Homeಕರ್ನಾಟಕದೇವನಹಳ್ಳಿ ಭೂ ಹೋರಾಟಕ್ಕೆ ಐತಿಹಾಸಿಕ ಜಯ: 'ಕರ್ನಾಟಕ ಗೆದ್ದಿದೆ' ಎಂದು ಹೋರಾಟ ಸಮಿತಿಗಳಿಂದ ಹೃದಯಸ್ಪರ್ಶಿ ಘೋಷಣೆ

ದೇವನಹಳ್ಳಿ ಭೂ ಹೋರಾಟಕ್ಕೆ ಐತಿಹಾಸಿಕ ಜಯ: ‘ಕರ್ನಾಟಕ ಗೆದ್ದಿದೆ’ ಎಂದು ಹೋರಾಟ ಸಮಿತಿಗಳಿಂದ ಹೃದಯಸ್ಪರ್ಶಿ ಘೋಷಣೆ

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ಕಳೆದ 1198 ದಿನಗಳಿಂದಲೂ ತಮ್ಮ ಪೂರ್ವಜರ ಮಣ್ಣಿಗಾಗಿ ನಡೆಸುತ್ತಿದ್ದ ತಪಸ್ಸಿನಂತಹ ಹೋರಾಟಕ್ಕೆ ಇಂದು ಐತಿಹಾಸಿಕ ವಿಜಯ ಲಭಿಸಿದೆ. “ಇಂದು ಕರ್ನಾಟಕ ಗೆದ್ದಿದೆ! ನಮ್ಮ ಹಿರಿಯರ ಮಣ್ಣನ್ನು ನಾವು ಮಾರುವುದಿಲ್ಲ ಎಂಬ ರೈತರ ಅಚಲ ಸಂಕಲ್ಪಕ್ಕೆ ಕೊನೆಗೂ ಫಲ ಸಿಕ್ಕಿದೆ” ಎಂದು ಹೋರಾಟ ಸಮಿತಿಗಳು ಜಂಟಿಯಾಗಿ ಘೋಷಿಸಿವೆ. ಈ ಘೋಷಣೆ ರೈತರ ಮುಖದಲ್ಲಿ ಹರ್ಷವನ್ನು, ಕಣ್ಣಲ್ಲಿ ಆನಂದಭಾಷ್ಪವನ್ನು ತರಿಸಿತ್ತು ಎಂದು ಜಂಟಿ ಹೇಳಿಕೆ ತಿಳಿಸಿದೆ.

ರೈತರ ಕಷ್ಟಗಳಿಗೆ ಸರ್ಕಾರ ಆರಂಭದಲ್ಲಿ ಸ್ಪಂದಿಸದೆ, ಬಲವಂತದ ಭೂಸ್ವಾಧೀನಕ್ಕೆ ಮುಂದಾಗಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿತ್ತು. ಈ ಕಠಿಣ ಸಂದರ್ಭದಲ್ಲಿ ಸಂಯುಕ್ತ ಹೋರಾಟ ಕರ್ನಾಟಕವು ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ದೃಢವಾಗಿ ತೀರ್ಮಾನಿಸಿ ಜೂನ್ 25ರಂದು “ದೇವನಹಳ್ಳಿ ಚಲೋ”ಗೆ ಕರೆ ನೀಡಿತ್ತು. ಈ ಕರೆಯು ಇಡೀ ಕರ್ನಾಟಕವನ್ನು ಜಾಗೃತಗೊಳಿಸಿತು; ನಟ ಪ್ರಕಾಶ್ ರಾಜ್ ಸೇರಿದಂತೆ ನಾಡಿನ ನಾಗರಿಕ ಸಮಾಜ ಅಮೋಘವಾಗಿ ಸ್ಪಂದಿಸಿತ್ತು. ಆದರೂ, ಆಡಳಿತವು ಹೋರಾಟಗಾರರನ್ನು ಬಂಧಿಸಿ ಚಳುವಳಿಯನ್ನು ದಮನಿಸುವ ಪ್ರಯತ್ನ ನಡೆಸಿತ್ತು. ಆದರೆ, ಕರ್ನಾಟಕದ ಎಲ್ಲಾ ಜನ ಸಂಘಟನೆಗಳ ನಾಯಕತ್ವ ಒಂದು ಮುಷ್ಟಿಯಾಗಿ, ದಿಟ್ಟವಾಗಿ ಇದನ್ನು ಎದುರಿಸಿ ಫ್ರೀಡಂ ಪಾರ್ಕ್‌ನಲ್ಲಿ “ಭೂ ಸತ್ಯಾಗ್ರಹ”ವನ್ನು ಮುಂದುವರೆಸಿತು ಎಂದು ಜಂಟಿ ಹೇಳಿಕೆ ತಿಳಿಸಿದೆ.

