Homeಮುಖಪುಟ‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

- Advertisement -
- Advertisement -

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಪ್ರಕಟಿಸಿರುವ “ಭಾರತದ ಜನ ಇತಿಹಾಸ”ವನ್ನು ದಾಖಲಿಸಿರುವ ಇತಿಹಾಸ ಮಾಲೆಯ ಕನ್ನಡ ಅನುವಾದದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಮಾರ್ಚ್ 13 ರ ಶನಿವಾರ ಸಂಜೆ 5 ಕ್ಕೆ ನಡೆಯಲಿದ್ದು, ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಮೂರು ಅನುವಾದಿತ ಪುಸ್ತಕಗಳು ಬಿಡುಗಡೆಗೊಳ್ಳುತ್ತಿದ್ದು, ‘ಚಿಂತನ ಪುಸ್ತಕ’ ಪ್ರಕಾಶನವು ಈ ಪುಸ್ತಕಗಳನ್ನು ಪ್ರಕಟಿಸುತ್ತಿದೆ.

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಯು ಹಲವು ವರ್ಷಗಳಿಂದ ಇತಿಹಾಸದ ಬಗ್ಗೆ ವೈಜ್ಞಾನಿಕ, ಜಾತ್ಯಾತೀತ ಕಣ್ಣೋಟವನ್ನು ಪ್ರೋತ್ಸಾಹಿಸುತ್ತಿರುವ ಹಾಗೂ ಕೋಮುವಾದಿ, ಸಂಕುಚಿತವಾದಿ ವ್ಯಾಖ್ಯೆಗಳನ್ನು ಪ್ರತಿರೋಧಿಸುತ್ತಿರುವ ಒಂದು ಸಂಸ್ಥೆಯಾಗಿದೆ. ಇತಿಹಾಸವನ್ನು ರಾಜರುಗಳ ಆಳ್ವಿಕೆಗಳ ಪಟ್ಟಿಯಾಗಿಸುವ ಬದಲು ಅದನ್ನು ನಿರ್ಮಿಸಿದ ಸಾಮಾನ್ಯ ಜನರನ್ನೇ ಕೇಂದ್ರವಾಗಿರಿಸಿಕೊಂಡು, ನಿಜವಾದ ಇತಿಹಾಸದ ವೈಜ್ಞಾನಿಕ, ವಸ್ತುನಿಷ್ಟ ಅಧ್ಯಯನದಿಂದ “ಭಾರತದ ಜನ ಇತಿಹಾಸ ಮಾಲೆ”ಯನ್ನು ಹಿಸ್ಟೋರಿನ್ಸ್ ಸೊಸೈಟಿಯು ರಚಿಸುತ್ತಿದೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

ಸೊಸೈಟಿಯ ಪ್ರೊ. ಇರ್ಫಾನ್ ಹಬೀಬ್ ನೇತೃತ್ವದಲ್ಲಿ ಭಾರತದ ಇತಿಹಾಸವನ್ನು ಸಮಗ್ರವಾಗಿ ನಿರೂಪಿಸುವ ಮತ್ತು ಭಾರತದ ಜನ ಇತಿಹಾಸವನ್ನು ಸಂಕಲಿಸುವ 36 ಕೃತಿಗಳನ್ನು ಪ್ರಕಟಿಸುವ ಬೃಹತ್ ಯೋಜನೆಯನ್ನು ಹಾಕಿಕೊಂಡಿದೆ. ಇದರಲ್ಲಿ 15 ಕೃತಿಗಳು ಈಗಾಗಲೆ ಪ್ರಕಟವಾಗಿದ್ದು, ಅವುಗಳಲ್ಲಿ 6 ಕೃತಿಗಳನ್ನು ‘ಚಿಂತನ ಪುಸ್ತಕ’ ಪ್ರಕಾಶನ ಕನ್ನಡದಲ್ಲಿ ಪ್ರಕಟಿಸಿದೆ. ಇದೀಗ ಮೂರು ಪುಸ್ತಕಗಳು ಬಿಡುಗಡೆಗೆ ಸಜ್ಜಾಗಿದ್ದು, ಇನ್ನೂ ಆರು ಕೃತಿಗಳು ಅನುವಾದದ ಹಂತದಲ್ಲಿದೆ ಎಂದು ‘ಚಿಂತನ ಪುಸ್ತಕ’ ಪ್ರಕಾಶನ ಹೇಳಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಭಾರತದ ಜನ ಇತಿಹಾಸ ಮಾಲೆ’ಯ ಪರಿಕಲ್ಪನೆಯ ಕುರಿತು ಪ್ರೊ. ಇರ್ಫಾನ್ ಹಬೀಬ್ ಅವರು ಮಾತನಾಡಲಿದ್ದು, ಅವರ ಜತೆ ಸಂವಾದಕ್ಕೂ ಅವಕಾಶವಿರುತ್ತದೆ. ಕಾರ್ಯಕ್ರಮದಲ್ಲಿ ಕಲಬುರ್ಗಿ ಕೇಂದ್ರೀಯ ವಿವಿಯ ಉಪಕುಲಪತಿಗಳು ಮತ್ತು ಬೆಂಗಳೂರು ವಿ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಡಾ.ಎಸ್.ಚಂದ್ರಶೇಖರ್, ಐ.ಸಿ.ಎಚ್.ಆರ್ ದಕ್ಷಿಣ ಕೇಂದ್ರದ ಡಾ.ಶಿವಶರಣ ಕೆ ಅರುಣಿ ಮತ್ತು ಕ್ರೈಸ್ಟ್ ವಿವಿ ಯ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎಸ್.ಪಿ.ವಾಗೀಶ‍್ವರಿ ಅವರು ಭಾಗವಹಿಸಿ ಕೃತಿಯ ಪರಿಚಯ ಮಾಡಿಕೊಡಲಿದ್ದಾರೆ. ಅಲ್ಲದೆ ಬಿಡುಗಡೆಗೊಳ್ಳುತ್ತಿರುವ ಕೃತಿಗಳ ಅನುವಾದಕರಾದ ಡಾ.ಕೆ.ಎಂ.ಲೋಕೇಶ್, ಎಸ್.ಎನ್. ಸ್ವಾಮಿ ಮತ್ತು ಟಿ.ವೆಂಕಟೇಶ ಮೂರ್ತಿ ಅನುವಾದದ ಅನುಭವದ ಕುರಿತು ಮಾತನಾಡಲಿದ್ದಾರೆ.

