Homeಮುಖಪುಟಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಪಂಜಾಬ್‌‌ನ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ.

- Advertisement -
- Advertisement -

ಪಂಜಾಬ್… ಕಳೆದ ಸೆಪ್ಟಂಬರ್‌ನಿಂದ ದೇಶ ವಿದೇಶಗಳ ಗಮನ ಸೆಳೆಯುತ್ತಿರುವ ರಾಜ್ಯ. ಒಕ್ಕೂಟ ಸರ್ಕಾರ ವಿವಾದಾತ್ಮ ಕೃಷಿ ಕಾನೂನುಗಳನ್ನು ಜಾರಿಗೊಳಿಸಿದ ದಿನದಿಂದ ಪಂಜಾಬ್‌ನಲ್ಲಿ ಶುರುವಾದ ಹೋರಾಟ ದೆಹಲಿ ಚಲೋ ಮೂಲಕ ದೇಶಾದ್ಯಂತ ಐದು ತಿಂಗಳಲ್ಲಿ ಆವರಿಸಿದೆ.

ಪಂಜಾಬ್, ಹರಿಯಾಣದ ಜನರು ದೆಹಲಿ ಚಲೋಗೆ ಕರೆಕೊಟ್ಟರು. ಇದು ಇಂದು ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕ, ಕೇರಳ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಿಗೆ ಪಸರಿಸಿದೆ. ದೆಹಲಿಯ ಗಡಿಗಳಲ್ಲಿ ಪಂಜಾಬಿನ ಜನರು ತಮ್ಮ ಹೊಸ ಗ್ರಾಮಗಳನ್ನು ಸೃಷ್ಟಿಸಿದ್ದಾರೆ. ಇಂತಹ ಜನರ ಪಂಜಾಬಿನಲ್ಲಿ ಹೋರಾಟ ಹೇಗಿದೆ ಎಂಬುದನ್ನು ತಿಳಿಯಲು ಗೌರಿ ಮೀಡಿಯಾ ತಂಡ ಪಂಜಾಬಿಗೆ ಭೇಟಿ ನೀಡಿತು.

ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್ ತಿಂಗಳಿನಿಂದಲೂ ವಿವಾದಿತ ಕಾನೂನುಗಳ ವಿರುದ್ದ ಪ್ರತಿಭಟನೆ ನಡೆಯುತ್ತಲೇ ಇದೆ. ರಾಜ್ಯದ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ. ರೈಲ್ ರೋಖೋ ಚಳುವಳಿ ಕೊಂಚ ಮಟ್ಟಿಗೆ ತಗ್ಗಿದ್ದು, ಈಗಲೂ ರೈಲ್ವೇ ಸ್ಟೇಷನ್‌‌ಗಳಲ್ಲಿ ಪ್ರತಿದಿನ ಪ್ರತಿಭಟನೆ ನಡೆಸಲಾಗುತ್ತಿದೆ.

ರೈತರಿಂದ ದೆಹಲಿ ಆಗ್ರಾ ರಸ್ತೆ ಬಂದ್ Photo Courtesy: The Hindu

ಇದನ್ನೂ ಓದಿ: ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಕಳೆದ 5 ತಿಂಗಳಿನಿಂದಲೂ ಒಂದು ದಿನವೂ ತಪ್ಪದೇ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರೈಲ್ವೇ ಸ್ಟೇಷನ್, ಮಾಲ್, ಟೋಲ್ ಪ್ಲಾಜಾಗಳ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳ ಜನರು ಹೋರಾಟದಲ್ಲಿ ಭಾಗವಹಿಸುತ್ತಾರೆ. 3 ಗಂಟೆ ನಂತರ ಮನಗಳಿಗೆ ತೆರಳುತ್ತಾರೆ. ಆದರೆ ಕೆಲ ರೈತರು ಇಲ್ಲೇ ಟ್ರ್ಯಾಲಿಗಳು, ಟೆಂಟ್‌‌ಗಳನ್ನು ಹಾಕಿಕೊಂಡು ಉಳಿದುಕೊಂಡಿದ್ದಾರೆ.

ನಮಗೆ ಪಂಜಾಬ್‌ಗೆ ಕಾಲಿಡುತ್ತಿದ್ದಂತೆ ಆರಂಭದಲ್ಲೇ ಸ್ವಾಗತಿಸಿದ್ದು ರೈತ ಹೋರಾಟವನ್ನು ಬೆಂಬಲಿಸುತ್ತಾ ಸರ್ಕಲ್‌‌‌ಗಳಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ ಯುವಜನರು. ಹಲವು ರಸ್ತೆಗಳು ಸೇರುವ ಪಟಿಯಾಲದ ಮುಖ್ಯ ವೃತ್ತದಲ್ಲಿ ಪ್ರತಿದಿನ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತದೆ.

