Homeಮುಖಪುಟಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಪಂಜಾಬ್‌‌ನ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ.

- Advertisement -
- Advertisement -

ಪಂಜಾಬ್… ಕಳೆದ ಸೆಪ್ಟಂಬರ್‌ನಿಂದ ದೇಶ ವಿದೇಶಗಳ ಗಮನ ಸೆಳೆಯುತ್ತಿರುವ ರಾಜ್ಯ. ಒಕ್ಕೂಟ ಸರ್ಕಾರ ವಿವಾದಾತ್ಮ ಕೃಷಿ ಕಾನೂನುಗಳನ್ನು ಜಾರಿಗೊಳಿಸಿದ ದಿನದಿಂದ ಪಂಜಾಬ್‌ನಲ್ಲಿ ಶುರುವಾದ ಹೋರಾಟ ದೆಹಲಿ ಚಲೋ ಮೂಲಕ ದೇಶಾದ್ಯಂತ ಐದು ತಿಂಗಳಲ್ಲಿ ಆವರಿಸಿದೆ.

ಪಂಜಾಬ್, ಹರಿಯಾಣದ ಜನರು ದೆಹಲಿ ಚಲೋಗೆ ಕರೆಕೊಟ್ಟರು. ಇದು ಇಂದು ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕ, ಕೇರಳ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಿಗೆ ಪಸರಿಸಿದೆ. ದೆಹಲಿಯ ಗಡಿಗಳಲ್ಲಿ ಪಂಜಾಬಿನ ಜನರು ತಮ್ಮ ಹೊಸ ಗ್ರಾಮಗಳನ್ನು ಸೃಷ್ಟಿಸಿದ್ದಾರೆ. ಇಂತಹ ಜನರ ಪಂಜಾಬಿನಲ್ಲಿ ಹೋರಾಟ ಹೇಗಿದೆ ಎಂಬುದನ್ನು ತಿಳಿಯಲು ಗೌರಿ ಮೀಡಿಯಾ ತಂಡ ಪಂಜಾಬಿಗೆ ಭೇಟಿ ನೀಡಿತು.

ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್ ತಿಂಗಳಿನಿಂದಲೂ ವಿವಾದಿತ ಕಾನೂನುಗಳ ವಿರುದ್ದ ಪ್ರತಿಭಟನೆ ನಡೆಯುತ್ತಲೇ ಇದೆ. ರಾಜ್ಯದ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ. ರೈಲ್ ರೋಖೋ ಚಳುವಳಿ ಕೊಂಚ ಮಟ್ಟಿಗೆ ತಗ್ಗಿದ್ದು, ಈಗಲೂ ರೈಲ್ವೇ ಸ್ಟೇಷನ್‌‌ಗಳಲ್ಲಿ ಪ್ರತಿದಿನ ಪ್ರತಿಭಟನೆ ನಡೆಸಲಾಗುತ್ತಿದೆ.

ರೈತರಿಂದ ದೆಹಲಿ ಆಗ್ರಾ ರಸ್ತೆ ಬಂದ್ Photo Courtesy: The Hindu

ಇದನ್ನೂ ಓದಿ: ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಕಳೆದ 5 ತಿಂಗಳಿನಿಂದಲೂ ಒಂದು ದಿನವೂ ತಪ್ಪದೇ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರೈಲ್ವೇ ಸ್ಟೇಷನ್, ಮಾಲ್, ಟೋಲ್ ಪ್ಲಾಜಾಗಳ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳ ಜನರು ಹೋರಾಟದಲ್ಲಿ ಭಾಗವಹಿಸುತ್ತಾರೆ. 3 ಗಂಟೆ ನಂತರ ಮನಗಳಿಗೆ ತೆರಳುತ್ತಾರೆ. ಆದರೆ ಕೆಲ ರೈತರು ಇಲ್ಲೇ ಟ್ರ್ಯಾಲಿಗಳು, ಟೆಂಟ್‌‌ಗಳನ್ನು ಹಾಕಿಕೊಂಡು ಉಳಿದುಕೊಂಡಿದ್ದಾರೆ.

ನಮಗೆ ಪಂಜಾಬ್‌ಗೆ ಕಾಲಿಡುತ್ತಿದ್ದಂತೆ ಆರಂಭದಲ್ಲೇ ಸ್ವಾಗತಿಸಿದ್ದು ರೈತ ಹೋರಾಟವನ್ನು ಬೆಂಬಲಿಸುತ್ತಾ ಸರ್ಕಲ್‌‌‌ಗಳಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ ಯುವಜನರು. ಹಲವು ರಸ್ತೆಗಳು ಸೇರುವ ಪಟಿಯಾಲದ ಮುಖ್ಯ ವೃತ್ತದಲ್ಲಿ ಪ್ರತಿದಿನ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತದೆ.

