Homeಕರ್ನಾಟಕದೇವನಹಳ್ಳಿ ಭೂ ಹೋರಾಟಕ್ಕೆ ಐತಿಹಾಸಿಕ ಜಯ: 'ಕರ್ನಾಟಕ ಗೆದ್ದಿದೆ' ಎಂದು ಹೋರಾಟ ಸಮಿತಿಗಳಿಂದ ಹೃದಯಸ್ಪರ್ಶಿ ಘೋಷಣೆ

ದೇವನಹಳ್ಳಿ ಭೂ ಹೋರಾಟಕ್ಕೆ ಐತಿಹಾಸಿಕ ಜಯ: ‘ಕರ್ನಾಟಕ ಗೆದ್ದಿದೆ’ ಎಂದು ಹೋರಾಟ ಸಮಿತಿಗಳಿಂದ ಹೃದಯಸ್ಪರ್ಶಿ ಘೋಷಣೆ

- Advertisement -
- Advertisement -

ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ರೈತರು ಕಳೆದ 1198 ದಿನಗಳಿಂದಲೂ ತಮ್ಮ ಪೂರ್ವಜರ ಮಣ್ಣಿಗಾಗಿ ನಡೆಸುತ್ತಿದ್ದ ತಪಸ್ಸಿನಂತಹ ಹೋರಾಟಕ್ಕೆ ಇಂದು ಐತಿಹಾಸಿಕ ವಿಜಯ ಲಭಿಸಿದೆ. “ಇಂದು ಕರ್ನಾಟಕ ಗೆದ್ದಿದೆ! ನಮ್ಮ ಹಿರಿಯರ ಮಣ್ಣನ್ನು ನಾವು ಮಾರುವುದಿಲ್ಲ ಎಂಬ ರೈತರ ಅಚಲ ಸಂಕಲ್ಪಕ್ಕೆ ಕೊನೆಗೂ ಫಲ ಸಿಕ್ಕಿದೆ” ಎಂದು ಹೋರಾಟ ಸಮಿತಿಗಳು ಜಂಟಿಯಾಗಿ ಘೋಷಿಸಿವೆ. ಈ ಘೋಷಣೆ ರೈತರ ಮುಖದಲ್ಲಿ ಹರ್ಷವನ್ನು, ಕಣ್ಣಲ್ಲಿ ಆನಂದಭಾಷ್ಪವನ್ನು ತರಿಸಿತ್ತು ಎಂದು ಜಂಟಿ ಹೇಳಿಕೆ ತಿಳಿಸಿದೆ.

ರೈತರ ಕಷ್ಟಗಳಿಗೆ ಸರ್ಕಾರ ಆರಂಭದಲ್ಲಿ ಸ್ಪಂದಿಸದೆ, ಬಲವಂತದ ಭೂಸ್ವಾಧೀನಕ್ಕೆ ಮುಂದಾಗಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿತ್ತು. ಈ ಕಠಿಣ ಸಂದರ್ಭದಲ್ಲಿ ಸಂಯುಕ್ತ ಹೋರಾಟ ಕರ್ನಾಟಕವು ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ದೃಢವಾಗಿ ತೀರ್ಮಾನಿಸಿ ಜೂನ್ 25ರಂದು “ದೇವನಹಳ್ಳಿ ಚಲೋ”ಗೆ ಕರೆ ನೀಡಿತ್ತು. ಈ ಕರೆಯು ಇಡೀ ಕರ್ನಾಟಕವನ್ನು ಜಾಗೃತಗೊಳಿಸಿತು; ನಟ ಪ್ರಕಾಶ್ ರಾಜ್ ಸೇರಿದಂತೆ ನಾಡಿನ ನಾಗರಿಕ ಸಮಾಜ ಅಮೋಘವಾಗಿ ಸ್ಪಂದಿಸಿತ್ತು. ಆದರೂ, ಆಡಳಿತವು ಹೋರಾಟಗಾರರನ್ನು ಬಂಧಿಸಿ ಚಳುವಳಿಯನ್ನು ದಮನಿಸುವ ಪ್ರಯತ್ನ ನಡೆಸಿತ್ತು. ಆದರೆ, ಕರ್ನಾಟಕದ ಎಲ್ಲಾ ಜನ ಸಂಘಟನೆಗಳ ನಾಯಕತ್ವ ಒಂದು ಮುಷ್ಟಿಯಾಗಿ, ದಿಟ್ಟವಾಗಿ ಇದನ್ನು ಎದುರಿಸಿ ಫ್ರೀಡಂ ಪಾರ್ಕ್‌ನಲ್ಲಿ “ಭೂ ಸತ್ಯಾಗ್ರಹ”ವನ್ನು ಮುಂದುವರೆಸಿತು ಎಂದು ಜಂಟಿ ಹೇಳಿಕೆ ತಿಳಿಸಿದೆ.

