Homeಕರ್ನಾಟಕಐತಿಹಾಸಿಕ ನಿರ್ಧಾರ:ಟ್ರಾನ್ಸ್‌ಜೆಂಡರ್‌ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆ

ಐತಿಹಾಸಿಕ ನಿರ್ಧಾರ:ಟ್ರಾನ್ಸ್‌ಜೆಂಡರ್‌ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆ

- Advertisement -
- Advertisement -

ಸ್ವಾಗತಾರ್ಹ ಮತ್ತು ಪ್ರಗತಿಪರ ನಡೆಯ ಮೊದಲ ಹೆಜ್ಜೆಯೊಂದನ್ನು ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ಇಟ್ಟಿದೆ. ಕೆಎಸ್‌ಆರ್‌ಪಿ ಮತ್ತು ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಗಳಲ್ಲಿ ವಿಶೇಷ ಮೀಸಲು ಸಬ್ ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆ ಮತ್ತು ‘ಟ್ರಾನ್ಸ್‌ಜೆಂಡರ್‌’ಗಳಿಂದ ಅರ್ಜಿಗಳನ್ನು ಇಲಾಖೆಯು ಆಹ್ವಾನಿಸಿದೆ.

ಸೋಮವಾರ ಹೊರಡಿಸಿದ ಅಧಿಸೂಚನೆಯು, ಕರ್ನಾಟಕದಲ್ಲಿ ಟ್ರಾನ್ಸ್‌ಜೆಂಡರ್‌‌ ಸಮುದಾಯದಿಂದ ಅರ್ಜಿಗಳನ್ನು ಆಹ್ವಾನಿಸಿದ ಮೊದಲ ಸರ್ಕಾರಿ ಇಲಾಖೆಯಾಗಿ ರಾಜ್ಯ ಪೊಲೀಸ್‌ ಇಲಾಖೆಯು ಹೊರಹೊಮ್ಮಿದೆ ಎಂದು ಮಾಧ್ಯಮಗಳು ಉಲ್ಲೇಖಿಸಿದೆ. 70 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 18 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ:ನೈತಿಕತೆ ಮತ್ತು ಪೊಲೀಸ್‌ಗಿರಿ ಕೂಡಿಕೊಂಡರೆ ಅದು ಅನೈತಿಕ ಮನಸ್ಥಿತಿಗಳ ವಿಕೃತಿ

ಈ ವರ್ಷ ಜುಲೈನಲ್ಲಿ ಕರ್ನಾಟಕ ಹೈಕೋರ್ಟ್‌ನ ಮಹತ್ವದ ನಿರ್ದೇಶನದ ನಂತರ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಸಾರ್ವಜನಿಕ ಉದ್ಯೋಗದಲ್ಲಿ ಉದ್ಯೋಗಗಳನ್ನು ಕಾಯ್ದಿರಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ.

ವಿಶೇಷ ಮೀಸಲು ಕಾನ್ಸ್‌ಟೇಬಲ್ ಪಡೆಯಲ್ಲಿ 2,467 ಹುದ್ದೆಗಳು ಖಾಲಿಯಾದ ನಂತರ, ನಗರ ಮೂಲದ ಎನ್‌ಜಿಒ ಮತ್ತು ಹಕ್ಕುಗಳ ಹೋರಾಟ ಗುಂಪಾದ ‘ಸಂಗಮ’ ಮತ್ತು ಹಿರಿಯ ವಕೀಲ ಬಿಟಿ ವೆಂಕಟೇಶ್ ಪ್ರತಿನಿಧಿಸುವ ಸಾಮಾಜಿಕ ಹೋರಾಟಗಾರ್ತಿ ನಿಶಾ ಗೂಳೂರ್ ಅವರು ಕಳೆದ ವರ್ಷ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ (ಪಿಐಎಲ್) ಪ್ರತಿಕ್ರಿಯೆಯಾಗಿ ಈ ತೀರ್ಪು ಹೊರಬಿದ್ದಿವೆ. “ಜುಲೈ 2021 ರಲ್ಲಿ ಹೈಕೋರ್ಟ್ ಎಲ್ಲಾ ವರ್ಗಗಳಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ 1% ದಷ್ಟು ಮೀಸಲಾತಿಯನ್ನು ಆದೇಶಿಸಿತು” ಎಂದು ವಕೀಲ ವೆಂಕಟೇಶ್ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

“ಇದು ಭಾರತದಲ್ಲೇ ಮೊದಲ ಹೆಜ್ಜೆಯಾಗಿದ್ದು, ಸರ್ಕಾರವು ತನ್ನ ನೇಮಕಾತಿಯಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಸಮಾನ ಸ್ಥಾನಮಾನವನ್ನು ಘೋಷಿಸಿದೆ. ಮೀಸಲಾತಿ ನೀಡುವಂತೆ ನ್ಯಾಯಾಲಯ ನೀಡಿರುವ ನಿರ್ದೇಶನ ಶ್ಲಾಘನೀಯ” ಎಂದು ವೆಂಕಟೇಶ್ ಹೇಳಿದ್ದಾರೆ.

ಈ ಮಧ್ಯೆ, ಟ್ರಾನ್ಸ್‌‌ಜೆಂಡರ್‌‌ ಸಮುದಾಯದಿಂದ ಅರ್ಜಿಗಳನ್ನು ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆಯ ನಡೆಯನ್ನು ಟ್ರಾನ್ಸ್‌‌ಜೆಂಡರ್‌‌‌ ಸಮುದಾಯಕ್ಕಾಗಿ ಕೆಲಸ ಮಾಡುತ್ತಿರುವ NGO ‘ಸಂಗಮ’ ಸ್ವಾಗತಿಸಿದೆ.

ಇದನ್ನೂ ಓದಿ:ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...