ರಸ್ತೆಯಲ್ಲಿ ಓಡಾಡುವ ಪ್ರತಿ ವಾಹನದ ಮೇಲೂ ರೈತರ ಧ್ವಜಗಳು ವಿರಾಜಮಾನವಾಗಿವೆ. ಎಲ್ಲಾ ಅಂಗಡಿ ಮುಂಗಟ್ಟು, ಮನೆಗಳ ಮೇಲೆ ರೈತ ಹೋರಾಟದ ಘೋಷನೆಗಳು, ಧ್ವಜಗಳು ನಮ್ಮ ಕಣ್ಣು ಕುಕ್ಕುತ್ತಿದ್ದವು. ಎಕರೆಗಟ್ಟಲೆ ವಿಶಾಲವಾದ ಎಳೆಯ ಗೋದಿ ಹುಲ್ಲಿನ ಹಸಿರಿನ ಮಧ್ಯೆ ಅಲ್ಲಲ್ಲಿ ಕಾಣುವ ಮನೆಗಳು, ಮನೆಗಳ ಮೇಲೆ ಕಾಣುವ ರೈತ ಧ್ವಜಗಳು ಗಮನ ಸೆಳೆಯದೆ ಇರದೆ ಸಾಧ್ಯವೆ ಇಲ್ಲ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಬರ್ನಾಲಾ, ಲೂದಿಯಾನ ಜಿಲ್ಲೆಯಲ್ಲಿ ರಸ್ತೆ ತಡೆ ಚಳುವಳಿಗೆ ನಾವು ಸಾಕ್ಷಿಯಾದೆವು. ಬರ್ನಾಲಾದ ರೈಲು ನಿಲ್ದಾಣದಲ್ಲಿ ಸೇರುತ್ತಿದ್ದ ರೈತರು ಹೆದ್ದಾರಿ ತಡೆಗಾಗಿ ಇಂದು (ಫೆಬ್ರವರಿ 6) 5 ಭಾಗಗಳಾಗಿ ವಿಭಜನೆಗೊಂಡಿದ್ದರು. ಬರ್ನಾಲಾ ಮತ್ತು ಲೂದಿಯಾನ ಹೆದ್ದಾರಿಯಲ್ಲಿ 5 ಕಡೆ ಹೆದ್ದಾರಿ ತಡೆ ನಡೆಸಲಾಗಿತ್ತು. ಮೆಹಾಲ್ ಕಲಾನ್ ಟೋಲ್ ಪ್ಲಾಜಾ ಬಂದ್ ಮಾಡಿ ಸಾವಿರಾರು ಮಂದಿ ಸೇರಿದ್ದರು. ಲೂದಿಯಾನದ ಜಗ್ರೂನ್‌ನಲ್ಲಿ ನೂರಾರು ಮಂದಿ ಹಾಡುಗಳನ್ನು ಹಾಡುತ್ತಾ ಪ್ರತಿಭಟನೆ ನಡೆಸಿದರು.

ಪಂಜಾಬ್‌‌ನಲ್ಲಿ ನಾವು ಗಮನಿಸಿದ ಮತ್ತೊಂದು ವಿಚಾರ ಹಾರ್ನ್ ಮಾಡಿ ಬೆಂಬಲ ನೀಡಿ ಎನ್ನುವುದು. ರಸ್ತೆಗಳಲ್ಲಿ, ಹೆದ್ದಾರಿಯ ವೃತ್ತಗಳಲ್ಲಿ ಪ್ರತಿಭಟನೆ ನಡೆಸುವ ರೈತ ಹೋರಾಟಗಾರರು, ಪ್ರತಿಭಟನೆಗೆ ಬೆಂಬಲ ನೀಡಲು ಹಾರ್ನ್ ಮಾಡಿ ಎಂದು ಘೋಷಿಸುತ್ತಾರೆ. ಕೆಲವೊಂದು ಕಡೆ ಭಿತ್ತಿಪತ್ರ ಪ್ರದರ್ಶಿಸುತ್ತಾರೆ. ಈ ಅಭಿಯಾನಕ್ಕೆ ಜನರು ಉತ್ತಮ ಪ್ರತಿಕ್ರಿಯೆ ನೀಡುತ್ತಾರೆ. ಒಂದೇ ಸಮನೆ ಐದು ನಿಮಿಷಗಳವರೆಗೂ ಹಾರ್ನ್ ಮಾಡಲಾಗುತ್ತದೆ.

ಇನ್ನು ಪಂಜಾಬ್‌‌ನಿಂದ ದೆಹಲಿಯ ಗಡಿಗಳಿಗೆ, ದೆಹಲಿಯ ಗಡಿಗಳಿಂದ ಪಂಜಾಬಿಗೆ ಓಡಾಡುವ ಟ್ರ್ಯಾಕ್ಟರ್, ಟ್ರ್ಯಾಲಿ, ಕಾರುಗಳು ರಸ್ತೆಯುದ್ದಕ್ಕೂ ಕಾಣಿಸುತ್ತಲೇ ಇರುತ್ತವೆ. ರಸ್ತೆಗಳಲ್ಲಿ ಘೋಷಣೆಗಳು ಸಾಮಾನ್ಯವಾಗಿ ಕೇಳಿಸುತ್ತವೆ. ಇನ್ನೊಂದು ಮುಖ್ಯ ವಿಷಯವೆಂದರೆ ದೆಹಲಿ ಪೊಲೀಸರಂತೆ ಇಲ್ಲಿನ ಪೊಲೀಸರು ಅತಿಯಾಗಿ ವರ್ತಿಸುತ್ತಿಲ್ಲ!

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...