Homeಕರ್ನಾಟಕಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಅವರನ್ನು ಶ್ಲಾಘಿಸಿ ಮಾಡಿರುವ ಪೋಸ್ಟ್‌ಗೆ ರಾಜ್ಯದ ಜನತೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿಯವರಿಗೆ ಇತಿಹಾಸದ ಪುಟಗಳನ್ನು ವಿವರಿಸಿದ್ದಾರೆ.

“ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಫೂರ್ತಿದಾಯಕವಾಗಿವೆ” ಎಂದು ಬೊಮ್ಮಾಯಿಯವರು ಪೋಸ್ಟ್ ಹಾಕಿದ್ದಾರೆ.

ಆರ್‌ಎಸ್‌ಎಸ್‌ನ ಪ್ರಮುಖ ಮುಖಗಳಲ್ಲಿ ಸಾವರ್ಕರ್‌ ಒಬ್ಬರು. ಹಿಂದುತ್ವವಾದಿಯಾಗಿದ್ದರು. ಸಾವರ್ಕರ್‌ ಜೈಲಿಗೆ ಸೇರಿದ ಬಳಿಕ ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು. ಹೀಗಾಗಿ ಸಾವರ್ಕರ್‌ ಅವರನ್ನು ಪ್ರಖರ ಸ್ವಾತಂತ್ರ್ಯ ಹೋರಾಟಗಾರ ಎಂದೆಲ್ಲ ಸಂಘಪರಿವಾರ ಬಣ್ಣಿಸುವುದನ್ನು ಜನರು ಟೀಕಿಸುತ್ತಾ ಬಂದಿದ್ದಾರೆ. ಸಾವರ್ಕರ್‌ಗೆ ಅಂಟಿರುವ ಕ್ಷಮಾಪಣೆಯ ಇತಿಹಾಸವನ್ನು ಮುಚ್ಚಿಹಾಕುವ ಅಥವಾ ತಿರುಚುವ ಯತ್ನವನ್ನು ಸಂಘಪರಿವಾರವೂ ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

“ಸಾವರ್ಕರ್‌ ಅವರು ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ಕೆಲವು ತಿಂಗಳ ಹಿಂದೆ ಹೇಳಿದ್ದರು. “ರಾಜನಾಥ್‌ ಸಿಂಗ್ ಹೇಳಿಕೆ ಹಾಸ್ಯಾಸ್ಪದ, ಅಸಂಬದ್ಧ ಹಾಗೂ ವಿವೇಚನಾ ರಹಿತ” ಎಂದು ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯಿಸಿದ್ದರು.

“ಸಾವರ್ಕರ್‌ ಅವರು ಹಲವು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ಹೇಳುವುದು ತಪ್ಪೆಂದು ರಾಜನಾಥ್ ಸಿಂಗ್‌ ಹೇಳಿರುವುದು ಸಂಪೂರ್ಣ ಸುಳ್ಳು. ಅಂಡಮಾನ್ ಜೈಲಿಗೆ ಹಾಕಿದ ಕೆಲವೇ ದಿನಗಳಲ್ಲಿ 1911ರಲ್ಲಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿದ್ದರು. ಅಲ್ಲದೆ ಸಾವರ್ಕರ್‌ ಅವರು ಒಟ್ಟು ಏಳು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು” ಎಂದು ರಾಜಮೋಹನ್‌ ಗಾಂಧಿ ಅವರು ‘ದಿ ವೈರ್’ ಸಂದರ್ಶನದಲ್ಲಿ ವಿವರಿಸಿದ್ದರು.

ಕ್ಷಮಾಪಣೆ ಕೇಳಲು ಇದ್ದ ಅವಕಾಶದಲ್ಲಿ ಬಿಡುಗಾಗಿ ಸಾವರ್ಕರ್‌ ಕೋರಿಕೆ ಸಲ್ಲಿಸಿದ್ದರು. “1913ರ ಕ್ಷಮಾಪಣಾ ಅರ್ಜಿಯಲ್ಲಿ ಸರ್ಕಾರ ತನ್ನ ಬಹುಮುಖ ಲಾಭ ಮತ್ತು ಕರುಣೆಯಲ್ಲಿ ನನ್ನನ್ನು ಬಿಡುಗಡೆ  ಮಾಡಲಿ” ಎಂದು ಕೇಳಿಕೊಂಡಿದ್ದರು. ಇದು ಕ್ಷಮಾಪಣೆಯಲ್ಲದೆ ಮತ್ತೇನು” ಎಂದು ಪ್ರಶ್ನಿಸಿದ್ದರು.

