Homeಮುಖಪುಟಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಪಂಜಾಬ್‌‌ನ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ.

- Advertisement -
- Advertisement -

ಪಂಜಾಬ್… ಕಳೆದ ಸೆಪ್ಟಂಬರ್‌ನಿಂದ ದೇಶ ವಿದೇಶಗಳ ಗಮನ ಸೆಳೆಯುತ್ತಿರುವ ರಾಜ್ಯ. ಒಕ್ಕೂಟ ಸರ್ಕಾರ ವಿವಾದಾತ್ಮ ಕೃಷಿ ಕಾನೂನುಗಳನ್ನು ಜಾರಿಗೊಳಿಸಿದ ದಿನದಿಂದ ಪಂಜಾಬ್‌ನಲ್ಲಿ ಶುರುವಾದ ಹೋರಾಟ ದೆಹಲಿ ಚಲೋ ಮೂಲಕ ದೇಶಾದ್ಯಂತ ಐದು ತಿಂಗಳಲ್ಲಿ ಆವರಿಸಿದೆ.

ಪಂಜಾಬ್, ಹರಿಯಾಣದ ಜನರು ದೆಹಲಿ ಚಲೋಗೆ ಕರೆಕೊಟ್ಟರು. ಇದು ಇಂದು ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕ, ಕೇರಳ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಿಗೆ ಪಸರಿಸಿದೆ. ದೆಹಲಿಯ ಗಡಿಗಳಲ್ಲಿ ಪಂಜಾಬಿನ ಜನರು ತಮ್ಮ ಹೊಸ ಗ್ರಾಮಗಳನ್ನು ಸೃಷ್ಟಿಸಿದ್ದಾರೆ. ಇಂತಹ ಜನರ ಪಂಜಾಬಿನಲ್ಲಿ ಹೋರಾಟ ಹೇಗಿದೆ ಎಂಬುದನ್ನು ತಿಳಿಯಲು ಗೌರಿ ಮೀಡಿಯಾ ತಂಡ ಪಂಜಾಬಿಗೆ ಭೇಟಿ ನೀಡಿತು.

ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್ ತಿಂಗಳಿನಿಂದಲೂ ವಿವಾದಿತ ಕಾನೂನುಗಳ ವಿರುದ್ದ ಪ್ರತಿಭಟನೆ ನಡೆಯುತ್ತಲೇ ಇದೆ. ರಾಜ್ಯದ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ. ರೈಲ್ ರೋಖೋ ಚಳುವಳಿ ಕೊಂಚ ಮಟ್ಟಿಗೆ ತಗ್ಗಿದ್ದು, ಈಗಲೂ ರೈಲ್ವೇ ಸ್ಟೇಷನ್‌‌ಗಳಲ್ಲಿ ಪ್ರತಿದಿನ ಪ್ರತಿಭಟನೆ ನಡೆಸಲಾಗುತ್ತಿದೆ.

ರೈತರಿಂದ ದೆಹಲಿ ಆಗ್ರಾ ರಸ್ತೆ ಬಂದ್ Photo Courtesy: The Hindu

ಇದನ್ನೂ ಓದಿ: ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಕಳೆದ 5 ತಿಂಗಳಿನಿಂದಲೂ ಒಂದು ದಿನವೂ ತಪ್ಪದೇ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರೈಲ್ವೇ ಸ್ಟೇಷನ್, ಮಾಲ್, ಟೋಲ್ ಪ್ಲಾಜಾಗಳ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳ ಜನರು ಹೋರಾಟದಲ್ಲಿ ಭಾಗವಹಿಸುತ್ತಾರೆ. 3 ಗಂಟೆ ನಂತರ ಮನಗಳಿಗೆ ತೆರಳುತ್ತಾರೆ. ಆದರೆ ಕೆಲ ರೈತರು ಇಲ್ಲೇ ಟ್ರ್ಯಾಲಿಗಳು, ಟೆಂಟ್‌‌ಗಳನ್ನು ಹಾಕಿಕೊಂಡು ಉಳಿದುಕೊಂಡಿದ್ದಾರೆ.

ನಮಗೆ ಪಂಜಾಬ್‌ಗೆ ಕಾಲಿಡುತ್ತಿದ್ದಂತೆ ಆರಂಭದಲ್ಲೇ ಸ್ವಾಗತಿಸಿದ್ದು ರೈತ ಹೋರಾಟವನ್ನು ಬೆಂಬಲಿಸುತ್ತಾ ಸರ್ಕಲ್‌‌‌ಗಳಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ ಯುವಜನರು. ಹಲವು ರಸ್ತೆಗಳು ಸೇರುವ ಪಟಿಯಾಲದ ಮುಖ್ಯ ವೃತ್ತದಲ್ಲಿ ಪ್ರತಿದಿನ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತದೆ.

