Homeಕರ್ನಾಟಕಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಅವರನ್ನು ಶ್ಲಾಘಿಸಿ ಮಾಡಿರುವ ಪೋಸ್ಟ್‌ಗೆ ರಾಜ್ಯದ ಜನತೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿಯವರಿಗೆ ಇತಿಹಾಸದ ಪುಟಗಳನ್ನು ವಿವರಿಸಿದ್ದಾರೆ.

“ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಫೂರ್ತಿದಾಯಕವಾಗಿವೆ” ಎಂದು ಬೊಮ್ಮಾಯಿಯವರು ಪೋಸ್ಟ್ ಹಾಕಿದ್ದಾರೆ.

ಆರ್‌ಎಸ್‌ಎಸ್‌ನ ಪ್ರಮುಖ ಮುಖಗಳಲ್ಲಿ ಸಾವರ್ಕರ್‌ ಒಬ್ಬರು. ಹಿಂದುತ್ವವಾದಿಯಾಗಿದ್ದರು. ಸಾವರ್ಕರ್‌ ಜೈಲಿಗೆ ಸೇರಿದ ಬಳಿಕ ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು. ಹೀಗಾಗಿ ಸಾವರ್ಕರ್‌ ಅವರನ್ನು ಪ್ರಖರ ಸ್ವಾತಂತ್ರ್ಯ ಹೋರಾಟಗಾರ ಎಂದೆಲ್ಲ ಸಂಘಪರಿವಾರ ಬಣ್ಣಿಸುವುದನ್ನು ಜನರು ಟೀಕಿಸುತ್ತಾ ಬಂದಿದ್ದಾರೆ. ಸಾವರ್ಕರ್‌ಗೆ ಅಂಟಿರುವ ಕ್ಷಮಾಪಣೆಯ ಇತಿಹಾಸವನ್ನು ಮುಚ್ಚಿಹಾಕುವ ಅಥವಾ ತಿರುಚುವ ಯತ್ನವನ್ನು ಸಂಘಪರಿವಾರವೂ ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

“ಸಾವರ್ಕರ್‌ ಅವರು ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ಕೆಲವು ತಿಂಗಳ ಹಿಂದೆ ಹೇಳಿದ್ದರು. “ರಾಜನಾಥ್‌ ಸಿಂಗ್ ಹೇಳಿಕೆ ಹಾಸ್ಯಾಸ್ಪದ, ಅಸಂಬದ್ಧ ಹಾಗೂ ವಿವೇಚನಾ ರಹಿತ” ಎಂದು ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯಿಸಿದ್ದರು.

“ಸಾವರ್ಕರ್‌ ಅವರು ಹಲವು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ಹೇಳುವುದು ತಪ್ಪೆಂದು ರಾಜನಾಥ್ ಸಿಂಗ್‌ ಹೇಳಿರುವುದು ಸಂಪೂರ್ಣ ಸುಳ್ಳು. ಅಂಡಮಾನ್ ಜೈಲಿಗೆ ಹಾಕಿದ ಕೆಲವೇ ದಿನಗಳಲ್ಲಿ 1911ರಲ್ಲಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿದ್ದರು. ಅಲ್ಲದೆ ಸಾವರ್ಕರ್‌ ಅವರು ಒಟ್ಟು ಏಳು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು” ಎಂದು ರಾಜಮೋಹನ್‌ ಗಾಂಧಿ ಅವರು ‘ದಿ ವೈರ್’ ಸಂದರ್ಶನದಲ್ಲಿ ವಿವರಿಸಿದ್ದರು.

ಕ್ಷಮಾಪಣೆ ಕೇಳಲು ಇದ್ದ ಅವಕಾಶದಲ್ಲಿ ಬಿಡುಗಾಗಿ ಸಾವರ್ಕರ್‌ ಕೋರಿಕೆ ಸಲ್ಲಿಸಿದ್ದರು. “1913ರ ಕ್ಷಮಾಪಣಾ ಅರ್ಜಿಯಲ್ಲಿ ಸರ್ಕಾರ ತನ್ನ ಬಹುಮುಖ ಲಾಭ ಮತ್ತು ಕರುಣೆಯಲ್ಲಿ ನನ್ನನ್ನು ಬಿಡುಗಡೆ  ಮಾಡಲಿ” ಎಂದು ಕೇಳಿಕೊಂಡಿದ್ದರು. ಇದು ಕ್ಷಮಾಪಣೆಯಲ್ಲದೆ ಮತ್ತೇನು” ಎಂದು ಪ್ರಶ್ನಿಸಿದ್ದರು.

