Homeಮುಖಪುಟಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಪಂಜಾಬ್‌‌ನ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ.

- Advertisement -
- Advertisement -

ಪಂಜಾಬ್… ಕಳೆದ ಸೆಪ್ಟಂಬರ್‌ನಿಂದ ದೇಶ ವಿದೇಶಗಳ ಗಮನ ಸೆಳೆಯುತ್ತಿರುವ ರಾಜ್ಯ. ಒಕ್ಕೂಟ ಸರ್ಕಾರ ವಿವಾದಾತ್ಮ ಕೃಷಿ ಕಾನೂನುಗಳನ್ನು ಜಾರಿಗೊಳಿಸಿದ ದಿನದಿಂದ ಪಂಜಾಬ್‌ನಲ್ಲಿ ಶುರುವಾದ ಹೋರಾಟ ದೆಹಲಿ ಚಲೋ ಮೂಲಕ ದೇಶಾದ್ಯಂತ ಐದು ತಿಂಗಳಲ್ಲಿ ಆವರಿಸಿದೆ.

ಪಂಜಾಬ್, ಹರಿಯಾಣದ ಜನರು ದೆಹಲಿ ಚಲೋಗೆ ಕರೆಕೊಟ್ಟರು. ಇದು ಇಂದು ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕ, ಕೇರಳ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಿಗೆ ಪಸರಿಸಿದೆ. ದೆಹಲಿಯ ಗಡಿಗಳಲ್ಲಿ ಪಂಜಾಬಿನ ಜನರು ತಮ್ಮ ಹೊಸ ಗ್ರಾಮಗಳನ್ನು ಸೃಷ್ಟಿಸಿದ್ದಾರೆ. ಇಂತಹ ಜನರ ಪಂಜಾಬಿನಲ್ಲಿ ಹೋರಾಟ ಹೇಗಿದೆ ಎಂಬುದನ್ನು ತಿಳಿಯಲು ಗೌರಿ ಮೀಡಿಯಾ ತಂಡ ಪಂಜಾಬಿಗೆ ಭೇಟಿ ನೀಡಿತು.

ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್ ತಿಂಗಳಿನಿಂದಲೂ ವಿವಾದಿತ ಕಾನೂನುಗಳ ವಿರುದ್ದ ಪ್ರತಿಭಟನೆ ನಡೆಯುತ್ತಲೇ ಇದೆ. ರಾಜ್ಯದ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ. ರೈಲ್ ರೋಖೋ ಚಳುವಳಿ ಕೊಂಚ ಮಟ್ಟಿಗೆ ತಗ್ಗಿದ್ದು, ಈಗಲೂ ರೈಲ್ವೇ ಸ್ಟೇಷನ್‌‌ಗಳಲ್ಲಿ ಪ್ರತಿದಿನ ಪ್ರತಿಭಟನೆ ನಡೆಸಲಾಗುತ್ತಿದೆ.

ರೈತರಿಂದ ದೆಹಲಿ ಆಗ್ರಾ ರಸ್ತೆ ಬಂದ್ Photo Courtesy: The Hindu

ಇದನ್ನೂ ಓದಿ: ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಕಳೆದ 5 ತಿಂಗಳಿನಿಂದಲೂ ಒಂದು ದಿನವೂ ತಪ್ಪದೇ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರೈಲ್ವೇ ಸ್ಟೇಷನ್, ಮಾಲ್, ಟೋಲ್ ಪ್ಲಾಜಾಗಳ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳ ಜನರು ಹೋರಾಟದಲ್ಲಿ ಭಾಗವಹಿಸುತ್ತಾರೆ. 3 ಗಂಟೆ ನಂತರ ಮನಗಳಿಗೆ ತೆರಳುತ್ತಾರೆ. ಆದರೆ ಕೆಲ ರೈತರು ಇಲ್ಲೇ ಟ್ರ್ಯಾಲಿಗಳು, ಟೆಂಟ್‌‌ಗಳನ್ನು ಹಾಕಿಕೊಂಡು ಉಳಿದುಕೊಂಡಿದ್ದಾರೆ.

ನಮಗೆ ಪಂಜಾಬ್‌ಗೆ ಕಾಲಿಡುತ್ತಿದ್ದಂತೆ ಆರಂಭದಲ್ಲೇ ಸ್ವಾಗತಿಸಿದ್ದು ರೈತ ಹೋರಾಟವನ್ನು ಬೆಂಬಲಿಸುತ್ತಾ ಸರ್ಕಲ್‌‌‌ಗಳಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ ಯುವಜನರು. ಹಲವು ರಸ್ತೆಗಳು ಸೇರುವ ಪಟಿಯಾಲದ ಮುಖ್ಯ ವೃತ್ತದಲ್ಲಿ ಪ್ರತಿದಿನ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತದೆ.