ಸಾವರ್ಕರ್ ಅವರ ಅಪರಾಧವನ್ನು ರಾಜಕೀಯ ಎಂದು ತೋರಿಸಲು ಗಾಂಧಿ ಪತ್ರವು ಸಲಹೆ ನೀಡಿದೆ. ಕ್ಷಮಾಪಣೆಗಾಗಿ ಮನವಿ ಮಾಡಲು ಗಾಂಧೀಜಿಯವರು ಪತ್ರ ಬರೆದಿಲ್ಲ. ಮುಖ್ಯವಾಗಿ ಸಾವರ್ಕರ್ ಅವರಿಗೆ ಗಾಂಧೀಜಿಯವರು ಪತ್ರ ಬರೆಯುವ ಒಂಬತ್ತು ವರ್ಷಗಳ ಮೊದಲೇ ಸಾವರ್ಕರ್‌ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆದಿದ್ದರು ಎಂದು ತಿಳಿಸಿದ್ದರು.

ರಾಜಮೋಹನ್ ಗಾಂಧಿಯವರ ಅಭಿಪ್ರಾಯವನ್ನೇ ಹಲವು ಇತಿಹಾಸಕಾರರು ತಿಳಿಸಿದ್ದಾರೆ. ಆದರೆ ಸಾವರ್ಕರ್ ಅವರನ್ನು ವೈಭವೀಕರಿಸುವುದು ನಡೆಯುತ್ತಲೇ ಇದೆ. ಬೊಮ್ಮಾಯಿಯವರ ಪೋಸ್ಟ್‌ನಲ್ಲೂ ಇದೇ ವೈಭವೀಕರಣ ಇರುವುದನ್ನು ಗುರುತಿಸಿರುವ ರಾಜ್ಯದ ಜನತೆ, ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿರಿ: ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ. – ಸಿದ್ದು

ಸಿಎಂ ಪೋಸ್ಟ್‌ಗೆ ಜನರ ಪ್ರತಿಕ್ರಿಯೆಗಳು (ಆಯ್ದ ಕಾಮೆಂಟ್‌ಗಳು ಇಲ್ಲಿವೆ)

ಬೊಮ್ಮಾಯಿಯವರೆˌ ಬ್ರಿಟೀಷರಿಗೆ ಕ್ಷಮಾಪಣೆ ಕೇಳಿ ಪಿಂಚಣೆ ಪಡೆದ ಈ ಚಿತ್ಪಾವನ ವ್ಯಕ್ತಿಗೆ ಶುಭಾಶಯ ಹೇಳುವ ಮೊದಲು ಒಂದು ಕ್ಷಣ ನಿಮ್ಮ ತಂದೆಯವರು ನಂಬಿದ ಸಿದ್ಧಾಂತ ಸ್ಮರಿಸಿಕೊಳ್ಳಿ. ಅಧಿಕಾರದಾಸೆಗೆ ನೀವೆಲ್ಲ ಸಂಘಿಗಳ ಮನೆ ಕಾಯುವ ಬದಲಿಗೆ ಸಂಘಿಗಳು ನಿಮ್ಮ ಮನೆ ಕಾಯುವಂತೆ ಬದುಕುವುದು ಯಾವಾಗ?

 – ಜೆ.ಎಸ್.ಪಾಟೀಲ್‌

****

“ಧರ್ಮಸ್ಥಳದಲ್ಲಿ ಇದೇ ಸಾವರ್ಕರ್ ಅನುಯಾಯಿ ದಲಿತ ಯುವಕನನ್ನು ಕೊಲೆ ಮಾಡಿದ್ದಾನೆ. ಆ ಕಡೆ ನಿಮ್ಮವರಾರೂ ಸುಳಿದಿಲ್ಲ”

– ಹೇಮಾ ವೆಂಕಟ್‌‌

***

ಇವರು ಗಾಂಧಿ ಹತ್ಯೆಯ ಆರೋಪಿ ಅಲ್ವಾ? ಬ್ರಿಟಿಷರಿಗೆ ನಿರಂತರ ಕ್ಷಮಾಪಣ ಪತ್ರ ನೀಡಿ ಸದಾ ಕಾಲ ನಿಮಗೆ ವಿದೇಯನಾಗಿರುವೆ ಎಂದು ಬರೆದುಕೊಟ್ಟು ಜೈಲಿನಿಂದ ಹೊರಬಂದು ಬ್ರಿಟಿಷರ ಪಿಂಚಣಿ (ಆ ಕಾಲದ 50 ರುಪಾಯಿ) ಪಡೆದು ಬದುಕಿದ ಈತ ವೀರ ಆಗುವುದು ಹೇಗೆ? ಭಾರತದ ಸ್ವಾತಂತ್ರ್ಯಕ್ಕೆ ಆತನ ಕೊಡುಗೆ ಏನು?!

