Homeಚಳವಳಿಪಠ್ಯದಲ್ಲಿ ಹಿಂದೂ ಹತ್ಯಾಕಾಂಡಗಳು ಸೇರಬೇಕು ವರದಿಗೆ ಇತಿಹಾಸ ತಜ್ಞರ ವಿರೋಧ

ಪಠ್ಯದಲ್ಲಿ ಹಿಂದೂ ಹತ್ಯಾಕಾಂಡಗಳು ಸೇರಬೇಕು ವರದಿಗೆ ಇತಿಹಾಸ ತಜ್ಞರ ವಿರೋಧ

ಇತಿಹಾಸದಲ್ಲಿ ಒಳಿತು ಮತ್ತು ಕೆಡಕುಗಳೆರಡೂ ಇವೆ. ನಮ್ಮ ಮಕ್ಕಳಿಗೆ ಯಾವುದನ್ನು ನೀಡಬೇಕೆಂಬ ಎಚ್ಚರ, ತಿಳುವಳಿಕೆ ಶಿಕ್ಷಣತಜ್ಞರಿಗೆ ಇರಬೇಕಾಗುತ್ತದೆ.

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ)ಯ ಭಾಗವಾಗಿ ಸಲ್ಲಿಸಲಾಗಿರುವ 26 ಪೊಸಿಷನ್ ಪೇಪರ್‌ಗಳು ವಿವಾದ ಕಾರಣವಾಗಿವೆ. ಇತಿಹಾಸ ವಿಷಯದ ತಜ್ಞರು ಸಲ್ಲಿಸಿರುವ ವರದಿಯ ಶಿಫಾರಸ್ಸಿನಲ್ಲಿ “ಭಾರತದ ಇತಿಹಾಸದಲ್ಲಿ ನಡೆದ ಹಿಂದೂ ಹತ್ಯಾಕಾಂಡಗಳು ಸೇರಿಸಬೇಕು” ಎಂಬುದಕ್ಕೆ ಇತಿಹಾಸ ತಜ್ಞರು, ಪ್ರಾಧ್ಯಾಪಕರು, ನಿವೃತ್ತ ಉಪಕುಲಪತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಇಂತಹ ವಿಚಾರಗಳನ್ನು ಪಠ್ಯದಲ್ಲಿ ಅಳವಡಿಸುವುದು ಮಕ್ಕಳ ಮನಸ್ಸಿನಲ್ಲಿ ಪರಸ್ಪರ ದ್ವೇಷ, ವೈಷಮ್ಯದ ಭಾವನೆಯನ್ನು ಮೂಡಿಸುತ್ತದೆ. ಇಂತಹ ಪಠ್ಯ ಸಂವಿಧಾನದ ಆಶಯಗಳಿಗೆ ಮತ್ತು ಶೈಕ್ಷಣಿಕ ಚೌಕಟ್ಟಿಗೆ ವಿರುದ್ಧವಾಗಿದ್ದು, ಸಮಾಜದ ಶಾಂತಿ, ಸೌಹಾರ್ದತೆ, ಸಹಭಾಳ್ವೆಗೆ ಭಂಗ ತರುತ್ತದೆ ಎಂದು ಗುಲ್ಬರ್ಗಾ ಕೇಂದ್ರಿಯ ವಿಶ್ವವಿದ್ಯಾಲಯದ ವಿಶ್ರಾಂತ ಸಮ-ಕುಲಪತಿಗಳಾದ ಪ್ರೊ. ಎಸ್.ಚಂದ್ರಶೇಖರ್, ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಓ. ಅನಂತರಾಮಯ್ಯ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಅಶೋಕ್ ಶೆಟ್ಟರ್, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಅಶ್ವತ್ಥನಾರಾಯಣ ಸೇರಿದಂತೆ ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಭಾರತದ ಇತಿಹಾಸದಲ್ಲಿ ಅನೇಕ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕಾರಣಗಳಿಗಾಗಿ ಹಿಂದೂ – ಬೌದ್ಧರ ನಡುವೆ, ಹಿಂದೂ – ಜೈನರ ನಡುವೆ, ಹಿಂದೂ – ಹಿಂದೂಗಳ ನಡುವೆಯೇ ಹತ್ಯಾಕಾಂಡಗಳು ನಡೆದಿವೆ. ಅವುಗಳನ್ನು ಮರೆಮಾಚಿ ಯಾವುದೋ ಒಂದು ಧರ್ಮಿಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತದ ಇತಿಹಾಸದಲ್ಲಿ ಹಿಂದೂಗಳ ಹತ್ಯಾಕಾಂಡವಷ್ಟೆ ನಡೆದಿದೆ ಎಂದು ಬಿಂಬಿಸುವುದು ಚರಿತ್ರೆಗೆ ಮಾಡಿದ ಅಪಚಾರವಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚರಿತ್ರೆಯಲ್ಲಿ ನಡೆದಿರುವ ಹತ್ಯಾಕಾಂಡಗಳಿಗೆ ಮೊದಲೂ ಇಲ್ಲ, ಕೊನೆಯೂ ಇಲ್ಲ. ಹರಪ್ಪ ನಾಗರಿಕತೆಯ ಅಂತ್ಯಕ್ಕೆ ಹೊರಗಿನಿಂದ ಬಂದ ಆಕ್ರಮಣಕಾರರು ಕಾರಣವೆಂದು ಹಲವು ಇತಿಹಾಸಕಾರರು ಬರೆದಿಲ್ಲವೇ? ಅಶೋಕ ಕಳಿಂಗ ರಾಜ್ಯದ ಮೇಲೆ ನಡೆಸಿದ ಯುದ್ಧದ ಭೀಕರತೆ ಕುರಿತು ತನ್ನ ಶಾಸನದಲ್ಲಿಯೇ ತಿಳಿಸಿಲ್ಲವೇ? ಮಾಗಡಿ ಸಮೀಪದ ಕಲ್ಯದಲ್ಲಿ ಶ್ರೀವೈಷ್ಣವರು ಜೈನರನ್ನು ಕೊಲ್ಲಲಿಲ್ಲವೇ? ರೈತರ ಮೇಲಿನ ತೆರಿಗೆ ವಿರೋಧಿಸಿದ ನೂರಾರು ಜಂಗಮರನ್ನು ಮಾತುಕತೆಗೆ ಕರೆದು ಚಿಕ್ಕದೇವರಾಜ ಒಡೆಯರ್ ಹತ್ಯೆಗೈಯಲಿಲ್ಲವೇ? ಮೈಸೂರು ರಾಜ್ಯದಲ್ಲಿ ಮರಾಠರು ಮಾಡಿದ ಲೂಟಿ ಮತ್ತು ಸಾವು ನೋವುಗಳಿಗೆ ಲೆಕ್ಕವಿದೆಯೆ? ದಲಿತರು, ಬುಡಕಟ್ಟು ಜನಾಂಗಗಳ ಮೇಲೆ ನೂರಾರು ಹತ್ಯಾಕಾಂಡಗಳು ನಡೆದಿಲ್ಲವೇ? ಅವುಗಳಲ್ಲಿ ತಮಗೆ ಬೇಕಾದ್ದನ್ನು ಮಾತ್ರ ಆಯ್ದು ಹೇಳುವುದು ಎಷ್ಟರಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇತಿಹಾಸದಲ್ಲಿ ಒಳಿತು ಮತ್ತು ಕೆಡಕುಗಳೆರಡೂ ಇವೆ. ನಮ್ಮ ಮಕ್ಕಳಿಗೆ ಯಾವುದನ್ನು ನೀಡಬೇಕೆಂಬ ಎಚ್ಚರ, ತಿಳುವಳಿಕೆ ಶಿಕ್ಷಣತಜ್ಞರಿಗೆ ಇರಬೇಕಾಗುತ್ತದೆ. ಇತಿಹಾಸದಿಂದ ಸ್ನೇಹ, ಪ್ರೀತಿ, ಸಹಬಾಳ್ವೆ, ಸೌಹಾರ್ದತೆಯ ವಿಚಾರಗಳನ್ನು ಮುಗ್ಧ ಮನಸಿನ ಮಕ್ಕಳಿಗೆ ಕಲಿಸುವ ಮೂಲಕ ಬೌದ್ಧಿಕ ವಿಕಾಸಗೊಳಿಸಬೇಕೇ ಹೊರತು; ಕ್ರೌರ್ಯ, ದ್ವೇಷ, ಅಸೂಯೆಯ ಮೂಲಕ ವಿಕಾರಗೊಳಿಸಬಾರದು ಎಂದು ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆಗೆ ಡಾ. ಎಸ್.ಪಿ. ವಾಗೀಶ್ವರಿ,ಪ್ರಾಧ್ಯಾಪಕರು, ಕ್ರೈಸ್ಟ್ ವಿಶ್ವವಿದ್ಯಾಲಯ, ಡಾ. ಹಂ.ಗು. ರಾಜೇಶ್
ಸಂಪಾದಕರು, ಇತಿಹಾಸ ದರ್ಪಣ, ಡಾ. ಅಶ್ವತ್ಥನಾರಾಯಣ, ವಿಶ್ರಾಂತ ಪ್ರಾಧ್ಯಾಪಕರು, ಮೈಸೂರು ವಿಶ್ವವಿದ್ಯಾಲಯ, ಡಾ. ಕೆ.ಸದಾಶಿವ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಎಂ. ಜಮುನಾರವರು ಸಹಿ ಹಾಕಿದ್ದಾರೆ.

ಇದನ್ನೂ ಓದಿ; NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...