Homeಮುಖಪುಟಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಪಂಜಾಬ್‌‌ನ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ.

- Advertisement -
- Advertisement -

ಪಂಜಾಬ್… ಕಳೆದ ಸೆಪ್ಟಂಬರ್‌ನಿಂದ ದೇಶ ವಿದೇಶಗಳ ಗಮನ ಸೆಳೆಯುತ್ತಿರುವ ರಾಜ್ಯ. ಒಕ್ಕೂಟ ಸರ್ಕಾರ ವಿವಾದಾತ್ಮ ಕೃಷಿ ಕಾನೂನುಗಳನ್ನು ಜಾರಿಗೊಳಿಸಿದ ದಿನದಿಂದ ಪಂಜಾಬ್‌ನಲ್ಲಿ ಶುರುವಾದ ಹೋರಾಟ ದೆಹಲಿ ಚಲೋ ಮೂಲಕ ದೇಶಾದ್ಯಂತ ಐದು ತಿಂಗಳಲ್ಲಿ ಆವರಿಸಿದೆ.

ಪಂಜಾಬ್, ಹರಿಯಾಣದ ಜನರು ದೆಹಲಿ ಚಲೋಗೆ ಕರೆಕೊಟ್ಟರು. ಇದು ಇಂದು ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕ, ಕೇರಳ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಿಗೆ ಪಸರಿಸಿದೆ. ದೆಹಲಿಯ ಗಡಿಗಳಲ್ಲಿ ಪಂಜಾಬಿನ ಜನರು ತಮ್ಮ ಹೊಸ ಗ್ರಾಮಗಳನ್ನು ಸೃಷ್ಟಿಸಿದ್ದಾರೆ. ಇಂತಹ ಜನರ ಪಂಜಾಬಿನಲ್ಲಿ ಹೋರಾಟ ಹೇಗಿದೆ ಎಂಬುದನ್ನು ತಿಳಿಯಲು ಗೌರಿ ಮೀಡಿಯಾ ತಂಡ ಪಂಜಾಬಿಗೆ ಭೇಟಿ ನೀಡಿತು.

ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್ ತಿಂಗಳಿನಿಂದಲೂ ವಿವಾದಿತ ಕಾನೂನುಗಳ ವಿರುದ್ದ ಪ್ರತಿಭಟನೆ ನಡೆಯುತ್ತಲೇ ಇದೆ. ರಾಜ್ಯದ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ. ರೈಲ್ ರೋಖೋ ಚಳುವಳಿ ಕೊಂಚ ಮಟ್ಟಿಗೆ ತಗ್ಗಿದ್ದು, ಈಗಲೂ ರೈಲ್ವೇ ಸ್ಟೇಷನ್‌‌ಗಳಲ್ಲಿ ಪ್ರತಿದಿನ ಪ್ರತಿಭಟನೆ ನಡೆಸಲಾಗುತ್ತಿದೆ.

ರೈತರಿಂದ ದೆಹಲಿ ಆಗ್ರಾ ರಸ್ತೆ ಬಂದ್ Photo Courtesy: The Hindu

ಇದನ್ನೂ ಓದಿ: ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಕಳೆದ 5 ತಿಂಗಳಿನಿಂದಲೂ ಒಂದು ದಿನವೂ ತಪ್ಪದೇ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರೈಲ್ವೇ ಸ್ಟೇಷನ್, ಮಾಲ್, ಟೋಲ್ ಪ್ಲಾಜಾಗಳ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳ ಜನರು ಹೋರಾಟದಲ್ಲಿ ಭಾಗವಹಿಸುತ್ತಾರೆ. 3 ಗಂಟೆ ನಂತರ ಮನಗಳಿಗೆ ತೆರಳುತ್ತಾರೆ. ಆದರೆ ಕೆಲ ರೈತರು ಇಲ್ಲೇ ಟ್ರ್ಯಾಲಿಗಳು, ಟೆಂಟ್‌‌ಗಳನ್ನು ಹಾಕಿಕೊಂಡು ಉಳಿದುಕೊಂಡಿದ್ದಾರೆ.

ನಮಗೆ ಪಂಜಾಬ್‌ಗೆ ಕಾಲಿಡುತ್ತಿದ್ದಂತೆ ಆರಂಭದಲ್ಲೇ ಸ್ವಾಗತಿಸಿದ್ದು ರೈತ ಹೋರಾಟವನ್ನು ಬೆಂಬಲಿಸುತ್ತಾ ಸರ್ಕಲ್‌‌‌ಗಳಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ ಯುವಜನರು. ಹಲವು ರಸ್ತೆಗಳು ಸೇರುವ ಪಟಿಯಾಲದ ಮುಖ್ಯ ವೃತ್ತದಲ್ಲಿ ಪ್ರತಿದಿನ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತದೆ.