ಸಾವರ್ಕರ್ ಅವರ ಅಪರಾಧವನ್ನು ರಾಜಕೀಯ ಎಂದು ತೋರಿಸಲು ಗಾಂಧಿ ಪತ್ರವು ಸಲಹೆ ನೀಡಿದೆ. ಕ್ಷಮಾಪಣೆಗಾಗಿ ಮನವಿ ಮಾಡಲು ಗಾಂಧೀಜಿಯವರು ಪತ್ರ ಬರೆದಿಲ್ಲ. ಮುಖ್ಯವಾಗಿ ಸಾವರ್ಕರ್ ಅವರಿಗೆ ಗಾಂಧೀಜಿಯವರು ಪತ್ರ ಬರೆಯುವ ಒಂಬತ್ತು ವರ್ಷಗಳ ಮೊದಲೇ ಸಾವರ್ಕರ್‌ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆದಿದ್ದರು ಎಂದು ತಿಳಿಸಿದ್ದರು.

ರಾಜಮೋಹನ್ ಗಾಂಧಿಯವರ ಅಭಿಪ್ರಾಯವನ್ನೇ ಹಲವು ಇತಿಹಾಸಕಾರರು ತಿಳಿಸಿದ್ದಾರೆ. ಆದರೆ ಸಾವರ್ಕರ್ ಅವರನ್ನು ವೈಭವೀಕರಿಸುವುದು ನಡೆಯುತ್ತಲೇ ಇದೆ. ಬೊಮ್ಮಾಯಿಯವರ ಪೋಸ್ಟ್‌ನಲ್ಲೂ ಇದೇ ವೈಭವೀಕರಣ ಇರುವುದನ್ನು ಗುರುತಿಸಿರುವ ರಾಜ್ಯದ ಜನತೆ, ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿರಿ: ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ. – ಸಿದ್ದು

ಸಿಎಂ ಪೋಸ್ಟ್‌ಗೆ ಜನರ ಪ್ರತಿಕ್ರಿಯೆಗಳು (ಆಯ್ದ ಕಾಮೆಂಟ್‌ಗಳು ಇಲ್ಲಿವೆ)

ಬೊಮ್ಮಾಯಿಯವರೆˌ ಬ್ರಿಟೀಷರಿಗೆ ಕ್ಷಮಾಪಣೆ ಕೇಳಿ ಪಿಂಚಣೆ ಪಡೆದ ಈ ಚಿತ್ಪಾವನ ವ್ಯಕ್ತಿಗೆ ಶುಭಾಶಯ ಹೇಳುವ ಮೊದಲು ಒಂದು ಕ್ಷಣ ನಿಮ್ಮ ತಂದೆಯವರು ನಂಬಿದ ಸಿದ್ಧಾಂತ ಸ್ಮರಿಸಿಕೊಳ್ಳಿ. ಅಧಿಕಾರದಾಸೆಗೆ ನೀವೆಲ್ಲ ಸಂಘಿಗಳ ಮನೆ ಕಾಯುವ ಬದಲಿಗೆ ಸಂಘಿಗಳು ನಿಮ್ಮ ಮನೆ ಕಾಯುವಂತೆ ಬದುಕುವುದು ಯಾವಾಗ?

 – ಜೆ.ಎಸ್.ಪಾಟೀಲ್‌

****

“ಧರ್ಮಸ್ಥಳದಲ್ಲಿ ಇದೇ ಸಾವರ್ಕರ್ ಅನುಯಾಯಿ ದಲಿತ ಯುವಕನನ್ನು ಕೊಲೆ ಮಾಡಿದ್ದಾನೆ. ಆ ಕಡೆ ನಿಮ್ಮವರಾರೂ ಸುಳಿದಿಲ್ಲ”

– ಹೇಮಾ ವೆಂಕಟ್‌‌

***

ಇವರು ಗಾಂಧಿ ಹತ್ಯೆಯ ಆರೋಪಿ ಅಲ್ವಾ? ಬ್ರಿಟಿಷರಿಗೆ ನಿರಂತರ ಕ್ಷಮಾಪಣ ಪತ್ರ ನೀಡಿ ಸದಾ ಕಾಲ ನಿಮಗೆ ವಿದೇಯನಾಗಿರುವೆ ಎಂದು ಬರೆದುಕೊಟ್ಟು ಜೈಲಿನಿಂದ ಹೊರಬಂದು ಬ್ರಿಟಿಷರ ಪಿಂಚಣಿ (ಆ ಕಾಲದ 50 ರುಪಾಯಿ) ಪಡೆದು ಬದುಕಿದ ಈತ ವೀರ ಆಗುವುದು ಹೇಗೆ? ಭಾರತದ ಸ್ವಾತಂತ್ರ್ಯಕ್ಕೆ ಆತನ ಕೊಡುಗೆ ಏನು?!

