Homeಮುಖಪುಟನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ನೌಕಾಪಡೆಯ ಐತಿಹಾಸಿಕ ಕ್ರಮ: ಯುದ್ಧನೌಕೆಗೆ ಮಹಿಳಾ ‌ಅಧಿಕಾರಿಗಳ ನಿಯೋಜನೆ

ಇವರಿಬ್ಬರೂ ಅತ್ಯಂತ ಕಠಿಣ ತರಬೇತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ನೌಕಾಪಡೆಯ ಭಾಗವಾಗಲಿರುವ ಅತ್ಯಾಧುನಿಕ ಎಂಎಚ್-60 ಆರ್‌ ಹೆಲಿಕಾಪ್ಟರ್‌ಗಳನ್ನೂ ಈ ಮಹಿಳಾ ಅಧಿಕಾರಿಗಳು ನಿರ್ವಹಿಸಲಿದ್ದಾರೆ.

- Advertisement -
- Advertisement -

ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಇಬ್ಬರು ಮಹಿಳೆಯರನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆಗೆ ನಿಯೋಜನೆ ಮಾಡಲಾಗಿದೆ. ನೌಕಾಪಡೆಯ ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಮತ್ತು ಸಬ್ ಲೆಫ್ಟಿನೆಂಟ್ ರಿತಿ ಸಿಂಗ್‌ ಯುದ್ಧನೌಕೆಯ ಕರ್ತವ್ಯಕ್ಕೆ ನಿಯೋಜನೆಗೊಂಡ ಮೊಟ್ಟ ಮೊದಲ ಮಹಿಳೆಯರಾಗಿದ್ದಾರೆ.

ನೌಕಾಪಡೆಯಲ್ಲಿ ಹಲವು ಮಹಿಳಾ ಅಧಿಕಾರಿಗಳಿದ್ದರೂ ಸಹ ಯುದ್ಧನೌಕೆಯಲ್ಲಿ ಮಹಿಳೆಯರಿರಲಿಲ್ಲ. ಬಾತ್‌ರೂಂ ವ್ಯವಸ್ಥೆ, ಕ್ವಾರ್ಟರ್‌‌ಗಳಲ್ಲಿ ಖಾಸಗಿತನನದ ಕೊರತೆ ಇತ್ಯಾದಿ ಕಾರಣಗಳಿಂದ ಮಹಿಳೆಯರನ್ನು ಯುದ್ಧನೌಕೆಗೆ ನಿಯೋಜಿಸುತ್ತಿರಲಿಲ್ಲ. ಆದರೆ ನೌಕಾಪಡೆ ಇದೀಗ ಐತಿಹಾಸಿಕ ಕ್ರಮ ಕೈಗೊಂಡು ಇಬ್ಬರು ಮಹಿಳಾ ಅಧಿಕಾರಿಗಳನ್ನು ನಿಯೋಜಿಸಿದೆ.

ಇವರಿಬ್ಬರೂ ಅತ್ಯಂತ ಕಠಿಣ ತರಬೇತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ನೌಕಾಪಡೆಯ ಭಾಗವಾಗಲಿರುವ ಅತ್ಯಾಧುನಿಕ ಎಂಎಚ್-60 ಆರ್‌ ಹೆಲಿಕಾಪ್ಟರ್‌ಗಳನ್ನೂ ಈ ಮಹಿಳಾ ಅಧಿಕಾರಿಗಳು ನಿರ್ವಹಿಸಲಿದ್ದಾರೆ. ಕ್ಷಿಪಣಿ ಮತ್ತು ಟಾರ್ಪೆಡೊಗಳ ಮೂಲಕ ಶತ್ರುದೇಶದ ಯುದ್ಧನೌಕೆ, ಜಲಾಂತರ್ಗಾಮಿಗಳನ್ನೂ ನಾಶಪಡಿಸುವ ಸಾಮರ್ಥ್ಯ ಈ ಹೆಲಿಕಾಪ್ಟರ್‌ಗೆ ಇದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ 1,350 ಕೋಟಿ  ರೂ. ಆರ್ಥಿಕ ಪ್ಯಾಕೇಜ್ ಘೋಷಣೆ

ಇಬ್ಬರಿಗೂ ಕೊಚ್ಚಿಯಲ್ಲಿ ಐಎನ್‌ಎಸ್ ಗರುಡಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಬ್ಸರ್ವರ್ಸ್​  ಆಗಿ ಗ್ರಾಜುಯೇಟ್ ಆಗಿದ್ದಕ್ಕೆ ವಿಂಗ್ಸ್ ನೀಡಿ ಅಭಿನಂದಿಸಲಾಗಿದೆ.

‘ನಮಗೆ ಪುರುಷ ಸಿಬ್ಬಂದಿಗೆ ಸರಿಸಮನಾದ, ಅತ್ಯಂತ ಕಠಿಣ ತರಬೇತಿ ಸಿಕ್ಕಿತ್ತು. ಎಂಥದ್ದೇ ಒತ್ತಡವನ್ನೂ ನಾವು ನಿಭಾಯಿಸಬಲ್ಲೆವು’ ಎಂದು ಈ ಮಹತ್ತರ ನಿಯೋಜನೆಯ ಭಾಗವಾಗಿರುವ ಸಬ್ ಲೆಫ್ಟಿನೆಂಟ್ ರಿತಿ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ನಮ್ಮನ್ನು ಇಲ್ಲಿ ಸಮಾನವಾಗಿ ಪರಿಗಣಿಸಲಾಗಿದೆ. ನಮ್ಮ ಪುರುಷ ಸಿಬ್ಬಂದಿ ಯಾವ ತರಬೇತಿಯನ್ನು ಪಡೆದರು, ನಾವು ಅದೇ ತರಬೇತಿ ಪಡೆದೆವು. ಇದು ಒಂದು ದೊಡ್ಡ ಜವಾಬ್ದಾರಿ, ಸವಾಲಿನ ಕೆಲಸ. ನಾವು ಅದನ್ನು ಎದುರು ನೋಡುತ್ತಿದ್ದೇವೆ “ಎಂದು ಗಾಜಿಯಾಬಾದ್ ಮೂಲದ ಸಬ್ ಲೆಫ್ಟಿನೆಂಟ್ ತ್ಯಾಗಿ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗಿಕಾರ: ಖಂಡಿಸಿ ‘#KisanVirodhiNarendraModi’ ಟ್ವೀಟಾಂದೋಲನ

ನೌಕಾಪಡೆ ಯುದ್ಧನೌಕೆಗೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ನೇಮಿಸಿದ್ದು, ಭಾರತೀಯ ಸೇನೆಯಲ್ಲಿ ಮಹಿಳೆಯರು ಪುರುಷರ ಸಮಾನವಾಗಿ ಕೆಲಸ ನಿರ್ವಹಿಸುವಂತಾಗುತ್ತಿದೆ.

ನೌಕಾಪಡೆಯಿಂದ ಇಬ್ಬರ ನಿಯೋಜನೆ ಹೊರಬಿದ್ದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಮಂದಿ ಇಬ್ಬರಿಗೂ ಶುಭಕೋರಿದ್ದಾರೆ.


ಇದನ್ನೂ ಓದಿ: ಚೀನಾದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಾದರೆ, ಪಾಕಿಸ್ತಾನದೊಂದಿಗೆ ಯಾಕಿಲ್ಲ: ಫಾರೂಕ್ ಅಬ್ದುಲ್ಲಾ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...