– ಶ್ರೀನಿವಾಸ ಕಾರ್ಕಳ

***

ಬ್ರಿಟಿಷರೆದುರು ಹೋರಾಡಿ ಮಡಿದ ಟಿಪ್ಪುವನ್ನು ದ್ವೇಷಿಸುವ, ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಸಂಗೊಳ್ಳಿ ರಾಯಣ್ಣ, ಆಜೀವ ಬಂಧಿಯಾದ ರಾಣಿ ಚೆನ್ನಮ್ಮರ ಪರಂಪರೆಯನ್ನು ನಾಶ ಮಾಡುವ, ಮಹಾತ್ಮ ಗಾಂಧಿಯವರನ್ನೇ ನಿಂದಿಸುವ, ಅವರ ಹತ್ಯೆಯನ್ನು ಸಮರ್ಥಿಸುವ, ನೆಹರೂ ಅವರಂಥವರನ್ನು ದಿನನಿತ್ಯ ನಿಂದಿಸುವ, ದೊರೆಸ್ವಾಮಿಯವರಂಥ ಸ್ವಾತಂತ್ರ್ಯಯೋಧರನ್ನು ಹಂಗಿಸುತ್ತಲೇ ಇದ್ದ, ಸ್ವಾತಂತ್ರ್ಯ ಚಳವಳಿಯಲ್ಲಾಗಲೀ, ದೇಶ ನಿರ್ಮಾಣದಲ್ಲಾಗಲೀ ಯಾವುದೇ ಕೊಡುಗೆ ನೀಡಿರದ ಪಕ್ಷದವರಿಂದ ಬೇರೇನು ನಿರೀಕ್ಷಿಸಬಹುದು?

 – ಡಾ.ಶ್ರೀನಿವಾಸ ಕಕ್ಕಿಲಾಯ

***

ಇದನ್ನೂ ಓದಿರಿ: ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಐ ಆಮ್ ವೆರಿ ಸೋರಿ ಮಿಸ್ಟರ್ ಬೊಮ್ಮಾಯಿ ಸಾರ್. ಸೋರಿ ಡೇ ಅನ್ನು ಮರೆತಿದಕ್ಕೆ ಸೋರಿ ಸೋರಿ ಸೋರಿ. ಹ್ಯಾಪಿ ಸೋರಿ ಡೇ ಸಾರ್.

– ರಹೀಮ್ ಭಾಷಾ

***

ಬ್ರಿಟಿಷರಿಗೆ ಕ್ಷಮಾಪಣೆ ಪತ್ ರಬರೆದವರು ಸ್ವಾತಂತ್ರ್ಯ ಹೋರಾಟಗಾರ ಇವರು ಯಾವಾಗ ಹೋರಾಟ ಮಾಡಿದ್ದಾರೆ ಮಾನ್ಯ ಮುಖ್ಯಮಂತ್ರಿ ಗಳೇ? ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ಒಮ್ಮೆ ಓದಿನೋಡಿ, ಎಲ್ಲಿಯಾದ್ರು ದಾಮೋದರ ಸಾವರ್ಕರ್ ಹೆಸರಿದೆಯಾ ನೋಡಿ…

– ಅಬ್ದುಲ್‌ ಹಮೀದ್‌

***

ಮುಖ್ಯಮಂತ್ರಿಗಳೇ, ನೀವು ಒಂದು ಜವಾಬ್ದಾರಿ ಸ್ಥಾನದಲ್ಲಿದ್ದುಕ್ಕೊಂಡು ರಾಷ್ಟ್ರಪಿತನ ಸಾವಿಗೆ ಕಾರಣವಾದ ವ್ಯಕ್ತಿಗೆ ಪುಣ್ಯ ಸ್ಮರಣೆ ಶುಭಾಶಯ ಹೇಳ್ತಾ ಇದೀರಲ್ಲ, ಬ್ರಿಟೀಷರ ಕ್ಷಮೆ ಕೇಳಿದ ಹೇಡಿ, ಬ್ರಿಟೀಷರ ಪಿಂಚಣಿ ತೆಗೆದುಕೊಂಡು ಬದುಕುತ್ತಿದ್ದ ವ್ಯಕ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರ ಅಂದ್ರೆ ಎಲ್ಲಿಂದ ನಗಬೇಕ್ರೀ? ನಮ್ ಕರ್ಮ ನೀವು ಈ ರಾಜ್ಯದ ಮುಖ್ಯಮಂತ್ರಿ ಆಗಿರುವುದು.

