Homeಮುಖಪುಟಆನ್‌ಲೈನ್ ತರಗತಿಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ : ಸಿಸೋಡಿಯಾ

ಆನ್‌ಲೈನ್ ತರಗತಿಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ : ಸಿಸೋಡಿಯಾ

ಆದರೆ, ಸರ್ಕಾರಿ ಶಾಲಾ ಪ್ರತಿನಿಧಿಗಳು ಶಿಕ್ಷಣ ನಿರ್ದೇಶನಾಲಯದಿಂದ ಔಪಚಾರಿಕ ಆದೇಶವನ್ನು ಕಾಯುತ್ತಿದ್ದೇವೆ ಎಂದು ದಿ ಪ್ರಿಂಟ್‌ಗೆ ತಿಳಿಸಿದರು.

- Advertisement -
- Advertisement -

ದೆಹಲಿ ಉಪಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಸೋಮವಾರ ಶಾಲೆಗಳಿಗೆ ಬರೆದ ಪತ್ರದಲ್ಲಿ, “ಜುಲೈ 2 ರಂದು ಸ್ಪಷ್ಟವಾದ ಸೂಚನೆಗಳನ್ನು ನೀಡಿದ್ದರೂ, ಅನೇಕ ಶಾಲೆಗಳು ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಆನ್‌ಲೈನ್ ತರಗತಿಗಳನ್ನು ನಡೆಸಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ ಎಂದು ಅರವಿಂದ್ ಕೇಜ್ರಿವಾಲ್ ಸರ್ಕಾರ ದೆಹಲಿ ಸರ್ಕಾರಿ ಶಾಲೆಗಳಿಗೆ ಸೂಚನೆಗಳನ್ನು ನೀಡಿತ್ತು.

ಮೇ ತಿಂಗಳಲ್ಲಿ ಬೇಸಿಗೆ ರಜೆಯ ಮೊದಲು ತಮ್ಮ ಸೇವೆಯನ್ನು ಸಲ್ಲಿಸಿದ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ. ಅವರು “ಬೋಧನೆ-ಕಲಿಕೆ ಅಥವಾ ಶಾಲೆಗೆ ನಿಯೋಜಿಸಲಾದ ಯಾವುದೇ ಕಾರ್ಯಗಳಲ್ಲಿ ತಮ್ಮ ಸೇವೆಯನ್ನು ಮುಂದುವರಿಸಲಿ” ಎಂದು ಶಾಲೆಗಳಿಗೆ ಒತ್ತಾಯಿಸಿದರು.

ಆದರೆ, ಸರ್ಕಾರಿ ಶಾಲಾ ಪ್ರತಿನಿಧಿಗಳು ಶಿಕ್ಷಣ ನಿರ್ದೇಶನಾಲಯದಿಂದ ಔಪಚಾರಿಕ ಆದೇಶವನ್ನು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ನಗರದ 1,031 ಸರ್ಕಾರಿ ಶಾಲೆಗಳಲ್ಲಿ ಸುಮಾರು 20,000 ಅತಿಥಿ ಶಿಕ್ಷಕರು ಇದ್ದಾರೆ ಎಂದು ವರದಿಯಾಗಿದೆ.

ಶಾಶ್ವತ ಶಿಕ್ಷಕರಿಗಿಂತ ಭಿನ್ನವಾಗಿ, ಈ ಅತಿಥಿ ಶಿಕ್ಷಕರು ಪ್ರತಿವರ್ಷ ನವೀಕರಿಸಬೇಕಾದ ಒಪ್ಪಂದಗಳ ಮೇಲೆ ಕೆಲಸ ಮಾಡುತ್ತಾರೆ. ಅನೇಕರಿಗೆ ಪ್ರತಿದಿನವೂ ವೇತನ ಪಾವತಿಸಲಾಗುತ್ತದೆ, ದಿನಕ್ಕೆ 1,040 ರಿಂದ 1,400 ರೂವರಗೆ ವೇತನ ನೀಡಲಾಗುತ್ತಿದೆ.

ಸಾಂಕ್ರಾಮಿಕ ರೋಗದಿಂದಾಗಿ ಕಳೆದ ಎರಡು ಮೂರು ತಿಂಗಳುಗಳಿಂದ ಕೆಲಸವಿಲ್ಲದ ಕಾರಣ, ಅನೇಕರು ತಮ್ಮ ಸ್ಥಳೀಯ ಸ್ಥಳಗಳಿಗೆ ಮರಳಿದರು. ಇನ್ನೂ ಕೆಲವರು ರಸ್ತೆಬದಿಯಲ್ಲಿ ಹಣ್ಣುಗಳನ್ನು ಮಾರಾಟ ಮಾಡುವುದು, ಬೈಸಿಕಲ್ ರಿಪೇರಿ ಅಂಗಡಿಗಳನ್ನು ಸ್ಥಾಪಿಸುವುದು ಮುಂತಾದ ಪರ್ಯಾಯ ಜೀವನೋಪಾಯವನ್ನು ಆರಿಸಿಕೊಂಡಿದ್ದಾರೆ.

