Homeಮುಖಪುಟ‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

- Advertisement -
- Advertisement -

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಪ್ರಕಟಿಸಿರುವ “ಭಾರತದ ಜನ ಇತಿಹಾಸ”ವನ್ನು ದಾಖಲಿಸಿರುವ ಇತಿಹಾಸ ಮಾಲೆಯ ಕನ್ನಡ ಅನುವಾದದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಮಾರ್ಚ್ 13 ರ ಶನಿವಾರ ಸಂಜೆ 5 ಕ್ಕೆ ನಡೆಯಲಿದ್ದು, ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಮೂರು ಅನುವಾದಿತ ಪುಸ್ತಕಗಳು ಬಿಡುಗಡೆಗೊಳ್ಳುತ್ತಿದ್ದು, ‘ಚಿಂತನ ಪುಸ್ತಕ’ ಪ್ರಕಾಶನವು ಈ ಪುಸ್ತಕಗಳನ್ನು ಪ್ರಕಟಿಸುತ್ತಿದೆ.

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಯು ಹಲವು ವರ್ಷಗಳಿಂದ ಇತಿಹಾಸದ ಬಗ್ಗೆ ವೈಜ್ಞಾನಿಕ, ಜಾತ್ಯಾತೀತ ಕಣ್ಣೋಟವನ್ನು ಪ್ರೋತ್ಸಾಹಿಸುತ್ತಿರುವ ಹಾಗೂ ಕೋಮುವಾದಿ, ಸಂಕುಚಿತವಾದಿ ವ್ಯಾಖ್ಯೆಗಳನ್ನು ಪ್ರತಿರೋಧಿಸುತ್ತಿರುವ ಒಂದು ಸಂಸ್ಥೆಯಾಗಿದೆ. ಇತಿಹಾಸವನ್ನು ರಾಜರುಗಳ ಆಳ್ವಿಕೆಗಳ ಪಟ್ಟಿಯಾಗಿಸುವ ಬದಲು ಅದನ್ನು ನಿರ್ಮಿಸಿದ ಸಾಮಾನ್ಯ ಜನರನ್ನೇ ಕೇಂದ್ರವಾಗಿರಿಸಿಕೊಂಡು, ನಿಜವಾದ ಇತಿಹಾಸದ ವೈಜ್ಞಾನಿಕ, ವಸ್ತುನಿಷ್ಟ ಅಧ್ಯಯನದಿಂದ “ಭಾರತದ ಜನ ಇತಿಹಾಸ ಮಾಲೆ”ಯನ್ನು ಹಿಸ್ಟೋರಿನ್ಸ್ ಸೊಸೈಟಿಯು ರಚಿಸುತ್ತಿದೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

ಸೊಸೈಟಿಯ ಪ್ರೊ. ಇರ್ಫಾನ್ ಹಬೀಬ್ ನೇತೃತ್ವದಲ್ಲಿ ಭಾರತದ ಇತಿಹಾಸವನ್ನು ಸಮಗ್ರವಾಗಿ ನಿರೂಪಿಸುವ ಮತ್ತು ಭಾರತದ ಜನ ಇತಿಹಾಸವನ್ನು ಸಂಕಲಿಸುವ 36 ಕೃತಿಗಳನ್ನು ಪ್ರಕಟಿಸುವ ಬೃಹತ್ ಯೋಜನೆಯನ್ನು ಹಾಕಿಕೊಂಡಿದೆ. ಇದರಲ್ಲಿ 15 ಕೃತಿಗಳು ಈಗಾಗಲೆ ಪ್ರಕಟವಾಗಿದ್ದು, ಅವುಗಳಲ್ಲಿ 6 ಕೃತಿಗಳನ್ನು ‘ಚಿಂತನ ಪುಸ್ತಕ’ ಪ್ರಕಾಶನ ಕನ್ನಡದಲ್ಲಿ ಪ್ರಕಟಿಸಿದೆ. ಇದೀಗ ಮೂರು ಪುಸ್ತಕಗಳು ಬಿಡುಗಡೆಗೆ ಸಜ್ಜಾಗಿದ್ದು, ಇನ್ನೂ ಆರು ಕೃತಿಗಳು ಅನುವಾದದ ಹಂತದಲ್ಲಿದೆ ಎಂದು ‘ಚಿಂತನ ಪುಸ್ತಕ’ ಪ್ರಕಾಶನ ಹೇಳಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಭಾರತದ ಜನ ಇತಿಹಾಸ ಮಾಲೆ’ಯ ಪರಿಕಲ್ಪನೆಯ ಕುರಿತು ಪ್ರೊ. ಇರ್ಫಾನ್ ಹಬೀಬ್ ಅವರು ಮಾತನಾಡಲಿದ್ದು, ಅವರ ಜತೆ ಸಂವಾದಕ್ಕೂ ಅವಕಾಶವಿರುತ್ತದೆ. ಕಾರ್ಯಕ್ರಮದಲ್ಲಿ ಕಲಬುರ್ಗಿ ಕೇಂದ್ರೀಯ ವಿವಿಯ ಉಪಕುಲಪತಿಗಳು ಮತ್ತು ಬೆಂಗಳೂರು ವಿ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಡಾ.ಎಸ್.ಚಂದ್ರಶೇಖರ್, ಐ.ಸಿ.ಎಚ್.ಆರ್ ದಕ್ಷಿಣ ಕೇಂದ್ರದ ಡಾ.ಶಿವಶರಣ ಕೆ ಅರುಣಿ ಮತ್ತು ಕ್ರೈಸ್ಟ್ ವಿವಿ ಯ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎಸ್.ಪಿ.ವಾಗೀಶ‍್ವರಿ ಅವರು ಭಾಗವಹಿಸಿ ಕೃತಿಯ ಪರಿಚಯ ಮಾಡಿಕೊಡಲಿದ್ದಾರೆ. ಅಲ್ಲದೆ ಬಿಡುಗಡೆಗೊಳ್ಳುತ್ತಿರುವ ಕೃತಿಗಳ ಅನುವಾದಕರಾದ ಡಾ.ಕೆ.ಎಂ.ಲೋಕೇಶ್, ಎಸ್.ಎನ್. ಸ್ವಾಮಿ ಮತ್ತು ಟಿ.ವೆಂಕಟೇಶ ಮೂರ್ತಿ ಅನುವಾದದ ಅನುಭವದ ಕುರಿತು ಮಾತನಾಡಲಿದ್ದಾರೆ.

