Homeಕರ್ನಾಟಕಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಅವರನ್ನು ಶ್ಲಾಘಿಸಿ ಮಾಡಿರುವ ಪೋಸ್ಟ್‌ಗೆ ರಾಜ್ಯದ ಜನತೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿಯವರಿಗೆ ಇತಿಹಾಸದ ಪುಟಗಳನ್ನು ವಿವರಿಸಿದ್ದಾರೆ.

“ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಫೂರ್ತಿದಾಯಕವಾಗಿವೆ” ಎಂದು ಬೊಮ್ಮಾಯಿಯವರು ಪೋಸ್ಟ್ ಹಾಕಿದ್ದಾರೆ.

ಆರ್‌ಎಸ್‌ಎಸ್‌ನ ಪ್ರಮುಖ ಮುಖಗಳಲ್ಲಿ ಸಾವರ್ಕರ್‌ ಒಬ್ಬರು. ಹಿಂದುತ್ವವಾದಿಯಾಗಿದ್ದರು. ಸಾವರ್ಕರ್‌ ಜೈಲಿಗೆ ಸೇರಿದ ಬಳಿಕ ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು. ಹೀಗಾಗಿ ಸಾವರ್ಕರ್‌ ಅವರನ್ನು ಪ್ರಖರ ಸ್ವಾತಂತ್ರ್ಯ ಹೋರಾಟಗಾರ ಎಂದೆಲ್ಲ ಸಂಘಪರಿವಾರ ಬಣ್ಣಿಸುವುದನ್ನು ಜನರು ಟೀಕಿಸುತ್ತಾ ಬಂದಿದ್ದಾರೆ. ಸಾವರ್ಕರ್‌ಗೆ ಅಂಟಿರುವ ಕ್ಷಮಾಪಣೆಯ ಇತಿಹಾಸವನ್ನು ಮುಚ್ಚಿಹಾಕುವ ಅಥವಾ ತಿರುಚುವ ಯತ್ನವನ್ನು ಸಂಘಪರಿವಾರವೂ ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

“ಸಾವರ್ಕರ್‌ ಅವರು ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ಕೆಲವು ತಿಂಗಳ ಹಿಂದೆ ಹೇಳಿದ್ದರು. “ರಾಜನಾಥ್‌ ಸಿಂಗ್ ಹೇಳಿಕೆ ಹಾಸ್ಯಾಸ್ಪದ, ಅಸಂಬದ್ಧ ಹಾಗೂ ವಿವೇಚನಾ ರಹಿತ” ಎಂದು ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯಿಸಿದ್ದರು.

“ಸಾವರ್ಕರ್‌ ಅವರು ಹಲವು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ಹೇಳುವುದು ತಪ್ಪೆಂದು ರಾಜನಾಥ್ ಸಿಂಗ್‌ ಹೇಳಿರುವುದು ಸಂಪೂರ್ಣ ಸುಳ್ಳು. ಅಂಡಮಾನ್ ಜೈಲಿಗೆ ಹಾಕಿದ ಕೆಲವೇ ದಿನಗಳಲ್ಲಿ 1911ರಲ್ಲಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿದ್ದರು. ಅಲ್ಲದೆ ಸಾವರ್ಕರ್‌ ಅವರು ಒಟ್ಟು ಏಳು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು” ಎಂದು ರಾಜಮೋಹನ್‌ ಗಾಂಧಿ ಅವರು ‘ದಿ ವೈರ್’ ಸಂದರ್ಶನದಲ್ಲಿ ವಿವರಿಸಿದ್ದರು.

ಕ್ಷಮಾಪಣೆ ಕೇಳಲು ಇದ್ದ ಅವಕಾಶದಲ್ಲಿ ಬಿಡುಗಾಗಿ ಸಾವರ್ಕರ್‌ ಕೋರಿಕೆ ಸಲ್ಲಿಸಿದ್ದರು. “1913ರ ಕ್ಷಮಾಪಣಾ ಅರ್ಜಿಯಲ್ಲಿ ಸರ್ಕಾರ ತನ್ನ ಬಹುಮುಖ ಲಾಭ ಮತ್ತು ಕರುಣೆಯಲ್ಲಿ ನನ್ನನ್ನು ಬಿಡುಗಡೆ  ಮಾಡಲಿ” ಎಂದು ಕೇಳಿಕೊಂಡಿದ್ದರು. ಇದು ಕ್ಷಮಾಪಣೆಯಲ್ಲದೆ ಮತ್ತೇನು” ಎಂದು ಪ್ರಶ್ನಿಸಿದ್ದರು.

