Homeಮುಖಪುಟಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಪಂಜಾಬ್‌‌ನ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ.

- Advertisement -
- Advertisement -

ಪಂಜಾಬ್… ಕಳೆದ ಸೆಪ್ಟಂಬರ್‌ನಿಂದ ದೇಶ ವಿದೇಶಗಳ ಗಮನ ಸೆಳೆಯುತ್ತಿರುವ ರಾಜ್ಯ. ಒಕ್ಕೂಟ ಸರ್ಕಾರ ವಿವಾದಾತ್ಮ ಕೃಷಿ ಕಾನೂನುಗಳನ್ನು ಜಾರಿಗೊಳಿಸಿದ ದಿನದಿಂದ ಪಂಜಾಬ್‌ನಲ್ಲಿ ಶುರುವಾದ ಹೋರಾಟ ದೆಹಲಿ ಚಲೋ ಮೂಲಕ ದೇಶಾದ್ಯಂತ ಐದು ತಿಂಗಳಲ್ಲಿ ಆವರಿಸಿದೆ.

ಪಂಜಾಬ್, ಹರಿಯಾಣದ ಜನರು ದೆಹಲಿ ಚಲೋಗೆ ಕರೆಕೊಟ್ಟರು. ಇದು ಇಂದು ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕ, ಕೇರಳ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಿಗೆ ಪಸರಿಸಿದೆ. ದೆಹಲಿಯ ಗಡಿಗಳಲ್ಲಿ ಪಂಜಾಬಿನ ಜನರು ತಮ್ಮ ಹೊಸ ಗ್ರಾಮಗಳನ್ನು ಸೃಷ್ಟಿಸಿದ್ದಾರೆ. ಇಂತಹ ಜನರ ಪಂಜಾಬಿನಲ್ಲಿ ಹೋರಾಟ ಹೇಗಿದೆ ಎಂಬುದನ್ನು ತಿಳಿಯಲು ಗೌರಿ ಮೀಡಿಯಾ ತಂಡ ಪಂಜಾಬಿಗೆ ಭೇಟಿ ನೀಡಿತು.

ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್ ತಿಂಗಳಿನಿಂದಲೂ ವಿವಾದಿತ ಕಾನೂನುಗಳ ವಿರುದ್ದ ಪ್ರತಿಭಟನೆ ನಡೆಯುತ್ತಲೇ ಇದೆ. ರಾಜ್ಯದ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ. ರೈಲ್ ರೋಖೋ ಚಳುವಳಿ ಕೊಂಚ ಮಟ್ಟಿಗೆ ತಗ್ಗಿದ್ದು, ಈಗಲೂ ರೈಲ್ವೇ ಸ್ಟೇಷನ್‌‌ಗಳಲ್ಲಿ ಪ್ರತಿದಿನ ಪ್ರತಿಭಟನೆ ನಡೆಸಲಾಗುತ್ತಿದೆ.

ರೈತರಿಂದ ದೆಹಲಿ ಆಗ್ರಾ ರಸ್ತೆ ಬಂದ್ Photo Courtesy: The Hindu

ಇದನ್ನೂ ಓದಿ: ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಕಳೆದ 5 ತಿಂಗಳಿನಿಂದಲೂ ಒಂದು ದಿನವೂ ತಪ್ಪದೇ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರೈಲ್ವೇ ಸ್ಟೇಷನ್, ಮಾಲ್, ಟೋಲ್ ಪ್ಲಾಜಾಗಳ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳ ಜನರು ಹೋರಾಟದಲ್ಲಿ ಭಾಗವಹಿಸುತ್ತಾರೆ. 3 ಗಂಟೆ ನಂತರ ಮನಗಳಿಗೆ ತೆರಳುತ್ತಾರೆ. ಆದರೆ ಕೆಲ ರೈತರು ಇಲ್ಲೇ ಟ್ರ್ಯಾಲಿಗಳು, ಟೆಂಟ್‌‌ಗಳನ್ನು ಹಾಕಿಕೊಂಡು ಉಳಿದುಕೊಂಡಿದ್ದಾರೆ.

ನಮಗೆ ಪಂಜಾಬ್‌ಗೆ ಕಾಲಿಡುತ್ತಿದ್ದಂತೆ ಆರಂಭದಲ್ಲೇ ಸ್ವಾಗತಿಸಿದ್ದು ರೈತ ಹೋರಾಟವನ್ನು ಬೆಂಬಲಿಸುತ್ತಾ ಸರ್ಕಲ್‌‌‌ಗಳಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ ಯುವಜನರು. ಹಲವು ರಸ್ತೆಗಳು ಸೇರುವ ಪಟಿಯಾಲದ ಮುಖ್ಯ ವೃತ್ತದಲ್ಲಿ ಪ್ರತಿದಿನ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತದೆ.

