Homeಚಳವಳಿಪಠ್ಯದಲ್ಲಿ ಹಿಂದೂ ಹತ್ಯಾಕಾಂಡಗಳು ಸೇರಬೇಕು ವರದಿಗೆ ಇತಿಹಾಸ ತಜ್ಞರ ವಿರೋಧ

ಪಠ್ಯದಲ್ಲಿ ಹಿಂದೂ ಹತ್ಯಾಕಾಂಡಗಳು ಸೇರಬೇಕು ವರದಿಗೆ ಇತಿಹಾಸ ತಜ್ಞರ ವಿರೋಧ

ಇತಿಹಾಸದಲ್ಲಿ ಒಳಿತು ಮತ್ತು ಕೆಡಕುಗಳೆರಡೂ ಇವೆ. ನಮ್ಮ ಮಕ್ಕಳಿಗೆ ಯಾವುದನ್ನು ನೀಡಬೇಕೆಂಬ ಎಚ್ಚರ, ತಿಳುವಳಿಕೆ ಶಿಕ್ಷಣತಜ್ಞರಿಗೆ ಇರಬೇಕಾಗುತ್ತದೆ.

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ)ಯ ಭಾಗವಾಗಿ ಸಲ್ಲಿಸಲಾಗಿರುವ 26 ಪೊಸಿಷನ್ ಪೇಪರ್‌ಗಳು ವಿವಾದ ಕಾರಣವಾಗಿವೆ. ಇತಿಹಾಸ ವಿಷಯದ ತಜ್ಞರು ಸಲ್ಲಿಸಿರುವ ವರದಿಯ ಶಿಫಾರಸ್ಸಿನಲ್ಲಿ “ಭಾರತದ ಇತಿಹಾಸದಲ್ಲಿ ನಡೆದ ಹಿಂದೂ ಹತ್ಯಾಕಾಂಡಗಳು ಸೇರಿಸಬೇಕು” ಎಂಬುದಕ್ಕೆ ಇತಿಹಾಸ ತಜ್ಞರು, ಪ್ರಾಧ್ಯಾಪಕರು, ನಿವೃತ್ತ ಉಪಕುಲಪತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಇಂತಹ ವಿಚಾರಗಳನ್ನು ಪಠ್ಯದಲ್ಲಿ ಅಳವಡಿಸುವುದು ಮಕ್ಕಳ ಮನಸ್ಸಿನಲ್ಲಿ ಪರಸ್ಪರ ದ್ವೇಷ, ವೈಷಮ್ಯದ ಭಾವನೆಯನ್ನು ಮೂಡಿಸುತ್ತದೆ. ಇಂತಹ ಪಠ್ಯ ಸಂವಿಧಾನದ ಆಶಯಗಳಿಗೆ ಮತ್ತು ಶೈಕ್ಷಣಿಕ ಚೌಕಟ್ಟಿಗೆ ವಿರುದ್ಧವಾಗಿದ್ದು, ಸಮಾಜದ ಶಾಂತಿ, ಸೌಹಾರ್ದತೆ, ಸಹಭಾಳ್ವೆಗೆ ಭಂಗ ತರುತ್ತದೆ ಎಂದು ಗುಲ್ಬರ್ಗಾ ಕೇಂದ್ರಿಯ ವಿಶ್ವವಿದ್ಯಾಲಯದ ವಿಶ್ರಾಂತ ಸಮ-ಕುಲಪತಿಗಳಾದ ಪ್ರೊ. ಎಸ್.ಚಂದ್ರಶೇಖರ್, ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಓ. ಅನಂತರಾಮಯ್ಯ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಅಶೋಕ್ ಶೆಟ್ಟರ್, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಅಶ್ವತ್ಥನಾರಾಯಣ ಸೇರಿದಂತೆ ಹಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಎನ್‌ಇಪಿ: ಫೈಥಾಗರಸ್‌ ಥಿಯರಿ ಸುಳ್ಳು, ಸಂಸ್ಕೃತ, ಮನುಸ್ಮೃತಿ ಕಲಿಕೆಗೆ ಪ್ರಸ್ತಾಪ: ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ

