Homeಕರ್ನಾಟಕಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಅವರನ್ನು ಶ್ಲಾಘಿಸಿ ಮಾಡಿರುವ ಪೋಸ್ಟ್‌ಗೆ ರಾಜ್ಯದ ಜನತೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿಯವರಿಗೆ ಇತಿಹಾಸದ ಪುಟಗಳನ್ನು ವಿವರಿಸಿದ್ದಾರೆ.

“ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಫೂರ್ತಿದಾಯಕವಾಗಿವೆ” ಎಂದು ಬೊಮ್ಮಾಯಿಯವರು ಪೋಸ್ಟ್ ಹಾಕಿದ್ದಾರೆ.

ಆರ್‌ಎಸ್‌ಎಸ್‌ನ ಪ್ರಮುಖ ಮುಖಗಳಲ್ಲಿ ಸಾವರ್ಕರ್‌ ಒಬ್ಬರು. ಹಿಂದುತ್ವವಾದಿಯಾಗಿದ್ದರು. ಸಾವರ್ಕರ್‌ ಜೈಲಿಗೆ ಸೇರಿದ ಬಳಿಕ ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು. ಹೀಗಾಗಿ ಸಾವರ್ಕರ್‌ ಅವರನ್ನು ಪ್ರಖರ ಸ್ವಾತಂತ್ರ್ಯ ಹೋರಾಟಗಾರ ಎಂದೆಲ್ಲ ಸಂಘಪರಿವಾರ ಬಣ್ಣಿಸುವುದನ್ನು ಜನರು ಟೀಕಿಸುತ್ತಾ ಬಂದಿದ್ದಾರೆ. ಸಾವರ್ಕರ್‌ಗೆ ಅಂಟಿರುವ ಕ್ಷಮಾಪಣೆಯ ಇತಿಹಾಸವನ್ನು ಮುಚ್ಚಿಹಾಕುವ ಅಥವಾ ತಿರುಚುವ ಯತ್ನವನ್ನು ಸಂಘಪರಿವಾರವೂ ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

“ಸಾವರ್ಕರ್‌ ಅವರು ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ಕೆಲವು ತಿಂಗಳ ಹಿಂದೆ ಹೇಳಿದ್ದರು. “ರಾಜನಾಥ್‌ ಸಿಂಗ್ ಹೇಳಿಕೆ ಹಾಸ್ಯಾಸ್ಪದ, ಅಸಂಬದ್ಧ ಹಾಗೂ ವಿವೇಚನಾ ರಹಿತ” ಎಂದು ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯಿಸಿದ್ದರು.

“ಸಾವರ್ಕರ್‌ ಅವರು ಹಲವು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ಹೇಳುವುದು ತಪ್ಪೆಂದು ರಾಜನಾಥ್ ಸಿಂಗ್‌ ಹೇಳಿರುವುದು ಸಂಪೂರ್ಣ ಸುಳ್ಳು. ಅಂಡಮಾನ್ ಜೈಲಿಗೆ ಹಾಕಿದ ಕೆಲವೇ ದಿನಗಳಲ್ಲಿ 1911ರಲ್ಲಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿದ್ದರು. ಅಲ್ಲದೆ ಸಾವರ್ಕರ್‌ ಅವರು ಒಟ್ಟು ಏಳು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು” ಎಂದು ರಾಜಮೋಹನ್‌ ಗಾಂಧಿ ಅವರು ‘ದಿ ವೈರ್’ ಸಂದರ್ಶನದಲ್ಲಿ ವಿವರಿಸಿದ್ದರು.

ಕ್ಷಮಾಪಣೆ ಕೇಳಲು ಇದ್ದ ಅವಕಾಶದಲ್ಲಿ ಬಿಡುಗಾಗಿ ಸಾವರ್ಕರ್‌ ಕೋರಿಕೆ ಸಲ್ಲಿಸಿದ್ದರು. “1913ರ ಕ್ಷಮಾಪಣಾ ಅರ್ಜಿಯಲ್ಲಿ ಸರ್ಕಾರ ತನ್ನ ಬಹುಮುಖ ಲಾಭ ಮತ್ತು ಕರುಣೆಯಲ್ಲಿ ನನ್ನನ್ನು ಬಿಡುಗಡೆ  ಮಾಡಲಿ” ಎಂದು ಕೇಳಿಕೊಂಡಿದ್ದರು. ಇದು ಕ್ಷಮಾಪಣೆಯಲ್ಲದೆ ಮತ್ತೇನು” ಎಂದು ಪ್ರಶ್ನಿಸಿದ್ದರು.