– ಶ್ರೀನಿವಾಸ ಕಾರ್ಕಳ

***

ಬ್ರಿಟಿಷರೆದುರು ಹೋರಾಡಿ ಮಡಿದ ಟಿಪ್ಪುವನ್ನು ದ್ವೇಷಿಸುವ, ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಸಂಗೊಳ್ಳಿ ರಾಯಣ್ಣ, ಆಜೀವ ಬಂಧಿಯಾದ ರಾಣಿ ಚೆನ್ನಮ್ಮರ ಪರಂಪರೆಯನ್ನು ನಾಶ ಮಾಡುವ, ಮಹಾತ್ಮ ಗಾಂಧಿಯವರನ್ನೇ ನಿಂದಿಸುವ, ಅವರ ಹತ್ಯೆಯನ್ನು ಸಮರ್ಥಿಸುವ, ನೆಹರೂ ಅವರಂಥವರನ್ನು ದಿನನಿತ್ಯ ನಿಂದಿಸುವ, ದೊರೆಸ್ವಾಮಿಯವರಂಥ ಸ್ವಾತಂತ್ರ್ಯಯೋಧರನ್ನು ಹಂಗಿಸುತ್ತಲೇ ಇದ್ದ, ಸ್ವಾತಂತ್ರ್ಯ ಚಳವಳಿಯಲ್ಲಾಗಲೀ, ದೇಶ ನಿರ್ಮಾಣದಲ್ಲಾಗಲೀ ಯಾವುದೇ ಕೊಡುಗೆ ನೀಡಿರದ ಪಕ್ಷದವರಿಂದ ಬೇರೇನು ನಿರೀಕ್ಷಿಸಬಹುದು?

 – ಡಾ.ಶ್ರೀನಿವಾಸ ಕಕ್ಕಿಲಾಯ

***

ಇದನ್ನೂ ಓದಿರಿ: ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಐ ಆಮ್ ವೆರಿ ಸೋರಿ ಮಿಸ್ಟರ್ ಬೊಮ್ಮಾಯಿ ಸಾರ್. ಸೋರಿ ಡೇ ಅನ್ನು ಮರೆತಿದಕ್ಕೆ ಸೋರಿ ಸೋರಿ ಸೋರಿ. ಹ್ಯಾಪಿ ಸೋರಿ ಡೇ ಸಾರ್.

– ರಹೀಮ್ ಭಾಷಾ

***

ಬ್ರಿಟಿಷರಿಗೆ ಕ್ಷಮಾಪಣೆ ಪತ್ ರಬರೆದವರು ಸ್ವಾತಂತ್ರ್ಯ ಹೋರಾಟಗಾರ ಇವರು ಯಾವಾಗ ಹೋರಾಟ ಮಾಡಿದ್ದಾರೆ ಮಾನ್ಯ ಮುಖ್ಯಮಂತ್ರಿ ಗಳೇ? ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ಒಮ್ಮೆ ಓದಿನೋಡಿ, ಎಲ್ಲಿಯಾದ್ರು ದಾಮೋದರ ಸಾವರ್ಕರ್ ಹೆಸರಿದೆಯಾ ನೋಡಿ…

– ಅಬ್ದುಲ್‌ ಹಮೀದ್‌

***

ಮುಖ್ಯಮಂತ್ರಿಗಳೇ, ನೀವು ಒಂದು ಜವಾಬ್ದಾರಿ ಸ್ಥಾನದಲ್ಲಿದ್ದುಕ್ಕೊಂಡು ರಾಷ್ಟ್ರಪಿತನ ಸಾವಿಗೆ ಕಾರಣವಾದ ವ್ಯಕ್ತಿಗೆ ಪುಣ್ಯ ಸ್ಮರಣೆ ಶುಭಾಶಯ ಹೇಳ್ತಾ ಇದೀರಲ್ಲ, ಬ್ರಿಟೀಷರ ಕ್ಷಮೆ ಕೇಳಿದ ಹೇಡಿ, ಬ್ರಿಟೀಷರ ಪಿಂಚಣಿ ತೆಗೆದುಕೊಂಡು ಬದುಕುತ್ತಿದ್ದ ವ್ಯಕ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರ ಅಂದ್ರೆ ಎಲ್ಲಿಂದ ನಗಬೇಕ್ರೀ? ನಮ್ ಕರ್ಮ ನೀವು ಈ ರಾಜ್ಯದ ಮುಖ್ಯಮಂತ್ರಿ ಆಗಿರುವುದು.

