Homeಕರ್ನಾಟಕಐತಿಹಾಸಿಕ ನಿರ್ಧಾರ:ಟ್ರಾನ್ಸ್‌ಜೆಂಡರ್‌ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆ

ಐತಿಹಾಸಿಕ ನಿರ್ಧಾರ:ಟ್ರಾನ್ಸ್‌ಜೆಂಡರ್‌ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆ

- Advertisement -
- Advertisement -

ಸ್ವಾಗತಾರ್ಹ ಮತ್ತು ಪ್ರಗತಿಪರ ನಡೆಯ ಮೊದಲ ಹೆಜ್ಜೆಯೊಂದನ್ನು ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ಇಟ್ಟಿದೆ. ಕೆಎಸ್‌ಆರ್‌ಪಿ ಮತ್ತು ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಗಳಲ್ಲಿ ವಿಶೇಷ ಮೀಸಲು ಸಬ್ ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆ ಮತ್ತು ‘ಟ್ರಾನ್ಸ್‌ಜೆಂಡರ್‌’ಗಳಿಂದ ಅರ್ಜಿಗಳನ್ನು ಇಲಾಖೆಯು ಆಹ್ವಾನಿಸಿದೆ.

ಸೋಮವಾರ ಹೊರಡಿಸಿದ ಅಧಿಸೂಚನೆಯು, ಕರ್ನಾಟಕದಲ್ಲಿ ಟ್ರಾನ್ಸ್‌ಜೆಂಡರ್‌‌ ಸಮುದಾಯದಿಂದ ಅರ್ಜಿಗಳನ್ನು ಆಹ್ವಾನಿಸಿದ ಮೊದಲ ಸರ್ಕಾರಿ ಇಲಾಖೆಯಾಗಿ ರಾಜ್ಯ ಪೊಲೀಸ್‌ ಇಲಾಖೆಯು ಹೊರಹೊಮ್ಮಿದೆ ಎಂದು ಮಾಧ್ಯಮಗಳು ಉಲ್ಲೇಖಿಸಿದೆ. 70 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 18 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ:ನೈತಿಕತೆ ಮತ್ತು ಪೊಲೀಸ್‌ಗಿರಿ ಕೂಡಿಕೊಂಡರೆ ಅದು ಅನೈತಿಕ ಮನಸ್ಥಿತಿಗಳ ವಿಕೃತಿ

ಈ ವರ್ಷ ಜುಲೈನಲ್ಲಿ ಕರ್ನಾಟಕ ಹೈಕೋರ್ಟ್‌ನ ಮಹತ್ವದ ನಿರ್ದೇಶನದ ನಂತರ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಸಾರ್ವಜನಿಕ ಉದ್ಯೋಗದಲ್ಲಿ ಉದ್ಯೋಗಗಳನ್ನು ಕಾಯ್ದಿರಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ.

ವಿಶೇಷ ಮೀಸಲು ಕಾನ್ಸ್‌ಟೇಬಲ್ ಪಡೆಯಲ್ಲಿ 2,467 ಹುದ್ದೆಗಳು ಖಾಲಿಯಾದ ನಂತರ, ನಗರ ಮೂಲದ ಎನ್‌ಜಿಒ ಮತ್ತು ಹಕ್ಕುಗಳ ಹೋರಾಟ ಗುಂಪಾದ ‘ಸಂಗಮ’ ಮತ್ತು ಹಿರಿಯ ವಕೀಲ ಬಿಟಿ ವೆಂಕಟೇಶ್ ಪ್ರತಿನಿಧಿಸುವ ಸಾಮಾಜಿಕ ಹೋರಾಟಗಾರ್ತಿ ನಿಶಾ ಗೂಳೂರ್ ಅವರು ಕಳೆದ ವರ್ಷ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ (ಪಿಐಎಲ್) ಪ್ರತಿಕ್ರಿಯೆಯಾಗಿ ಈ ತೀರ್ಪು ಹೊರಬಿದ್ದಿವೆ. “ಜುಲೈ 2021 ರಲ್ಲಿ ಹೈಕೋರ್ಟ್ ಎಲ್ಲಾ ವರ್ಗಗಳಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ 1% ದಷ್ಟು ಮೀಸಲಾತಿಯನ್ನು ಆದೇಶಿಸಿತು” ಎಂದು ವಕೀಲ ವೆಂಕಟೇಶ್ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

“ಇದು ಭಾರತದಲ್ಲೇ ಮೊದಲ ಹೆಜ್ಜೆಯಾಗಿದ್ದು, ಸರ್ಕಾರವು ತನ್ನ ನೇಮಕಾತಿಯಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಸಮಾನ ಸ್ಥಾನಮಾನವನ್ನು ಘೋಷಿಸಿದೆ. ಮೀಸಲಾತಿ ನೀಡುವಂತೆ ನ್ಯಾಯಾಲಯ ನೀಡಿರುವ ನಿರ್ದೇಶನ ಶ್ಲಾಘನೀಯ” ಎಂದು ವೆಂಕಟೇಶ್ ಹೇಳಿದ್ದಾರೆ.

ಈ ಮಧ್ಯೆ, ಟ್ರಾನ್ಸ್‌‌ಜೆಂಡರ್‌‌ ಸಮುದಾಯದಿಂದ ಅರ್ಜಿಗಳನ್ನು ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆಯ ನಡೆಯನ್ನು ಟ್ರಾನ್ಸ್‌‌ಜೆಂಡರ್‌‌‌ ಸಮುದಾಯಕ್ಕಾಗಿ ಕೆಲಸ ಮಾಡುತ್ತಿರುವ NGO ‘ಸಂಗಮ’ ಸ್ವಾಗತಿಸಿದೆ.

ಇದನ್ನೂ ಓದಿ:ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...