Homeಮುಖಪುಟ‘ಇತಿಹಾಸವೊಂದೇ ಅಂತಿಮ ತೀರ್ಪುಗಾರ’; ಸುಪ್ರೀಂ ತೀರ್ಪಿನ ಬಳಿಕ ಕಪಿಲ್ ಪ್ರತಿಕ್ರಿಯೆ

‘ಇತಿಹಾಸವೊಂದೇ ಅಂತಿಮ ತೀರ್ಪುಗಾರ’; ಸುಪ್ರೀಂ ತೀರ್ಪಿನ ಬಳಿಕ ಕಪಿಲ್ ಪ್ರತಿಕ್ರಿಯೆ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಬೆಂಬಲಿಸುವ ಸುಪ್ರೀಂಕೋರ್ಟಿನ ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ವಕೀಲ ಕಪಿಲ್ ಸಿಬಲ್, ‘ಕೆಲವು ಯುದ್ಧಗಳು ಕಳೆದುಹೋಗಲು ಹೋರಾಡುತ್ತವೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

2019ರ ಆಗಸ್ಟ್ ನಲ್ಲಿ ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದನ್ನು ಕೋರ್ಟಿನಲ್ಲಿ ಪ್ರಶ್ನಿಸಿದ್ದ ಅರ್ಜಿದಾರರ ಪರ ವಕೀಲರಾಗಿ ಕಪಿಲ್ ಸಿಬಲ್ ವಾದ ಮಂಡಿಸುತ್ತಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕೆಲವು ಯುದ್ಧಗಳು ಕಳೆದುಹೋಗಲು ಹೋರಾಡುತ್ತವೆ. ಇತಿಹಾಸವು ತಲೆಮಾರುಗಳಿಗೆ ಅಹಿತಕರವಾದ ಸಂಗತಿಗಳನ್ನು ದಾಖಲಿಸಬೇಕು. ಸಾಂಸ್ಥಿಕ ಕ್ರಮಗಳ ಸರಿ ಮತ್ತು ತಪ್ಪುಗಳು ಮುಂಬರುವ ವರ್ಷಗಳಲ್ಲಿ ಚರ್ಚೆಯಾಗುತ್ತವೆ. ಇತಿಹಾಸವೊಂದೇ ಅಂತಿಮ ತೀರ್ಪುಗಾರ; ಐತಿಹಾಸಿಕ ನಿರ್ಧಾರಗಳ ನೈತಿಕ ದಿಕ್ಸೂಚಿ’ ಎಂದು ಕಪಿಲ್ ಸಿಬಲ್ ಪ್ರತಿಕ್ರಿಯಿಸಿದ್ದಾರೆ.

ಕಾಶ್ಮೀರದಲ್ಲಿ ಆದಷ್ಟು ಬೇಗ ಚುನಾವಣೆ ನಡೆಸಬೇಕು: ಓವೈಸಿ

370ನೇ ವಿಧಿ ರದ್ದು ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಎಐಎಂಎಂ ಮುಖಂಡ ಅಸಾದುದ್ದೀನ್ ಓವೈಸಿ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘2019ರಲ್ಲಿ ನಡೆದ ಸೆಮಿನಾರ್‌ನಲ್ಲಿ ಮಾತನಾಡಿದ ಸಿಜೆಐ, ‘ಸಾರ್ವಜನಿಕರ ಅನುಪಸ್ಥಿತಿಯಲ್ಲಿ ಅಧಿಕಾರವನ್ನು ಸ್ಥಾಪಿಸಿದವರಿಗೆ ಆ ಕುರಿತ ಚರ್ಚೆ ಯಾವಾಗಲೂ ಬೆದರಿಕೆಯಾಗಿರುತ್ತದೆ’ ಎಂದು ಹೇಳಿದ್ದರು. 356ನೇ ವಿಧಿಗೆ ಒಳಪಟ್ಟಿರುವಾಗ. ರಾಜ್ಯದಲ್ಲಿ ಚುನಾಯಿತ ವಿಧಾನಸಭೆ ಅಸ್ತಿತ್ವದಲ್ಲಿ ಇಲ್ಲದೆ ಇದ್ದರೂ ಇಡೀ ರಾಜ್ಯವನ್ನು ಕರ್ಫ್ಯೂನಲ್ಲಿ ಇರಿಸುವ ಮೂಲಕ ನೀವು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಬಹುದೇ ಎಂಬುದು ಪ್ರಶ್ನೆ’ ಎಂದಿದ್ದಾರೆ.