ಸಾವರ್ಕರ್ ಅವರ ಅಪರಾಧವನ್ನು ರಾಜಕೀಯ ಎಂದು ತೋರಿಸಲು ಗಾಂಧಿ ಪತ್ರವು ಸಲಹೆ ನೀಡಿದೆ. ಕ್ಷಮಾಪಣೆಗಾಗಿ ಮನವಿ ಮಾಡಲು ಗಾಂಧೀಜಿಯವರು ಪತ್ರ ಬರೆದಿಲ್ಲ. ಮುಖ್ಯವಾಗಿ ಸಾವರ್ಕರ್ ಅವರಿಗೆ ಗಾಂಧೀಜಿಯವರು ಪತ್ರ ಬರೆಯುವ ಒಂಬತ್ತು ವರ್ಷಗಳ ಮೊದಲೇ ಸಾವರ್ಕರ್‌ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆದಿದ್ದರು ಎಂದು ತಿಳಿಸಿದ್ದರು.

ರಾಜಮೋಹನ್ ಗಾಂಧಿಯವರ ಅಭಿಪ್ರಾಯವನ್ನೇ ಹಲವು ಇತಿಹಾಸಕಾರರು ತಿಳಿಸಿದ್ದಾರೆ. ಆದರೆ ಸಾವರ್ಕರ್ ಅವರನ್ನು ವೈಭವೀಕರಿಸುವುದು ನಡೆಯುತ್ತಲೇ ಇದೆ. ಬೊಮ್ಮಾಯಿಯವರ ಪೋಸ್ಟ್‌ನಲ್ಲೂ ಇದೇ ವೈಭವೀಕರಣ ಇರುವುದನ್ನು ಗುರುತಿಸಿರುವ ರಾಜ್ಯದ ಜನತೆ, ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿರಿ: ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ. – ಸಿದ್ದು

ಸಿಎಂ ಪೋಸ್ಟ್‌ಗೆ ಜನರ ಪ್ರತಿಕ್ರಿಯೆಗಳು (ಆಯ್ದ ಕಾಮೆಂಟ್‌ಗಳು ಇಲ್ಲಿವೆ)

ಬೊಮ್ಮಾಯಿಯವರೆˌ ಬ್ರಿಟೀಷರಿಗೆ ಕ್ಷಮಾಪಣೆ ಕೇಳಿ ಪಿಂಚಣೆ ಪಡೆದ ಈ ಚಿತ್ಪಾವನ ವ್ಯಕ್ತಿಗೆ ಶುಭಾಶಯ ಹೇಳುವ ಮೊದಲು ಒಂದು ಕ್ಷಣ ನಿಮ್ಮ ತಂದೆಯವರು ನಂಬಿದ ಸಿದ್ಧಾಂತ ಸ್ಮರಿಸಿಕೊಳ್ಳಿ. ಅಧಿಕಾರದಾಸೆಗೆ ನೀವೆಲ್ಲ ಸಂಘಿಗಳ ಮನೆ ಕಾಯುವ ಬದಲಿಗೆ ಸಂಘಿಗಳು ನಿಮ್ಮ ಮನೆ ಕಾಯುವಂತೆ ಬದುಕುವುದು ಯಾವಾಗ?

 – ಜೆ.ಎಸ್.ಪಾಟೀಲ್‌

****

“ಧರ್ಮಸ್ಥಳದಲ್ಲಿ ಇದೇ ಸಾವರ್ಕರ್ ಅನುಯಾಯಿ ದಲಿತ ಯುವಕನನ್ನು ಕೊಲೆ ಮಾಡಿದ್ದಾನೆ. ಆ ಕಡೆ ನಿಮ್ಮವರಾರೂ ಸುಳಿದಿಲ್ಲ”

– ಹೇಮಾ ವೆಂಕಟ್‌‌

***

ಇವರು ಗಾಂಧಿ ಹತ್ಯೆಯ ಆರೋಪಿ ಅಲ್ವಾ? ಬ್ರಿಟಿಷರಿಗೆ ನಿರಂತರ ಕ್ಷಮಾಪಣ ಪತ್ರ ನೀಡಿ ಸದಾ ಕಾಲ ನಿಮಗೆ ವಿದೇಯನಾಗಿರುವೆ ಎಂದು ಬರೆದುಕೊಟ್ಟು ಜೈಲಿನಿಂದ ಹೊರಬಂದು ಬ್ರಿಟಿಷರ ಪಿಂಚಣಿ (ಆ ಕಾಲದ 50 ರುಪಾಯಿ) ಪಡೆದು ಬದುಕಿದ ಈತ ವೀರ ಆಗುವುದು ಹೇಗೆ? ಭಾರತದ ಸ್ವಾತಂತ್ರ್ಯಕ್ಕೆ ಆತನ ಕೊಡುಗೆ ಏನು?!

