Homeಮುಖಪುಟಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಪಂಜಾಬ್‌‌ನ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ.

- Advertisement -
- Advertisement -

ಪಂಜಾಬ್… ಕಳೆದ ಸೆಪ್ಟಂಬರ್‌ನಿಂದ ದೇಶ ವಿದೇಶಗಳ ಗಮನ ಸೆಳೆಯುತ್ತಿರುವ ರಾಜ್ಯ. ಒಕ್ಕೂಟ ಸರ್ಕಾರ ವಿವಾದಾತ್ಮ ಕೃಷಿ ಕಾನೂನುಗಳನ್ನು ಜಾರಿಗೊಳಿಸಿದ ದಿನದಿಂದ ಪಂಜಾಬ್‌ನಲ್ಲಿ ಶುರುವಾದ ಹೋರಾಟ ದೆಹಲಿ ಚಲೋ ಮೂಲಕ ದೇಶಾದ್ಯಂತ ಐದು ತಿಂಗಳಲ್ಲಿ ಆವರಿಸಿದೆ.

ಪಂಜಾಬ್, ಹರಿಯಾಣದ ಜನರು ದೆಹಲಿ ಚಲೋಗೆ ಕರೆಕೊಟ್ಟರು. ಇದು ಇಂದು ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕ, ಕೇರಳ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಿಗೆ ಪಸರಿಸಿದೆ. ದೆಹಲಿಯ ಗಡಿಗಳಲ್ಲಿ ಪಂಜಾಬಿನ ಜನರು ತಮ್ಮ ಹೊಸ ಗ್ರಾಮಗಳನ್ನು ಸೃಷ್ಟಿಸಿದ್ದಾರೆ. ಇಂತಹ ಜನರ ಪಂಜಾಬಿನಲ್ಲಿ ಹೋರಾಟ ಹೇಗಿದೆ ಎಂಬುದನ್ನು ತಿಳಿಯಲು ಗೌರಿ ಮೀಡಿಯಾ ತಂಡ ಪಂಜಾಬಿಗೆ ಭೇಟಿ ನೀಡಿತು.

ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್ ತಿಂಗಳಿನಿಂದಲೂ ವಿವಾದಿತ ಕಾನೂನುಗಳ ವಿರುದ್ದ ಪ್ರತಿಭಟನೆ ನಡೆಯುತ್ತಲೇ ಇದೆ. ರಾಜ್ಯದ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ. ರೈಲ್ ರೋಖೋ ಚಳುವಳಿ ಕೊಂಚ ಮಟ್ಟಿಗೆ ತಗ್ಗಿದ್ದು, ಈಗಲೂ ರೈಲ್ವೇ ಸ್ಟೇಷನ್‌‌ಗಳಲ್ಲಿ ಪ್ರತಿದಿನ ಪ್ರತಿಭಟನೆ ನಡೆಸಲಾಗುತ್ತಿದೆ.

ರೈತರಿಂದ ದೆಹಲಿ ಆಗ್ರಾ ರಸ್ತೆ ಬಂದ್ Photo Courtesy: The Hindu

ಇದನ್ನೂ ಓದಿ: ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಕಳೆದ 5 ತಿಂಗಳಿನಿಂದಲೂ ಒಂದು ದಿನವೂ ತಪ್ಪದೇ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರೈಲ್ವೇ ಸ್ಟೇಷನ್, ಮಾಲ್, ಟೋಲ್ ಪ್ಲಾಜಾಗಳ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳ ಜನರು ಹೋರಾಟದಲ್ಲಿ ಭಾಗವಹಿಸುತ್ತಾರೆ. 3 ಗಂಟೆ ನಂತರ ಮನಗಳಿಗೆ ತೆರಳುತ್ತಾರೆ. ಆದರೆ ಕೆಲ ರೈತರು ಇಲ್ಲೇ ಟ್ರ್ಯಾಲಿಗಳು, ಟೆಂಟ್‌‌ಗಳನ್ನು ಹಾಕಿಕೊಂಡು ಉಳಿದುಕೊಂಡಿದ್ದಾರೆ.

ನಮಗೆ ಪಂಜಾಬ್‌ಗೆ ಕಾಲಿಡುತ್ತಿದ್ದಂತೆ ಆರಂಭದಲ್ಲೇ ಸ್ವಾಗತಿಸಿದ್ದು ರೈತ ಹೋರಾಟವನ್ನು ಬೆಂಬಲಿಸುತ್ತಾ ಸರ್ಕಲ್‌‌‌ಗಳಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ ಯುವಜನರು. ಹಲವು ರಸ್ತೆಗಳು ಸೇರುವ ಪಟಿಯಾಲದ ಮುಖ್ಯ ವೃತ್ತದಲ್ಲಿ ಪ್ರತಿದಿನ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತದೆ.