ರಸ್ತೆಯಲ್ಲಿ ಓಡಾಡುವ ಪ್ರತಿ ವಾಹನದ ಮೇಲೂ ರೈತರ ಧ್ವಜಗಳು ವಿರಾಜಮಾನವಾಗಿವೆ. ಎಲ್ಲಾ ಅಂಗಡಿ ಮುಂಗಟ್ಟು, ಮನೆಗಳ ಮೇಲೆ ರೈತ ಹೋರಾಟದ ಘೋಷನೆಗಳು, ಧ್ವಜಗಳು ನಮ್ಮ ಕಣ್ಣು ಕುಕ್ಕುತ್ತಿದ್ದವು. ಎಕರೆಗಟ್ಟಲೆ ವಿಶಾಲವಾದ ಎಳೆಯ ಗೋದಿ ಹುಲ್ಲಿನ ಹಸಿರಿನ ಮಧ್ಯೆ ಅಲ್ಲಲ್ಲಿ ಕಾಣುವ ಮನೆಗಳು, ಮನೆಗಳ ಮೇಲೆ ಕಾಣುವ ರೈತ ಧ್ವಜಗಳು ಗಮನ ಸೆಳೆಯದೆ ಇರದೆ ಸಾಧ್ಯವೆ ಇಲ್ಲ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಬರ್ನಾಲಾ, ಲೂದಿಯಾನ ಜಿಲ್ಲೆಯಲ್ಲಿ ರಸ್ತೆ ತಡೆ ಚಳುವಳಿಗೆ ನಾವು ಸಾಕ್ಷಿಯಾದೆವು. ಬರ್ನಾಲಾದ ರೈಲು ನಿಲ್ದಾಣದಲ್ಲಿ ಸೇರುತ್ತಿದ್ದ ರೈತರು ಹೆದ್ದಾರಿ ತಡೆಗಾಗಿ ಇಂದು (ಫೆಬ್ರವರಿ 6) 5 ಭಾಗಗಳಾಗಿ ವಿಭಜನೆಗೊಂಡಿದ್ದರು. ಬರ್ನಾಲಾ ಮತ್ತು ಲೂದಿಯಾನ ಹೆದ್ದಾರಿಯಲ್ಲಿ 5 ಕಡೆ ಹೆದ್ದಾರಿ ತಡೆ ನಡೆಸಲಾಗಿತ್ತು. ಮೆಹಾಲ್ ಕಲಾನ್ ಟೋಲ್ ಪ್ಲಾಜಾ ಬಂದ್ ಮಾಡಿ ಸಾವಿರಾರು ಮಂದಿ ಸೇರಿದ್ದರು. ಲೂದಿಯಾನದ ಜಗ್ರೂನ್‌ನಲ್ಲಿ ನೂರಾರು ಮಂದಿ ಹಾಡುಗಳನ್ನು ಹಾಡುತ್ತಾ ಪ್ರತಿಭಟನೆ ನಡೆಸಿದರು.

ಪಂಜಾಬ್‌‌ನಲ್ಲಿ ನಾವು ಗಮನಿಸಿದ ಮತ್ತೊಂದು ವಿಚಾರ ಹಾರ್ನ್ ಮಾಡಿ ಬೆಂಬಲ ನೀಡಿ ಎನ್ನುವುದು. ರಸ್ತೆಗಳಲ್ಲಿ, ಹೆದ್ದಾರಿಯ ವೃತ್ತಗಳಲ್ಲಿ ಪ್ರತಿಭಟನೆ ನಡೆಸುವ ರೈತ ಹೋರಾಟಗಾರರು, ಪ್ರತಿಭಟನೆಗೆ ಬೆಂಬಲ ನೀಡಲು ಹಾರ್ನ್ ಮಾಡಿ ಎಂದು ಘೋಷಿಸುತ್ತಾರೆ. ಕೆಲವೊಂದು ಕಡೆ ಭಿತ್ತಿಪತ್ರ ಪ್ರದರ್ಶಿಸುತ್ತಾರೆ. ಈ ಅಭಿಯಾನಕ್ಕೆ ಜನರು ಉತ್ತಮ ಪ್ರತಿಕ್ರಿಯೆ ನೀಡುತ್ತಾರೆ. ಒಂದೇ ಸಮನೆ ಐದು ನಿಮಿಷಗಳವರೆಗೂ ಹಾರ್ನ್ ಮಾಡಲಾಗುತ್ತದೆ.

ಇನ್ನು ಪಂಜಾಬ್‌‌ನಿಂದ ದೆಹಲಿಯ ಗಡಿಗಳಿಗೆ, ದೆಹಲಿಯ ಗಡಿಗಳಿಂದ ಪಂಜಾಬಿಗೆ ಓಡಾಡುವ ಟ್ರ್ಯಾಕ್ಟರ್, ಟ್ರ್ಯಾಲಿ, ಕಾರುಗಳು ರಸ್ತೆಯುದ್ದಕ್ಕೂ ಕಾಣಿಸುತ್ತಲೇ ಇರುತ್ತವೆ. ರಸ್ತೆಗಳಲ್ಲಿ ಘೋಷಣೆಗಳು ಸಾಮಾನ್ಯವಾಗಿ ಕೇಳಿಸುತ್ತವೆ. ಇನ್ನೊಂದು ಮುಖ್ಯ ವಿಷಯವೆಂದರೆ ದೆಹಲಿ ಪೊಲೀಸರಂತೆ ಇಲ್ಲಿನ ಪೊಲೀಸರು ಅತಿಯಾಗಿ ವರ್ತಿಸುತ್ತಿಲ್ಲ!

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....