ಸಾವರ್ಕರ್ ಅವರ ಅಪರಾಧವನ್ನು ರಾಜಕೀಯ ಎಂದು ತೋರಿಸಲು ಗಾಂಧಿ ಪತ್ರವು ಸಲಹೆ ನೀಡಿದೆ. ಕ್ಷಮಾಪಣೆಗಾಗಿ ಮನವಿ ಮಾಡಲು ಗಾಂಧೀಜಿಯವರು ಪತ್ರ ಬರೆದಿಲ್ಲ. ಮುಖ್ಯವಾಗಿ ಸಾವರ್ಕರ್ ಅವರಿಗೆ ಗಾಂಧೀಜಿಯವರು ಪತ್ರ ಬರೆಯುವ ಒಂಬತ್ತು ವರ್ಷಗಳ ಮೊದಲೇ ಸಾವರ್ಕರ್‌ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆದಿದ್ದರು ಎಂದು ತಿಳಿಸಿದ್ದರು.

ರಾಜಮೋಹನ್ ಗಾಂಧಿಯವರ ಅಭಿಪ್ರಾಯವನ್ನೇ ಹಲವು ಇತಿಹಾಸಕಾರರು ತಿಳಿಸಿದ್ದಾರೆ. ಆದರೆ ಸಾವರ್ಕರ್ ಅವರನ್ನು ವೈಭವೀಕರಿಸುವುದು ನಡೆಯುತ್ತಲೇ ಇದೆ. ಬೊಮ್ಮಾಯಿಯವರ ಪೋಸ್ಟ್‌ನಲ್ಲೂ ಇದೇ ವೈಭವೀಕರಣ ಇರುವುದನ್ನು ಗುರುತಿಸಿರುವ ರಾಜ್ಯದ ಜನತೆ, ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿರಿ: ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ. – ಸಿದ್ದು

ಸಿಎಂ ಪೋಸ್ಟ್‌ಗೆ ಜನರ ಪ್ರತಿಕ್ರಿಯೆಗಳು (ಆಯ್ದ ಕಾಮೆಂಟ್‌ಗಳು ಇಲ್ಲಿವೆ)

ಬೊಮ್ಮಾಯಿಯವರೆˌ ಬ್ರಿಟೀಷರಿಗೆ ಕ್ಷಮಾಪಣೆ ಕೇಳಿ ಪಿಂಚಣೆ ಪಡೆದ ಈ ಚಿತ್ಪಾವನ ವ್ಯಕ್ತಿಗೆ ಶುಭಾಶಯ ಹೇಳುವ ಮೊದಲು ಒಂದು ಕ್ಷಣ ನಿಮ್ಮ ತಂದೆಯವರು ನಂಬಿದ ಸಿದ್ಧಾಂತ ಸ್ಮರಿಸಿಕೊಳ್ಳಿ. ಅಧಿಕಾರದಾಸೆಗೆ ನೀವೆಲ್ಲ ಸಂಘಿಗಳ ಮನೆ ಕಾಯುವ ಬದಲಿಗೆ ಸಂಘಿಗಳು ನಿಮ್ಮ ಮನೆ ಕಾಯುವಂತೆ ಬದುಕುವುದು ಯಾವಾಗ?

 – ಜೆ.ಎಸ್.ಪಾಟೀಲ್‌

****

“ಧರ್ಮಸ್ಥಳದಲ್ಲಿ ಇದೇ ಸಾವರ್ಕರ್ ಅನುಯಾಯಿ ದಲಿತ ಯುವಕನನ್ನು ಕೊಲೆ ಮಾಡಿದ್ದಾನೆ. ಆ ಕಡೆ ನಿಮ್ಮವರಾರೂ ಸುಳಿದಿಲ್ಲ”

– ಹೇಮಾ ವೆಂಕಟ್‌‌

***

ಇವರು ಗಾಂಧಿ ಹತ್ಯೆಯ ಆರೋಪಿ ಅಲ್ವಾ? ಬ್ರಿಟಿಷರಿಗೆ ನಿರಂತರ ಕ್ಷಮಾಪಣ ಪತ್ರ ನೀಡಿ ಸದಾ ಕಾಲ ನಿಮಗೆ ವಿದೇಯನಾಗಿರುವೆ ಎಂದು ಬರೆದುಕೊಟ್ಟು ಜೈಲಿನಿಂದ ಹೊರಬಂದು ಬ್ರಿಟಿಷರ ಪಿಂಚಣಿ (ಆ ಕಾಲದ 50 ರುಪಾಯಿ) ಪಡೆದು ಬದುಕಿದ ಈತ ವೀರ ಆಗುವುದು ಹೇಗೆ? ಭಾರತದ ಸ್ವಾತಂತ್ರ್ಯಕ್ಕೆ ಆತನ ಕೊಡುಗೆ ಏನು?!

