Homeಮುಖಪುಟ‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

- Advertisement -
- Advertisement -

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಪ್ರಕಟಿಸಿರುವ “ಭಾರತದ ಜನ ಇತಿಹಾಸ”ವನ್ನು ದಾಖಲಿಸಿರುವ ಇತಿಹಾಸ ಮಾಲೆಯ ಕನ್ನಡ ಅನುವಾದದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಮಾರ್ಚ್ 13 ರ ಶನಿವಾರ ಸಂಜೆ 5 ಕ್ಕೆ ನಡೆಯಲಿದ್ದು, ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಮೂರು ಅನುವಾದಿತ ಪುಸ್ತಕಗಳು ಬಿಡುಗಡೆಗೊಳ್ಳುತ್ತಿದ್ದು, ‘ಚಿಂತನ ಪುಸ್ತಕ’ ಪ್ರಕಾಶನವು ಈ ಪುಸ್ತಕಗಳನ್ನು ಪ್ರಕಟಿಸುತ್ತಿದೆ.

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಯು ಹಲವು ವರ್ಷಗಳಿಂದ ಇತಿಹಾಸದ ಬಗ್ಗೆ ವೈಜ್ಞಾನಿಕ, ಜಾತ್ಯಾತೀತ ಕಣ್ಣೋಟವನ್ನು ಪ್ರೋತ್ಸಾಹಿಸುತ್ತಿರುವ ಹಾಗೂ ಕೋಮುವಾದಿ, ಸಂಕುಚಿತವಾದಿ ವ್ಯಾಖ್ಯೆಗಳನ್ನು ಪ್ರತಿರೋಧಿಸುತ್ತಿರುವ ಒಂದು ಸಂಸ್ಥೆಯಾಗಿದೆ. ಇತಿಹಾಸವನ್ನು ರಾಜರುಗಳ ಆಳ್ವಿಕೆಗಳ ಪಟ್ಟಿಯಾಗಿಸುವ ಬದಲು ಅದನ್ನು ನಿರ್ಮಿಸಿದ ಸಾಮಾನ್ಯ ಜನರನ್ನೇ ಕೇಂದ್ರವಾಗಿರಿಸಿಕೊಂಡು, ನಿಜವಾದ ಇತಿಹಾಸದ ವೈಜ್ಞಾನಿಕ, ವಸ್ತುನಿಷ್ಟ ಅಧ್ಯಯನದಿಂದ “ಭಾರತದ ಜನ ಇತಿಹಾಸ ಮಾಲೆ”ಯನ್ನು ಹಿಸ್ಟೋರಿನ್ಸ್ ಸೊಸೈಟಿಯು ರಚಿಸುತ್ತಿದೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

ಸೊಸೈಟಿಯ ಪ್ರೊ. ಇರ್ಫಾನ್ ಹಬೀಬ್ ನೇತೃತ್ವದಲ್ಲಿ ಭಾರತದ ಇತಿಹಾಸವನ್ನು ಸಮಗ್ರವಾಗಿ ನಿರೂಪಿಸುವ ಮತ್ತು ಭಾರತದ ಜನ ಇತಿಹಾಸವನ್ನು ಸಂಕಲಿಸುವ 36 ಕೃತಿಗಳನ್ನು ಪ್ರಕಟಿಸುವ ಬೃಹತ್ ಯೋಜನೆಯನ್ನು ಹಾಕಿಕೊಂಡಿದೆ. ಇದರಲ್ಲಿ 15 ಕೃತಿಗಳು ಈಗಾಗಲೆ ಪ್ರಕಟವಾಗಿದ್ದು, ಅವುಗಳಲ್ಲಿ 6 ಕೃತಿಗಳನ್ನು ‘ಚಿಂತನ ಪುಸ್ತಕ’ ಪ್ರಕಾಶನ ಕನ್ನಡದಲ್ಲಿ ಪ್ರಕಟಿಸಿದೆ. ಇದೀಗ ಮೂರು ಪುಸ್ತಕಗಳು ಬಿಡುಗಡೆಗೆ ಸಜ್ಜಾಗಿದ್ದು, ಇನ್ನೂ ಆರು ಕೃತಿಗಳು ಅನುವಾದದ ಹಂತದಲ್ಲಿದೆ ಎಂದು ‘ಚಿಂತನ ಪುಸ್ತಕ’ ಪ್ರಕಾಶನ ಹೇಳಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಭಾರತದ ಜನ ಇತಿಹಾಸ ಮಾಲೆ’ಯ ಪರಿಕಲ್ಪನೆಯ ಕುರಿತು ಪ್ರೊ. ಇರ್ಫಾನ್ ಹಬೀಬ್ ಅವರು ಮಾತನಾಡಲಿದ್ದು, ಅವರ ಜತೆ ಸಂವಾದಕ್ಕೂ ಅವಕಾಶವಿರುತ್ತದೆ. ಕಾರ್ಯಕ್ರಮದಲ್ಲಿ ಕಲಬುರ್ಗಿ ಕೇಂದ್ರೀಯ ವಿವಿಯ ಉಪಕುಲಪತಿಗಳು ಮತ್ತು ಬೆಂಗಳೂರು ವಿ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಡಾ.ಎಸ್.ಚಂದ್ರಶೇಖರ್, ಐ.ಸಿ.ಎಚ್.ಆರ್ ದಕ್ಷಿಣ ಕೇಂದ್ರದ ಡಾ.ಶಿವಶರಣ ಕೆ ಅರುಣಿ ಮತ್ತು ಕ್ರೈಸ್ಟ್ ವಿವಿ ಯ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎಸ್.ಪಿ.ವಾಗೀಶ‍್ವರಿ ಅವರು ಭಾಗವಹಿಸಿ ಕೃತಿಯ ಪರಿಚಯ ಮಾಡಿಕೊಡಲಿದ್ದಾರೆ. ಅಲ್ಲದೆ ಬಿಡುಗಡೆಗೊಳ್ಳುತ್ತಿರುವ ಕೃತಿಗಳ ಅನುವಾದಕರಾದ ಡಾ.ಕೆ.ಎಂ.ಲೋಕೇಶ್, ಎಸ್.ಎನ್. ಸ್ವಾಮಿ ಮತ್ತು ಟಿ.ವೆಂಕಟೇಶ ಮೂರ್ತಿ ಅನುವಾದದ ಅನುಭವದ ಕುರಿತು ಮಾತನಾಡಲಿದ್ದಾರೆ.

