Homeಮುಖಪುಟಆನ್‌ಲೈನ್ ತರಗತಿಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ : ಸಿಸೋಡಿಯಾ

ಆನ್‌ಲೈನ್ ತರಗತಿಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ : ಸಿಸೋಡಿಯಾ

ಆದರೆ, ಸರ್ಕಾರಿ ಶಾಲಾ ಪ್ರತಿನಿಧಿಗಳು ಶಿಕ್ಷಣ ನಿರ್ದೇಶನಾಲಯದಿಂದ ಔಪಚಾರಿಕ ಆದೇಶವನ್ನು ಕಾಯುತ್ತಿದ್ದೇವೆ ಎಂದು ದಿ ಪ್ರಿಂಟ್‌ಗೆ ತಿಳಿಸಿದರು.

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಸೋಮವಾರ ಶಾಲೆಗಳಿಗೆ ಬರೆದ ಪತ್ರದಲ್ಲಿ, “ಜುಲೈ 2 ರಂದು ಸ್ಪಷ್ಟವಾದ ಸೂಚನೆಗಳನ್ನು ನೀಡಿದ್ದರೂ, ಅನೇಕ ಶಾಲೆಗಳು ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆನ್‌ಲೈನ್ ತರಗತಿಗಳನ್ನು ನಡೆಸಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ ಎಂದು ಅರವಿಂದ್ ಕೇಜ್ರಿವಾಲ್ ಸರ್ಕಾರ ದೆಹಲಿ ಸರ್ಕಾರಿ ಶಾಲೆಗಳಿಗೆ ಸೂಚನೆಗಳನ್ನು ನೀಡಿತ್ತು.

ಮೇ ತಿಂಗಳಲ್ಲಿ ಬೇಸಿಗೆ ರಜೆಯ ಮೊದಲು ತಮ್ಮ ಸೇವೆಯನ್ನು ಸಲ್ಲಿಸಿದ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ. ಅವರು “ಬೋಧನೆ-ಕಲಿಕೆ ಅಥವಾ ಶಾಲೆಗೆ ನಿಯೋಜಿಸಲಾದ ಯಾವುದೇ ಕಾರ್ಯಗಳಲ್ಲಿ ತಮ್ಮ ಸೇವೆಯನ್ನು ಮುಂದುವರಿಸಲಿ” ಎಂದು ಶಾಲೆಗಳಿಗೆ ಒತ್ತಾಯಿಸಿದರು.

ಆದರೆ, ಸರ್ಕಾರಿ ಶಾಲಾ ಪ್ರತಿನಿಧಿಗಳು ಶಿಕ್ಷಣ ನಿರ್ದೇಶನಾಲಯದಿಂದ ಔಪಚಾರಿಕ ಆದೇಶವನ್ನು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ನಗರದ 1,031 ಸರ್ಕಾರಿ ಶಾಲೆಗಳಲ್ಲಿ ಸುಮಾರು 20,000 ಅತಿಥಿ ಶಿಕ್ಷಕರು ಇದ್ದಾರೆ ಎಂದು ವರದಿಯಾಗಿದೆ.

ಶಾಶ್ವತ ಶಿಕ್ಷಕರಿಗಿಂತ ಭಿನ್ನವಾಗಿ, ಈ ಅತಿಥಿ ಶಿಕ್ಷಕರು ಪ್ರತಿವರ್ಷ ನವೀಕರಿಸಬೇಕಾದ ಒಪ್ಪಂದಗಳ ಮೇಲೆ ಕೆಲಸ ಮಾಡುತ್ತಾರೆ. ಅನೇಕರಿಗೆ ಪ್ರತಿದಿನವೂ ವೇತನ ಪಾವತಿಸಲಾಗುತ್ತದೆ, ದಿನಕ್ಕೆ 1,040 ರಿಂದ 1,400 ರೂವರಗೆ ವೇತನ ನೀಡಲಾಗುತ್ತಿದೆ.

ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ಮೂರು ತಿಂಗಳುಗಳಿಂದ ಕೆಲಸವಿಲ್ಲದ ಕಾರಣ, ಅನೇಕರು ತಮ್ಮ ಸ್ಥಳೀಯ ಸ್ಥಳಗಳಿಗೆ ಮರಳಿದರು. ಇನ್ನೂ ಕೆಲವರು ರಸ್ತೆಬದಿಯಲ್ಲಿ ಹಣ್ಣುಗಳನ್ನು ಮಾರಾಟ ಮಾಡುವುದು, ಬೈಸಿಕಲ್ ರಿಪೇರಿ ಅಂಗಡಿಗಳನ್ನು ಸ್ಥಾಪಿಸುವುದು ಮುಂತಾದ ಪರ್ಯಾಯ ಜೀವನೋಪಾಯವನ್ನು ಆರಿಸಿಕೊಂಡಿದ್ದಾರೆ.