ಜುಲೈ 4ರಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಿತು. ಅಂದು ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕತ್ವ ಒಳಗೊಂಡಂತೆ ವಿವಿಧ ರಾಜ್ಯಗಳಿಂದ ಅಪೂರ್ವ ಬೆಂಬಲ ವ್ಯಕ್ತವಾಗಿತ್ತು. ಕರ್ನಾಟಕದ ದುಡಿಯುವ ಜನರು, ವಿಶೇಷವಾಗಿ ಬಡ ಬಗರ್ ಹುಕುಂ ರೈತರು, ಭೂಮಿ ಹಕ್ಕು ಕಳೆದುಕೊಂಡವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿ “ನಾಡ ಉಳಿಸಿ ಸಮಾವೇಶ”ವನ್ನು ಕರ್ನಾಟಕದ ದನಿಯಾಗಿ ಮಾರ್ಪಡಿಸಿದ್ದರು. ಸಭೆಯಲ್ಲಿ ಮುಖ್ಯಮಂತ್ರಿಗಳು “ಸರ್ಕಾರಕ್ಕೆ ಇನ್ನು 10 ದಿನಗಳ ಕಾಲಾವಕಾಶ ಕೊಡಿ” ಎಂದು ಚಳುವಳಿಗಾರರನ್ನು ಕೋರಿದ್ದರು. ರೈತರಿಗೆ ಯಾವುದೇ ವಂಚನೆಯಾಗದಂತೆ ನೋಡಿಕೊಳ್ಳಬೇಕು ಎಂಬ ಭಾವನಾತ್ಮಕ ಮನವಿಯೊಂದಿಗೆ ಈ ಕಾಲಾವಕಾಶವನ್ನು ಸರ್ಕಾರಕ್ಕೆ ನೀಡಲಾಗಿತ್ತು ಎಂದು ಅದು ಹೇಳಿದೆ.

ಈ ಹತ್ತು ದಿನಗಳ ಅವಧಿಯು ರೈತರಿಗೆ ಮತ್ತೊಂದು ಅಗ್ನಿಪರೀಕ್ಷೆಯಾಗಿತ್ತು. ರೈತರ ಒಗ್ಗಟ್ಟನ್ನು ಒಡೆಯಲು ಕೆಲವು ಸ್ಥಳೀಯ ಪುಡಾರಿಗಳು ಹಾಗೂ ರಿಯಲ್ ಎಸ್ಟೇಟ್ ಏಜೆಂಟರು ಅನೇಕ ಹುನ್ನಾರಗಳನ್ನು ನಡೆಸಿದರು. ಆದರೆ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಚನ್ನರಾಯಪಟ್ಟಣ ಹಾಗೂ 13 ಹಳ್ಳಿಗಳ ಜನ ಈ ಷಡ್ಯಂತ್ರವನ್ನು ಧೈರ್ಯದಿಂದ ವಿಫಲಗೊಳಿಸಿದರು. ಪ್ರತಿ ಹಳ್ಳಿಯಲ್ಲಿ ಗ್ರಾಮ ಸಂಕಲ್ಪ ಸಮಾವೇಶಗಳನ್ನು ನಡೆಸಿ, ಅಂತಿಮವಾಗಿ ಜುಲೈ 14ರಂದು ನಡೆದ “ಗ್ರಾಮ ಸಂಕಲ್ಪ ಸಮಾವೇಶ”ದಲ್ಲಿ “ಪ್ರಾಣ ಹೋದರೂ – ಭೂಮಿ ಕೊಡುವುದಿಲ್ಲ” ಎಂಬ ತಮ್ಮ ಒಗ್ಗಟ್ಟಿನ ಮತ್ತು ಪ್ರಾಣಕ್ಕಿಂತ ಮಿಗಿಲಾದ ತೀರ್ಮಾನವನ್ನು ಮತ್ತೊಮ್ಮೆ ರುಜುವಾತುಪಡಿಸಿದರು ಎಂದು ಹೇಳಿಕೆಯು ತಿಳಿಸಿದೆ.