ಜುಲೈ 4ರಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಿತು. ಅಂದು ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕತ್ವ ಒಳಗೊಂಡಂತೆ ವಿವಿಧ ರಾಜ್ಯಗಳಿಂದ ಅಪೂರ್ವ ಬೆಂಬಲ ವ್ಯಕ್ತವಾಗಿತ್ತು. ಕರ್ನಾಟಕದ ದುಡಿಯುವ ಜನರು, ವಿಶೇಷವಾಗಿ ಬಡ ಬಗರ್ ಹುಕುಂ ರೈತರು, ಭೂಮಿ ಹಕ್ಕು ಕಳೆದುಕೊಂಡವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ “ನಾಡ ಉಳಿಸಿ ಸಮಾವೇಶ”ವನ್ನು ಕರ್ನಾಟಕದ ದನಿಯಾಗಿ ಮಾರ್ಪಡಿಸಿದ್ದರು. ಸಭೆಯಲ್ಲಿ ಮುಖ್ಯಮಂತ್ರಿಗಳು “ಸರ್ಕಾರಕ್ಕೆ ಇನ್ನು 10 ದಿನಗಳ ಕಾಲಾವಕಾಶ ಕೊಡಿ” ಎಂದು ಚಳುವಳಿಗಾರರನ್ನು ಕೋರಿದ್ದರು. ರೈತರಿಗೆ ಯಾವುದೇ ವಂಚನೆಯಾಗದಂತೆ ನೋಡಿಕೊಳ್ಳಬೇಕು ಎಂಬ ಭಾವನಾತ್ಮಕ ಮನವಿಯೊಂದಿಗೆ ಈ ಕಾಲಾವಕಾಶವನ್ನು ಸರ್ಕಾರಕ್ಕೆ ನೀಡಲಾಗಿತ್ತು ಎಂದು ಅದು ಹೇಳಿದೆ.

ಈ ಹತ್ತು ದಿನಗಳ ಅವಧಿಯು ರೈತರಿಗೆ ಮತ್ತೊಂದು ಅಗ್ನಿಪರೀಕ್ಷೆಯಾಗಿತ್ತು. ರೈತರ ಒಗ್ಗಟ್ಟನ್ನು ಒಡೆಯಲು ಕೆಲವು ಸ್ಥಳೀಯ ಪುಡಾರಿಗಳು ಹಾಗೂ ರಿಯಲ್ ಎಸ್ಟೇಟ್ ಏಜೆಂಟರು ಅನೇಕ ಹುನ್ನಾರಗಳನ್ನು ನಡೆಸಿದರು. ಆದರೆ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಚನ್ನರಾಯಪಟ್ಟಣ ಹಾಗೂ 13 ಹಳ್ಳಿಗಳ ಜನ ಈ ಷಡ್ಯಂತ್ರವನ್ನು ಧೈರ್ಯದಿಂದ ವಿಫಲಗೊಳಿಸಿದರು. ಪ್ರತಿ ಹಳ್ಳಿಯಲ್ಲಿ ಗ್ರಾಮ ಸಂಕಲ್ಪ ಸಮಾವೇಶಗಳನ್ನು ನಡೆಸಿ, ಅಂತಿಮವಾಗಿ ಜುಲೈ 14ರಂದು ನಡೆದ “ಗ್ರಾಮ ಸಂಕಲ್ಪ ಸಮಾವೇಶ”ದಲ್ಲಿ “ಪ್ರಾಣ ಹೋದರೂ – ಭೂಮಿ ಕೊಡುವುದಿಲ್ಲ” ಎಂಬ ತಮ್ಮ ಒಗ್ಗಟ್ಟಿನ ಮತ್ತು ಪ್ರಾಣಕ್ಕಿಂತ ಮಿಗಿಲಾದ ತೀರ್ಮಾನವನ್ನು ಮತ್ತೊಮ್ಮೆ ರುಜುವಾತುಪಡಿಸಿದರು ಎಂದು ಹೇಳಿಕೆಯು ತಿಳಿಸಿದೆ.