ರಸ್ತೆಯಲ್ಲಿ ಓಡಾಡುವ ಪ್ರತಿ ವಾಹನದ ಮೇಲೂ ರೈತರ ಧ್ವಜಗಳು ವಿರಾಜಮಾನವಾಗಿವೆ. ಎಲ್ಲಾ ಅಂಗಡಿ ಮುಂಗಟ್ಟು, ಮನೆಗಳ ಮೇಲೆ ರೈತ ಹೋರಾಟದ ಘೋಷನೆಗಳು, ಧ್ವಜಗಳು ನಮ್ಮ ಕಣ್ಣು ಕುಕ್ಕುತ್ತಿದ್ದವು. ಎಕರೆಗಟ್ಟಲೆ ವಿಶಾಲವಾದ ಎಳೆಯ ಗೋದಿ ಹುಲ್ಲಿನ ಹಸಿರಿನ ಮಧ್ಯೆ ಅಲ್ಲಲ್ಲಿ ಕಾಣುವ ಮನೆಗಳು, ಮನೆಗಳ ಮೇಲೆ ಕಾಣುವ ರೈತ ಧ್ವಜಗಳು ಗಮನ ಸೆಳೆಯದೆ ಇರದೆ ಸಾಧ್ಯವೆ ಇಲ್ಲ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಬರ್ನಾಲಾ, ಲೂದಿಯಾನ ಜಿಲ್ಲೆಯಲ್ಲಿ ರಸ್ತೆ ತಡೆ ಚಳುವಳಿಗೆ ನಾವು ಸಾಕ್ಷಿಯಾದೆವು. ಬರ್ನಾಲಾದ ರೈಲು ನಿಲ್ದಾಣದಲ್ಲಿ ಸೇರುತ್ತಿದ್ದ ರೈತರು ಹೆದ್ದಾರಿ ತಡೆಗಾಗಿ ಇಂದು (ಫೆಬ್ರವರಿ 6) 5 ಭಾಗಗಳಾಗಿ ವಿಭಜನೆಗೊಂಡಿದ್ದರು. ಬರ್ನಾಲಾ ಮತ್ತು ಲೂದಿಯಾನ ಹೆದ್ದಾರಿಯಲ್ಲಿ 5 ಕಡೆ ಹೆದ್ದಾರಿ ತಡೆ ನಡೆಸಲಾಗಿತ್ತು. ಮೆಹಾಲ್ ಕಲಾನ್ ಟೋಲ್ ಪ್ಲಾಜಾ ಬಂದ್ ಮಾಡಿ ಸಾವಿರಾರು ಮಂದಿ ಸೇರಿದ್ದರು. ಲೂದಿಯಾನದ ಜಗ್ರೂನ್‌ನಲ್ಲಿ ನೂರಾರು ಮಂದಿ ಹಾಡುಗಳನ್ನು ಹಾಡುತ್ತಾ ಪ್ರತಿಭಟನೆ ನಡೆಸಿದರು.

ಪಂಜಾಬ್‌‌ನಲ್ಲಿ ನಾವು ಗಮನಿಸಿದ ಮತ್ತೊಂದು ವಿಚಾರ ಹಾರ್ನ್ ಮಾಡಿ ಬೆಂಬಲ ನೀಡಿ ಎನ್ನುವುದು. ರಸ್ತೆಗಳಲ್ಲಿ, ಹೆದ್ದಾರಿಯ ವೃತ್ತಗಳಲ್ಲಿ ಪ್ರತಿಭಟನೆ ನಡೆಸುವ ರೈತ ಹೋರಾಟಗಾರರು, ಪ್ರತಿಭಟನೆಗೆ ಬೆಂಬಲ ನೀಡಲು ಹಾರ್ನ್ ಮಾಡಿ ಎಂದು ಘೋಷಿಸುತ್ತಾರೆ. ಕೆಲವೊಂದು ಕಡೆ ಭಿತ್ತಿಪತ್ರ ಪ್ರದರ್ಶಿಸುತ್ತಾರೆ. ಈ ಅಭಿಯಾನಕ್ಕೆ ಜನರು ಉತ್ತಮ ಪ್ರತಿಕ್ರಿಯೆ ನೀಡುತ್ತಾರೆ. ಒಂದೇ ಸಮನೆ ಐದು ನಿಮಿಷಗಳವರೆಗೂ ಹಾರ್ನ್ ಮಾಡಲಾಗುತ್ತದೆ.

ಇನ್ನು ಪಂಜಾಬ್‌‌ನಿಂದ ದೆಹಲಿಯ ಗಡಿಗಳಿಗೆ, ದೆಹಲಿಯ ಗಡಿಗಳಿಂದ ಪಂಜಾಬಿಗೆ ಓಡಾಡುವ ಟ್ರ್ಯಾಕ್ಟರ್, ಟ್ರ್ಯಾಲಿ, ಕಾರುಗಳು ರಸ್ತೆಯುದ್ದಕ್ಕೂ ಕಾಣಿಸುತ್ತಲೇ ಇರುತ್ತವೆ. ರಸ್ತೆಗಳಲ್ಲಿ ಘೋಷಣೆಗಳು ಸಾಮಾನ್ಯವಾಗಿ ಕೇಳಿಸುತ್ತವೆ. ಇನ್ನೊಂದು ಮುಖ್ಯ ವಿಷಯವೆಂದರೆ ದೆಹಲಿ ಪೊಲೀಸರಂತೆ ಇಲ್ಲಿನ ಪೊಲೀಸರು ಅತಿಯಾಗಿ ವರ್ತಿಸುತ್ತಿಲ್ಲ!

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...