ಇದನ್ನೂ ಓದಿ: ಲಜ್ಜಾಗೌರಿ ಪುಸ್ತಕ ಏನನ್ನು ಹೇಳುತ್ತದೆ? – ಯೋಗೇಶ್ ಮಾಸ್ಟರ್

ಕಾರ್ಯಕ್ರಮವು ಝೂಮ್‌ ಮೂಲಕ ನಡೆಯಲಿದ್ದು, ಋತುಮಾನ.ಕಾಮ್ ಮತ್ತು ಜನಶಕ್ತಿ ಮೀಡಿಯಾದಲ್ಲಿ ನೇರ ಪ್ರಸಾರಗೊಳ್ಳಲಿದೆ. “ಪುರಾಣವನ್ನು ಇತಿಹಾಸ ಎಂದು ಪ್ರಚಾರ ಮಾಡುತ್ತಿರುವ ಇಂದಿನ ಸನ್ನಿವೇಶದಲ್ಲಿ ಇತಿಹಾಸದ ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ, ಪ್ರಾಧ್ಯಾಪಕರಿಗೆ ಹಾಗೂ ಎಲ್ಲ ಆಸಕ್ತರಿಗೆ ನಿಜವಾದ ಇತಿಹಾಸ ತಿಳಿಯಲು ಇದೊಂದು ಅಪೂರ್ವ ಅವಕಾಶ” ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.

ಪ್ರಕಟಗೊಳ್ಳುತ್ತಿರುವ ಮೂರು ಪುಸ್ತಕಗಳ ವಿವರಗಳು ಮತ್ತು ಕಿರು ಪರಿಚಯ ಕೆಳಗಿನಂತಿವೆ:

1. ಮೌರ್ಯರ ನಂತರದ ಭಾರತ – ರಾಜಕೀಯ ಮತ್ತು ಆರ್ಥಿಕ ಇತಿಹಾಸ (ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -6
ಮೂಲ : ಪ್ರೊ, ಇರ್ಫಾನ್ ಹಬೀಬ್
ಅನುವಾದ : ಎಸ್.ಎನ್. ಸ್ವಾಮಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 140

2. ಮೌರ್ಯಾನಂತರದ ಭಾರತದಲ್ಲಿ ಸಮಾಜ ಮತ್ತು ಸಂಸ್ಕೃತಿ
(ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -7
ಮೂಲ: ಪ್ರೊ. ಭೈರಬಿ ಪ್ರಸಾದ ಸಾಹು, ಪ್ರೊ. ಕೇಶವನ್ ವೇಲುತಾಟ್
ಅನುವಾದ: ಟಿ. ವೆಂಕಟೇಶಮೂರ್ತಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 90

3. ಭಾರತದ ಆರ್ಥಿಕತೆ (ಬ್ರಿಟಿಷ್ ಆಳ್ವಿಕೆಯ ಆರಂಭಿಕ ಹಂತದಲ್ಲಿ 1757-1857)
ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ – 25

ಮೂಲ: ಪ್ರೊ. ಇರ್ಫಾನ್ ಹಬೀಬ್
ಅನುವಾದ: ಡಾ.ಕೆ.ಎಂ.ಲೋಕೇಶ
ಪ್ರಕಾಶಕರು : ಚಿಂತನ
ಪುಸ್ತಕ ಬೆಲೆ: 140

ಇದನ್ನೂ ಓದಿ: ಅಧೀರ್ ಬಿಸ್ವಾಸ್: ತಳಸ್ಥರೀಯ ನೆನಪಿನ ಪ್ರಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...