Homeಕರ್ನಾಟಕಕರಾವಳಿಯಲ್ಲಿ ಕೋಮುಗಲಭೆಗಳ ಇತಿಹಾಸ - ನಿಖಿಲ್‌ ಕೋಲ್ಪೆ

ಕರಾವಳಿಯಲ್ಲಿ ಕೋಮುಗಲಭೆಗಳ ಇತಿಹಾಸ – ನಿಖಿಲ್‌ ಕೋಲ್ಪೆ

- Advertisement -
- Advertisement -

1968ರಲ್ಲಿ ಕರಾವಳಿ ಕರ್ನಾಟಕದಲ್ಲಿ ಅದರಲ್ಲೂ ಉತ್ತರ ಕನ್ನಡದಲ್ಲಿ ಕೋಮು ಉದ್ರಿಕ್ತತೆ ಹೆಚ್ಚಿತ್ತು. ಸುಳ್ಳು ವದಂತಿಗಳು ದಕ್ಷಿಣ ಕನ್ನಡ ಜಿಲ್ಲೆಗೂ ತಲಪಿದವು. ಆ ಸಂದರ್ಭದಲ್ಲಿಯೇ ಮಂಗಳೂರಿನಲ್ಲಿ ಮಟನ್ ಖಾದರ್ ಎಂಬಾತನಿಗೂ, ಮೀನು ಮಾರುವ ಮೊಗವೀರ ಮಹಿಳೆಗೂ ಪ್ರೇಮಸಂಬಂಧವಿದೆ ಎಂಬ ವದಂತಿ ಗಲಭೆಗೆ ಕಾರಣವಾಯಿತು. ಈ ಗಲಭೆಯಲ್ಲಿ ಬಂದರು ಪ್ರದೇಶದಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾದ ಬಗ್ಗೆ ಮಾಹಿತಿ ಸಿಗುತ್ತದೆ.

ಮತ್ತೆ 1979ರಲ್ಲಿ ಖ್ಯಾತ ಚಿತ್ರ ನಿರ್ದೇಶಕ, ಲೇಖಕ ವಿಶುಕುಮಾರ್ ಅವರ ಕನ್ನಡ ಚಿತ್ರ ‘ಕರಾವಳಿ’ಯ ಕಾರಣದಿಂದ ಗಲಭೆ ಉಂಟಾಯಿತು. ಅದು ಮೀನುಗಾರ ಮುಸ್ಲಿಂ ಯುವಕ ಮತ್ತು ಮೊಗವೀರ ಸಮುದಾಯದ ಮಹಿಳೆಯ ನಡುವಿನ ಪ್ರೇಮಕತೆಯಾಗಿದ್ದುದೇ ಇದಕ್ಕೆ ಕಾರಣ. ಈ ಗಲಭೆಗಳು ಹೊಯ್ಗೆಬಜಾರ್, ಕುದ್ರೋಳಿ, ಬಂದರು ಮುಂತಾದ ಪ್ರದೇಶಗಳಲ್ಲಿ ತೀವ್ರವಾಗಿತ್ತು. ಈ ಘಟನೆಯಲ್ಲಿ ಕೆಲವರು ಪ್ರಾಣಕಳೆದುಕೊಂಡರು ಎಂದು ಹೇಳಲಾಗುತ್ತದೆಯಾದರೂ, ನಿಖರ ಮಾಹಿತಿ ಲಭ್ಯವಿಲ್ಲ. ಈ ಘಟನೆಯಲ್ಲಿ ಮುಸ್ಲಿಮರ ಮತ್ತು ಗೌಡ ಸಾರಸ್ವತ ಸಮುದಾಯದವರ ಹಲವಾರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಕೋಮುವಾದದ ಸಾಮಾಜಿಕ ಹಿನ್ನೆಲೆ; ಮೊದಲ ಕೋಮುಗಲಭೆ!