ರಸ್ತೆಯಲ್ಲಿ ಓಡಾಡುವ ಪ್ರತಿ ವಾಹನದ ಮೇಲೂ ರೈತರ ಧ್ವಜಗಳು ವಿರಾಜಮಾನವಾಗಿವೆ. ಎಲ್ಲಾ ಅಂಗಡಿ ಮುಂಗಟ್ಟು, ಮನೆಗಳ ಮೇಲೆ ರೈತ ಹೋರಾಟದ ಘೋಷನೆಗಳು, ಧ್ವಜಗಳು ನಮ್ಮ ಕಣ್ಣು ಕುಕ್ಕುತ್ತಿದ್ದವು. ಎಕರೆಗಟ್ಟಲೆ ವಿಶಾಲವಾದ ಎಳೆಯ ಗೋದಿ ಹುಲ್ಲಿನ ಹಸಿರಿನ ಮಧ್ಯೆ ಅಲ್ಲಲ್ಲಿ ಕಾಣುವ ಮನೆಗಳು, ಮನೆಗಳ ಮೇಲೆ ಕಾಣುವ ರೈತ ಧ್ವಜಗಳು ಗಮನ ಸೆಳೆಯದೆ ಇರದೆ ಸಾಧ್ಯವೆ ಇಲ್ಲ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಬರ್ನಾಲಾ, ಲೂದಿಯಾನ ಜಿಲ್ಲೆಯಲ್ಲಿ ರಸ್ತೆ ತಡೆ ಚಳುವಳಿಗೆ ನಾವು ಸಾಕ್ಷಿಯಾದೆವು. ಬರ್ನಾಲಾದ ರೈಲು ನಿಲ್ದಾಣದಲ್ಲಿ ಸೇರುತ್ತಿದ್ದ ರೈತರು ಹೆದ್ದಾರಿ ತಡೆಗಾಗಿ ಇಂದು (ಫೆಬ್ರವರಿ 6) 5 ಭಾಗಗಳಾಗಿ ವಿಭಜನೆಗೊಂಡಿದ್ದರು. ಬರ್ನಾಲಾ ಮತ್ತು ಲೂದಿಯಾನ ಹೆದ್ದಾರಿಯಲ್ಲಿ 5 ಕಡೆ ಹೆದ್ದಾರಿ ತಡೆ ನಡೆಸಲಾಗಿತ್ತು. ಮೆಹಾಲ್ ಕಲಾನ್ ಟೋಲ್ ಪ್ಲಾಜಾ ಬಂದ್ ಮಾಡಿ ಸಾವಿರಾರು ಮಂದಿ ಸೇರಿದ್ದರು. ಲೂದಿಯಾನದ ಜಗ್ರೂನ್‌ನಲ್ಲಿ ನೂರಾರು ಮಂದಿ ಹಾಡುಗಳನ್ನು ಹಾಡುತ್ತಾ ಪ್ರತಿಭಟನೆ ನಡೆಸಿದರು.

ಪಂಜಾಬ್‌‌ನಲ್ಲಿ ನಾವು ಗಮನಿಸಿದ ಮತ್ತೊಂದು ವಿಚಾರ ಹಾರ್ನ್ ಮಾಡಿ ಬೆಂಬಲ ನೀಡಿ ಎನ್ನುವುದು. ರಸ್ತೆಗಳಲ್ಲಿ, ಹೆದ್ದಾರಿಯ ವೃತ್ತಗಳಲ್ಲಿ ಪ್ರತಿಭಟನೆ ನಡೆಸುವ ರೈತ ಹೋರಾಟಗಾರರು, ಪ್ರತಿಭಟನೆಗೆ ಬೆಂಬಲ ನೀಡಲು ಹಾರ್ನ್ ಮಾಡಿ ಎಂದು ಘೋಷಿಸುತ್ತಾರೆ. ಕೆಲವೊಂದು ಕಡೆ ಭಿತ್ತಿಪತ್ರ ಪ್ರದರ್ಶಿಸುತ್ತಾರೆ. ಈ ಅಭಿಯಾನಕ್ಕೆ ಜನರು ಉತ್ತಮ ಪ್ರತಿಕ್ರಿಯೆ ನೀಡುತ್ತಾರೆ. ಒಂದೇ ಸಮನೆ ಐದು ನಿಮಿಷಗಳವರೆಗೂ ಹಾರ್ನ್ ಮಾಡಲಾಗುತ್ತದೆ.

ಇನ್ನು ಪಂಜಾಬ್‌‌ನಿಂದ ದೆಹಲಿಯ ಗಡಿಗಳಿಗೆ, ದೆಹಲಿಯ ಗಡಿಗಳಿಂದ ಪಂಜಾಬಿಗೆ ಓಡಾಡುವ ಟ್ರ್ಯಾಕ್ಟರ್, ಟ್ರ್ಯಾಲಿ, ಕಾರುಗಳು ರಸ್ತೆಯುದ್ದಕ್ಕೂ ಕಾಣಿಸುತ್ತಲೇ ಇರುತ್ತವೆ. ರಸ್ತೆಗಳಲ್ಲಿ ಘೋಷಣೆಗಳು ಸಾಮಾನ್ಯವಾಗಿ ಕೇಳಿಸುತ್ತವೆ. ಇನ್ನೊಂದು ಮುಖ್ಯ ವಿಷಯವೆಂದರೆ ದೆಹಲಿ ಪೊಲೀಸರಂತೆ ಇಲ್ಲಿನ ಪೊಲೀಸರು ಅತಿಯಾಗಿ ವರ್ತಿಸುತ್ತಿಲ್ಲ!

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...