರ್ತಿಕ್ ಸುವರ್ಣನ ಮುಂದೆ ಕಿರಣ್-ಚರಣ್ ಪ್ರತ್ಯಕ್ಷರಾಗಿದ್ದಾರೆ. ಎರಡೂ ಕಡೆಯವರು ಗುರಾಯಿಸಿದ್ದಾರೆ. ಮಾತಿಗೆ ಮಾತಾಗಿದೆ. ಇದೇ ಸಂದರ್ಭವೆಂದು ವೈರಿ ಪಡೆ ಕಾರ್ತಿಕ್‍ನನ್ನು ಇರಿದು ಕೊಂದು ಪರಾರಿಯಾಗಿದ್ದಾರೆ.

ಮತ್ತೊಂದು ಅನುಮಾನದ ಸಾಧ್ಯತೆಯಲ್ಲಿ ಗಾಂಜಾ ದಂಧೆಯ ಅಮಲೇರಿದೆ! ಗಾಂಜಾ ವ್ಯವಹಾರದ ವೈಷಮ್ಯದಿಂದ ಕಿರಣ್-ಚರಣ್ ಮತ್ತು ಕಾರ್ತಿಕ್ ಸುವರ್ಣ ಬದ್ಧವೈರಿಗಳಾಗಿದ್ದರೆಂಬ ಮಾತು ಪುತ್ತೂರಲ್ಲಿ ಪಿಸುಗುಡುತ್ತಿದೆ. ಕಾರ್ತಿಕ್‍ಗೆ ರಾಜಕೀಯ ಪ್ರಭಾವ ಇದ್ದುದರಿಂದ ಆತನದೇ ಮೇಲುಗೈ ಆಗುತ್ತಿದ್ದುದು ಎದುರಾಳಿಗಳನ್ನು ಕೊಲೆ ಸ್ಕೆಚ್‍ಗೆ ಪ್ರಚೋದಿಸಿರಬಹುದೆಂಬ ಲೆಕ್ಕಾಚಾರ ಹಾಕಲಾಗುತ್ತಿದೆ. ಆದರೆ ಕಾರ್ತಿಕ್‍ನ ತಾಯಿ ಆಡಿರುವ ಮಾತುಗಳು ಸಂಘಪರಿವಾರದ ಜನಿವಾರಿಗಳು ಶೂದ್ರ ಹುಡುಗರನ್ನು ಬೇಕಾದಂತೆ ಬಳಸಿಕೊಂಡು ಬಲಿ ಹಾಕುತ್ತಿರುವ ಧರ್ಮೋನ್ಮಾದ ಹಿಕಮತ್ತುಗಳನ್ನು ಬಿಚ್ಚಿಟ್ಟಿದೆ!! “ನನ್ನ ಮಗ ಅಮಾಯಕ. ಯಾರ ತಂಟೆಗೂ ಹೋದವನಲ್ಲ. ಆದರೆ ಯಾವಾಗ ಹಿಂದೂ ಜಾಗರಣ ವೇದಿಕೆ ಸೇರಿಕೊಂಡನೋ, ಬಿಜೆಪಿ ರಾಜಕಾರಣಿಗಳೊಂದಿಗೆ ಒಡನಾಟ ತೊಡಗಿದನೋ ಆಗಾತ ಕೆಲವರ ಕೆಂಗಣ್ಣಿಗೆ ತುತ್ತಾಗಿದ್ದ; ವೈಷಮ್ಯ ಬೆಳೆಸಿಕೊಂಡಿದ್ದ….. ಆತ ಸಂಘಟನೆ(ಹಿಂಜಾವೇ) ರಾಜಕೀಯ(ಬಿಜೆಪಿ) ಸೇರಿಕೊಂಡು ಒಂದಿಷ್ಟು ದ್ವೇಷ, ಹಗೆತನ ಸಂಪಾದಿಸಿದ್ದನಷ್ಟೇ… ಅದೇ ಆತನ ಕೊಲೆ ಮಾಡಲಾಗಿದೆ….. ಪೊಲೀಸ್ ಠಾಣೆ ಎದುರೇ ಕೊಲೆ ಮಾಡುತ್ತಾರೆಂದರೆ ರಾಜಕಾರಣಿಗಳ ಬೆಂಬಲ ಇರಲೇಬೇಕು…. ಇಲ್ಲದಿದ್ದರೆ ಪಾತಕಿಗಳಿಗೆ ಅಷ್ಟು ಧೈರ್ಯ ಎಲ್ಲಿಂದ ಬರಬೇಕು?” ಎಂದು ಬಿಕ್ಕುತ್ತಾರೆ ಕಾರ್ತಿಕ್‍ನ ತಾಯಿ.