ಇಂದು, ಅಂದರೆ ಜುಲೈ 15ರಂದು, ಇಡೀ ಕರ್ನಾಟಕ ಮಾತ್ರವಲ್ಲದೆ ಭಾರತವೇ ಕಾತರದಿಂದ ಕಾಯುತ್ತಿದ್ದ ಮಹತ್ವದ ಸಭೆ ವಿಧಾನ ಸೌಧದಲ್ಲಿ ನಡೆಯಿತು. ಸಭೆಯಲ್ಲಿ ನೇರವಾಗಿ ವಿಷಯಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಕೃಷಿಯನ್ನು ಬಿಡುವುದಿಲ್ಲ” ಎಂಬ ರೈತರ ಅಚಲ ಸಂಕಲ್ಪವನ್ನು, ಮತ್ತು “ಇಡೀ ಕರ್ನಾಟಕದ ಜನ ಸಂಘಟನೆಗಳು ಹಾಗೂ ನಾಗರಿಕರೆಲ್ಲಾ ಒಗ್ಗೂಡಿ ದನಿ ಎತ್ತಿದ್ದ ಐತಿಹಾಸಿಕ ಪರಿಯನ್ನು ಪುರಸ್ಕರಿಸಿ”, ಭೂಸ್ವಾಧೀನದ ಇಡೀ ನೋಟಿಫಿಕೇಶನ್‌ ಅನ್ನು ಸಂಪೂರ್ಣವಾಗಿ ಕೈಬಿಡುವ ಐತಿಹಾಸಿಕ ತೀರ್ಮಾನವನ್ನು ಘೋಷಿಸಿದರು. ಜನಮನಕ್ಕೆ ಸ್ಪಂದಿಸಿದ್ದಕ್ಕಾಗಿ, ಈ ಸ್ಪಷ್ಟ ತೀರ್ಮಾನ ತೆಗೆದುಕೊಂಡಿದ್ದಕ್ಕಾಗಿ ಸರ್ಕಾರಕ್ಕೆ, ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಗೂ ಕಾಂಗ್ರೆಸ್ಸಿನ ಹೈಕಮಾಂಡ್‌ಗೆ, ಅದರಲ್ಲೂ ವಿಶೇಷವಾಗಿ ರಾಹುಲ್ ಗಾಂಧಿಯವರಿಗೆ ಹೋರಾಟ ಸಮಿತಿಗಳು ಕೃತಜ್ಞತೆಗಳನ್ನು ಸಲ್ಲಿಸಿವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಇದು ಜನ ಚಳುವಳಿಗಳ ಒಗ್ಗಟ್ಟಿನ ಹೋರಾಟಕ್ಕೆ ಸಂದ ಸಮಷ್ಟಿ ಜಯವಾಗಿದೆ” ಎಂದು ಹೋರಾಟಗಾರರು ಭಾವುಕವಾಗಿ ಬಣ್ಣಿಸಿದ್ದಾರೆ. ಈ ಐಕ್ಯತೆಯನ್ನು ಹೀಗೇ ಮುಂದುವರೆಸುವುದಾಗಿ, ಜನರ ನೋವಿಗೆ ದನಿಯಾಗಿ ದುಡಿಯುವುದಾಗಿ ಮತ್ತು ಆಳುವವರನ್ನು ಪ್ರಶ್ನಿಸುವ ಜನದನಿಯಾಗಿ ಕೆಲಸ ಮಾಡುವುದಾಗಿ ಈ ಐತಿಹಾಸಿಕ ಸಂದರ್ಭದಲ್ಲಿ ಮತ್ತೊಮ್ಮೆ ಸಂಕಲ್ಪ ತೊಟ್ಟಿದ್ದಾರೆ. ಕರ್ನಾಟಕದ ಅಭಿವೃದ್ಧಿ ಮಾದರಿ ಹೇಗಿರಬೇಕು? ಭೂ ಬಳಕೆ ನೀತಿ ಏನಾಗಿರಬೇಕು? ಎಂಬ ಅಮೂಲ್ಯ ಪ್ರಶ್ನೆಗಳ ಸುತ್ತ ಸಾರ್ವಜನಿಕ ಚರ್ಚೆ ಚಾಲನೆ ನೀಡುವ ತೀರ್ಮಾನವನ್ನೂ ತೆಗೆದುಕೊಳ್ಳುತ್ತಿದ್ದು, ಸರ್ಕಾರವೂ ಈ ಚರ್ಚೆಯಲ್ಲಿ ಕೈಜೋಡಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ ಎಂದು ಅದು ತಿಳಿಸಿದೆ.

‘ಜನ ಚಳವಳಿಗಳ ಐಕ್ಯತೆ ಚಿರಾಯುವಾಗಲಿ!’

‘ಬಲವಂತದ ಭೂಸ್ವಾಧೀನಗಳು ಕೊನೆಯಾಗಲಿ!’

‘ಭೂಮಿಯ ಮೇಲೆ ದುಡಿಯುವ ಜನರ ಹಕ್ಕು ಮರುಸ್ಥಾಪನೆಯಾಗಲಿ!’

ಇದು ಹೋರಾಟಗಾರರ ಅಚಲ ನಂಬಿಕೆಯ, ಸಾಮೂಹಿಕ ಪ್ರಯತ್ನದ ಮತ್ತು ಪ್ರಜಾಪ್ರಭುತ್ವದ ವಿಜಯದ ಸಂಕೇತವಾಗಿದೆ ಎಂದು ಜಂಟಿ ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ರೈತರ ಬೇಡಿಕೆ ಪರಿಗಣಿಸಿ ದೇವನಹಳ್ಳಿ ಭೂಸ್ವಾಧೀನ ಕೈಬಿಟ್ಟಿದ್ದೇವೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...