Homeಕರ್ನಾಟಕಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಅವರನ್ನು ಶ್ಲಾಘಿಸಿ ಮಾಡಿರುವ ಪೋಸ್ಟ್‌ಗೆ ರಾಜ್ಯದ ಜನತೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿಯವರಿಗೆ ಇತಿಹಾಸದ ಪುಟಗಳನ್ನು ವಿವರಿಸಿದ್ದಾರೆ.

“ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಫೂರ್ತಿದಾಯಕವಾಗಿವೆ” ಎಂದು ಬೊಮ್ಮಾಯಿಯವರು ಪೋಸ್ಟ್ ಹಾಕಿದ್ದಾರೆ.

ಆರ್‌ಎಸ್‌ಎಸ್‌ನ ಪ್ರಮುಖ ಮುಖಗಳಲ್ಲಿ ಸಾವರ್ಕರ್‌ ಒಬ್ಬರು. ಹಿಂದುತ್ವವಾದಿಯಾಗಿದ್ದರು. ಸಾವರ್ಕರ್‌ ಜೈಲಿಗೆ ಸೇರಿದ ಬಳಿಕ ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು. ಹೀಗಾಗಿ ಸಾವರ್ಕರ್‌ ಅವರನ್ನು ಪ್ರಖರ ಸ್ವಾತಂತ್ರ್ಯ ಹೋರಾಟಗಾರ ಎಂದೆಲ್ಲ ಸಂಘಪರಿವಾರ ಬಣ್ಣಿಸುವುದನ್ನು ಜನರು ಟೀಕಿಸುತ್ತಾ ಬಂದಿದ್ದಾರೆ. ಸಾವರ್ಕರ್‌ಗೆ ಅಂಟಿರುವ ಕ್ಷಮಾಪಣೆಯ ಇತಿಹಾಸವನ್ನು ಮುಚ್ಚಿಹಾಕುವ ಅಥವಾ ತಿರುಚುವ ಯತ್ನವನ್ನು ಸಂಘಪರಿವಾರವೂ ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

“ಸಾವರ್ಕರ್‌ ಅವರು ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ಕೆಲವು ತಿಂಗಳ ಹಿಂದೆ ಹೇಳಿದ್ದರು. “ರಾಜನಾಥ್‌ ಸಿಂಗ್ ಹೇಳಿಕೆ ಹಾಸ್ಯಾಸ್ಪದ, ಅಸಂಬದ್ಧ ಹಾಗೂ ವಿವೇಚನಾ ರಹಿತ” ಎಂದು ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯಿಸಿದ್ದರು.

“ಸಾವರ್ಕರ್‌ ಅವರು ಹಲವು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ಹೇಳುವುದು ತಪ್ಪೆಂದು ರಾಜನಾಥ್ ಸಿಂಗ್‌ ಹೇಳಿರುವುದು ಸಂಪೂರ್ಣ ಸುಳ್ಳು. ಅಂಡಮಾನ್ ಜೈಲಿಗೆ ಹಾಕಿದ ಕೆಲವೇ ದಿನಗಳಲ್ಲಿ 1911ರಲ್ಲಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿದ್ದರು. ಅಲ್ಲದೆ ಸಾವರ್ಕರ್‌ ಅವರು ಒಟ್ಟು ಏಳು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು” ಎಂದು ರಾಜಮೋಹನ್‌ ಗಾಂಧಿ ಅವರು ‘ದಿ ವೈರ್’ ಸಂದರ್ಶನದಲ್ಲಿ ವಿವರಿಸಿದ್ದರು.

ಕ್ಷಮಾಪಣೆ ಕೇಳಲು ಇದ್ದ ಅವಕಾಶದಲ್ಲಿ ಬಿಡುಗಾಗಿ ಸಾವರ್ಕರ್‌ ಕೋರಿಕೆ ಸಲ್ಲಿಸಿದ್ದರು. “1913ರ ಕ್ಷಮಾಪಣಾ ಅರ್ಜಿಯಲ್ಲಿ ಸರ್ಕಾರ ತನ್ನ ಬಹುಮುಖ ಲಾಭ ಮತ್ತು ಕರುಣೆಯಲ್ಲಿ ನನ್ನನ್ನು ಬಿಡುಗಡೆ  ಮಾಡಲಿ” ಎಂದು ಕೇಳಿಕೊಂಡಿದ್ದರು. ಇದು ಕ್ಷಮಾಪಣೆಯಲ್ಲದೆ ಮತ್ತೇನು” ಎಂದು ಪ್ರಶ್ನಿಸಿದ್ದರು.