ಇದನ್ನೂ ಓದಿ: ಲಜ್ಜಾಗೌರಿ ಪುಸ್ತಕ ಏನನ್ನು ಹೇಳುತ್ತದೆ? – ಯೋಗೇಶ್ ಮಾಸ್ಟರ್

ಕಾರ್ಯಕ್ರಮವು ಝೂಮ್‌ ಮೂಲಕ ನಡೆಯಲಿದ್ದು, ಋತುಮಾನ.ಕಾಮ್ ಮತ್ತು ಜನಶಕ್ತಿ ಮೀಡಿಯಾದಲ್ಲಿ ನೇರ ಪ್ರಸಾರಗೊಳ್ಳಲಿದೆ. “ಪುರಾಣವನ್ನು ಇತಿಹಾಸ ಎಂದು ಪ್ರಚಾರ ಮಾಡುತ್ತಿರುವ ಇಂದಿನ ಸನ್ನಿವೇಶದಲ್ಲಿ ಇತಿಹಾಸದ ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ, ಪ್ರಾಧ್ಯಾಪಕರಿಗೆ ಹಾಗೂ ಎಲ್ಲ ಆಸಕ್ತರಿಗೆ ನಿಜವಾದ ಇತಿಹಾಸ ತಿಳಿಯಲು ಇದೊಂದು ಅಪೂರ್ವ ಅವಕಾಶ” ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.

ಪ್ರಕಟಗೊಳ್ಳುತ್ತಿರುವ ಮೂರು ಪುಸ್ತಕಗಳ ವಿವರಗಳು ಮತ್ತು ಕಿರು ಪರಿಚಯ ಕೆಳಗಿನಂತಿವೆ:

1. ಮೌರ್ಯರ ನಂತರದ ಭಾರತ – ರಾಜಕೀಯ ಮತ್ತು ಆರ್ಥಿಕ ಇತಿಹಾಸ (ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -6
ಮೂಲ : ಪ್ರೊ, ಇರ್ಫಾನ್ ಹಬೀಬ್
ಅನುವಾದ : ಎಸ್.ಎನ್. ಸ್ವಾಮಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 140

2. ಮೌರ್ಯಾನಂತರದ ಭಾರತದಲ್ಲಿ ಸಮಾಜ ಮತ್ತು ಸಂಸ್ಕೃತಿ
(ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -7
ಮೂಲ: ಪ್ರೊ. ಭೈರಬಿ ಪ್ರಸಾದ ಸಾಹು, ಪ್ರೊ. ಕೇಶವನ್ ವೇಲುತಾಟ್
ಅನುವಾದ: ಟಿ. ವೆಂಕಟೇಶಮೂರ್ತಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 90

3. ಭಾರತದ ಆರ್ಥಿಕತೆ (ಬ್ರಿಟಿಷ್ ಆಳ್ವಿಕೆಯ ಆರಂಭಿಕ ಹಂತದಲ್ಲಿ 1757-1857)
ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ – 25

ಮೂಲ: ಪ್ರೊ. ಇರ್ಫಾನ್ ಹಬೀಬ್
ಅನುವಾದ: ಡಾ.ಕೆ.ಎಂ.ಲೋಕೇಶ
ಪ್ರಕಾಶಕರು : ಚಿಂತನ
ಪುಸ್ತಕ ಬೆಲೆ: 140

ಇದನ್ನೂ ಓದಿ: ಅಧೀರ್ ಬಿಸ್ವಾಸ್: ತಳಸ್ಥರೀಯ ನೆನಪಿನ ಪ್ರಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...