ಜುಲೈ 2 ರಂದು, ಸಿಸೋಡಿಯಾ ಮಾರ್ಚ್ 19 ರಿಂದ ಶಾಲೆಗಳನ್ನು ಸ್ಥಗಿತಗೊಳಿಸಿದ್ದರಿಂದ ಆನ್ಲೈನ್ ಬೋಧನೆ-ಕಲಿಕೆಯ ಯೋಜನೆಯನ್ನು ಘೋಷಿಸಿತ್ತು. ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದ್ದವು. ಶಾಲೆಗಳಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರನ್ನು ಈ ಪ್ರಕ್ರಿಯೆಗೆ ಒಳಪಡಿಸಬೇಕು ಎಂದು ಸಿಸೋಡಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದಾಗ್ಯೂ, ಈ ಬಗ್ಗೆ ಔಪಚಾರಿಕ ಆದೇಶವನ್ನು ಇನ್ನೂ ಹೊರಡಿಸಲಾಗಿಲ್ಲ ಎಂದು ಶಾಲೆಗಳು ಹೇಳುತ್ತವೆ.

ಸರ್ಕಾರಿ ಶಾಲಾ ಶಿಕ್ಷಕರ ಸಂಘದ (ಜಿಎಸ್‌ಟಿಎ) ಪಶ್ಚಿಮ-A ಜಿಲ್ಲಾ ಕಾರ್ಯದರ್ಶಿ ಸಂತ ರಾಮ್, “ಸರ್ಕಾರ ಈ ಆದೇಶವನ್ನು ಮೊದಲೇ ನೀಡಿದ್ದರೂ, ಶಿಕ್ಷಣ ನಿರ್ದೇಶನಾಲಯವು ಔಪಚಾರಿಕ ಆದೇಶವನ್ನು ಇನ್ನೂ ನೀಡದ ಕಾರಣ ಅತಿಥಿ ಶಿಕ್ಷಕರು ತರಗತಿಗಳಲ್ಲಿ ಮತ್ತೆ ತೊಡಗಿಸಿಕೊಂಡಿಲ್ಲ” ಎಂದಿದ್ದಾರೆ.

ಸೋಮವಾರ ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ದೆಹಲಿಯ 20,000 ಅತಿಥಿ ಶಿಕ್ಷಕರಲ್ಲಿ ಶೇಕಡಾ 3 ರಷ್ಟು ಮಂದಿ ಮತ್ತೆ ಸೇರಲು ಪ್ರಾಂಶುಪಾಲರು ಕೇಳಿಕೊಂಡರು. ಆದರೆ ಅವರಿಗೆ ಸಂಬಳ ನೀಡಲಾಗುತ್ತದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

ಸಿಸೋಡಿಯಾ ಅವರ ಇತ್ತೀಚಿನ ಪತ್ರವನ್ನು ಸ್ವಾಗತಿಸಿದರೂ, ಸುಂದರ್ ನಗ್ರಿಯ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕ ಶೋಯೆಬ್ ರಾಣಾ, ಈ ಹಿಂದೆ ಒಬ್ಬ ಅತಿಥಿ ಶಿಕ್ಷಕನನ್ನು ಶಾಲೆಯ ರೋಸ್ಟರ್‌ನಲ್ಲಿ ಸೇರಿಸಲಾಗಿಲ್ಲ ಎಂದು ಹಿಂಜರಿಕೆಯಿಂದ ದೂರಿದ್ದಾರೆ.

” ವಿಶೇಷವಾಗಿ ಶಿಕ್ಷಣ ನಿರ್ದೇಶನಾಲಯದಿಂದ ನೋಟಿಸ್ ವಿತರಿಸಲಾಗುವುದು ಎಂಬ ಭರವಸೆಯೊಂದಿಗೆ, ಈ ಆದೇಶವು ಬಂದಿರುವುದಕ್ಕೆ ನನಗೆ ಖುಷಿಯಾಗಿದೆ,  ಆದರೆ ಇದು ಎಷ್ಟು ತಾತ್ಕಾಲಿಕವಾಗಿರುತ್ತದೆ ಎಂದು ಗೊತ್ತಿಲ್ಲ. ದೆಹಲಿಯ ಅತಿಥಿ ಶಿಕ್ಷಕರಿಗೆ ಇನ್ನೂ ಉದ್ಯೋಗ ಭದ್ರತೆ ಇಲ್ಲ” ಎಂದು ರಾಣಾ ಹೇಳಿದ್ದಾರೆ.


ಇದನ್ನೂ ಓದಿ: 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...