– ಶ್ರೀನಿವಾಸ ಕಾರ್ಕಳ

***

ಬ್ರಿಟಿಷರೆದುರು ಹೋರಾಡಿ ಮಡಿದ ಟಿಪ್ಪುವನ್ನು ದ್ವೇಷಿಸುವ, ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಸಂಗೊಳ್ಳಿ ರಾಯಣ್ಣ, ಆಜೀವ ಬಂಧಿಯಾದ ರಾಣಿ ಚೆನ್ನಮ್ಮರ ಪರಂಪರೆಯನ್ನು ನಾಶ ಮಾಡುವ, ಮಹಾತ್ಮ ಗಾಂಧಿಯವರನ್ನೇ ನಿಂದಿಸುವ, ಅವರ ಹತ್ಯೆಯನ್ನು ಸಮರ್ಥಿಸುವ, ನೆಹರೂ ಅವರಂಥವರನ್ನು ದಿನನಿತ್ಯ ನಿಂದಿಸುವ, ದೊರೆಸ್ವಾಮಿಯವರಂಥ ಸ್ವಾತಂತ್ರ್ಯಯೋಧರನ್ನು ಹಂಗಿಸುತ್ತಲೇ ಇದ್ದ, ಸ್ವಾತಂತ್ರ್ಯ ಚಳವಳಿಯಲ್ಲಾಗಲೀ, ದೇಶ ನಿರ್ಮಾಣದಲ್ಲಾಗಲೀ ಯಾವುದೇ ಕೊಡುಗೆ ನೀಡಿರದ ಪಕ್ಷದವರಿಂದ ಬೇರೇನು ನಿರೀಕ್ಷಿಸಬಹುದು?

 – ಡಾ.ಶ್ರೀನಿವಾಸ ಕಕ್ಕಿಲಾಯ

***

ಇದನ್ನೂ ಓದಿರಿ: ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಐ ಆಮ್ ವೆರಿ ಸೋರಿ ಮಿಸ್ಟರ್ ಬೊಮ್ಮಾಯಿ ಸಾರ್. ಸೋರಿ ಡೇ ಅನ್ನು ಮರೆತಿದಕ್ಕೆ ಸೋರಿ ಸೋರಿ ಸೋರಿ. ಹ್ಯಾಪಿ ಸೋರಿ ಡೇ ಸಾರ್.

– ರಹೀಮ್ ಭಾಷಾ

***

ಬ್ರಿಟಿಷರಿಗೆ ಕ್ಷಮಾಪಣೆ ಪತ್ ರಬರೆದವರು ಸ್ವಾತಂತ್ರ್ಯ ಹೋರಾಟಗಾರ ಇವರು ಯಾವಾಗ ಹೋರಾಟ ಮಾಡಿದ್ದಾರೆ ಮಾನ್ಯ ಮುಖ್ಯಮಂತ್ರಿ ಗಳೇ? ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ಒಮ್ಮೆ ಓದಿನೋಡಿ, ಎಲ್ಲಿಯಾದ್ರು ದಾಮೋದರ ಸಾವರ್ಕರ್ ಹೆಸರಿದೆಯಾ ನೋಡಿ…

– ಅಬ್ದುಲ್‌ ಹಮೀದ್‌

***

ಮುಖ್ಯಮಂತ್ರಿಗಳೇ, ನೀವು ಒಂದು ಜವಾಬ್ದಾರಿ ಸ್ಥಾನದಲ್ಲಿದ್ದುಕ್ಕೊಂಡು ರಾಷ್ಟ್ರಪಿತನ ಸಾವಿಗೆ ಕಾರಣವಾದ ವ್ಯಕ್ತಿಗೆ ಪುಣ್ಯ ಸ್ಮರಣೆ ಶುಭಾಶಯ ಹೇಳ್ತಾ ಇದೀರಲ್ಲ, ಬ್ರಿಟೀಷರ ಕ್ಷಮೆ ಕೇಳಿದ ಹೇಡಿ, ಬ್ರಿಟೀಷರ ಪಿಂಚಣಿ ತೆಗೆದುಕೊಂಡು ಬದುಕುತ್ತಿದ್ದ ವ್ಯಕ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರ ಅಂದ್ರೆ ಎಲ್ಲಿಂದ ನಗಬೇಕ್ರೀ? ನಮ್ ಕರ್ಮ ನೀವು ಈ ರಾಜ್ಯದ ಮುಖ್ಯಮಂತ್ರಿ ಆಗಿರುವುದು.