– ಶ್ರೀನಿವಾಸ ಕಾರ್ಕಳ

***

ಬ್ರಿಟಿಷರೆದುರು ಹೋರಾಡಿ ಮಡಿದ ಟಿಪ್ಪುವನ್ನು ದ್ವೇಷಿಸುವ, ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಸಂಗೊಳ್ಳಿ ರಾಯಣ್ಣ, ಆಜೀವ ಬಂಧಿಯಾದ ರಾಣಿ ಚೆನ್ನಮ್ಮರ ಪರಂಪರೆಯನ್ನು ನಾಶ ಮಾಡುವ, ಮಹಾತ್ಮ ಗಾಂಧಿಯವರನ್ನೇ ನಿಂದಿಸುವ, ಅವರ ಹತ್ಯೆಯನ್ನು ಸಮರ್ಥಿಸುವ, ನೆಹರೂ ಅವರಂಥವರನ್ನು ದಿನನಿತ್ಯ ನಿಂದಿಸುವ, ದೊರೆಸ್ವಾಮಿಯವರಂಥ ಸ್ವಾತಂತ್ರ್ಯಯೋಧರನ್ನು ಹಂಗಿಸುತ್ತಲೇ ಇದ್ದ, ಸ್ವಾತಂತ್ರ್ಯ ಚಳವಳಿಯಲ್ಲಾಗಲೀ, ದೇಶ ನಿರ್ಮಾಣದಲ್ಲಾಗಲೀ ಯಾವುದೇ ಕೊಡುಗೆ ನೀಡಿರದ ಪಕ್ಷದವರಿಂದ ಬೇರೇನು ನಿರೀಕ್ಷಿಸಬಹುದು?

 – ಡಾ.ಶ್ರೀನಿವಾಸ ಕಕ್ಕಿಲಾಯ

***

ಇದನ್ನೂ ಓದಿರಿ: ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಐ ಆಮ್ ವೆರಿ ಸೋರಿ ಮಿಸ್ಟರ್ ಬೊಮ್ಮಾಯಿ ಸಾರ್. ಸೋರಿ ಡೇ ಅನ್ನು ಮರೆತಿದಕ್ಕೆ ಸೋರಿ ಸೋರಿ ಸೋರಿ. ಹ್ಯಾಪಿ ಸೋರಿ ಡೇ ಸಾರ್.

– ರಹೀಮ್ ಭಾಷಾ

***

ಬ್ರಿಟಿಷರಿಗೆ ಕ್ಷಮಾಪಣೆ ಪತ್ ರಬರೆದವರು ಸ್ವಾತಂತ್ರ್ಯ ಹೋರಾಟಗಾರ ಇವರು ಯಾವಾಗ ಹೋರಾಟ ಮಾಡಿದ್ದಾರೆ ಮಾನ್ಯ ಮುಖ್ಯಮಂತ್ರಿ ಗಳೇ? ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ಒಮ್ಮೆ ಓದಿನೋಡಿ, ಎಲ್ಲಿಯಾದ್ರು ದಾಮೋದರ ಸಾವರ್ಕರ್ ಹೆಸರಿದೆಯಾ ನೋಡಿ…

– ಅಬ್ದುಲ್‌ ಹಮೀದ್‌

***

ಮುಖ್ಯಮಂತ್ರಿಗಳೇ, ನೀವು ಒಂದು ಜವಾಬ್ದಾರಿ ಸ್ಥಾನದಲ್ಲಿದ್ದುಕ್ಕೊಂಡು ರಾಷ್ಟ್ರಪಿತನ ಸಾವಿಗೆ ಕಾರಣವಾದ ವ್ಯಕ್ತಿಗೆ ಪುಣ್ಯ ಸ್ಮರಣೆ ಶುಭಾಶಯ ಹೇಳ್ತಾ ಇದೀರಲ್ಲ, ಬ್ರಿಟೀಷರ ಕ್ಷಮೆ ಕೇಳಿದ ಹೇಡಿ, ಬ್ರಿಟೀಷರ ಪಿಂಚಣಿ ತೆಗೆದುಕೊಂಡು ಬದುಕುತ್ತಿದ್ದ ವ್ಯಕ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರ ಅಂದ್ರೆ ಎಲ್ಲಿಂದ ನಗಬೇಕ್ರೀ? ನಮ್ ಕರ್ಮ ನೀವು ಈ ರಾಜ್ಯದ ಮುಖ್ಯಮಂತ್ರಿ ಆಗಿರುವುದು.