ಜುಲೈ 2 ರಂದು, ಸಿಸೋಡಿಯಾ ಮಾರ್ಚ್ 19 ರಿಂದ ಶಾಲೆಗಳನ್ನು ಸ್ಥಗಿತಗೊಳಿಸಿದ್ದರಿಂದ ಆನ್ಲೈನ್ ಬೋಧನೆ-ಕಲಿಕೆಯ ಯೋಜನೆಯನ್ನು ಘೋಷಿಸಿತ್ತು. ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದ್ದವು. ಶಾಲೆಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರನ್ನು ಈ ಪ್ರಕ್ರಿಯೆಗೆ ಒಳಪಡಿಸಬೇಕು ಎಂದು ಸಿಸೋಡಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದಾಗ್ಯೂ, ಈ ಬಗ್ಗೆ ಔಪಚಾರಿಕ ಆದೇಶವನ್ನು ಇನ್ನೂ ಹೊರಡಿಸಲಾಗಿಲ್ಲ ಎಂದು ಶಾಲೆಗಳು ಹೇಳುತ್ತವೆ.

ಸರ್ಕಾರಿ ಶಾಲಾ ಶಿಕ್ಷಕರ ಸಂಘದ (ಜಿಎಸ್‌ಟಿಎ) ಪಶ್ಚಿಮ-A ಜಿಲ್ಲಾ ಕಾರ್ಯದರ್ಶಿ ಸಂತ ರಾಮ್, “ಸರ್ಕಾರ ಈ ಆದೇಶವನ್ನು ಮೊದಲೇ ನೀಡಿದ್ದರೂ, ಶಿಕ್ಷಣ ನಿರ್ದೇಶನಾಲಯವು ಔಪಚಾರಿಕ ಆದೇಶವನ್ನು ಇನ್ನೂ ನೀಡದ ಕಾರಣ ಅತಿಥಿ ಶಿಕ್ಷಕರು ತರಗತಿಗಳಲ್ಲಿ ಮತ್ತೆ ತೊಡಗಿಸಿಕೊಂಡಿಲ್ಲ” ಎಂದಿದ್ದಾರೆ.

ಸೋಮವಾರ ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ದೆಹಲಿಯ 20,000 ಅತಿಥಿ ಶಿಕ್ಷಕರಲ್ಲಿ ಶೇಕಡಾ 3 ರಷ್ಟು ಮಂದಿ ಮತ್ತೆ ಸೇರಲು ಪ್ರಾಂಶುಪಾಲರು ಕೇಳಿಕೊಂಡರು. ಆದರೆ ಅವರಿಗೆ ಸಂಬಳ ನೀಡಲಾಗುತ್ತದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

ಸಿಸೋಡಿಯಾ ಅವರ ಇತ್ತೀಚಿನ ಪತ್ರವನ್ನು ಸ್ವಾಗತಿಸಿದರೂ, ಸುಂದರ್ ನಗ್ರಿಯ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕ ಶೋಯೆಬ್ ರಾಣಾ, ಈ ಹಿಂದೆ ಒಬ್ಬ ಅತಿಥಿ ಶಿಕ್ಷಕನನ್ನು ಶಾಲೆಯ ರೋಸ್ಟರ್‌ನಲ್ಲಿ ಸೇರಿಸಲಾಗಿಲ್ಲ ಎಂದು ಹಿಂಜರಿಕೆಯಿಂದ ದೂರಿದ್ದಾರೆ.

” ವಿಶೇಷವಾಗಿ ಶಿಕ್ಷಣ ನಿರ್ದೇಶನಾಲಯದಿಂದ ನೋಟಿಸ್ ವಿತರಿಸಲಾಗುವುದು ಎಂಬ ಭರವಸೆಯೊಂದಿಗೆ, ಈ ಆದೇಶವು ಬಂದಿರುವುದಕ್ಕೆ ನನಗೆ ಖುಷಿಯಾಗಿದೆ,  ಆದರೆ ಇದು ಎಷ್ಟು ತಾತ್ಕಾಲಿಕವಾಗಿರುತ್ತದೆ ಎಂದು ಗೊತ್ತಿಲ್ಲ. ದೆಹಲಿಯ ಅತಿಥಿ ಶಿಕ್ಷಕರಿಗೆ ಇನ್ನೂ ಉದ್ಯೋಗ ಭದ್ರತೆ ಇಲ್ಲ” ಎಂದು ರಾಣಾ ಹೇಳಿದ್ದಾರೆ.


ಇದನ್ನೂ ಓದಿ: 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...