ಇದನ್ನೂ ಓದಿ: ಲಜ್ಜಾಗೌರಿ ಪುಸ್ತಕ ಏನನ್ನು ಹೇಳುತ್ತದೆ? – ಯೋಗೇಶ್ ಮಾಸ್ಟರ್

ಕಾರ್ಯಕ್ರಮವು ಝೂಮ್‌ ಮೂಲಕ ನಡೆಯಲಿದ್ದು, ಋತುಮಾನ.ಕಾಮ್ ಮತ್ತು ಜನಶಕ್ತಿ ಮೀಡಿಯಾದಲ್ಲಿ ನೇರ ಪ್ರಸಾರಗೊಳ್ಳಲಿದೆ. “ಪುರಾಣವನ್ನು ಇತಿಹಾಸ ಎಂದು ಪ್ರಚಾರ ಮಾಡುತ್ತಿರುವ ಇಂದಿನ ಸನ್ನಿವೇಶದಲ್ಲಿ ಇತಿಹಾಸದ ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ, ಪ್ರಾಧ್ಯಾಪಕರಿಗೆ ಹಾಗೂ ಎಲ್ಲ ಆಸಕ್ತರಿಗೆ ನಿಜವಾದ ಇತಿಹಾಸ ತಿಳಿಯಲು ಇದೊಂದು ಅಪೂರ್ವ ಅವಕಾಶ” ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.

ಪ್ರಕಟಗೊಳ್ಳುತ್ತಿರುವ ಮೂರು ಪುಸ್ತಕಗಳ ವಿವರಗಳು ಮತ್ತು ಕಿರು ಪರಿಚಯ ಕೆಳಗಿನಂತಿವೆ:

1. ಮೌರ್ಯರ ನಂತರದ ಭಾರತ – ರಾಜಕೀಯ ಮತ್ತು ಆರ್ಥಿಕ ಇತಿಹಾಸ (ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -6
ಮೂಲ : ಪ್ರೊ, ಇರ್ಫಾನ್ ಹಬೀಬ್
ಅನುವಾದ : ಎಸ್.ಎನ್. ಸ್ವಾಮಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 140

2. ಮೌರ್ಯಾನಂತರದ ಭಾರತದಲ್ಲಿ ಸಮಾಜ ಮತ್ತು ಸಂಸ್ಕೃತಿ
(ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -7
ಮೂಲ: ಪ್ರೊ. ಭೈರಬಿ ಪ್ರಸಾದ ಸಾಹು, ಪ್ರೊ. ಕೇಶವನ್ ವೇಲುತಾಟ್
ಅನುವಾದ: ಟಿ. ವೆಂಕಟೇಶಮೂರ್ತಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 90

3. ಭಾರತದ ಆರ್ಥಿಕತೆ (ಬ್ರಿಟಿಷ್ ಆಳ್ವಿಕೆಯ ಆರಂಭಿಕ ಹಂತದಲ್ಲಿ 1757-1857)
ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ – 25

ಮೂಲ: ಪ್ರೊ. ಇರ್ಫಾನ್ ಹಬೀಬ್
ಅನುವಾದ: ಡಾ.ಕೆ.ಎಂ.ಲೋಕೇಶ
ಪ್ರಕಾಶಕರು : ಚಿಂತನ
ಪುಸ್ತಕ ಬೆಲೆ: 140

ಇದನ್ನೂ ಓದಿ: ಅಧೀರ್ ಬಿಸ್ವಾಸ್: ತಳಸ್ಥರೀಯ ನೆನಪಿನ ಪ್ರಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...