Homeಮುಖಪುಟಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಪಂಜಾಬ್‌‌ನ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ.

- Advertisement -
- Advertisement -

ಪಂಜಾಬ್… ಕಳೆದ ಸೆಪ್ಟಂಬರ್‌ನಿಂದ ದೇಶ ವಿದೇಶಗಳ ಗಮನ ಸೆಳೆಯುತ್ತಿರುವ ರಾಜ್ಯ. ಒಕ್ಕೂಟ ಸರ್ಕಾರ ವಿವಾದಾತ್ಮ ಕೃಷಿ ಕಾನೂನುಗಳನ್ನು ಜಾರಿಗೊಳಿಸಿದ ದಿನದಿಂದ ಪಂಜಾಬ್‌ನಲ್ಲಿ ಶುರುವಾದ ಹೋರಾಟ ದೆಹಲಿ ಚಲೋ ಮೂಲಕ ದೇಶಾದ್ಯಂತ ಐದು ತಿಂಗಳಲ್ಲಿ ಆವರಿಸಿದೆ.

ಪಂಜಾಬ್, ಹರಿಯಾಣದ ಜನರು ದೆಹಲಿ ಚಲೋಗೆ ಕರೆಕೊಟ್ಟರು. ಇದು ಇಂದು ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕ, ಕೇರಳ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಿಗೆ ಪಸರಿಸಿದೆ. ದೆಹಲಿಯ ಗಡಿಗಳಲ್ಲಿ ಪಂಜಾಬಿನ ಜನರು ತಮ್ಮ ಹೊಸ ಗ್ರಾಮಗಳನ್ನು ಸೃಷ್ಟಿಸಿದ್ದಾರೆ. ಇಂತಹ ಜನರ ಪಂಜಾಬಿನಲ್ಲಿ ಹೋರಾಟ ಹೇಗಿದೆ ಎಂಬುದನ್ನು ತಿಳಿಯಲು ಗೌರಿ ಮೀಡಿಯಾ ತಂಡ ಪಂಜಾಬಿಗೆ ಭೇಟಿ ನೀಡಿತು.

ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್ ತಿಂಗಳಿನಿಂದಲೂ ವಿವಾದಿತ ಕಾನೂನುಗಳ ವಿರುದ್ದ ಪ್ರತಿಭಟನೆ ನಡೆಯುತ್ತಲೇ ಇದೆ. ರಾಜ್ಯದ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ. ರೈಲ್ ರೋಖೋ ಚಳುವಳಿ ಕೊಂಚ ಮಟ್ಟಿಗೆ ತಗ್ಗಿದ್ದು, ಈಗಲೂ ರೈಲ್ವೇ ಸ್ಟೇಷನ್‌‌ಗಳಲ್ಲಿ ಪ್ರತಿದಿನ ಪ್ರತಿಭಟನೆ ನಡೆಸಲಾಗುತ್ತಿದೆ.

ರೈತರಿಂದ ದೆಹಲಿ ಆಗ್ರಾ ರಸ್ತೆ ಬಂದ್ Photo Courtesy: The Hindu

ಇದನ್ನೂ ಓದಿ: ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಕಳೆದ 5 ತಿಂಗಳಿನಿಂದಲೂ ಒಂದು ದಿನವೂ ತಪ್ಪದೇ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರೈಲ್ವೇ ಸ್ಟೇಷನ್, ಮಾಲ್, ಟೋಲ್ ಪ್ಲಾಜಾಗಳ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳ ಜನರು ಹೋರಾಟದಲ್ಲಿ ಭಾಗವಹಿಸುತ್ತಾರೆ. 3 ಗಂಟೆ ನಂತರ ಮನಗಳಿಗೆ ತೆರಳುತ್ತಾರೆ. ಆದರೆ ಕೆಲ ರೈತರು ಇಲ್ಲೇ ಟ್ರ್ಯಾಲಿಗಳು, ಟೆಂಟ್‌‌ಗಳನ್ನು ಹಾಕಿಕೊಂಡು ಉಳಿದುಕೊಂಡಿದ್ದಾರೆ.

ನಮಗೆ ಪಂಜಾಬ್‌ಗೆ ಕಾಲಿಡುತ್ತಿದ್ದಂತೆ ಆರಂಭದಲ್ಲೇ ಸ್ವಾಗತಿಸಿದ್ದು ರೈತ ಹೋರಾಟವನ್ನು ಬೆಂಬಲಿಸುತ್ತಾ ಸರ್ಕಲ್‌‌‌ಗಳಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ ಯುವಜನರು. ಹಲವು ರಸ್ತೆಗಳು ಸೇರುವ ಪಟಿಯಾಲದ ಮುಖ್ಯ ವೃತ್ತದಲ್ಲಿ ಪ್ರತಿದಿನ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತದೆ.