ರಸ್ತೆಯಲ್ಲಿ ಓಡಾಡುವ ಪ್ರತಿ ವಾಹನದ ಮೇಲೂ ರೈತರ ಧ್ವಜಗಳು ವಿರಾಜಮಾನವಾಗಿವೆ. ಎಲ್ಲಾ ಅಂಗಡಿ ಮುಂಗಟ್ಟು, ಮನೆಗಳ ಮೇಲೆ ರೈತ ಹೋರಾಟದ ಘೋಷನೆಗಳು, ಧ್ವಜಗಳು ನಮ್ಮ ಕಣ್ಣು ಕುಕ್ಕುತ್ತಿದ್ದವು. ಎಕರೆಗಟ್ಟಲೆ ವಿಶಾಲವಾದ ಎಳೆಯ ಗೋದಿ ಹುಲ್ಲಿನ ಹಸಿರಿನ ಮಧ್ಯೆ ಅಲ್ಲಲ್ಲಿ ಕಾಣುವ ಮನೆಗಳು, ಮನೆಗಳ ಮೇಲೆ ಕಾಣುವ ರೈತ ಧ್ವಜಗಳು ಗಮನ ಸೆಳೆಯದೆ ಇರದೆ ಸಾಧ್ಯವೆ ಇಲ್ಲ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಬರ್ನಾಲಾ, ಲೂದಿಯಾನ ಜಿಲ್ಲೆಯಲ್ಲಿ ರಸ್ತೆ ತಡೆ ಚಳುವಳಿಗೆ ನಾವು ಸಾಕ್ಷಿಯಾದೆವು. ಬರ್ನಾಲಾದ ರೈಲು ನಿಲ್ದಾಣದಲ್ಲಿ ಸೇರುತ್ತಿದ್ದ ರೈತರು ಹೆದ್ದಾರಿ ತಡೆಗಾಗಿ ಇಂದು (ಫೆಬ್ರವರಿ 6) 5 ಭಾಗಗಳಾಗಿ ವಿಭಜನೆಗೊಂಡಿದ್ದರು. ಬರ್ನಾಲಾ ಮತ್ತು ಲೂದಿಯಾನ ಹೆದ್ದಾರಿಯಲ್ಲಿ 5 ಕಡೆ ಹೆದ್ದಾರಿ ತಡೆ ನಡೆಸಲಾಗಿತ್ತು. ಮೆಹಾಲ್ ಕಲಾನ್ ಟೋಲ್ ಪ್ಲಾಜಾ ಬಂದ್ ಮಾಡಿ ಸಾವಿರಾರು ಮಂದಿ ಸೇರಿದ್ದರು. ಲೂದಿಯಾನದ ಜಗ್ರೂನ್‌ನಲ್ಲಿ ನೂರಾರು ಮಂದಿ ಹಾಡುಗಳನ್ನು ಹಾಡುತ್ತಾ ಪ್ರತಿಭಟನೆ ನಡೆಸಿದರು.

ಪಂಜಾಬ್‌‌ನಲ್ಲಿ ನಾವು ಗಮನಿಸಿದ ಮತ್ತೊಂದು ವಿಚಾರ ಹಾರ್ನ್ ಮಾಡಿ ಬೆಂಬಲ ನೀಡಿ ಎನ್ನುವುದು. ರಸ್ತೆಗಳಲ್ಲಿ, ಹೆದ್ದಾರಿಯ ವೃತ್ತಗಳಲ್ಲಿ ಪ್ರತಿಭಟನೆ ನಡೆಸುವ ರೈತ ಹೋರಾಟಗಾರರು, ಪ್ರತಿಭಟನೆಗೆ ಬೆಂಬಲ ನೀಡಲು ಹಾರ್ನ್ ಮಾಡಿ ಎಂದು ಘೋಷಿಸುತ್ತಾರೆ. ಕೆಲವೊಂದು ಕಡೆ ಭಿತ್ತಿಪತ್ರ ಪ್ರದರ್ಶಿಸುತ್ತಾರೆ. ಈ ಅಭಿಯಾನಕ್ಕೆ ಜನರು ಉತ್ತಮ ಪ್ರತಿಕ್ರಿಯೆ ನೀಡುತ್ತಾರೆ. ಒಂದೇ ಸಮನೆ ಐದು ನಿಮಿಷಗಳವರೆಗೂ ಹಾರ್ನ್ ಮಾಡಲಾಗುತ್ತದೆ.

ಇನ್ನು ಪಂಜಾಬ್‌‌ನಿಂದ ದೆಹಲಿಯ ಗಡಿಗಳಿಗೆ, ದೆಹಲಿಯ ಗಡಿಗಳಿಂದ ಪಂಜಾಬಿಗೆ ಓಡಾಡುವ ಟ್ರ್ಯಾಕ್ಟರ್, ಟ್ರ್ಯಾಲಿ, ಕಾರುಗಳು ರಸ್ತೆಯುದ್ದಕ್ಕೂ ಕಾಣಿಸುತ್ತಲೇ ಇರುತ್ತವೆ. ರಸ್ತೆಗಳಲ್ಲಿ ಘೋಷಣೆಗಳು ಸಾಮಾನ್ಯವಾಗಿ ಕೇಳಿಸುತ್ತವೆ. ಇನ್ನೊಂದು ಮುಖ್ಯ ವಿಷಯವೆಂದರೆ ದೆಹಲಿ ಪೊಲೀಸರಂತೆ ಇಲ್ಲಿನ ಪೊಲೀಸರು ಅತಿಯಾಗಿ ವರ್ತಿಸುತ್ತಿಲ್ಲ!

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...