ಸಾವರ್ಕರ್ ಅವರ ಅಪರಾಧವನ್ನು ರಾಜಕೀಯ ಎಂದು ತೋರಿಸಲು ಗಾಂಧಿ ಪತ್ರವು ಸಲಹೆ ನೀಡಿದೆ. ಕ್ಷಮಾಪಣೆಗಾಗಿ ಮನವಿ ಮಾಡಲು ಗಾಂಧೀಜಿಯವರು ಪತ್ರ ಬರೆದಿಲ್ಲ. ಮುಖ್ಯವಾಗಿ ಸಾವರ್ಕರ್ ಅವರಿಗೆ ಗಾಂಧೀಜಿಯವರು ಪತ್ರ ಬರೆಯುವ ಒಂಬತ್ತು ವರ್ಷಗಳ ಮೊದಲೇ ಸಾವರ್ಕರ್‌ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆದಿದ್ದರು ಎಂದು ತಿಳಿಸಿದ್ದರು.

ರಾಜಮೋಹನ್ ಗಾಂಧಿಯವರ ಅಭಿಪ್ರಾಯವನ್ನೇ ಹಲವು ಇತಿಹಾಸಕಾರರು ತಿಳಿಸಿದ್ದಾರೆ. ಆದರೆ ಸಾವರ್ಕರ್ ಅವರನ್ನು ವೈಭವೀಕರಿಸುವುದು ನಡೆಯುತ್ತಲೇ ಇದೆ. ಬೊಮ್ಮಾಯಿಯವರ ಪೋಸ್ಟ್‌ನಲ್ಲೂ ಇದೇ ವೈಭವೀಕರಣ ಇರುವುದನ್ನು ಗುರುತಿಸಿರುವ ರಾಜ್ಯದ ಜನತೆ, ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿರಿ: ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ. – ಸಿದ್ದು

ಸಿಎಂ ಪೋಸ್ಟ್‌ಗೆ ಜನರ ಪ್ರತಿಕ್ರಿಯೆಗಳು (ಆಯ್ದ ಕಾಮೆಂಟ್‌ಗಳು ಇಲ್ಲಿವೆ)

ಬೊಮ್ಮಾಯಿಯವರೆˌ ಬ್ರಿಟೀಷರಿಗೆ ಕ್ಷಮಾಪಣೆ ಕೇಳಿ ಪಿಂಚಣೆ ಪಡೆದ ಈ ಚಿತ್ಪಾವನ ವ್ಯಕ್ತಿಗೆ ಶುಭಾಶಯ ಹೇಳುವ ಮೊದಲು ಒಂದು ಕ್ಷಣ ನಿಮ್ಮ ತಂದೆಯವರು ನಂಬಿದ ಸಿದ್ಧಾಂತ ಸ್ಮರಿಸಿಕೊಳ್ಳಿ. ಅಧಿಕಾರದಾಸೆಗೆ ನೀವೆಲ್ಲ ಸಂಘಿಗಳ ಮನೆ ಕಾಯುವ ಬದಲಿಗೆ ಸಂಘಿಗಳು ನಿಮ್ಮ ಮನೆ ಕಾಯುವಂತೆ ಬದುಕುವುದು ಯಾವಾಗ?

 – ಜೆ.ಎಸ್.ಪಾಟೀಲ್‌

****

“ಧರ್ಮಸ್ಥಳದಲ್ಲಿ ಇದೇ ಸಾವರ್ಕರ್ ಅನುಯಾಯಿ ದಲಿತ ಯುವಕನನ್ನು ಕೊಲೆ ಮಾಡಿದ್ದಾನೆ. ಆ ಕಡೆ ನಿಮ್ಮವರಾರೂ ಸುಳಿದಿಲ್ಲ”

– ಹೇಮಾ ವೆಂಕಟ್‌‌

***

ಇವರು ಗಾಂಧಿ ಹತ್ಯೆಯ ಆರೋಪಿ ಅಲ್ವಾ? ಬ್ರಿಟಿಷರಿಗೆ ನಿರಂತರ ಕ್ಷಮಾಪಣ ಪತ್ರ ನೀಡಿ ಸದಾ ಕಾಲ ನಿಮಗೆ ವಿದೇಯನಾಗಿರುವೆ ಎಂದು ಬರೆದುಕೊಟ್ಟು ಜೈಲಿನಿಂದ ಹೊರಬಂದು ಬ್ರಿಟಿಷರ ಪಿಂಚಣಿ (ಆ ಕಾಲದ 50 ರುಪಾಯಿ) ಪಡೆದು ಬದುಕಿದ ಈತ ವೀರ ಆಗುವುದು ಹೇಗೆ? ಭಾರತದ ಸ್ವಾತಂತ್ರ್ಯಕ್ಕೆ ಆತನ ಕೊಡುಗೆ ಏನು?!