ಹಿಂದೆಲ್ಲಾ ಉಳ್ಳಾಲ ಪ್ರದೇಶವು ಕೋಮುಸೌಹಾರ್ದಕ್ಕೆ ಹೆಸರಾಗಿತ್ತು. ಇದಕ್ಕೆ ದೊಡ್ಡ ಇತಿಹಾಸವಿದ್ದು, ಆ ಕುರಿತು ಈಗಾಗಲೇ ಬರೆಯಲಾಗಿದೆ. ಕೃಷ್ಣಜನ್ಮಾಷ್ಟಮಿಯ ಸಂದರ್ಭದಲ್ಲಿ ಮುಸ್ಲಿಮರು ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದರು. 1980ರ ದಶಕದಲ್ಲಿ ಮಲ್ಲಕಂಭಕ್ಕೆ ಹಂದಿಯ ಕೊಬ್ಬನ್ನು ಸವರಲಾಗುತ್ತದೆ ಎಂದು ಇಂತಹಾ ಉತ್ಸವಗಳಲ್ಲಿ ಭಾಗವಹಿಸುವುದನ್ನು ‘ಶಿರ್ಕ್’ ಎಂದು ಕರೆಯುವ ಕೆಲವು ಸಂಪ್ರದಾಯವಾದಿ ಮುಸ್ಲಿಮರು ವದಂತಿ ಹಬ್ಬಿದರು. ಆಗಿನಿಂದ ಮುಸ್ಲಿಮರ ಭಾಗವಹಿಸುವಿಕೆ ಕಡಿಮೆಯಾಗುತ್ತಾ ಹೋಯಿತು. ಇಂದು ಸಾಮಾನ್ಯ ಸ್ಥಿತಿಯಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದದಿಂದಲೇ ಸಹಬಾಳ್ವೆ ನಡೆಸುತ್ತಿದ್ದರೂ, ಸದಾ ಬೂದಿ ಮುಚ್ಚಿದ ಕೆಂಡದಂತೆ ಇರುತ್ತದೆ. ಕೆಲವು ಸಂದರ್ಭಗಳಲ್ಲಿ ಅದು ಸ್ಫೋಟಕ ಸ್ಥಿತಿ ತಲಪುತ್ತದೆ.

ನಂತರ, 1989ರಲ್ಲಿ ಬೈಕಂಪಾಡಿ, ಹೊಸಬೆಟ್ಟು- ಹೀಗೆ ದಕ್ಷಿಣ ಕನ್ನಡದ ಕಡಲತಡಿಯ ಉದ್ದಕ್ಕೂ ಕೋಮುಗಲಭೆ ಉಂಟಾಗಿತ್ತಾದರೂ, ಅದು ಮುಖ್ಯವಾಗಿ ಭಾರೀ ಪ್ರಮಾಣದಲ್ಲಿ ಅಂಗಡಿಗಳ ಲೂಟಿ, ಬೆಂಕಿ ಹಚ್ಚುವಿಕೆ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಲ್ಲಿಯೇ ಕೊನೆಗೊಂಡಿತು.