ಇಂದು, ಅಂದರೆ ಜುಲೈ 15ರಂದು, ಇಡೀ ಕರ್ನಾಟಕ ಮಾತ್ರವಲ್ಲದೆ ಭಾರತವೇ ಕಾತರದಿಂದ ಕಾಯುತ್ತಿದ್ದ ಮಹತ್ವದ ಸಭೆ ವಿಧಾನ ಸೌಧದಲ್ಲಿ ನಡೆಯಿತು. ಸಭೆಯಲ್ಲಿ ನೇರವಾಗಿ ವಿಷಯಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಕೃಷಿಯನ್ನು ಬಿಡುವುದಿಲ್ಲ” ಎಂಬ ರೈತರ ಅಚಲ ಸಂಕಲ್ಪವನ್ನು, ಮತ್ತು “ಇಡೀ ಕರ್ನಾಟಕದ ಜನ ಸಂಘಟನೆಗಳು ಹಾಗೂ ನಾಗರಿಕರೆಲ್ಲಾ ಒಗ್ಗೂಡಿ ದನಿ ಎತ್ತಿದ್ದ ಐತಿಹಾಸಿಕ ಪರಿಯನ್ನು ಪುರಸ್ಕರಿಸಿ”, ಭೂಸ್ವಾಧೀನದ ಇಡೀ ನೋಟಿಫಿಕೇಶನ್‌ ಅನ್ನು ಸಂಪೂರ್ಣವಾಗಿ ಕೈಬಿಡುವ ಐತಿಹಾಸಿಕ ತೀರ್ಮಾನವನ್ನು ಘೋಷಿಸಿದರು. ಜನಮನಕ್ಕೆ ಸ್ಪಂದಿಸಿದ್ದಕ್ಕಾಗಿ, ಈ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದ್ದಕ್ಕಾಗಿ ಸರ್ಕಾರಕ್ಕೆ, ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಗೂ ಕಾಂಗ್ರೆಸ್ಸಿನ ಹೈಕಮಾಂಡ್‌ಗೆ, ಅದರಲ್ಲೂ ವಿಶೇಷವಾಗಿ ರಾಹುಲ್ ಗಾಂಧಿಯವರಿಗೆ ಹೋರಾಟ ಸಮಿತಿಗಳು ಕೃತಜ್ಞತೆಗಳನ್ನು ಸಲ್ಲಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಇದು ಜನ ಚಳುವಳಿಗಳ ಒಗ್ಗಟ್ಟಿನ ಹೋರಾಟಕ್ಕೆ ಸಂದ ಸಮಷ್ಟಿ ಜಯವಾಗಿದೆ” ಎಂದು ಹೋರಾಟಗಾರರು ಭಾವುಕವಾಗಿ ಬಣ್ಣಿಸಿದ್ದಾರೆ. ಈ ಐಕ್ಯತೆಯನ್ನು ಹೀಗೇ ಮುಂದುವರೆಸುವುದಾಗಿ, ಜನರ ನೋವಿಗೆ ದನಿಯಾಗಿ ದುಡಿಯುವುದಾಗಿ ಮತ್ತು ಆಳುವವರನ್ನು ಪ್ರಶ್ನಿಸುವ ಜನದನಿಯಾಗಿ ಕೆಲಸ ಮಾಡುವುದಾಗಿ ಈ ಐತಿಹಾಸಿಕ ಸಂದರ್ಭದಲ್ಲಿ ಮತ್ತೊಮ್ಮೆ ಸಂಕಲ್ಪ ತೊಟ್ಟಿದ್ದಾರೆ. ಕರ್ನಾಟಕದ ಅಭಿವೃದ್ಧಿ ಮಾದರಿ ಹೇಗಿರಬೇಕು? ಭೂ ಬಳಕೆ ನೀತಿ ಏನಾಗಿರಬೇಕು? ಎಂಬ ಅಮೂಲ್ಯ ಪ್ರಶ್ನೆಗಳ ಸುತ್ತ ಸಾರ್ವಜನಿಕ ಚರ್ಚೆ ಚಾಲನೆ ನೀಡುವ ತೀರ್ಮಾನವನ್ನೂ ತೆಗೆದುಕೊಳ್ಳುತ್ತಿದ್ದು, ಸರ್ಕಾರವೂ ಈ ಚರ್ಚೆಯಲ್ಲಿ ಕೈಜೋಡಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ ಎಂದು ಅದು ತಿಳಿಸಿದೆ.

‘ಜನ ಚಳವಳಿಗಳ ಐಕ್ಯತೆ ಚಿರಾಯುವಾಗಲಿ!’

‘ಬಲವಂತದ ಭೂಸ್ವಾಧೀನಗಳು ಕೊನೆಯಾಗಲಿ!’

‘ಭೂಮಿಯ ಮೇಲೆ ದುಡಿಯುವ ಜನರ ಹಕ್ಕು ಮರುಸ್ಥಾಪನೆಯಾಗಲಿ!’

ಇದು ಹೋರಾಟಗಾರರ ಅಚಲ ನಂಬಿಕೆಯ, ಸಾಮೂಹಿಕ ಪ್ರಯತ್ನದ ಮತ್ತು ಪ್ರಜಾಪ್ರಭುತ್ವದ ವಿಜಯದ ಸಂಕೇತವಾಗಿದೆ ಎಂದು ಜಂಟಿ ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...