– ಶ್ರೀನಿವಾಸ ಕಾರ್ಕಳ

***

ಬ್ರಿಟಿಷರೆದುರು ಹೋರಾಡಿ ಮಡಿದ ಟಿಪ್ಪುವನ್ನು ದ್ವೇಷಿಸುವ, ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಸಂಗೊಳ್ಳಿ ರಾಯಣ್ಣ, ಆಜೀವ ಬಂಧಿಯಾದ ರಾಣಿ ಚೆನ್ನಮ್ಮರ ಪರಂಪರೆಯನ್ನು ನಾಶ ಮಾಡುವ, ಮಹಾತ್ಮ ಗಾಂಧಿಯವರನ್ನೇ ನಿಂದಿಸುವ, ಅವರ ಹತ್ಯೆಯನ್ನು ಸಮರ್ಥಿಸುವ, ನೆಹರೂ ಅವರಂಥವರನ್ನು ದಿನನಿತ್ಯ ನಿಂದಿಸುವ, ದೊರೆಸ್ವಾಮಿಯವರಂಥ ಸ್ವಾತಂತ್ರ್ಯಯೋಧರನ್ನು ಹಂಗಿಸುತ್ತಲೇ ಇದ್ದ, ಸ್ವಾತಂತ್ರ್ಯ ಚಳವಳಿಯಲ್ಲಾಗಲೀ, ದೇಶ ನಿರ್ಮಾಣದಲ್ಲಾಗಲೀ ಯಾವುದೇ ಕೊಡುಗೆ ನೀಡಿರದ ಪಕ್ಷದವರಿಂದ ಬೇರೇನು ನಿರೀಕ್ಷಿಸಬಹುದು?

 – ಡಾ.ಶ್ರೀನಿವಾಸ ಕಕ್ಕಿಲಾಯ

***

ಇದನ್ನೂ ಓದಿರಿ: ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಐ ಆಮ್ ವೆರಿ ಸೋರಿ ಮಿಸ್ಟರ್ ಬೊಮ್ಮಾಯಿ ಸಾರ್. ಸೋರಿ ಡೇ ಅನ್ನು ಮರೆತಿದಕ್ಕೆ ಸೋರಿ ಸೋರಿ ಸೋರಿ. ಹ್ಯಾಪಿ ಸೋರಿ ಡೇ ಸಾರ್.

– ರಹೀಮ್ ಭಾಷಾ

***

ಬ್ರಿಟಿಷರಿಗೆ ಕ್ಷಮಾಪಣೆ ಪತ್ ರಬರೆದವರು ಸ್ವಾತಂತ್ರ್ಯ ಹೋರಾಟಗಾರ ಇವರು ಯಾವಾಗ ಹೋರಾಟ ಮಾಡಿದ್ದಾರೆ ಮಾನ್ಯ ಮುಖ್ಯಮಂತ್ರಿ ಗಳೇ? ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ಒಮ್ಮೆ ಓದಿನೋಡಿ, ಎಲ್ಲಿಯಾದ್ರು ದಾಮೋದರ ಸಾವರ್ಕರ್ ಹೆಸರಿದೆಯಾ ನೋಡಿ…

– ಅಬ್ದುಲ್‌ ಹಮೀದ್‌

***

ಮುಖ್ಯಮಂತ್ರಿಗಳೇ, ನೀವು ಒಂದು ಜವಾಬ್ದಾರಿ ಸ್ಥಾನದಲ್ಲಿದ್ದುಕ್ಕೊಂಡು ರಾಷ್ಟ್ರಪಿತನ ಸಾವಿಗೆ ಕಾರಣವಾದ ವ್ಯಕ್ತಿಗೆ ಪುಣ್ಯ ಸ್ಮರಣೆ ಶುಭಾಶಯ ಹೇಳ್ತಾ ಇದೀರಲ್ಲ, ಬ್ರಿಟೀಷರ ಕ್ಷಮೆ ಕೇಳಿದ ಹೇಡಿ, ಬ್ರಿಟೀಷರ ಪಿಂಚಣಿ ತೆಗೆದುಕೊಂಡು ಬದುಕುತ್ತಿದ್ದ ವ್ಯಕ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರ ಅಂದ್ರೆ ಎಲ್ಲಿಂದ ನಗಬೇಕ್ರೀ? ನಮ್ ಕರ್ಮ ನೀವು ಈ ರಾಜ್ಯದ ಮುಖ್ಯಮಂತ್ರಿ ಆಗಿರುವುದು.

