Homeಚಳವಳಿಪಠ್ಯದಲ್ಲಿ ಹಿಂದೂ ಹತ್ಯಾಕಾಂಡಗಳು ಸೇರಬೇಕು ವರದಿಗೆ ಇತಿಹಾಸ ತಜ್ಞರ ವಿರೋಧ

ಪಠ್ಯದಲ್ಲಿ ಹಿಂದೂ ಹತ್ಯಾಕಾಂಡಗಳು ಸೇರಬೇಕು ವರದಿಗೆ ಇತಿಹಾಸ ತಜ್ಞರ ವಿರೋಧ

ಇತಿಹಾಸದಲ್ಲಿ ಒಳಿತು ಮತ್ತು ಕೆಡಕುಗಳೆರಡೂ ಇವೆ. ನಮ್ಮ ಮಕ್ಕಳಿಗೆ ಯಾವುದನ್ನು ನೀಡಬೇಕೆಂಬ ಎಚ್ಚರ, ತಿಳುವಳಿಕೆ ಶಿಕ್ಷಣತಜ್ಞರಿಗೆ ಇರಬೇಕಾಗುತ್ತದೆ.

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ)ಯ ಭಾಗವಾಗಿ ಸಲ್ಲಿಸಲಾಗಿರುವ 26 ಪೊಸಿಷನ್ ಪೇಪರ್‌ಗಳು ವಿವಾದ ಕಾರಣವಾಗಿವೆ. ಇತಿಹಾಸ ವಿಷಯದ ತಜ್ಞರು ಸಲ್ಲಿಸಿರುವ ವರದಿಯ ಶಿಫಾರಸ್ಸಿನಲ್ಲಿ “ಭಾರತದ ಇತಿಹಾಸದಲ್ಲಿ ನಡೆದ ಹಿಂದೂ ಹತ್ಯಾಕಾಂಡಗಳು ಸೇರಿಸಬೇಕು” ಎಂಬುದಕ್ಕೆ ಇತಿಹಾಸ ತಜ್ಞರು, ಪ್ರಾಧ್ಯಾಪಕರು, ನಿವೃತ್ತ ಉಪಕುಲಪತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಇಂತಹ ವಿಚಾರಗಳನ್ನು ಪಠ್ಯದಲ್ಲಿ ಅಳವಡಿಸುವುದು ಮಕ್ಕಳ ಮನಸ್ಸಿನಲ್ಲಿ ಪರಸ್ಪರ ದ್ವೇಷ, ವೈಷಮ್ಯದ ಭಾವನೆಯನ್ನು ಮೂಡಿಸುತ್ತದೆ. ಇಂತಹ ಪಠ್ಯ ಸಂವಿಧಾನದ ಆಶಯಗಳಿಗೆ ಮತ್ತು ಶೈಕ್ಷಣಿಕ ಚೌಕಟ್ಟಿಗೆ ವಿರುದ್ಧವಾಗಿದ್ದು, ಸಮಾಜದ ಶಾಂತಿ, ಸೌಹಾರ್ದತೆ, ಸಹಭಾಳ್ವೆಗೆ ಭಂಗ ತರುತ್ತದೆ ಎಂದು ಗುಲ್ಬರ್ಗಾ ಕೇಂದ್ರಿಯ ವಿಶ್ವವಿದ್ಯಾಲಯದ ವಿಶ್ರಾಂತ ಸಮ-ಕುಲಪತಿಗಳಾದ ಪ್ರೊ. ಎಸ್.ಚಂದ್ರಶೇಖರ್, ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಓ. ಅನಂತರಾಮಯ್ಯ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಅಶೋಕ್ ಶೆಟ್ಟರ್, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಅಶ್ವತ್ಥನಾರಾಯಣ ಸೇರಿದಂತೆ ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಭಾರತದ ಇತಿಹಾಸದಲ್ಲಿ ಅನೇಕ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕಾರಣಗಳಿಗಾಗಿ ಹಿಂದೂ – ಬೌದ್ಧರ ನಡುವೆ, ಹಿಂದೂ – ಜೈನರ ನಡುವೆ, ಹಿಂದೂ – ಹಿಂದೂಗಳ ನಡುವೆಯೇ ಹತ್ಯಾಕಾಂಡಗಳು ನಡೆದಿವೆ. ಅವುಗಳನ್ನು ಮರೆಮಾಚಿ ಯಾವುದೋ ಒಂದು ಧರ್ಮಿಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತದ ಇತಿಹಾಸದಲ್ಲಿ ಹಿಂದೂಗಳ ಹತ್ಯಾಕಾಂಡವಷ್ಟೆ ನಡೆದಿದೆ ಎಂದು ಬಿಂಬಿಸುವುದು ಚರಿತ್ರೆಗೆ ಮಾಡಿದ ಅಪಚಾರವಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚರಿತ್ರೆಯಲ್ಲಿ ನಡೆದಿರುವ ಹತ್ಯಾಕಾಂಡಗಳಿಗೆ ಮೊದಲೂ ಇಲ್ಲ, ಕೊನೆಯೂ ಇಲ್ಲ. ಹರಪ್ಪ ನಾಗರಿಕತೆಯ ಅಂತ್ಯಕ್ಕೆ ಹೊರಗಿನಿಂದ ಬಂದ ಆಕ್ರಮಣಕಾರರು ಕಾರಣವೆಂದು ಹಲವು ಇತಿಹಾಸಕಾರರು ಬರೆದಿಲ್ಲವೇ? ಅಶೋಕ ಕಳಿಂಗ ರಾಜ್ಯದ ಮೇಲೆ ನಡೆಸಿದ ಯುದ್ಧದ ಭೀಕರತೆ ಕುರಿತು ತನ್ನ ಶಾಸನದಲ್ಲಿಯೇ ತಿಳಿಸಿಲ್ಲವೇ? ಮಾಗಡಿ ಸಮೀಪದ ಕಲ್ಯದಲ್ಲಿ ಶ್ರೀವೈಷ್ಣವರು ಜೈನರನ್ನು ಕೊಲ್ಲಲಿಲ್ಲವೇ? ರೈತರ ಮೇಲಿನ ತೆರಿಗೆ ವಿರೋಧಿಸಿದ ನೂರಾರು ಜಂಗಮರನ್ನು ಮಾತುಕತೆಗೆ ಕರೆದು ಚಿಕ್ಕದೇವರಾಜ ಒಡೆಯರ್ ಹತ್ಯೆಗೈಯಲಿಲ್ಲವೇ? ಮೈಸೂರು ರಾಜ್ಯದಲ್ಲಿ ಮರಾಠರು ಮಾಡಿದ ಲೂಟಿ ಮತ್ತು ಸಾವು ನೋವುಗಳಿಗೆ ಲೆಕ್ಕವಿದೆಯೆ? ದಲಿತರು, ಬುಡಕಟ್ಟು ಜನಾಂಗಗಳ ಮೇಲೆ ನೂರಾರು ಹತ್ಯಾಕಾಂಡಗಳು ನಡೆದಿಲ್ಲವೇ? ಅವುಗಳಲ್ಲಿ ತಮಗೆ ಬೇಕಾದ್ದನ್ನು ಮಾತ್ರ ಆಯ್ದು ಹೇಳುವುದು ಎಷ್ಟರಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇತಿಹಾಸದಲ್ಲಿ ಒಳಿತು ಮತ್ತು ಕೆಡಕುಗಳೆರಡೂ ಇವೆ. ನಮ್ಮ ಮಕ್ಕಳಿಗೆ ಯಾವುದನ್ನು ನೀಡಬೇಕೆಂಬ ಎಚ್ಚರ, ತಿಳುವಳಿಕೆ ಶಿಕ್ಷಣತಜ್ಞರಿಗೆ ಇರಬೇಕಾಗುತ್ತದೆ. ಇತಿಹಾಸದಿಂದ ಸ್ನೇಹ, ಪ್ರೀತಿ, ಸಹಬಾಳ್ವೆ, ಸೌಹಾರ್ದತೆಯ ವಿಚಾರಗಳನ್ನು ಮುಗ್ಧ ಮನಸಿನ ಮಕ್ಕಳಿಗೆ ಕಲಿಸುವ ಮೂಲಕ ಬೌದ್ಧಿಕ ವಿಕಾಸಗೊಳಿಸಬೇಕೇ ಹೊರತು; ಕ್ರೌರ್ಯ, ದ್ವೇಷ, ಅಸೂಯೆಯ ಮೂಲಕ ವಿಕಾರಗೊಳಿಸಬಾರದು ಎಂದು ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆಗೆ ಡಾ. ಎಸ್.ಪಿ. ವಾಗೀಶ್ವರಿ,ಪ್ರಾಧ್ಯಾಪಕರು, ಕ್ರೈಸ್ಟ್ ವಿಶ್ವವಿದ್ಯಾಲಯ, ಡಾ. ಹಂ.ಗು. ರಾಜೇಶ್
ಸಂಪಾದಕರು, ಇತಿಹಾಸ ದರ್ಪಣ, ಡಾ. ಅಶ್ವತ್ಥನಾರಾಯಣ, ವಿಶ್ರಾಂತ ಪ್ರಾಧ್ಯಾಪಕರು, ಮೈಸೂರು ವಿಶ್ವವಿದ್ಯಾಲಯ, ಡಾ. ಕೆ.ಸದಾಶಿವ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಎಂ. ಜಮುನಾರವರು ಸಹಿ ಹಾಕಿದ್ದಾರೆ.

ಇದನ್ನೂ ಓದಿ; NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...