Homeಕರ್ನಾಟಕಐತಿಹಾಸಿಕ ನಿರ್ಧಾರ:ಟ್ರಾನ್ಸ್‌ಜೆಂಡರ್‌ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆ

ಐತಿಹಾಸಿಕ ನಿರ್ಧಾರ:ಟ್ರಾನ್ಸ್‌ಜೆಂಡರ್‌ಗಳನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆ

- Advertisement -
- Advertisement -

ಸ್ವಾಗತಾರ್ಹ ಮತ್ತು ಪ್ರಗತಿಪರ ನಡೆಯ ಮೊದಲ ಹೆಜ್ಜೆಯೊಂದನ್ನು ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ಇಟ್ಟಿದೆ. ಕೆಎಸ್‌ಆರ್‌ಪಿ ಮತ್ತು ಇಂಡಿಯನ್ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಗಳಲ್ಲಿ ವಿಶೇಷ ಮೀಸಲು ಸಬ್ ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆ ಮತ್ತು ‘ಟ್ರಾನ್ಸ್‌ಜೆಂಡರ್‌’ಗಳಿಂದ ಅರ್ಜಿಗಳನ್ನು ಇಲಾಖೆಯು ಆಹ್ವಾನಿಸಿದೆ.

ಸೋಮವಾರ ಹೊರಡಿಸಿದ ಅಧಿಸೂಚನೆಯು, ಕರ್ನಾಟಕದಲ್ಲಿ ಟ್ರಾನ್ಸ್‌ಜೆಂಡರ್‌‌ ಸಮುದಾಯದಿಂದ ಅರ್ಜಿಗಳನ್ನು ಆಹ್ವಾನಿಸಿದ ಮೊದಲ ಸರ್ಕಾರಿ ಇಲಾಖೆಯಾಗಿ ರಾಜ್ಯ ಪೊಲೀಸ್‌ ಇಲಾಖೆಯು ಹೊರಹೊಮ್ಮಿದೆ ಎಂದು ಮಾಧ್ಯಮಗಳು ಉಲ್ಲೇಖಿಸಿದೆ. 70 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 18 ಕೊನೆಯ ದಿನಾಂಕವಾಗಿದೆ.

ಇದನ್ನೂ ಓದಿ:ನೈತಿಕತೆ ಮತ್ತು ಪೊಲೀಸ್‌ಗಿರಿ ಕೂಡಿಕೊಂಡರೆ ಅದು ಅನೈತಿಕ ಮನಸ್ಥಿತಿಗಳ ವಿಕೃತಿ

ಈ ವರ್ಷ ಜುಲೈನಲ್ಲಿ ಕರ್ನಾಟಕ ಹೈಕೋರ್ಟ್‌ನ ಮಹತ್ವದ ನಿರ್ದೇಶನದ ನಂತರ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಸಾರ್ವಜನಿಕ ಉದ್ಯೋಗದಲ್ಲಿ ಉದ್ಯೋಗಗಳನ್ನು ಕಾಯ್ದಿರಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ.

ವಿಶೇಷ ಮೀಸಲು ಕಾನ್ಸ್‌ಟೇಬಲ್ ಪಡೆಯಲ್ಲಿ 2,467 ಹುದ್ದೆಗಳು ಖಾಲಿಯಾದ ನಂತರ, ನಗರ ಮೂಲದ ಎನ್‌ಜಿಒ ಮತ್ತು ಹಕ್ಕುಗಳ ಹೋರಾಟ ಗುಂಪಾದ ‘ಸಂಗಮ’ ಮತ್ತು ಹಿರಿಯ ವಕೀಲ ಬಿಟಿ ವೆಂಕಟೇಶ್ ಪ್ರತಿನಿಧಿಸುವ ಸಾಮಾಜಿಕ ಹೋರಾಟಗಾರ್ತಿ ನಿಶಾ ಗೂಳೂರ್ ಅವರು ಕಳೆದ ವರ್ಷ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ (ಪಿಐಎಲ್) ಪ್ರತಿಕ್ರಿಯೆಯಾಗಿ ಈ ತೀರ್ಪು ಹೊರಬಿದ್ದಿವೆ. “ಜುಲೈ 2021 ರಲ್ಲಿ ಹೈಕೋರ್ಟ್ ಎಲ್ಲಾ ವರ್ಗಗಳಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ 1% ದಷ್ಟು ಮೀಸಲಾತಿಯನ್ನು ಆದೇಶಿಸಿತು” ಎಂದು ವಕೀಲ ವೆಂಕಟೇಶ್ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

“ಇದು ಭಾರತದಲ್ಲೇ ಮೊದಲ ಹೆಜ್ಜೆಯಾಗಿದ್ದು, ಸರ್ಕಾರವು ತನ್ನ ನೇಮಕಾತಿಯಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಸಮಾನ ಸ್ಥಾನಮಾನವನ್ನು ಘೋಷಿಸಿದೆ. ಮೀಸಲಾತಿ ನೀಡುವಂತೆ ನ್ಯಾಯಾಲಯ ನೀಡಿರುವ ನಿರ್ದೇಶನ ಶ್ಲಾಘನೀಯ” ಎಂದು ವೆಂಕಟೇಶ್ ಹೇಳಿದ್ದಾರೆ.

ಈ ಮಧ್ಯೆ, ಟ್ರಾನ್ಸ್‌‌ಜೆಂಡರ್‌‌ ಸಮುದಾಯದಿಂದ ಅರ್ಜಿಗಳನ್ನು ಆಹ್ವಾನಿಸಿದ ರಾಜ್ಯ ಪೊಲೀಸ್‌ ಇಲಾಖೆಯ ನಡೆಯನ್ನು ಟ್ರಾನ್ಸ್‌‌ಜೆಂಡರ್‌‌‌ ಸಮುದಾಯಕ್ಕಾಗಿ ಕೆಲಸ ಮಾಡುತ್ತಿರುವ NGO ‘ಸಂಗಮ’ ಸ್ವಾಗತಿಸಿದೆ.

ಇದನ್ನೂ ಓದಿ:ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...