Homeಮುಖಪುಟನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ಇವರಿಬ್ಬರೂ ಅತ್ಯಂತ ಕಠಿಣ ತರಬೇತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ನೌಕಾಪಡೆಯ ಭಾಗವಾಗಲಿರುವ ಅತ್ಯಾಧುನಿಕ ಎಂಎಚ್-60 ಆರ್‌ ಹೆಲಿಕಾಪ್ಟರ್‌ಗಳನ್ನೂ ಈ ಮಹಿಳಾ ಅಧಿಕಾರಿಗಳು ನಿರ್ವಹಿಸಲಿದ್ದಾರೆ.

- Advertisement -
- Advertisement -

ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಇಬ್ಬರು ಮಹಿಳೆಯರನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆಗೆ ನಿಯೋಜನೆ ಮಾಡಲಾಗಿದೆ. ನೌಕಾಪಡೆಯ ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಮತ್ತು ಸಬ್ ಲೆಫ್ಟಿನೆಂಟ್ ರಿತಿ ಸಿಂಗ್‌ ಯುದ್ಧನೌಕೆಯ ಕರ್ತವ್ಯಕ್ಕೆ ನಿಯೋಜನೆಗೊಂಡ ಮೊಟ್ಟ ಮೊದಲ ಮಹಿಳೆಯರಾಗಿದ್ದಾರೆ.

ನೌಕಾಪಡೆಯಲ್ಲಿ ಹಲವು ಮಹಿಳಾ ಅಧಿಕಾರಿಗಳಿದ್ದರೂ ಸಹ ಯುದ್ಧನೌಕೆಯಲ್ಲಿ ಮಹಿಳೆಯರಿರಲಿಲ್ಲ. ಬಾತ್‌ರೂಂ ವ್ಯವಸ್ಥೆ, ಕ್ವಾರ್ಟರ್‌‌ಗಳಲ್ಲಿ ಖಾಸಗಿತನನದ ಕೊರತೆ ಇತ್ಯಾದಿ ಕಾರಣಗಳಿಂದ ಮಹಿಳೆಯರನ್ನು ಯುದ್ಧನೌಕೆಗೆ ನಿಯೋಜಿಸುತ್ತಿರಲಿಲ್ಲ. ಆದರೆ ನೌಕಾಪಡೆ ಇದೀಗ ಐತಿಹಾಸಿಕ ಕ್ರಮ ಕೈಗೊಂಡು ಇಬ್ಬರು ಮಹಿಳಾ ಅಧಿಕಾರಿಗಳನ್ನು ನಿಯೋಜಿಸಿದೆ.

ಇವರಿಬ್ಬರೂ ಅತ್ಯಂತ ಕಠಿಣ ತರಬೇತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ನೌಕಾಪಡೆಯ ಭಾಗವಾಗಲಿರುವ ಅತ್ಯಾಧುನಿಕ ಎಂಎಚ್-60 ಆರ್‌ ಹೆಲಿಕಾಪ್ಟರ್‌ಗಳನ್ನೂ ಈ ಮಹಿಳಾ ಅಧಿಕಾರಿಗಳು ನಿರ್ವಹಿಸಲಿದ್ದಾರೆ. ಕ್ಷಿಪಣಿ ಮತ್ತು ಟಾರ್ಪೆಡೊಗಳ ಮೂಲಕ ಶತ್ರುದೇಶದ ಯುದ್ಧನೌಕೆ, ಜಲಾಂತರ್ಗಾಮಿಗಳನ್ನೂ ನಾಶಪಡಿಸುವ ಸಾಮರ್ಥ್ಯ ಈ ಹೆಲಿಕಾಪ್ಟರ್‌ಗೆ ಇದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ 1,350 ಕೋಟಿ  ರೂ. ಆರ್ಥಿಕ ಪ್ಯಾಕೇಜ್ ಘೋಷಣೆ

ಇಬ್ಬರಿಗೂ ಕೊಚ್ಚಿಯಲ್ಲಿ ಐಎನ್‌ಎಸ್ ಗರುಡಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬ್ಸರ್ವರ್ಸ್​  ಆಗಿ ಗ್ರಾಜುಯೇಟ್ ಆಗಿದ್ದಕ್ಕೆ ವಿಂಗ್ಸ್ ನೀಡಿ ಅಭಿನಂದಿಸಲಾಗಿದೆ.

‘ನಮಗೆ ಪುರುಷ ಸಿಬ್ಬಂದಿಗೆ ಸರಿಸಮನಾದ, ಅತ್ಯಂತ ಕಠಿಣ ತರಬೇತಿ ಸಿಕ್ಕಿತ್ತು. ಎಂಥದ್ದೇ ಒತ್ತಡವನ್ನೂ ನಾವು ನಿಭಾಯಿಸಬಲ್ಲೆವು’ ಎಂದು ಈ ಮಹತ್ತರ ನಿಯೋಜನೆಯ ಭಾಗವಾಗಿರುವ ಸಬ್ ಲೆಫ್ಟಿನೆಂಟ್ ರಿತಿ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ನಮ್ಮನ್ನು ಇಲ್ಲಿ ಸಮಾನವಾಗಿ ಪರಿಗಣಿಸಲಾಗಿದೆ. ನಮ್ಮ ಪುರುಷ ಸಿಬ್ಬಂದಿ ಯಾವ ತರಬೇತಿಯನ್ನು ಪಡೆದರು, ನಾವು ಅದೇ ತರಬೇತಿ ಪಡೆದೆವು. ಇದು ಒಂದು ದೊಡ್ಡ ಜವಾಬ್ದಾರಿ, ಸವಾಲಿನ ಕೆಲಸ. ನಾವು ಅದನ್ನು ಎದುರು ನೋಡುತ್ತಿದ್ದೇವೆ “ಎಂದು ಗಾಜಿಯಾಬಾದ್ ಮೂಲದ ಸಬ್ ಲೆಫ್ಟಿನೆಂಟ್ ತ್ಯಾಗಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ: ಖಂಡಿಸಿ ‘#KisanVirodhiNarendraModi’ ಟ್ವೀಟಾಂದೋಲನ

ನೌಕಾಪಡೆ ಯುದ್ಧನೌಕೆಗೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ನೇಮಿಸಿದ್ದು, ಭಾರತೀಯ ಸೇನೆಯಲ್ಲಿ ಮಹಿಳೆಯರು ಪುರುಷರ ಸಮಾನವಾಗಿ ಕೆಲಸ ನಿರ್ವಹಿಸುವಂತಾಗುತ್ತಿದೆ.

ನೌಕಾಪಡೆಯಿಂದ ಇಬ್ಬರ ನಿಯೋಜನೆ ಹೊರಬಿದ್ದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಇಬ್ಬರಿಗೂ ಶುಭಕೋರಿದ್ದಾರೆ.


ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...