Homeಮುಖಪುಟ‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

- Advertisement -
- Advertisement -

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಪ್ರಕಟಿಸಿರುವ “ಭಾರತದ ಜನ ಇತಿಹಾಸ”ವನ್ನು ದಾಖಲಿಸಿರುವ ಇತಿಹಾಸ ಮಾಲೆಯ ಕನ್ನಡ ಅನುವಾದದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಮಾರ್ಚ್ 13 ರ ಶನಿವಾರ ಸಂಜೆ 5 ಕ್ಕೆ ನಡೆಯಲಿದ್ದು, ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಮೂರು ಅನುವಾದಿತ ಪುಸ್ತಕಗಳು ಬಿಡುಗಡೆಗೊಳ್ಳುತ್ತಿದ್ದು, ‘ಚಿಂತನ ಪುಸ್ತಕ’ ಪ್ರಕಾಶನವು ಈ ಪುಸ್ತಕಗಳನ್ನು ಪ್ರಕಟಿಸುತ್ತಿದೆ.

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಯು ಹಲವು ವರ್ಷಗಳಿಂದ ಇತಿಹಾಸದ ಬಗ್ಗೆ ವೈಜ್ಞಾನಿಕ, ಜಾತ್ಯಾತೀತ ಕಣ್ಣೋಟವನ್ನು ಪ್ರೋತ್ಸಾಹಿಸುತ್ತಿರುವ ಹಾಗೂ ಕೋಮುವಾದಿ, ಸಂಕುಚಿತವಾದಿ ವ್ಯಾಖ್ಯೆಗಳನ್ನು ಪ್ರತಿರೋಧಿಸುತ್ತಿರುವ ಒಂದು ಸಂಸ್ಥೆಯಾಗಿದೆ. ಇತಿಹಾಸವನ್ನು ರಾಜರುಗಳ ಆಳ್ವಿಕೆಗಳ ಪಟ್ಟಿಯಾಗಿಸುವ ಬದಲು ಅದನ್ನು ನಿರ್ಮಿಸಿದ ಸಾಮಾನ್ಯ ಜನರನ್ನೇ ಕೇಂದ್ರವಾಗಿರಿಸಿಕೊಂಡು, ನಿಜವಾದ ಇತಿಹಾಸದ ವೈಜ್ಞಾನಿಕ, ವಸ್ತುನಿಷ್ಟ ಅಧ್ಯಯನದಿಂದ “ಭಾರತದ ಜನ ಇತಿಹಾಸ ಮಾಲೆ”ಯನ್ನು ಹಿಸ್ಟೋರಿನ್ಸ್ ಸೊಸೈಟಿಯು ರಚಿಸುತ್ತಿದೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

ಸೊಸೈಟಿಯ ಪ್ರೊ. ಇರ್ಫಾನ್ ಹಬೀಬ್ ನೇತೃತ್ವದಲ್ಲಿ ಭಾರತದ ಇತಿಹಾಸವನ್ನು ಸಮಗ್ರವಾಗಿ ನಿರೂಪಿಸುವ ಮತ್ತು ಭಾರತದ ಜನ ಇತಿಹಾಸವನ್ನು ಸಂಕಲಿಸುವ 36 ಕೃತಿಗಳನ್ನು ಪ್ರಕಟಿಸುವ ಬೃಹತ್ ಯೋಜನೆಯನ್ನು ಹಾಕಿಕೊಂಡಿದೆ. ಇದರಲ್ಲಿ 15 ಕೃತಿಗಳು ಈಗಾಗಲೆ ಪ್ರಕಟವಾಗಿದ್ದು, ಅವುಗಳಲ್ಲಿ 6 ಕೃತಿಗಳನ್ನು ‘ಚಿಂತನ ಪುಸ್ತಕ’ ಪ್ರಕಾಶನ ಕನ್ನಡದಲ್ಲಿ ಪ್ರಕಟಿಸಿದೆ. ಇದೀಗ ಮೂರು ಪುಸ್ತಕಗಳು ಬಿಡುಗಡೆಗೆ ಸಜ್ಜಾಗಿದ್ದು, ಇನ್ನೂ ಆರು ಕೃತಿಗಳು ಅನುವಾದದ ಹಂತದಲ್ಲಿದೆ ಎಂದು ‘ಚಿಂತನ ಪುಸ್ತಕ’ ಪ್ರಕಾಶನ ಹೇಳಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಭಾರತದ ಜನ ಇತಿಹಾಸ ಮಾಲೆ’ಯ ಪರಿಕಲ್ಪನೆಯ ಕುರಿತು ಪ್ರೊ. ಇರ್ಫಾನ್ ಹಬೀಬ್ ಅವರು ಮಾತನಾಡಲಿದ್ದು, ಅವರ ಜತೆ ಸಂವಾದಕ್ಕೂ ಅವಕಾಶವಿರುತ್ತದೆ. ಕಾರ್ಯಕ್ರಮದಲ್ಲಿ ಕಲಬುರ್ಗಿ ಕೇಂದ್ರೀಯ ವಿವಿಯ ಉಪಕುಲಪತಿಗಳು ಮತ್ತು ಬೆಂಗಳೂರು ವಿ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಡಾ.ಎಸ್.ಚಂದ್ರಶೇಖರ್, ಐ.ಸಿ.ಎಚ್.ಆರ್ ದಕ್ಷಿಣ ಕೇಂದ್ರದ ಡಾ.ಶಿವಶರಣ ಕೆ ಅರುಣಿ ಮತ್ತು ಕ್ರೈಸ್ಟ್ ವಿವಿ ಯ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎಸ್.ಪಿ.ವಾಗೀಶ‍್ವರಿ ಅವರು ಭಾಗವಹಿಸಿ ಕೃತಿಯ ಪರಿಚಯ ಮಾಡಿಕೊಡಲಿದ್ದಾರೆ. ಅಲ್ಲದೆ ಬಿಡುಗಡೆಗೊಳ್ಳುತ್ತಿರುವ ಕೃತಿಗಳ ಅನುವಾದಕರಾದ ಡಾ.ಕೆ.ಎಂ.ಲೋಕೇಶ್, ಎಸ್.ಎನ್. ಸ್ವಾಮಿ ಮತ್ತು ಟಿ.ವೆಂಕಟೇಶ ಮೂರ್ತಿ ಅನುವಾದದ ಅನುಭವದ ಕುರಿತು ಮಾತನಾಡಲಿದ್ದಾರೆ.

