Homeಮುಖಪುಟ‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

‘ಭಾರತದ ಜನ ಇತಿಹಾಸ ಮಾಲೆ’ಯ ಪುಸ್ತಕ ಬಿಡುಗಡೆ: ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಜೊತೆಗೆ ಸಂವಾದ

- Advertisement -
- Advertisement -

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಪ್ರಕಟಿಸಿರುವ “ಭಾರತದ ಜನ ಇತಿಹಾಸ”ವನ್ನು ದಾಖಲಿಸಿರುವ ಇತಿಹಾಸ ಮಾಲೆಯ ಕನ್ನಡ ಅನುವಾದದ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಮಾರ್ಚ್ 13 ರ ಶನಿವಾರ ಸಂಜೆ 5 ಕ್ಕೆ ನಡೆಯಲಿದ್ದು, ಇತಿಹಾಸಕಾರ ಪ್ರೊ. ಇರ್ಫಾನ್ ಹಬೀಬ್‌ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಒಟ್ಟು ಮೂರು ಅನುವಾದಿತ ಪುಸ್ತಕಗಳು ಬಿಡುಗಡೆಗೊಳ್ಳುತ್ತಿದ್ದು, ‘ಚಿಂತನ ಪುಸ್ತಕ’ ಪ್ರಕಾಶನವು ಈ ಪುಸ್ತಕಗಳನ್ನು ಪ್ರಕಟಿಸುತ್ತಿದೆ.

“ಅಲಿಘರ್ ಹಿಸ್ಟೋರಿಯನ್ಸ್ ಸೊಸೈಟಿ” ಯು ಹಲವು ವರ್ಷಗಳಿಂದ ಇತಿಹಾಸದ ಬಗ್ಗೆ ವೈಜ್ಞಾನಿಕ, ಜಾತ್ಯಾತೀತ ಕಣ್ಣೋಟವನ್ನು ಪ್ರೋತ್ಸಾಹಿಸುತ್ತಿರುವ ಹಾಗೂ ಕೋಮುವಾದಿ, ಸಂಕುಚಿತವಾದಿ ವ್ಯಾಖ್ಯೆಗಳನ್ನು ಪ್ರತಿರೋಧಿಸುತ್ತಿರುವ ಒಂದು ಸಂಸ್ಥೆಯಾಗಿದೆ. ಇತಿಹಾಸವನ್ನು ರಾಜರುಗಳ ಆಳ್ವಿಕೆಗಳ ಪಟ್ಟಿಯಾಗಿಸುವ ಬದಲು ಅದನ್ನು ನಿರ್ಮಿಸಿದ ಸಾಮಾನ್ಯ ಜನರನ್ನೇ ಕೇಂದ್ರವಾಗಿರಿಸಿಕೊಂಡು, ನಿಜವಾದ ಇತಿಹಾಸದ ವೈಜ್ಞಾನಿಕ, ವಸ್ತುನಿಷ್ಟ ಅಧ್ಯಯನದಿಂದ “ಭಾರತದ ಜನ ಇತಿಹಾಸ ಮಾಲೆ”ಯನ್ನು ಹಿಸ್ಟೋರಿನ್ಸ್ ಸೊಸೈಟಿಯು ರಚಿಸುತ್ತಿದೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

ಸೊಸೈಟಿಯ ಪ್ರೊ. ಇರ್ಫಾನ್ ಹಬೀಬ್ ನೇತೃತ್ವದಲ್ಲಿ ಭಾರತದ ಇತಿಹಾಸವನ್ನು ಸಮಗ್ರವಾಗಿ ನಿರೂಪಿಸುವ ಮತ್ತು ಭಾರತದ ಜನ ಇತಿಹಾಸವನ್ನು ಸಂಕಲಿಸುವ 36 ಕೃತಿಗಳನ್ನು ಪ್ರಕಟಿಸುವ ಬೃಹತ್ ಯೋಜನೆಯನ್ನು ಹಾಕಿಕೊಂಡಿದೆ. ಇದರಲ್ಲಿ 15 ಕೃತಿಗಳು ಈಗಾಗಲೆ ಪ್ರಕಟವಾಗಿದ್ದು, ಅವುಗಳಲ್ಲಿ 6 ಕೃತಿಗಳನ್ನು ‘ಚಿಂತನ ಪುಸ್ತಕ’ ಪ್ರಕಾಶನ ಕನ್ನಡದಲ್ಲಿ ಪ್ರಕಟಿಸಿದೆ. ಇದೀಗ ಮೂರು ಪುಸ್ತಕಗಳು ಬಿಡುಗಡೆಗೆ ಸಜ್ಜಾಗಿದ್ದು, ಇನ್ನೂ ಆರು ಕೃತಿಗಳು ಅನುವಾದದ ಹಂತದಲ್ಲಿದೆ ಎಂದು ‘ಚಿಂತನ ಪುಸ್ತಕ’ ಪ್ರಕಾಶನ ಹೇಳಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ‘ಭಾರತದ ಜನ ಇತಿಹಾಸ ಮಾಲೆ’ಯ ಪರಿಕಲ್ಪನೆಯ ಕುರಿತು ಪ್ರೊ. ಇರ್ಫಾನ್ ಹಬೀಬ್ ಅವರು ಮಾತನಾಡಲಿದ್ದು, ಅವರ ಜತೆ ಸಂವಾದಕ್ಕೂ ಅವಕಾಶವಿರುತ್ತದೆ. ಕಾರ್ಯಕ್ರಮದಲ್ಲಿ ಕಲಬುರ್ಗಿ ಕೇಂದ್ರೀಯ ವಿವಿಯ ಉಪಕುಲಪತಿಗಳು ಮತ್ತು ಬೆಂಗಳೂರು ವಿ ವಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಡಾ.ಎಸ್.ಚಂದ್ರಶೇಖರ್, ಐ.ಸಿ.ಎಚ್.ಆರ್ ದಕ್ಷಿಣ ಕೇಂದ್ರದ ಡಾ.ಶಿವಶರಣ ಕೆ ಅರುಣಿ ಮತ್ತು ಕ್ರೈಸ್ಟ್ ವಿವಿ ಯ ಇತಿಹಾಸ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎಸ್.ಪಿ.ವಾಗೀಶ‍್ವರಿ ಅವರು ಭಾಗವಹಿಸಿ ಕೃತಿಯ ಪರಿಚಯ ಮಾಡಿಕೊಡಲಿದ್ದಾರೆ. ಅಲ್ಲದೆ ಬಿಡುಗಡೆಗೊಳ್ಳುತ್ತಿರುವ ಕೃತಿಗಳ ಅನುವಾದಕರಾದ ಡಾ.ಕೆ.ಎಂ.ಲೋಕೇಶ್, ಎಸ್.ಎನ್. ಸ್ವಾಮಿ ಮತ್ತು ಟಿ.ವೆಂಕಟೇಶ ಮೂರ್ತಿ ಅನುವಾದದ ಅನುಭವದ ಕುರಿತು ಮಾತನಾಡಲಿದ್ದಾರೆ.