ರಸ್ತೆಯಲ್ಲಿ ಓಡಾಡುವ ಪ್ರತಿ ವಾಹನದ ಮೇಲೂ ರೈತರ ಧ್ವಜಗಳು ವಿರಾಜಮಾನವಾಗಿವೆ. ಎಲ್ಲಾ ಅಂಗಡಿ ಮುಂಗಟ್ಟು, ಮನೆಗಳ ಮೇಲೆ ರೈತ ಹೋರಾಟದ ಘೋಷನೆಗಳು, ಧ್ವಜಗಳು ನಮ್ಮ ಕಣ್ಣು ಕುಕ್ಕುತ್ತಿದ್ದವು. ಎಕರೆಗಟ್ಟಲೆ ವಿಶಾಲವಾದ ಎಳೆಯ ಗೋದಿ ಹುಲ್ಲಿನ ಹಸಿರಿನ ಮಧ್ಯೆ ಅಲ್ಲಲ್ಲಿ ಕಾಣುವ ಮನೆಗಳು, ಮನೆಗಳ ಮೇಲೆ ಕಾಣುವ ರೈತ ಧ್ವಜಗಳು ಗಮನ ಸೆಳೆಯದೆ ಇರದೆ ಸಾಧ್ಯವೆ ಇಲ್ಲ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಬರ್ನಾಲಾ, ಲೂದಿಯಾನ ಜಿಲ್ಲೆಯಲ್ಲಿ ರಸ್ತೆ ತಡೆ ಚಳುವಳಿಗೆ ನಾವು ಸಾಕ್ಷಿಯಾದೆವು. ಬರ್ನಾಲಾದ ರೈಲು ನಿಲ್ದಾಣದಲ್ಲಿ ಸೇರುತ್ತಿದ್ದ ರೈತರು ಹೆದ್ದಾರಿ ತಡೆಗಾಗಿ ಇಂದು (ಫೆಬ್ರವರಿ 6) 5 ಭಾಗಗಳಾಗಿ ವಿಭಜನೆಗೊಂಡಿದ್ದರು. ಬರ್ನಾಲಾ ಮತ್ತು ಲೂದಿಯಾನ ಹೆದ್ದಾರಿಯಲ್ಲಿ 5 ಕಡೆ ಹೆದ್ದಾರಿ ತಡೆ ನಡೆಸಲಾಗಿತ್ತು. ಮೆಹಾಲ್ ಕಲಾನ್ ಟೋಲ್ ಪ್ಲಾಜಾ ಬಂದ್ ಮಾಡಿ ಸಾವಿರಾರು ಮಂದಿ ಸೇರಿದ್ದರು. ಲೂದಿಯಾನದ ಜಗ್ರೂನ್‌ನಲ್ಲಿ ನೂರಾರು ಮಂದಿ ಹಾಡುಗಳನ್ನು ಹಾಡುತ್ತಾ ಪ್ರತಿಭಟನೆ ನಡೆಸಿದರು.

ಪಂಜಾಬ್‌‌ನಲ್ಲಿ ನಾವು ಗಮನಿಸಿದ ಮತ್ತೊಂದು ವಿಚಾರ ಹಾರ್ನ್ ಮಾಡಿ ಬೆಂಬಲ ನೀಡಿ ಎನ್ನುವುದು. ರಸ್ತೆಗಳಲ್ಲಿ, ಹೆದ್ದಾರಿಯ ವೃತ್ತಗಳಲ್ಲಿ ಪ್ರತಿಭಟನೆ ನಡೆಸುವ ರೈತ ಹೋರಾಟಗಾರರು, ಪ್ರತಿಭಟನೆಗೆ ಬೆಂಬಲ ನೀಡಲು ಹಾರ್ನ್ ಮಾಡಿ ಎಂದು ಘೋಷಿಸುತ್ತಾರೆ. ಕೆಲವೊಂದು ಕಡೆ ಭಿತ್ತಿಪತ್ರ ಪ್ರದರ್ಶಿಸುತ್ತಾರೆ. ಈ ಅಭಿಯಾನಕ್ಕೆ ಜನರು ಉತ್ತಮ ಪ್ರತಿಕ್ರಿಯೆ ನೀಡುತ್ತಾರೆ. ಒಂದೇ ಸಮನೆ ಐದು ನಿಮಿಷಗಳವರೆಗೂ ಹಾರ್ನ್ ಮಾಡಲಾಗುತ್ತದೆ.

ಇನ್ನು ಪಂಜಾಬ್‌‌ನಿಂದ ದೆಹಲಿಯ ಗಡಿಗಳಿಗೆ, ದೆಹಲಿಯ ಗಡಿಗಳಿಂದ ಪಂಜಾಬಿಗೆ ಓಡಾಡುವ ಟ್ರ್ಯಾಕ್ಟರ್, ಟ್ರ್ಯಾಲಿ, ಕಾರುಗಳು ರಸ್ತೆಯುದ್ದಕ್ಕೂ ಕಾಣಿಸುತ್ತಲೇ ಇರುತ್ತವೆ. ರಸ್ತೆಗಳಲ್ಲಿ ಘೋಷಣೆಗಳು ಸಾಮಾನ್ಯವಾಗಿ ಕೇಳಿಸುತ್ತವೆ. ಇನ್ನೊಂದು ಮುಖ್ಯ ವಿಷಯವೆಂದರೆ ದೆಹಲಿ ಪೊಲೀಸರಂತೆ ಇಲ್ಲಿನ ಪೊಲೀಸರು ಅತಿಯಾಗಿ ವರ್ತಿಸುತ್ತಿಲ್ಲ!

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...