ಇದನ್ನೂ ಓದಿ: ಲಜ್ಜಾಗೌರಿ ಪುಸ್ತಕ ಏನನ್ನು ಹೇಳುತ್ತದೆ? – ಯೋಗೇಶ್ ಮಾಸ್ಟರ್

ಕಾರ್ಯಕ್ರಮವು ಝೂಮ್‌ ಮೂಲಕ ನಡೆಯಲಿದ್ದು, ಋತುಮಾನ.ಕಾಮ್ ಮತ್ತು ಜನಶಕ್ತಿ ಮೀಡಿಯಾದಲ್ಲಿ ನೇರ ಪ್ರಸಾರಗೊಳ್ಳಲಿದೆ. “ಪುರಾಣವನ್ನು ಇತಿಹಾಸ ಎಂದು ಪ್ರಚಾರ ಮಾಡುತ್ತಿರುವ ಇಂದಿನ ಸನ್ನಿವೇಶದಲ್ಲಿ ಇತಿಹಾಸದ ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ, ಪ್ರಾಧ್ಯಾಪಕರಿಗೆ ಹಾಗೂ ಎಲ್ಲ ಆಸಕ್ತರಿಗೆ ನಿಜವಾದ ಇತಿಹಾಸ ತಿಳಿಯಲು ಇದೊಂದು ಅಪೂರ್ವ ಅವಕಾಶ” ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.

ಪ್ರಕಟಗೊಳ್ಳುತ್ತಿರುವ ಮೂರು ಪುಸ್ತಕಗಳ ವಿವರಗಳು ಮತ್ತು ಕಿರು ಪರಿಚಯ ಕೆಳಗಿನಂತಿವೆ:

1. ಮೌರ್ಯರ ನಂತರದ ಭಾರತ – ರಾಜಕೀಯ ಮತ್ತು ಆರ್ಥಿಕ ಇತಿಹಾಸ (ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -6
ಮೂಲ : ಪ್ರೊ, ಇರ್ಫಾನ್ ಹಬೀಬ್
ಅನುವಾದ : ಎಸ್.ಎನ್. ಸ್ವಾಮಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 140

2. ಮೌರ್ಯಾನಂತರದ ಭಾರತದಲ್ಲಿ ಸಮಾಜ ಮತ್ತು ಸಂಸ್ಕೃತಿ
(ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -7
ಮೂಲ: ಪ್ರೊ. ಭೈರಬಿ ಪ್ರಸಾದ ಸಾಹು, ಪ್ರೊ. ಕೇಶವನ್ ವೇಲುತಾಟ್
ಅನುವಾದ: ಟಿ. ವೆಂಕಟೇಶಮೂರ್ತಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 90

3. ಭಾರತದ ಆರ್ಥಿಕತೆ (ಬ್ರಿಟಿಷ್ ಆಳ್ವಿಕೆಯ ಆರಂಭಿಕ ಹಂತದಲ್ಲಿ 1757-1857)
ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ – 25

ಮೂಲ: ಪ್ರೊ. ಇರ್ಫಾನ್ ಹಬೀಬ್
ಅನುವಾದ: ಡಾ.ಕೆ.ಎಂ.ಲೋಕೇಶ
ಪ್ರಕಾಶಕರು : ಚಿಂತನ
ಪುಸ್ತಕ ಬೆಲೆ: 140

ಇದನ್ನೂ ಓದಿ: ಅಧೀರ್ ಬಿಸ್ವಾಸ್: ತಳಸ್ಥರೀಯ ನೆನಪಿನ ಪ್ರಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...