ರಸ್ತೆಯಲ್ಲಿ ಓಡಾಡುವ ಪ್ರತಿ ವಾಹನದ ಮೇಲೂ ರೈತರ ಧ್ವಜಗಳು ವಿರಾಜಮಾನವಾಗಿವೆ. ಎಲ್ಲಾ ಅಂಗಡಿ ಮುಂಗಟ್ಟು, ಮನೆಗಳ ಮೇಲೆ ರೈತ ಹೋರಾಟದ ಘೋಷನೆಗಳು, ಧ್ವಜಗಳು ನಮ್ಮ ಕಣ್ಣು ಕುಕ್ಕುತ್ತಿದ್ದವು. ಎಕರೆಗಟ್ಟಲೆ ವಿಶಾಲವಾದ ಎಳೆಯ ಗೋದಿ ಹುಲ್ಲಿನ ಹಸಿರಿನ ಮಧ್ಯೆ ಅಲ್ಲಲ್ಲಿ ಕಾಣುವ ಮನೆಗಳು, ಮನೆಗಳ ಮೇಲೆ ಕಾಣುವ ರೈತ ಧ್ವಜಗಳು ಗಮನ ಸೆಳೆಯದೆ ಇರದೆ ಸಾಧ್ಯವೆ ಇಲ್ಲ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಬರ್ನಾಲಾ, ಲೂದಿಯಾನ ಜಿಲ್ಲೆಯಲ್ಲಿ ರಸ್ತೆ ತಡೆ ಚಳುವಳಿಗೆ ನಾವು ಸಾಕ್ಷಿಯಾದೆವು. ಬರ್ನಾಲಾದ ರೈಲು ನಿಲ್ದಾಣದಲ್ಲಿ ಸೇರುತ್ತಿದ್ದ ರೈತರು ಹೆದ್ದಾರಿ ತಡೆಗಾಗಿ ಇಂದು (ಫೆಬ್ರವರಿ 6) 5 ಭಾಗಗಳಾಗಿ ವಿಭಜನೆಗೊಂಡಿದ್ದರು. ಬರ್ನಾಲಾ ಮತ್ತು ಲೂದಿಯಾನ ಹೆದ್ದಾರಿಯಲ್ಲಿ 5 ಕಡೆ ಹೆದ್ದಾರಿ ತಡೆ ನಡೆಸಲಾಗಿತ್ತು. ಮೆಹಾಲ್ ಕಲಾನ್ ಟೋಲ್ ಪ್ಲಾಜಾ ಬಂದ್ ಮಾಡಿ ಸಾವಿರಾರು ಮಂದಿ ಸೇರಿದ್ದರು. ಲೂದಿಯಾನದ ಜಗ್ರೂನ್‌ನಲ್ಲಿ ನೂರಾರು ಮಂದಿ ಹಾಡುಗಳನ್ನು ಹಾಡುತ್ತಾ ಪ್ರತಿಭಟನೆ ನಡೆಸಿದರು.

ಪಂಜಾಬ್‌‌ನಲ್ಲಿ ನಾವು ಗಮನಿಸಿದ ಮತ್ತೊಂದು ವಿಚಾರ ಹಾರ್ನ್ ಮಾಡಿ ಬೆಂಬಲ ನೀಡಿ ಎನ್ನುವುದು. ರಸ್ತೆಗಳಲ್ಲಿ, ಹೆದ್ದಾರಿಯ ವೃತ್ತಗಳಲ್ಲಿ ಪ್ರತಿಭಟನೆ ನಡೆಸುವ ರೈತ ಹೋರಾಟಗಾರರು, ಪ್ರತಿಭಟನೆಗೆ ಬೆಂಬಲ ನೀಡಲು ಹಾರ್ನ್ ಮಾಡಿ ಎಂದು ಘೋಷಿಸುತ್ತಾರೆ. ಕೆಲವೊಂದು ಕಡೆ ಭಿತ್ತಿಪತ್ರ ಪ್ರದರ್ಶಿಸುತ್ತಾರೆ. ಈ ಅಭಿಯಾನಕ್ಕೆ ಜನರು ಉತ್ತಮ ಪ್ರತಿಕ್ರಿಯೆ ನೀಡುತ್ತಾರೆ. ಒಂದೇ ಸಮನೆ ಐದು ನಿಮಿಷಗಳವರೆಗೂ ಹಾರ್ನ್ ಮಾಡಲಾಗುತ್ತದೆ.

ಇನ್ನು ಪಂಜಾಬ್‌‌ನಿಂದ ದೆಹಲಿಯ ಗಡಿಗಳಿಗೆ, ದೆಹಲಿಯ ಗಡಿಗಳಿಂದ ಪಂಜಾಬಿಗೆ ಓಡಾಡುವ ಟ್ರ್ಯಾಕ್ಟರ್, ಟ್ರ್ಯಾಲಿ, ಕಾರುಗಳು ರಸ್ತೆಯುದ್ದಕ್ಕೂ ಕಾಣಿಸುತ್ತಲೇ ಇರುತ್ತವೆ. ರಸ್ತೆಗಳಲ್ಲಿ ಘೋಷಣೆಗಳು ಸಾಮಾನ್ಯವಾಗಿ ಕೇಳಿಸುತ್ತವೆ. ಇನ್ನೊಂದು ಮುಖ್ಯ ವಿಷಯವೆಂದರೆ ದೆಹಲಿ ಪೊಲೀಸರಂತೆ ಇಲ್ಲಿನ ಪೊಲೀಸರು ಅತಿಯಾಗಿ ವರ್ತಿಸುತ್ತಿಲ್ಲ!

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...