ದಕ್ಷಿಣ ಕನ್ನಡದ ಸಂಘಪರಿವಾರದ ಭಜರಂಗದಳ, ಆರೆಸ್ಸೆಸ್, ಹಿಂಜಾವೇ, ವಿಶ್ವ ಹಿಂದೂ ಪರಿಷತ್, ಮಹಿಳಾ ಸಂಘಟನೆಗಳಲ್ಲಿ ಲೀಡರಿಕೆ, ಹಿಡಿತ ಸಾಧಿಸುವಿಕೆಯ ಮೇಲಾಟದ ಸಂಘರ್ಷ ಮಾಮೂಲಿ ಎಂಬಂತಾಗಿದೆ. ಪಾಪದ ಶೂದ್ರ ಹುಡುಗ, ಹುಡುಗಿಯರಿಗೆ ಹಿಂದೂತ್ವದ ಪುಂಡಾಟದಿಂದ ಪ್ರಾಪ್ತವಾಗುವ ಸಾಮಾಜಿಕ ಇಮೇಜ್‍ನ ಆಕರ್ಷಣೆಗೆ ಒಳಗಾಗುವಂತೆ ಮಾಡಲಾಗುತ್ತದೆ. ಈ ಆ್ಯಂಟಿ ಹೀರೋಯಿಸಮ್ ಜತೆಗೆ ರಾಜಕೀಯ ಗೌರವ, ಹಣಕಾಸಿನ ಲಾಭ, ತಾಪಂ-ಜಿಪಂ ಮುಂತಾದ ಸ್ಥಳೀಯ ಸಂಸ್ಥೆ ಸದಸ್ಯರ ಸೆಳೆತಕ್ಕೆ ಹಿಂದುಳಿದ ವರ್ಗದ ತರುಣ-ತರುಣಿಯರು ಬೀಳುವಂತೆ ನಾಜೂಕಾಗಿ ಮಾಡಲಾಗುತ್ತಿದೆ. ಈ ಆಮಿಷ ಸಂಘಪರಿವಾರದ ತರಹೇವಾರಿ ತಂಡಗಳಲ್ಲಿ ಸೇಡು-ದ್ವೇಷ-ಹಗೆತನದ ಶೀತಲ ಸಂಘರ್ಷವಾಗಿ ಮಾರ್ಪಟ್ಟಿದೆ. ಇದು ಕಾರ್ತಿಕ್ ಸುವರ್ಣನಂಥ ಧಾಡಸಿ ಯುವಕರನ್ನು ಆಪೋಷನ ಪಡೆಯುತ್ತಿದೆ! ಕರಾವಳಿಯ ಕೇಸರಿ ಪರಿವಾರದ ಯಾವ್ಯಾವ ಪಡೆಯಲ್ಲಿ ಯಾರ್ಯಾರಿಗೆ ಎಂತೆಂಥ ಕೇಡು ಕಾದಿದೆಯೋ?!!