 -ಕುಶಾಲ್ ಬಿದರೆ

****

“ನೀವು ವೈಯಕ್ತಿಕವಾಗಿ ಸಮರ್ಥಿಸಿಕೊಳ್ಳಿ ಸರ್. ಆದರೆ ರಾಜ್ಯ ಮುಖ್ಯಮಂತ್ರಿಯಾಗಿ ಇವರನ್ನು ಸಮರ್ಥಿಸಿಕೊಳ್ಳಬೇಡಿ. ಹೆಮ್ಮೆಯ ಭಾರತ ಮಾತೆಯ ಪುತ್ರರು- ನಮ್ಮ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನವ್ವ. ಇವರು ಎಂದು ಬ್ರಿಟಿಶರ ಬಳಿ ಕ್ಷಮೆ ಕೇಳದೆ ವೀರ ವೇಶದಿಂದ ಹೋರಾಡಿ ದೇಶಕ್ಕೆ ಪ್ರಾಣ ಬಿಟ್ಟರು. ನಿಮ್ಮ ಸಾವರ್ಕರ್‌ ಥರ ಬ್ರಿಟಿಷರ ಬಳಿ ಕ್ಷಮೆ ಕೇಳಿ ಪಿಂಚಣಿ ಪಡೆಯಲಿಲ್ಲ.

 – ಮಧುಸೂದನ್ ಗೌಡ

***

ದಯವಿಟ್ಟು ಇಂಥವನ್ನು ಯೋಧರಿಗೆ ಹೊಳಿಸಬೇಡಿ ಸರ್. ನಮ್ಮ ಯೋಧರಿಗೆ ಮಾಡುವ ಅವಮಾನ ಅದಾಗುತ್ತೆ. ನಮ್ಮ ಯೋಧರು ವೀರರು. ಎಂದೂ ತಲೆ ಬಾಗಲಾರರು.

 – ವಿಕಾಸ್ ಗೌಡ

***

ಹೀಗೆ ಸಾವಿರಾರು ಜನರು ಕಮೆಂಟ್ ಮಾಡಿದ್ದಾರೆ. ಈ ಸುದ್ದಿ ಬರೆಯುವ ವೇಳೆಗೆ ಸಿಎಂಗೆ ಪೋಸ್ಟ್‌ಗೆ ಒಂದೂವರೆ ಸಾವಿರದಷ್ಟು ಜನರು ‘ಹಹಹ’ (😆) ರಿಯಾಕ್ಷನ್‌ ಒತ್ತಿದ್ದಾರೆ. ನಗುವ ಇಮೋಜಿಯೇ ಹೆಚ್ಚಿನ ಸಂಖ್ಯೆಯಲ್ಲಿದೆ.


ಇದನ್ನೂ ಓದಿರಿ: ಸಾವರ್ಕರ್‌‌‌ಗೆ ಗೋಮಾಂಸ ತಿನ್ನುವುದರ ಬಗ್ಗೆ ಯಾವುದೆ ತಕರಾರು ಇರಲಿಲ್ಲ: ದಿಗ್ವಿಜಯ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬರೇ ಸತ್ತು ಈ ಭೂಮಿ ಮೇಲೆ ಇಲ್ಲದವರ ಬಗ್ಗೆ ( ನೆಹರು, ಟಿಪ್ಪು, ಮೊಘಲರು, ಗಾಂಧೀ, ಔರಂಗಜೇಬ್, ಸಾವರ್ಕರ್, ಮುಂತಾದವರು.) ಬದುಕಿರುವ ಮನುಷ್ಯರ ಸಮಸ್ಯೆಗಳ ಬಗ್ಗೆ ಅಪ್ಪಿ ತಪ್ಪಿಯೂ ಮಾತಾಡಲ್ಲ . ಯಾವ ಸೀಮೆ ನಾಯಕರೋ ಇವರು.

  2. ಯಜಮಾನನ ಅನ್ನದ ಋಣ ಇರುವ ಶ್ವಾನ ಸ್ವಾಮಿ ನಿಷ್ಠೆ ಪ್ರದರ್ಶಿಸಿದೆ,ತಪ್ಪೇನು!?😁

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...