 -ಕುಶಾಲ್ ಬಿದರೆ

****

“ನೀವು ವೈಯಕ್ತಿಕವಾಗಿ ಸಮರ್ಥಿಸಿಕೊಳ್ಳಿ ಸರ್. ಆದರೆ ರಾಜ್ಯ ಮುಖ್ಯಮಂತ್ರಿಯಾಗಿ ಇವರನ್ನು ಸಮರ್ಥಿಸಿಕೊಳ್ಳಬೇಡಿ. ಹೆಮ್ಮೆಯ ಭಾರತ ಮಾತೆಯ ಪುತ್ರರು- ನಮ್ಮ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನವ್ವ. ಇವರು ಎಂದು ಬ್ರಿಟಿಶರ ಬಳಿ ಕ್ಷಮೆ ಕೇಳದೆ ವೀರ ವೇಶದಿಂದ ಹೋರಾಡಿ ದೇಶಕ್ಕೆ ಪ್ರಾಣ ಬಿಟ್ಟರು. ನಿಮ್ಮ ಸಾವರ್ಕರ್‌ ಥರ ಬ್ರಿಟಿಷರ ಬಳಿ ಕ್ಷಮೆ ಕೇಳಿ ಪಿಂಚಣಿ ಪಡೆಯಲಿಲ್ಲ.

 – ಮಧುಸೂದನ್ ಗೌಡ

***

ದಯವಿಟ್ಟು ಇಂಥವನ್ನು ಯೋಧರಿಗೆ ಹೊಳಿಸಬೇಡಿ ಸರ್. ನಮ್ಮ ಯೋಧರಿಗೆ ಮಾಡುವ ಅವಮಾನ ಅದಾಗುತ್ತೆ. ನಮ್ಮ ಯೋಧರು ವೀರರು. ಎಂದೂ ತಲೆ ಬಾಗಲಾರರು.

 – ವಿಕಾಸ್ ಗೌಡ

***

ಹೀಗೆ ಸಾವಿರಾರು ಜನರು ಕಮೆಂಟ್ ಮಾಡಿದ್ದಾರೆ. ಈ ಸುದ್ದಿ ಬರೆಯುವ ವೇಳೆಗೆ ಸಿಎಂಗೆ ಪೋಸ್ಟ್‌ಗೆ ಒಂದೂವರೆ ಸಾವಿರದಷ್ಟು ಜನರು ‘ಹಹಹ’ (😆) ರಿಯಾಕ್ಷನ್‌ ಒತ್ತಿದ್ದಾರೆ. ನಗುವ ಇಮೋಜಿಯೇ ಹೆಚ್ಚಿನ ಸಂಖ್ಯೆಯಲ್ಲಿದೆ.


ಇದನ್ನೂ ಓದಿರಿ: ಸಾವರ್ಕರ್‌‌‌ಗೆ ಗೋಮಾಂಸ ತಿನ್ನುವುದರ ಬಗ್ಗೆ ಯಾವುದೆ ತಕರಾರು ಇರಲಿಲ್ಲ: ದಿಗ್ವಿಜಯ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬರೇ ಸತ್ತು ಈ ಭೂಮಿ ಮೇಲೆ ಇಲ್ಲದವರ ಬಗ್ಗೆ ( ನೆಹರು, ಟಿಪ್ಪು, ಮೊಘಲರು, ಗಾಂಧೀ, ಔರಂಗಜೇಬ್, ಸಾವರ್ಕರ್, ಮುಂತಾದವರು.) ಬದುಕಿರುವ ಮನುಷ್ಯರ ಸಮಸ್ಯೆಗಳ ಬಗ್ಗೆ ಅಪ್ಪಿ ತಪ್ಪಿಯೂ ಮಾತಾಡಲ್ಲ . ಯಾವ ಸೀಮೆ ನಾಯಕರೋ ಇವರು.

  2. ಯಜಮಾನನ ಅನ್ನದ ಋಣ ಇರುವ ಶ್ವಾನ ಸ್ವಾಮಿ ನಿಷ್ಠೆ ಪ್ರದರ್ಶಿಸಿದೆ,ತಪ್ಪೇನು!?😁

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...