 -ಕುಶಾಲ್ ಬಿದರೆ

****

“ನೀವು ವೈಯಕ್ತಿಕವಾಗಿ ಸಮರ್ಥಿಸಿಕೊಳ್ಳಿ ಸರ್. ಆದರೆ ರಾಜ್ಯ ಮುಖ್ಯಮಂತ್ರಿಯಾಗಿ ಇವರನ್ನು ಸಮರ್ಥಿಸಿಕೊಳ್ಳಬೇಡಿ. ಹೆಮ್ಮೆಯ ಭಾರತ ಮಾತೆಯ ಪುತ್ರರು- ನಮ್ಮ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನವ್ವ. ಇವರು ಎಂದು ಬ್ರಿಟಿಶರ ಬಳಿ ಕ್ಷಮೆ ಕೇಳದೆ ವೀರ ವೇಶದಿಂದ ಹೋರಾಡಿ ದೇಶಕ್ಕೆ ಪ್ರಾಣ ಬಿಟ್ಟರು. ನಿಮ್ಮ ಸಾವರ್ಕರ್‌ ಥರ ಬ್ರಿಟಿಷರ ಬಳಿ ಕ್ಷಮೆ ಕೇಳಿ ಪಿಂಚಣಿ ಪಡೆಯಲಿಲ್ಲ.

 – ಮಧುಸೂದನ್ ಗೌಡ

***

ದಯವಿಟ್ಟು ಇಂಥವನ್ನು ಯೋಧರಿಗೆ ಹೊಳಿಸಬೇಡಿ ಸರ್. ನಮ್ಮ ಯೋಧರಿಗೆ ಮಾಡುವ ಅವಮಾನ ಅದಾಗುತ್ತೆ. ನಮ್ಮ ಯೋಧರು ವೀರರು. ಎಂದೂ ತಲೆ ಬಾಗಲಾರರು.

 – ವಿಕಾಸ್ ಗೌಡ

***

ಹೀಗೆ ಸಾವಿರಾರು ಜನರು ಕಮೆಂಟ್ ಮಾಡಿದ್ದಾರೆ. ಈ ಸುದ್ದಿ ಬರೆಯುವ ವೇಳೆಗೆ ಸಿಎಂಗೆ ಪೋಸ್ಟ್‌ಗೆ ಒಂದೂವರೆ ಸಾವಿರದಷ್ಟು ಜನರು ‘ಹಹಹ’ (😆) ರಿಯಾಕ್ಷನ್‌ ಒತ್ತಿದ್ದಾರೆ. ನಗುವ ಇಮೋಜಿಯೇ ಹೆಚ್ಚಿನ ಸಂಖ್ಯೆಯಲ್ಲಿದೆ.


ಇದನ್ನೂ ಓದಿರಿ: ಸಾವರ್ಕರ್‌‌‌ಗೆ ಗೋಮಾಂಸ ತಿನ್ನುವುದರ ಬಗ್ಗೆ ಯಾವುದೆ ತಕರಾರು ಇರಲಿಲ್ಲ: ದಿಗ್ವಿಜಯ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬರೇ ಸತ್ತು ಈ ಭೂಮಿ ಮೇಲೆ ಇಲ್ಲದವರ ಬಗ್ಗೆ ( ನೆಹರು, ಟಿಪ್ಪು, ಮೊಘಲರು, ಗಾಂಧೀ, ಔರಂಗಜೇಬ್, ಸಾವರ್ಕರ್, ಮುಂತಾದವರು.) ಬದುಕಿರುವ ಮನುಷ್ಯರ ಸಮಸ್ಯೆಗಳ ಬಗ್ಗೆ ಅಪ್ಪಿ ತಪ್ಪಿಯೂ ಮಾತಾಡಲ್ಲ . ಯಾವ ಸೀಮೆ ನಾಯಕರೋ ಇವರು.

  2. ಯಜಮಾನನ ಅನ್ನದ ಋಣ ಇರುವ ಶ್ವಾನ ಸ್ವಾಮಿ ನಿಷ್ಠೆ ಪ್ರದರ್ಶಿಸಿದೆ,ತಪ್ಪೇನು!?😁

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...