ಇದನ್ನೂ ಓದಿ: ಲಜ್ಜಾಗೌರಿ ಪುಸ್ತಕ ಏನನ್ನು ಹೇಳುತ್ತದೆ? – ಯೋಗೇಶ್ ಮಾಸ್ಟರ್

ಕಾರ್ಯಕ್ರಮವು ಝೂಮ್‌ ಮೂಲಕ ನಡೆಯಲಿದ್ದು, ಋತುಮಾನ.ಕಾಮ್ ಮತ್ತು ಜನಶಕ್ತಿ ಮೀಡಿಯಾದಲ್ಲಿ ನೇರ ಪ್ರಸಾರಗೊಳ್ಳಲಿದೆ. “ಪುರಾಣವನ್ನು ಇತಿಹಾಸ ಎಂದು ಪ್ರಚಾರ ಮಾಡುತ್ತಿರುವ ಇಂದಿನ ಸನ್ನಿವೇಶದಲ್ಲಿ ಇತಿಹಾಸದ ವಿದ್ಯಾರ್ಥಿಗಳಿಗೆ, ಸಂಶೋಧಕರಿಗೆ, ಪ್ರಾಧ್ಯಾಪಕರಿಗೆ ಹಾಗೂ ಎಲ್ಲ ಆಸಕ್ತರಿಗೆ ನಿಜವಾದ ಇತಿಹಾಸ ತಿಳಿಯಲು ಇದೊಂದು ಅಪೂರ್ವ ಅವಕಾಶ” ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.

ಪ್ರಕಟಗೊಳ್ಳುತ್ತಿರುವ ಮೂರು ಪುಸ್ತಕಗಳ ವಿವರಗಳು ಮತ್ತು ಕಿರು ಪರಿಚಯ ಕೆಳಗಿನಂತಿವೆ:

1. ಮೌರ್ಯರ ನಂತರದ ಭಾರತ – ರಾಜಕೀಯ ಮತ್ತು ಆರ್ಥಿಕ ಇತಿಹಾಸ (ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -6
ಮೂಲ : ಪ್ರೊ, ಇರ್ಫಾನ್ ಹಬೀಬ್
ಅನುವಾದ : ಎಸ್.ಎನ್. ಸ್ವಾಮಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 140

2. ಮೌರ್ಯಾನಂತರದ ಭಾರತದಲ್ಲಿ ಸಮಾಜ ಮತ್ತು ಸಂಸ್ಕೃತಿ
(ಕ್ರಿ,ಪೂ. 200 – ಕ್ರಿ.ಶ. 300) ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ -7
ಮೂಲ: ಪ್ರೊ. ಭೈರಬಿ ಪ್ರಸಾದ ಸಾಹು, ಪ್ರೊ. ಕೇಶವನ್ ವೇಲುತಾಟ್
ಅನುವಾದ: ಟಿ. ವೆಂಕಟೇಶಮೂರ್ತಿ
ಪ್ರಕಾಶಕರು : ಚಿಂತನ ಪುಸ್ತಕ
ಬೆಲೆ: 90

3. ಭಾರತದ ಆರ್ಥಿಕತೆ (ಬ್ರಿಟಿಷ್ ಆಳ್ವಿಕೆಯ ಆರಂಭಿಕ ಹಂತದಲ್ಲಿ 1757-1857)
ಭಾರತದ ಜನ ಇತಿಹಾಸ ಮಾಲಿಕೆ ಸಂಪುಟ – 25

ಮೂಲ: ಪ್ರೊ. ಇರ್ಫಾನ್ ಹಬೀಬ್
ಅನುವಾದ: ಡಾ.ಕೆ.ಎಂ.ಲೋಕೇಶ
ಪ್ರಕಾಶಕರು : ಚಿಂತನ
ಪುಸ್ತಕ ಬೆಲೆ: 140

ಇದನ್ನೂ ಓದಿ: ಅಧೀರ್ ಬಿಸ್ವಾಸ್: ತಳಸ್ಥರೀಯ ನೆನಪಿನ ಪ್ರಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...