ರಸ್ತೆಯಲ್ಲಿ ಓಡಾಡುವ ಪ್ರತಿ ವಾಹನದ ಮೇಲೂ ರೈತರ ಧ್ವಜಗಳು ವಿರಾಜಮಾನವಾಗಿವೆ. ಎಲ್ಲಾ ಅಂಗಡಿ ಮುಂಗಟ್ಟು, ಮನೆಗಳ ಮೇಲೆ ರೈತ ಹೋರಾಟದ ಘೋಷನೆಗಳು, ಧ್ವಜಗಳು ನಮ್ಮ ಕಣ್ಣು ಕುಕ್ಕುತ್ತಿದ್ದವು. ಎಕರೆಗಟ್ಟಲೆ ವಿಶಾಲವಾದ ಎಳೆಯ ಗೋದಿ ಹುಲ್ಲಿನ ಹಸಿರಿನ ಮಧ್ಯೆ ಅಲ್ಲಲ್ಲಿ ಕಾಣುವ ಮನೆಗಳು, ಮನೆಗಳ ಮೇಲೆ ಕಾಣುವ ರೈತ ಧ್ವಜಗಳು ಗಮನ ಸೆಳೆಯದೆ ಇರದೆ ಸಾಧ್ಯವೆ ಇಲ್ಲ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಬರ್ನಾಲಾ, ಲೂದಿಯಾನ ಜಿಲ್ಲೆಯಲ್ಲಿ ರಸ್ತೆ ತಡೆ ಚಳುವಳಿಗೆ ನಾವು ಸಾಕ್ಷಿಯಾದೆವು. ಬರ್ನಾಲಾದ ರೈಲು ನಿಲ್ದಾಣದಲ್ಲಿ ಸೇರುತ್ತಿದ್ದ ರೈತರು ಹೆದ್ದಾರಿ ತಡೆಗಾಗಿ ಇಂದು (ಫೆಬ್ರವರಿ 6) 5 ಭಾಗಗಳಾಗಿ ವಿಭಜನೆಗೊಂಡಿದ್ದರು. ಬರ್ನಾಲಾ ಮತ್ತು ಲೂದಿಯಾನ ಹೆದ್ದಾರಿಯಲ್ಲಿ 5 ಕಡೆ ಹೆದ್ದಾರಿ ತಡೆ ನಡೆಸಲಾಗಿತ್ತು. ಮೆಹಾಲ್ ಕಲಾನ್ ಟೋಲ್ ಪ್ಲಾಜಾ ಬಂದ್ ಮಾಡಿ ಸಾವಿರಾರು ಮಂದಿ ಸೇರಿದ್ದರು. ಲೂದಿಯಾನದ ಜಗ್ರೂನ್‌ನಲ್ಲಿ ನೂರಾರು ಮಂದಿ ಹಾಡುಗಳನ್ನು ಹಾಡುತ್ತಾ ಪ್ರತಿಭಟನೆ ನಡೆಸಿದರು.

ಪಂಜಾಬ್‌‌ನಲ್ಲಿ ನಾವು ಗಮನಿಸಿದ ಮತ್ತೊಂದು ವಿಚಾರ ಹಾರ್ನ್ ಮಾಡಿ ಬೆಂಬಲ ನೀಡಿ ಎನ್ನುವುದು. ರಸ್ತೆಗಳಲ್ಲಿ, ಹೆದ್ದಾರಿಯ ವೃತ್ತಗಳಲ್ಲಿ ಪ್ರತಿಭಟನೆ ನಡೆಸುವ ರೈತ ಹೋರಾಟಗಾರರು, ಪ್ರತಿಭಟನೆಗೆ ಬೆಂಬಲ ನೀಡಲು ಹಾರ್ನ್ ಮಾಡಿ ಎಂದು ಘೋಷಿಸುತ್ತಾರೆ. ಕೆಲವೊಂದು ಕಡೆ ಭಿತ್ತಿಪತ್ರ ಪ್ರದರ್ಶಿಸುತ್ತಾರೆ. ಈ ಅಭಿಯಾನಕ್ಕೆ ಜನರು ಉತ್ತಮ ಪ್ರತಿಕ್ರಿಯೆ ನೀಡುತ್ತಾರೆ. ಒಂದೇ ಸಮನೆ ಐದು ನಿಮಿಷಗಳವರೆಗೂ ಹಾರ್ನ್ ಮಾಡಲಾಗುತ್ತದೆ.

ಇನ್ನು ಪಂಜಾಬ್‌‌ನಿಂದ ದೆಹಲಿಯ ಗಡಿಗಳಿಗೆ, ದೆಹಲಿಯ ಗಡಿಗಳಿಂದ ಪಂಜಾಬಿಗೆ ಓಡಾಡುವ ಟ್ರ್ಯಾಕ್ಟರ್, ಟ್ರ್ಯಾಲಿ, ಕಾರುಗಳು ರಸ್ತೆಯುದ್ದಕ್ಕೂ ಕಾಣಿಸುತ್ತಲೇ ಇರುತ್ತವೆ. ರಸ್ತೆಗಳಲ್ಲಿ ಘೋಷಣೆಗಳು ಸಾಮಾನ್ಯವಾಗಿ ಕೇಳಿಸುತ್ತವೆ. ಇನ್ನೊಂದು ಮುಖ್ಯ ವಿಷಯವೆಂದರೆ ದೆಹಲಿ ಪೊಲೀಸರಂತೆ ಇಲ್ಲಿನ ಪೊಲೀಸರು ಅತಿಯಾಗಿ ವರ್ತಿಸುತ್ತಿಲ್ಲ!

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...