ನಂತರ ಸಣ್ಣಪುಟ್ಟ ಸಂಘರ್ಷಗಳು ಅಲ್ಲಲ್ಲಿ ನಡೆದೇ ಇದ್ದರೂ, ಇತಿಹಾಸದ ಅತೀ ದೊಡ್ಡ ಕೋಮುಗಲಭೆ ನಡೆದದ್ದು 1998-99ರಲ್ಲಿ. 1998ರ ಡಿಸೆಂಬರ್ 29ರಂದು ಆರಂಭವಾದ ಈ ಗಲಭೆ ಸುರತ್ಕಲ್ ಸಮೀಪದ ಚೊಕ್ಕಬೆಟ್ಟುವಿನಲ್ಲಿ ಆರಂಭವಾಗಿ ನಂತರದಲ್ಲಿ ಸುತ್ತಲಿನ ಕೃಷ್ಣಾಪುರ, ಬೈಕಂಪಾಡಿ, ಕುಳಾಯಿ, ಹೊಸಬೆಟ್ಟು, ತಡಂಬೈಲ್, ಕಾನ, ಕಾಟಿಪಳ್ಳ, ನಂತರ ಮಂಗಳೂರು ನಗರ, ಬಂಟ್ವಾಳ ಮತ್ತು ಪುತ್ತೂರು ತಾಲೂಕುಗಳಿಗೆ ವ್ಯಾಪಿಸಿತ್ತು. ಈ ಗಲಭೆಯಲ್ಲಿ ಎಂಟು ಮಂದಿ ಅಧಿಕೃತ ಮೂಲಗಳ ಪ್ರಕಾರ ಪ್ರಾಣ ಕಳೆದುಕೊಂಡಿದ್ದರು. ಇವರಲ್ಲಿ ಆರು ಮಂದಿ ಮುಸ್ಲಿಮರು ಮತ್ತು ಇಬ್ಬರು ಹಿಂದೂಗಳು. ಅನಧಿಕೃತ ವರದಿಗಳ ಪ್ರಕಾರ ಈ ಸಂಖ್ಯೆ 16 ಆಗಿತ್ತು. 100ಕ್ಕೂ ಹೆಚ್ಚು ಮಂದಿ ಮಾರಣಾಂತಿಕವಾಗಿ ಗಾಯಗೊಂಡಿದ್ದರು. ಮನೆಗೆ ನುಗ್ಗಿ ಹೆಂಗಸರು, ಮಕ್ಕಳು, ವೃದ್ಧರ ಮೇಲೆಯೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಅಮಾನುಷ ಘಟನೆಗಳೂ ನಡೆದಿದ್ದವು. ಘಟನೆಯಲ್ಲಿ ಭಾರೀ ಆಸ್ತಿಪಾಸ್ತಿ ಹಾನಿ ಸಂಭವಿಸಿದ್ದು, 165 ಮನೆಗಳನ್ನು ಧ್ವಂಸ ಮಾಡಲಾಗಿದ್ದು, ಇವುಗಳಲ್ಲಿ 98 ಮುಸ್ಲಿಮರು ಮತ್ತು 67 ಹಿಂದೂಗಳ ಮನೆಗಳಾಗಿದ್ದವು. ಮುಸ್ಲಿಮರ ನಾಲ್ಕು ಪೂಜಾಸ್ಥಳಗಳನ್ನು ಧ್ವಂಸ ಮಾಡಲಾಗಿತ್ತು. ಈ ಅಂಕಿ-ಅಂಶಗಳನ್ನು ನೀಡುತ್ತಿರುವ ಕಾರಣವೆಂದರೆ- ಕಾರಣ ಏನೇ ಇರಲಿ, ಯಾರೇ ಇರಲಿ- ಎರಡೂ ಕಡೆಗಳವರು ಧರ್ಮಗಳ ಹೆಸರಿನಲ್ಲಿ ಮನುಷ್ಯತ್ವ ಮರೆತು ಪಶುಗಳ ರೀತಿ ಕಾದಾಡಿದ್ದರು ಎಂಬುದನ್ನು ಸೂಚಿಸುವುದಾಗಿದೆ.‌‌‌

ಗಲಭೆ ಕಾರಣ ಕ್ಷುಲ್ಲಕವಾದದ್ದು. ಚೊಕ್ಕಬೆಟ್ಟುವಿನಲ್ಲಿ ಗುಜರಿ ಮಾರುವವನೊಬ್ಬ ಒಂದು ಮನೆಯಿಂದ ಗುಜರಿ ಕದ್ದಿದ್ದ. ಆತನನ್ನು ಹಿಡಿದ ಮನೆಯವರು, ನೆರೆಯವರು ಆತನಿಗೆ ಥಳಿಸಿದ್ದರು. ಇದು ಒಂದು ಸಮುದಾಯದ ಕೆಲವರು, ಕಲ್ಲೆಸೆತ ಆರಂಭಿಸುವುದಕ್ಕೆ ಕಾರಣವಾಗಿತ್ತು. ಆದರೆ, ಇದು ಕೇವಲ ನೆಪವಾಗಿತ್ತು. ಇದಕ್ಕಿಂತಲೂ ಮೊದಲು ಬೇರೆ ಮೂರು ಪ್ರತ್ಯೇಕ ಘಟನೆಗಳು ನಡೆದಿದ್ದವು.

