Homeಮುಖಪುಟ‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

- Advertisement -
- Advertisement -

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಪ್ರಕಟಿಸಿರುವ “ಭಾರತದ ಜನ ಇತಿಹಾಸ”ವನ್ನು ದಾಖಲಿಸಿರುವ ಇತಿಹಾಸ ಮಾಲೆಯ ಕನ್ನಡ ಅನುವಾದದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಮಾರ್ಚ್ 13 ರ ಶನಿವಾರ ಸಂಜೆ 5 ಕ್ಕೆ ನಡೆಯಲಿದ್ದು, ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಮೂರು ಅನುವಾದಿತ ಪುಸ್ತಕಗಳು ಬಿಡುಗಡೆಗೊಳ್ಳುತ್ತಿದ್ದು, ‘ಚಿಂತನ ಪುಸ್ತಕ’ ಪ್ರಕಾಶನವು ಈ ಪುಸ್ತಕಗಳನ್ನು ಪ್ರಕಟಿಸುತ್ತಿದೆ.

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಯು ಹಲವು ವರ್ಷಗಳಿಂದ ಇತಿಹಾಸದ ಬಗ್ಗೆ ವೈಜ್ಞಾನಿಕ, ಜಾತ್ಯಾತೀತ ಕಣ್ಣೋಟವನ್ನು ಪ್ರೋತ್ಸಾಹಿಸುತ್ತಿರುವ ಹಾಗೂ ಕೋಮುವಾದಿ, ಸಂಕುಚಿತವಾದಿ ವ್ಯಾಖ್ಯೆಗಳನ್ನು ಪ್ರತಿರೋಧಿಸುತ್ತಿರುವ ಒಂದು ಸಂಸ್ಥೆಯಾಗಿದೆ. ಇತಿಹಾಸವನ್ನು ರಾಜರುಗಳ ಆಳ್ವಿಕೆಗಳ ಪಟ್ಟಿಯಾಗಿಸುವ ಬದಲು ಅದನ್ನು ನಿರ್ಮಿಸಿದ ಸಾಮಾನ್ಯ ಜನರನ್ನೇ ಕೇಂದ್ರವಾಗಿರಿಸಿಕೊಂಡು, ನಿಜವಾದ ಇತಿಹಾಸದ ವೈಜ್ಞಾನಿಕ, ವಸ್ತುನಿಷ್ಟ ಅಧ್ಯಯನದಿಂದ “ಭಾರತದ ಜನ ಇತಿಹಾಸ ಮಾಲೆ”ಯನ್ನು ಹಿಸ್ಟೋರಿನ್ಸ್ ಸೊಸೈಟಿಯು ರಚಿಸುತ್ತಿದೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

ಸೊಸೈಟಿಯ ಪ್ರೊ. ಇರ್ಫಾನ್ ಹಬೀಬ್ ನೇತೃತ್ವದಲ್ಲಿ ಭಾರತದ ಇತಿಹಾಸವನ್ನು ಸಮಗ್ರವಾಗಿ ನಿರೂಪಿಸುವ ಮತ್ತು ಭಾರತದ ಜನ ಇತಿಹಾಸವನ್ನು ಸಂಕಲಿಸುವ 36 ಕೃತಿಗಳನ್ನು ಪ್ರಕಟಿಸುವ ಬೃಹತ್ ಯೋಜನೆಯನ್ನು ಹಾಕಿಕೊಂಡಿದೆ. ಇದರಲ್ಲಿ 15 ಕೃತಿಗಳು ಈಗಾಗಲೆ ಪ್ರಕಟವಾಗಿದ್ದು, ಅವುಗಳಲ್ಲಿ 6 ಕೃತಿಗಳನ್ನು ‘ಚಿಂತನ ಪುಸ್ತಕ’ ಪ್ರಕಾಶನ ಕನ್ನಡದಲ್ಲಿ ಪ್ರಕಟಿಸಿದೆ. ಇದೀಗ ಮೂರು ಪುಸ್ತಕಗಳು ಬಿಡುಗಡೆಗೆ ಸಜ್ಜಾಗಿದ್ದು, ಇನ್ನೂ ಆರು ಕೃತಿಗಳು ಅನುವಾದದ ಹಂತದಲ್ಲಿದೆ ಎಂದು ‘ಚಿಂತನ ಪುಸ್ತಕ’ ಪ್ರಕಾಶನ ಹೇಳಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಭಾರತದ ಜನ ಇತಿಹಾಸ ಮಾಲೆ’ಯ ಪರಿಕಲ್ಪನೆಯ ಕುರಿತು ಪ್ರೊ. ಇರ್ಫಾನ್ ಹಬೀಬ್ ಅವರು ಮಾತನಾಡಲಿದ್ದು, ಅವರ ಜತೆ ಸಂವಾದಕ್ಕೂ ಅವಕಾಶವಿರುತ್ತದೆ. ಕಾರ್ಯಕ್ರಮದಲ್ಲಿ ಕಲಬುರ್ಗಿ ಕೇಂದ್ರೀಯ ವಿವಿಯ ಉಪಕುಲಪತಿಗಳು ಮತ್ತು ಬೆಂಗಳೂರು ವಿ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಡಾ.ಎಸ್.ಚಂದ್ರಶೇಖರ್, ಐ.ಸಿ.ಎಚ್.ಆರ್ ದಕ್ಷಿಣ ಕೇಂದ್ರದ ಡಾ.ಶಿವಶರಣ ಕೆ ಅರುಣಿ ಮತ್ತು ಕ್ರೈಸ್ಟ್ ವಿವಿ ಯ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎಸ್.ಪಿ.ವಾಗೀಶ‍್ವರಿ ಅವರು ಭಾಗವಹಿಸಿ ಕೃತಿಯ ಪರಿಚಯ ಮಾಡಿಕೊಡಲಿದ್ದಾರೆ. ಅಲ್ಲದೆ ಬಿಡುಗಡೆಗೊಳ್ಳುತ್ತಿರುವ ಕೃತಿಗಳ ಅನುವಾದಕರಾದ ಡಾ.ಕೆ.ಎಂ.ಲೋಕೇಶ್, ಎಸ್.ಎನ್. ಸ್ವಾಮಿ ಮತ್ತು ಟಿ.ವೆಂಕಟೇಶ ಮೂರ್ತಿ ಅನುವಾದದ ಅನುಭವದ ಕುರಿತು ಮಾತನಾಡಲಿದ್ದಾರೆ.