‘ಒಕ್ಕೂಟವು (ಫೆಡರಲಿಸಂ) ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಎಂದು ಸುಪ್ರೀಂಕೋರ್ಟ್ ಬೊಮ್ಮಾಯಿ (ಎಸ್ಆರ್ ಬೊಮ್ಮಾಯಿ ತೀರ್ಪು) ತೀರ್ಪಿನಲ್ಲಿ ಹೇಳಿರುವುದನ್ನು ನಾವು ಸ್ಪಷ್ಟಪಡಿಸೋಣ. ಫೆಡರಲಿಸಂ ಎಂದರೆ ರಾಜ್ಯವು ತನ್ನದೇ ಆದ ಧ್ವನಿ ಹೊಂದಿದ್ದು, ಅದರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಸಂಪೂರ್ಣ ಸ್ವಾತಂತ್ರ್ಯವನ್ನು ಹೊಂದಿದೆ. ರಾಜ್ಯದ ಕುರಿತು ವಿಧಾನಸಭೆ ಬದಲಿಗೆ ಲೋಕಸಭೆ ಹೇಗೆ ಮಾತನಾಡಬಹುದು? ಸಂವಿಧಾನದಲ್ಲಿ ವಿಧಾನಸಭೆ ಅಂಗೀಕರಿಸಬೇಕಾದ ನಿರ್ಣಯವನ್ನು ಸಂಸತ್ತು ಹೇಗೆ ಅಂಗೀಕರಿಸಬಹುದು? 370 ಅನ್ನು ರದ್ದುಪಡಿಸಿದ ವಿಧಾನವು ಸಾಂವಿಧಾನಿಕ ನೈತಿಕತೆಯ ಉಲ್ಲಂಘನೆಯಾಗಿದೆ. ಇನ್ನೂ ಕೆಟ್ಟ ನಿರ್ಧಾರವೆಂದರೆ, ಸ್ವತಂತ್ರ ರಾಜ್ಯದ ಸ್ಥಾನಮಾನ ರದ್ದುಗೊಳಿಸಿ ವಿಭಜಿಸಿರುವುದು. ಕೇಂದ್ರಾಡಳಿತ ಪ್ರದೇಶದ ತಳಮಟ್ಟಕ್ಕಿಳಿಸಿರುವುದು ಕಾಶ್ಮೀರದ ಜನರಿಗೆ ಒಕ್ಕೂಟ ಸರ್ಕಾರ ಎಸಗಿದ ಗಂಭೀರ ಮಹಾ ದ್ರೋಹವಾಗಿದೆ’ ಎಂದು ಆಕ್ರೋಶ ಹೊರಹಾಕಿದ್ದಾರೆ.

‘ನಾನು ಒಮ್ಮೆ ಹೇಳಿದ್ದೇನೆ, ಮತ್ತೊಮ್ಮೆ ಹೇಳುತ್ತೇನೆ. ಒಮ್ಮೆ ಇದನ್ನು ಕಾನೂನುಬದ್ಧಗೊಳಿಸಿದರೆ, ಚೆನ್ನೈ, ಕೋಲ್ಕತ್ತಾ, ಹೈದರಾಬಾದ್ ಅಥವಾ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲು ಕೇಂದ್ರ ಸರ್ಕಾರಕ್ಕೆ ಅಡ್ಡಿಯಿಲ್ಲ. ಲಡಾಖ್ ಪ್ರಕರಣವನ್ನು ನೋಡೋಣ, ಇದು ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯಲ್ಲಿದೆ. ಅಲ್ಲಿ ಯಾವುದೇ ಪ್ರಜಾಸತ್ತಾತ್ಮಕ ಪ್ರಾತಿನಿಧ್ಯವಿಲ್ಲ’ ಎಂದು ಹೇಳಿದ್ದಾರೆ.

‘ರಾಜ್ಯವು ಭಾರತದ ಅವಿಭಾಜ್ಯ ಅಂಗ ಎಂಬುದರಲ್ಲಿ ಸಂದೇವಿಲ್ಲ. ಆದರೆ, ಒಂದು ಅವಿಭಾಜ್ಯ ಅಂಗವಾಗಿರುವುದರಿಂದ ಅದು ಒಕ್ಕೂಟದೊಂದಿಗೆ ವಿಶಿಷ್ಟವಾದ ಸಾಂವಿಧಾನಿಕ ಸಂಬಂಧವನ್ನು ಹೊಂದಿಲ್ಲ ಎಂದು ಅರ್ಥವಲ್ಲ. ಕಾಶ್ಮೀರದ ಸಂವಿಧಾನ ಸಭೆಯ ವಿಸರ್ಜನೆಯ ನಂತರ ಈ ಸಾಂವಿಧಾನಿಕ ಸಂಬಂಧವನ್ನು ಶಾಶ್ವತಗೊಳಿಸಲಾಯಿತು’ ಎಂದಿದ್ದಾರೆ.

‘ಒಕ್ಕೂಟದ ನಿರ್ಧಾರದಿಂದ ಸೋತವರು ಜಮ್ಮುವಿನ ಡೋಗ್ರಾಸ್ ಮತ್ತು ಲಡಾಖ್‌ನ ಬೌದ್ಧರು, ಅವರು ಜನಸಂಖ್ಯಾ ಬದಲಾವಣೆಯನ್ನು ಎದುರಿಸಬೇಕಾಗುತ್ತದೆ. ರಾಜ್ಯತ್ವವನ್ನು ಮರುಸ್ಥಾಪಿಸುವ ಬಗ್ಗೆ ಟೈಮ್‌ಲೈನ್‌ ಏಕೆ ಇಲ್ಲ? ಕಾಶ್ಮೀರದಲ್ಲಿ ದೆಹಲಿ ಆಡಳಿತಕ್ಕೆ ಈಗಾಗಲೇ ಐದು ವರ್ಷಗಳಾಗಿವೆ. 2024ರ ಲೋಕಸಭೆ ಚುನಾವಣೆ ಜತೆಗೆ ರಾಜ್ಯದಲ್ಲಿ ಆದಷ್ಟು ಬೇಗ ವಿಧಾನಸಭೆ ಚುನಾವಣೆ ನಡೆಯಬೇಕು’ ಎಂದು ಓವೈಸಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ; ತೀರ್ಪಿಗೂ ಮುನ್ನ ನಮ್ಮನ್ನು ಗೃಹಬಂಧನದಲ್ಲಿಟ್ಟಿದ್ದರು: ಒಮರ್ ಅಬ್ದುಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...