1998ರ ನವೆಂಬರ್‌ನಲ್ಲಿ ಕುಳಾಯಿಯಲ್ಲಿ ಕ್ರೈಸ್ತರ ಸಣ್ಣ ಪಂಥವಾದ ಇವಾಂಜಲಿಕ್ ಚರ್ಚಿಗೆ ನುಗ್ಗಿದ ಹಿಂದೂತ್ವವಾದಿಗಳು ರಾಜಾರೋಷವಾಗಿ ನುಗ್ಗಿ ಎಲ್ಲರನ್ನು ಥಳಿಸಿ, ಅದನ್ನು ಧ್ವಂಸಗೊಳಿಸಿದ್ದರು. ಇದು ದೇಶದಾದ್ಯಂತ ಕ್ರೈಸ್ತ ಧಾರ್ಮಿಕ ಸಂಸ್ಥೆಗಳ ಮೇಲೆ ನಡೆಯುತ್ತಿದ್ದ ದಾಳಿಗಳ ಭಾಗವಾಗಿತ್ತು. ಇಲ್ಲಿ ಕೆಥೋಲಿಕರ ಮೇಲೆ ಯಾವುದೇ ದಾಳಿಗಳು ನಡೆದಿರಲಿಲ್ಲವಾದರೂ (ನಂತರ ನಡೆದವು) ಇಂತಹಾ ಭಯಹುಟ್ಟಿಸುವ ಕೃತ್ಯ ಎಲ್ಲಾ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಆತಂಕ ಸೃಷ್ಟಿಸಿತ್ತು.

ಇನ್ನೊಂದು ಘಟನೆ ಎಂದರೆ, ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯನ್ನು ಚುಡಾಯಿಸಿದ ಎಂಬ ಆರೋಪದಲ್ಲಿ ಆತನಿಗೆ ಹಿಂದೂತ್ವವಾದಿಗಳ ಗುಂಪೊಂದು ಥಳಿಸಿದ್ದು. ಅದರ ಆರೋಪಿಗಳನ್ನು ಪೊಲೀಸರು ಬಂಧಿಸಿದಾಗ ಪೊಲೀಸರು ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪ ಹೊರಿಸಲಾಗಿತ್ತು. ಪೊಲೀಸರ ಕೆಲಸವನ್ನು ತಾವೇ ಮಾಡುತ್ತೇವೆ, ತಮ್ಮನ್ನು ಅವರು ಬಂಧಿಸುವಂತಿಲ್ಲ ಎಂಬ ಮನೋಭಾವ ಹುಟ್ಟಿ ಇಂದಿನ ವರೆಗೆ ಬೆಳೆದುಬಂದಿರುವುದು ಬಹುಶಃ ಇದೇ ಘಟನೆಯಿಂದ. ಈ ಘಟನೆ ಕೂಡಾ ಕಂದರವನ್ನು ಆಳಗೊಳಿಸಿತ್ತು.