 -ಕುಶಾಲ್ ಬಿದರೆ

****

“ನೀವು ವೈಯಕ್ತಿಕವಾಗಿ ಸಮರ್ಥಿಸಿಕೊಳ್ಳಿ ಸರ್. ಆದರೆ ರಾಜ್ಯ ಮುಖ್ಯಮಂತ್ರಿಯಾಗಿ ಇವರನ್ನು ಸಮರ್ಥಿಸಿಕೊಳ್ಳಬೇಡಿ. ಹೆಮ್ಮೆಯ ಭಾರತ ಮಾತೆಯ ಪುತ್ರರು- ನಮ್ಮ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನವ್ವ. ಇವರು ಎಂದು ಬ್ರಿಟಿಶರ ಬಳಿ ಕ್ಷಮೆ ಕೇಳದೆ ವೀರ ವೇಶದಿಂದ ಹೋರಾಡಿ ದೇಶಕ್ಕೆ ಪ್ರಾಣ ಬಿಟ್ಟರು. ನಿಮ್ಮ ಸಾವರ್ಕರ್‌ ಥರ ಬ್ರಿಟಿಷರ ಬಳಿ ಕ್ಷಮೆ ಕೇಳಿ ಪಿಂಚಣಿ ಪಡೆಯಲಿಲ್ಲ.

 – ಮಧುಸೂದನ್ ಗೌಡ

***

ದಯವಿಟ್ಟು ಇಂಥವನ್ನು ಯೋಧರಿಗೆ ಹೊಳಿಸಬೇಡಿ ಸರ್. ನಮ್ಮ ಯೋಧರಿಗೆ ಮಾಡುವ ಅವಮಾನ ಅದಾಗುತ್ತೆ. ನಮ್ಮ ಯೋಧರು ವೀರರು. ಎಂದೂ ತಲೆ ಬಾಗಲಾರರು.

 – ವಿಕಾಸ್ ಗೌಡ

***

ಹೀಗೆ ಸಾವಿರಾರು ಜನರು ಕಮೆಂಟ್ ಮಾಡಿದ್ದಾರೆ. ಈ ಸುದ್ದಿ ಬರೆಯುವ ವೇಳೆಗೆ ಸಿಎಂಗೆ ಪೋಸ್ಟ್‌ಗೆ ಒಂದೂವರೆ ಸಾವಿರದಷ್ಟು ಜನರು ‘ಹಹಹ’ (😆) ರಿಯಾಕ್ಷನ್‌ ಒತ್ತಿದ್ದಾರೆ. ನಗುವ ಇಮೋಜಿಯೇ ಹೆಚ್ಚಿನ ಸಂಖ್ಯೆಯಲ್ಲಿದೆ.


ಇದನ್ನೂ ಓದಿರಿ: ಸಾವರ್ಕರ್‌‌‌ಗೆ ಗೋಮಾಂಸ ತಿನ್ನುವುದರ ಬಗ್ಗೆ ಯಾವುದೆ ತಕರಾರು ಇರಲಿಲ್ಲ: ದಿಗ್ವಿಜಯ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬರೇ ಸತ್ತು ಈ ಭೂಮಿ ಮೇಲೆ ಇಲ್ಲದವರ ಬಗ್ಗೆ ( ನೆಹರು, ಟಿಪ್ಪು, ಮೊಘಲರು, ಗಾಂಧೀ, ಔರಂಗಜೇಬ್, ಸಾವರ್ಕರ್, ಮುಂತಾದವರು.) ಬದುಕಿರುವ ಮನುಷ್ಯರ ಸಮಸ್ಯೆಗಳ ಬಗ್ಗೆ ಅಪ್ಪಿ ತಪ್ಪಿಯೂ ಮಾತಾಡಲ್ಲ . ಯಾವ ಸೀಮೆ ನಾಯಕರೋ ಇವರು.

  2. ಯಜಮಾನನ ಅನ್ನದ ಋಣ ಇರುವ ಶ್ವಾನ ಸ್ವಾಮಿ ನಿಷ್ಠೆ ಪ್ರದರ್ಶಿಸಿದೆ,ತಪ್ಪೇನು!?😁

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...