ಭಾರತದ ಇತಿಹಾಸದಲ್ಲಿ ಅನೇಕ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಕಾರಣಗಳಿಗಾಗಿ ಹಿಂದೂ – ಬೌದ್ಧರ ನಡುವೆ, ಹಿಂದೂ – ಜೈನರ ನಡುವೆ, ಹಿಂದೂ – ಹಿಂದೂಗಳ ನಡುವೆಯೇ ಹತ್ಯಾಕಾಂಡಗಳು ನಡೆದಿವೆ. ಅವುಗಳನ್ನು ಮರೆಮಾಚಿ ಯಾವುದೋ ಒಂದು ಧರ್ಮಿಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತದ ಇತಿಹಾಸದಲ್ಲಿ ಹಿಂದೂಗಳ ಹತ್ಯಾಕಾಂಡವಷ್ಟೆ ನಡೆದಿದೆ ಎಂದು ಬಿಂಬಿಸುವುದು ಚರಿತ್ರೆಗೆ ಮಾಡಿದ ಅಪಚಾರವಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚರಿತ್ರೆಯಲ್ಲಿ ನಡೆದಿರುವ ಹತ್ಯಾಕಾಂಡಗಳಿಗೆ ಮೊದಲೂ ಇಲ್ಲ, ಕೊನೆಯೂ ಇಲ್ಲ. ಹರಪ್ಪ ನಾಗರಿಕತೆಯ ಅಂತ್ಯಕ್ಕೆ ಹೊರಗಿನಿಂದ ಬಂದ ಆಕ್ರಮಣಕಾರರು ಕಾರಣವೆಂದು ಹಲವು ಇತಿಹಾಸಕಾರರು ಬರೆದಿಲ್ಲವೇ? ಅಶೋಕ ಕಳಿಂಗ ರಾಜ್ಯದ ಮೇಲೆ ನಡೆಸಿದ ಯುದ್ಧದ ಭೀಕರತೆ ಕುರಿತು ತನ್ನ ಶಾಸನದಲ್ಲಿಯೇ ತಿಳಿಸಿಲ್ಲವೇ? ಮಾಗಡಿ ಸಮೀಪದ ಕಲ್ಯದಲ್ಲಿ ಶ್ರೀವೈಷ್ಣವರು ಜೈನರನ್ನು ಕೊಲ್ಲಲಿಲ್ಲವೇ? ರೈತರ ಮೇಲಿನ ತೆರಿಗೆ ವಿರೋಧಿಸಿದ ನೂರಾರು ಜಂಗಮರನ್ನು ಮಾತುಕತೆಗೆ ಕರೆದು ಚಿಕ್ಕದೇವರಾಜ ಒಡೆಯರ್ ಹತ್ಯೆಗೈಯಲಿಲ್ಲವೇ? ಮೈಸೂರು ರಾಜ್ಯದಲ್ಲಿ ಮರಾಠರು ಮಾಡಿದ ಲೂಟಿ ಮತ್ತು ಸಾವು ನೋವುಗಳಿಗೆ ಲೆಕ್ಕವಿದೆಯೆ? ದಲಿತರು, ಬುಡಕಟ್ಟು ಜನಾಂಗಗಳ ಮೇಲೆ ನೂರಾರು ಹತ್ಯಾಕಾಂಡಗಳು ನಡೆದಿಲ್ಲವೇ? ಅವುಗಳಲ್ಲಿ ತಮಗೆ ಬೇಕಾದ್ದನ್ನು ಮಾತ್ರ ಆಯ್ದು ಹೇಳುವುದು ಎಷ್ಟರಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇತಿಹಾಸದಲ್ಲಿ ಒಳಿತು ಮತ್ತು ಕೆಡಕುಗಳೆರಡೂ ಇವೆ. ನಮ್ಮ ಮಕ್ಕಳಿಗೆ ಯಾವುದನ್ನು ನೀಡಬೇಕೆಂಬ ಎಚ್ಚರ, ತಿಳುವಳಿಕೆ ಶಿಕ್ಷಣತಜ್ಞರಿಗೆ ಇರಬೇಕಾಗುತ್ತದೆ. ಇತಿಹಾಸದಿಂದ ಸ್ನೇಹ, ಪ್ರೀತಿ, ಸಹಬಾಳ್ವೆ, ಸೌಹಾರ್ದತೆಯ ವಿಚಾರಗಳನ್ನು ಮುಗ್ಧ ಮನಸಿನ ಮಕ್ಕಳಿಗೆ ಕಲಿಸುವ ಮೂಲಕ ಬೌದ್ಧಿಕ ವಿಕಾಸಗೊಳಿಸಬೇಕೇ ಹೊರತು; ಕ್ರೌರ್ಯ, ದ್ವೇಷ, ಅಸೂಯೆಯ ಮೂಲಕ ವಿಕಾರಗೊಳಿಸಬಾರದು ಎಂದು ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆಗೆ ಡಾ. ಎಸ್.ಪಿ. ವಾಗೀಶ್ವರಿ,ಪ್ರಾಧ್ಯಾಪಕರು, ಕ್ರೈಸ್ಟ್ ವಿಶ್ವವಿದ್ಯಾಲಯ, ಡಾ. ಹಂ.ಗು. ರಾಜೇಶ್
ಸಂಪಾದಕರು, ಇತಿಹಾಸ ದರ್ಪಣ, ಡಾ. ಅಶ್ವತ್ಥನಾರಾಯಣ, ವಿಶ್ರಾಂತ ಪ್ರಾಧ್ಯಾಪಕರು, ಮೈಸೂರು ವಿಶ್ವವಿದ್ಯಾಲಯ, ಡಾ. ಕೆ.ಸದಾಶಿವ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಎಂ. ಜಮುನಾರವರು ಸಹಿ ಹಾಕಿದ್ದಾರೆ.

ಇದನ್ನೂ ಓದಿ; NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...