 -ಕುಶಾಲ್ ಬಿದರೆ

****

“ನೀವು ವೈಯಕ್ತಿಕವಾಗಿ ಸಮರ್ಥಿಸಿಕೊಳ್ಳಿ ಸರ್. ಆದರೆ ರಾಜ್ಯ ಮುಖ್ಯಮಂತ್ರಿಯಾಗಿ ಇವರನ್ನು ಸಮರ್ಥಿಸಿಕೊಳ್ಳಬೇಡಿ. ಹೆಮ್ಮೆಯ ಭಾರತ ಮಾತೆಯ ಪುತ್ರರು- ನಮ್ಮ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನವ್ವ. ಇವರು ಎಂದು ಬ್ರಿಟಿಶರ ಬಳಿ ಕ್ಷಮೆ ಕೇಳದೆ ವೀರ ವೇಶದಿಂದ ಹೋರಾಡಿ ದೇಶಕ್ಕೆ ಪ್ರಾಣ ಬಿಟ್ಟರು. ನಿಮ್ಮ ಸಾವರ್ಕರ್‌ ಥರ ಬ್ರಿಟಿಷರ ಬಳಿ ಕ್ಷಮೆ ಕೇಳಿ ಪಿಂಚಣಿ ಪಡೆಯಲಿಲ್ಲ.

 – ಮಧುಸೂದನ್ ಗೌಡ

***

ದಯವಿಟ್ಟು ಇಂಥವನ್ನು ಯೋಧರಿಗೆ ಹೊಳಿಸಬೇಡಿ ಸರ್. ನಮ್ಮ ಯೋಧರಿಗೆ ಮಾಡುವ ಅವಮಾನ ಅದಾಗುತ್ತೆ. ನಮ್ಮ ಯೋಧರು ವೀರರು. ಎಂದೂ ತಲೆ ಬಾಗಲಾರರು.

 – ವಿಕಾಸ್ ಗೌಡ

***

ಹೀಗೆ ಸಾವಿರಾರು ಜನರು ಕಮೆಂಟ್ ಮಾಡಿದ್ದಾರೆ. ಈ ಸುದ್ದಿ ಬರೆಯುವ ವೇಳೆಗೆ ಸಿಎಂಗೆ ಪೋಸ್ಟ್‌ಗೆ ಒಂದೂವರೆ ಸಾವಿರದಷ್ಟು ಜನರು ‘ಹಹಹ’ (😆) ರಿಯಾಕ್ಷನ್‌ ಒತ್ತಿದ್ದಾರೆ. ನಗುವ ಇಮೋಜಿಯೇ ಹೆಚ್ಚಿನ ಸಂಖ್ಯೆಯಲ್ಲಿದೆ.


ಇದನ್ನೂ ಓದಿರಿ: ಸಾವರ್ಕರ್‌‌‌ಗೆ ಗೋಮಾಂಸ ತಿನ್ನುವುದರ ಬಗ್ಗೆ ಯಾವುದೆ ತಕರಾರು ಇರಲಿಲ್ಲ: ದಿಗ್ವಿಜಯ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬರೇ ಸತ್ತು ಈ ಭೂಮಿ ಮೇಲೆ ಇಲ್ಲದವರ ಬಗ್ಗೆ ( ನೆಹರು, ಟಿಪ್ಪು, ಮೊಘಲರು, ಗಾಂಧೀ, ಔರಂಗಜೇಬ್, ಸಾವರ್ಕರ್, ಮುಂತಾದವರು.) ಬದುಕಿರುವ ಮನುಷ್ಯರ ಸಮಸ್ಯೆಗಳ ಬಗ್ಗೆ ಅಪ್ಪಿ ತಪ್ಪಿಯೂ ಮಾತಾಡಲ್ಲ . ಯಾವ ಸೀಮೆ ನಾಯಕರೋ ಇವರು.

  2. ಯಜಮಾನನ ಅನ್ನದ ಋಣ ಇರುವ ಶ್ವಾನ ಸ್ವಾಮಿ ನಿಷ್ಠೆ ಪ್ರದರ್ಶಿಸಿದೆ,ತಪ್ಪೇನು!?😁

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...