ಇದನ್ನೂ ಓದಿ: ಲಜ್ಜಾಗೌರಿ ಪುಸ್ತಕ ಏನನ್ನು ಹೇಳುತ್ತದೆ? – ಯೋಗೇಶ್ ಮಾಸ್ಟರ್

ಕಾರ್ಯಕ್ರಮವು ಝೂಮ್‌ ಮೂಲಕ ನಡೆಯಲಿದ್ದು, ಋತುಮಾನ.ಕಾಮ್ ಮತ್ತು ಜನಶಕ್ತಿ ಮೀಡಿಯಾದಲ್ಲಿ ನೇರ ಪ್ರಸಾರಗೊಳ್ಳಲಿದೆ. “ಪುರಾಣವನ್ನು ಇತಿಹಾಸ ಎಂದು ಪ್ರಚಾರ ಮಾಡುತ್ತಿರುವ ಇಂದಿನ ಸನ್ನಿವೇಶದಲ್ಲಿ ಇತಿಹಾಸದ ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ, ಪ್ರಾಧ್ಯಾಪಕರಿಗೆ ಹಾಗೂ ಎಲ್ಲ ಆಸಕ್ತರಿಗೆ ನಿಜವಾದ ಇತಿಹಾಸ ತಿಳಿಯಲು ಇದೊಂದು ಅಪೂರ್ವ ಅವಕಾಶ” ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.

ಪ್ರಕಟಗೊಳ್ಳುತ್ತಿರುವ ಮೂರು ಪುಸ್ತಕಗಳ ವಿವರಗಳು ಮತ್ತು ಕಿರು ಪರಿಚಯ ಕೆಳಗಿನಂತಿವೆ:

1. ಮೌರ್ಯರ ನಂತರದ ಭಾರತ – ರಾಜಕೀಯ ಮತ್ತು ಆರ್ಥಿಕ ಇತಿಹಾಸ (ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -6
ಮೂಲ : ಪ್ರೊ, ಇರ್ಫಾನ್ ಹಬೀಬ್
ಅನುವಾದ : ಎಸ್.ಎನ್. ಸ್ವಾಮಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 140

2. ಮೌರ್ಯಾನಂತರದ ಭಾರತದಲ್ಲಿ ಸಮಾಜ ಮತ್ತು ಸಂಸ್ಕೃತಿ
(ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -7
ಮೂಲ: ಪ್ರೊ. ಭೈರಬಿ ಪ್ರಸಾದ ಸಾಹು, ಪ್ರೊ. ಕೇಶವನ್ ವೇಲುತಾಟ್
ಅನುವಾದ: ಟಿ. ವೆಂಕಟೇಶಮೂರ್ತಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 90

3. ಭಾರತದ ಆರ್ಥಿಕತೆ (ಬ್ರಿಟಿಷ್ ಆಳ್ವಿಕೆಯ ಆರಂಭಿಕ ಹಂತದಲ್ಲಿ 1757-1857)
ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ – 25

ಮೂಲ: ಪ್ರೊ. ಇರ್ಫಾನ್ ಹಬೀಬ್
ಅನುವಾದ: ಡಾ.ಕೆ.ಎಂ.ಲೋಕೇಶ
ಪ್ರಕಾಶಕರು : ಚಿಂತನ
ಪುಸ್ತಕ ಬೆಲೆ: 140

ಇದನ್ನೂ ಓದಿ: ಅಧೀರ್ ಬಿಸ್ವಾಸ್: ತಳಸ್ಥರೀಯ ನೆನಪಿನ ಪ್ರಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...