ಆಗಲೇ ಇನ್ನೊಂದು ಘಟನೆಯೂ ನಡೆದಿತ್ತು. ಸುರತ್ಕಲ್‌ನಲ್ಲಿ ಹಾಕಿದ್ದ ಯಕ್ಷಗಾನದ ಬ್ಯಾನರ್ ಒಂದನ್ನು ಕಿಡಿಗೇಡಿಗಳು ಹರಿದುಹಾಕಿದ್ದರು. ಆಗ ಉಂಟಾದ ಉದ್ವಿಗ್ನತೆಯಿಂದ ಯಕ್ಷಗಾನ ಪ್ರದರ್ಶನವೇ ನಿಂತಿತ್ತು. ಇದು ಕೂಡಾ ಧಾರ್ಮಿಕ ಭಾವನೆಗೆ ನೋವುಂಟುಮಾಡುವ ಕೆಲಸವೇ ಆಗಿತ್ತು. ಕೆಲವೇ ಕಿಡಿಗೇಡಿ ಕೃತ್ಯಗಳು, ಪರಿಸ್ಥಿತಿ ಅರಿಯುವುದರಲ್ಲಿ ಪೊಲೀಸ್ ಗುಪ್ತಚರ್ಯೆಯ ವೈಫಲ್ಯ, ಪೊಲೀಸರ ಕಾರ್ಯದಲ್ಲಿ ರಾಜಕಾರಣದ ಹಸ್ತಕ್ಷೇಪ, ಕಾನೂನನ್ನು ಕೈಗೆತ್ತಿಕೊಳ್ಳುವುದು ಇತ್ಯಾದಿಗಳು ಹೇಗೆ ಪರಿಸ್ಥಿತಿಯನ್ನು ಹದಗೆಡಿಸಬಲ್ಲವು ಎಂಬುದನ್ನು ಈ ಘಟನೆ ತೋರಿಸುತ್ತದೆ.

ಇದನ್ನೂ ಓದಿ: ಕರಾವಳಿಯ ಕೋಮು ಸಂಘಟನೆಗಳ ನಿಜಬಣ್ಣ! ಅವುಗಳ ಕಾರ್ಯವಿಧಾನ…

ಈ ಗಲಭೆ ಹರಡುವುದಕ್ಕೆ ವದಂತಿಗಳೂ ಕಾರಣವಾಗಿದ್ದವು. ಇವುಗಳನ್ನು ಹರಡುವುದಕ್ಕೆ ರಾಜಕೀಯ ಹಿತಾಸಕ್ತಿಗಳ ಪ್ರೇರಣೆಯೂ ಇತ್ತು. ವದಂತಿಯ ಸ್ವರೂಪಗಳು ಉಳಿದ ಕಡೆಗಳಂತೆಯೇ ಇದ್ದವು; ಈಗಲೂ ಇವೆ. ‘ನಮ್ಮವರ’ ಮೇಲೆ ದಾಳಿ ಮಾಡುತ್ತಿದ್ದಾರೆ, ನಮ್ಮವರ ಮನೆಗೆ ನುಗ್ಗಿ ಹೊಡೆದಿದ್ದಾರೆ, ನಮ್ಮ ಹೆಣ್ಣು ಮಕ್ಕಳ ಮೇಲೆ, ಅಕ್ಕತಂಗಿಯರ ಮೇಲೆ ಅತ್ಯಾಚಾರ ಮಾಡಿದ್ದಾರೆ, ನಮ್ಮ ತಂದೆ ತಾಯಿಯ ಮೇಲೆ ಕೈ ಹಾಕಿದ್ದಾರೆ, ಪೊಲೀಸರು ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ, ನಮ್ಮವರಿಗೆ ಹೊಡೆದಿದ್ದಾರೆ- ಇವು ಹಿಂದೆ ನಡೆಯುತ್ತಿದ್ದವು, ಇಂದು ಸಾಮಾಜಿಕ ಜಾಲತಾಣಗಳ ಕಾರಣದಿಂದ ಕ್ಷಣಮಾತ್ರದಲ್ಲಿ ನಡೆಯುತ್ತಿವೆ.

ಇಲ್ಲಿ ಆರಂಭವಾದ ಗಲಭೆಗಳ ಪರಿಣಾಮ ಇಲ್ಲಿಗೇ ನಿಲ್ಲಲಿಲ್ಲ. ಸುರತ್ಕಲ್ ಪರಿಸರದಲ್ಲಿಯೇ ಹಲವಾರು ಕೊಲೆಗಳು, ಪ್ರತೀಕಾರಗಳು ನಡೆದವು, ಈಗಲೂ ಮುಂದುವರಿಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...