ಅದೇನೇ ಇರಲಿ, ಒಂದಂತೂ ಸತ್ಯ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಲ್ಲದೇ, ಕಾಂಗ್ರೆಸ್ಸೊ, ಜೆಡಿಎಸ್ಸೊ ಅಥವಾ ಮೈತ್ರಿ ಸರ್ಕಾರವೋ ಇದ್ದಿದ್ದರೆ ಕಾರ್ತಿಕ್ ಕೊಲೆಯಾದ ಇಷ್ಟೊತ್ತಿಗಾಗಲೇ ಬಿಜೆಪಿ-ಸಂಘ ಪರಿವಾರದ ಜಂಟಿ `ಬೆಂಕಿ’ ಕಾರ್ಯಾಚರಣೆಗಳು ಶುರುವಾಗಿರುತ್ತಿತ್ತು. ಪೊಲೀಸರು ಇದೇ ಆರೋಪಿಗಳನ್ನು ಬಂಧಿಸಿದ್ದರೂ `ಸಾಬರನ್ನು ಬಚಾವು ಮಾಡುವ ಸಲುವಾಗಿ ಅಮಾಯಕ ಹಿಂದೂ ಹುಡುಗರನ್ನು ಫಿಟ್ ಮಾಡಿದ್ದಾರೆ’ ಅಂತ ಭೀಕರ ಭಾಷಣಗಳು ಉದುರುತ್ತಿದ್ದವು. ಹಿಂದೂಗಳ ಮಾರಣಹೋಮ ನಡೆಯುತ್ತಿದೆ ಅಂತ ಬದುಕಿರುವವರ ಹೆಸರನ್ನೂ ಸೇರಿಸಿ ಒಂದು `ಹುತಾತ್ಮರ ಪಟ್ಟಿ’ ತಯಾರಿಸಿಕೊಂಡು ಊರೂರು ಅಲೆದಾಡುತ್ತಿದ್ದರು. ಆದರೀಗ ಗಪ್‍ಚುಪ್. ಇದು ಸಂಘ ಪರಿವಾರಕ್ಕೆ ಹೊಸದೇನೂ ಅಲ್ಲ. ತೀರ ಈಚೆಗೆ ವಿವೇಕಾನಂದ ಕಾಲೇಜಿನ ಎಬಿವಿಪಿಯ ನಾಲ್ಕೈದು ನೀಚ ಹುಡುಗರು ಪಾಪದ ಬುಡಕಟ್ಟು ಹುಡುಗಿಯನ್ನು ಕಾಡಿಗೆ ಕರೆದೊಯ್ದು ಕಾರಲ್ಲೇ ಸರದಿಯಲ್ಲಿ ರೇಪ್ ಮಾಡಿದಾಗಲೂ ಎಬಿವಿಪಿಗಳು `ಈ ರೇಪಿಸ್ಟ್‍ಗಳು ತಮ್ಮವರಲ್ಲ’ ಎಂದಿದ್ದಷ್ಟೇ ಅಲ್ಲ, ಆ ಹುಡುಗಿಯ ನಡತೆಯೇ ಸರಿ ಇಲ್ಲ ಎಂದು ಸಮರ್ಥನೆಗೆ ಇಳಿದಿದ್ದರು. ತಮ್ಮ ಮಕ್ಕಳನ್ನು ಬೇಕಾದಂತೆ ಬಳಸಿಕೊಂಡು ಅವರ ಭವಿಷ್ಯವನ್ನೇ ಹಾಳುಗೆಡಹುವ ಇವರ ಹುನ್ನಾರಗಳನ್ನು ಹೆತ್ತವರು ಈಗಲಾದರು ಅರ್ಥಮಾಡಿಕೊಳ್ಳದಿದ್ದರೆ ಕಾರ್ತಿಕ್‍ನ ತಾಯಿಯಂತೆ ತಮ್ಮದೇ ಮಕ್ಕಳ ಹೆಣದ ಮುಂದೆ ಗೋಳಾಡುವಂತಹ ದುರ್ವಿಧಿಯೇ ಗತಿ!

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...