Homeಕರ್ನಾಟಕಕರಾವಳಿಯಲ್ಲಿ ಕೋಮುಗಲಭೆಗಳ ಇತಿಹಾಸ - ನಿಖಿಲ್‌ ಕೋಲ್ಪೆ

ಕರಾವಳಿಯಲ್ಲಿ ಕೋಮುಗಲಭೆಗಳ ಇತಿಹಾಸ – ನಿಖಿಲ್‌ ಕೋಲ್ಪೆ

- Advertisement -
- Advertisement -

1968ರಲ್ಲಿ ಕರಾವಳಿ ಕರ್ನಾಟಕದಲ್ಲಿ ಅದರಲ್ಲೂ ಉತ್ತರ ಕನ್ನಡದಲ್ಲಿ ಕೋಮು ಉದ್ರಿಕ್ತತೆ ಹೆಚ್ಚಿತ್ತು. ಸುಳ್ಳು ವದಂತಿಗಳು ದಕ್ಷಿಣ ಕನ್ನಡ ಜಿಲ್ಲೆಗೂ ತಲಪಿದವು. ಆ ಸಂದರ್ಭದಲ್ಲಿಯೇ ಮಂಗಳೂರಿನಲ್ಲಿ ಮಟನ್ ಖಾದರ್ ಎಂಬಾತನಿಗೂ, ಮೀನು ಮಾರುವ ಮೊಗವೀರ ಮಹಿಳೆಗೂ ಪ್ರೇಮಸಂಬಂಧವಿದೆ ಎಂಬ ವದಂತಿ ಗಲಭೆಗೆ ಕಾರಣವಾಯಿತು. ಈ ಗಲಭೆಯಲ್ಲಿ ಬಂದರು ಪ್ರದೇಶದಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾದ ಬಗ್ಗೆ ಮಾಹಿತಿ ಸಿಗುತ್ತದೆ.

ಮತ್ತೆ 1979ರಲ್ಲಿ ಖ್ಯಾತ ಚಿತ್ರ ನಿರ್ದೇಶಕ, ಲೇಖಕ ವಿಶುಕುಮಾರ್ ಅವರ ಕನ್ನಡ ಚಿತ್ರ ‘ಕರಾವಳಿ’ಯ ಕಾರಣದಿಂದ ಗಲಭೆ ಉಂಟಾಯಿತು. ಅದು ಮೀನುಗಾರ ಮುಸ್ಲಿಂ ಯುವಕ ಮತ್ತು ಮೊಗವೀರ ಸಮುದಾಯದ ಮಹಿಳೆಯ ನಡುವಿನ ಪ್ರೇಮಕತೆಯಾಗಿದ್ದುದೇ ಇದಕ್ಕೆ ಕಾರಣ. ಈ ಗಲಭೆಗಳು ಹೊಯ್ಗೆಬಜಾರ್, ಕುದ್ರೋಳಿ, ಬಂದರು ಮುಂತಾದ ಪ್ರದೇಶಗಳಲ್ಲಿ ತೀವ್ರವಾಗಿತ್ತು. ಈ ಘಟನೆಯಲ್ಲಿ ಕೆಲವರು ಪ್ರಾಣಕಳೆದುಕೊಂಡರು ಎಂದು ಹೇಳಲಾಗುತ್ತದೆಯಾದರೂ, ನಿಖರ ಮಾಹಿತಿ ಲಭ್ಯವಿಲ್ಲ. ಈ ಘಟನೆಯಲ್ಲಿ ಮುಸ್ಲಿಮರ ಮತ್ತು ಗೌಡ ಸಾರಸ್ವತ ಸಮುದಾಯದವರ ಹಲವಾರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಕೋಮುವಾದದ ಸಾಮಾಜಿಕ ಹಿನ್ನೆಲೆ; ಮೊದಲ ಕೋಮುಗಲಭೆ!

ಹಿಂದೆಲ್ಲಾ ಉಳ್ಳಾಲ ಪ್ರದೇಶವು ಕೋಮುಸೌಹಾರ್ದಕ್ಕೆ ಹೆಸರಾಗಿತ್ತು. ಇದಕ್ಕೆ ದೊಡ್ಡ ಇತಿಹಾಸವಿದ್ದು, ಆ ಕುರಿತು ಈಗಾಗಲೇ ಬರೆಯಲಾಗಿದೆ. ಕೃಷ್ಣಜನ್ಮಾಷ್ಟಮಿಯ ಸಂದರ್ಭದಲ್ಲಿ ಮುಸ್ಲಿಮರು ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದರು. 1980ರ ದಶಕದಲ್ಲಿ ಮಲ್ಲಕಂಭಕ್ಕೆ ಹಂದಿಯ ಕೊಬ್ಬನ್ನು ಸವರಲಾಗುತ್ತದೆ ಎಂದು ಇಂತಹಾ ಉತ್ಸವಗಳಲ್ಲಿ ಭಾಗವಹಿಸುವುದನ್ನು ‘ಶಿರ್ಕ್’ ಎಂದು ಕರೆಯುವ ಕೆಲವು ಸಂಪ್ರದಾಯವಾದಿ ಮುಸ್ಲಿಮರು ವದಂತಿ ಹಬ್ಬಿದರು. ಆಗಿನಿಂದ ಮುಸ್ಲಿಮರ ಭಾಗವಹಿಸುವಿಕೆ ಕಡಿಮೆಯಾಗುತ್ತಾ ಹೋಯಿತು. ಇಂದು ಸಾಮಾನ್ಯ ಸ್ಥಿತಿಯಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದದಿಂದಲೇ ಸಹಬಾಳ್ವೆ ನಡೆಸುತ್ತಿದ್ದರೂ, ಸದಾ ಬೂದಿ ಮುಚ್ಚಿದ ಕೆಂಡದಂತೆ ಇರುತ್ತದೆ. ಕೆಲವು ಸಂದರ್ಭಗಳಲ್ಲಿ ಅದು ಸ್ಫೋಟಕ ಸ್ಥಿತಿ ತಲಪುತ್ತದೆ.

ನಂತರ, 1989ರಲ್ಲಿ ಬೈಕಂಪಾಡಿ, ಹೊಸಬೆಟ್ಟು- ಹೀಗೆ ದಕ್ಷಿಣ ಕನ್ನಡದ ಕಡಲತಡಿಯ ಉದ್ದಕ್ಕೂ ಕೋಮುಗಲಭೆ ಉಂಟಾಗಿತ್ತಾದರೂ, ಅದು ಮುಖ್ಯವಾಗಿ ಭಾರೀ ಪ್ರಮಾಣದಲ್ಲಿ ಅಂಗಡಿಗಳ ಲೂಟಿ, ಬೆಂಕಿ ಹಚ್ಚುವಿಕೆ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಲ್ಲಿಯೇ ಕೊನೆಗೊಂಡಿತು.

ನಂತರ ಸಣ್ಣಪುಟ್ಟ ಸಂಘರ್ಷಗಳು ಅಲ್ಲಲ್ಲಿ ನಡೆದೇ ಇದ್ದರೂ, ಇತಿಹಾಸದ ಅತೀ ದೊಡ್ಡ ಕೋಮುಗಲಭೆ ನಡೆದದ್ದು 1998-99ರಲ್ಲಿ. 1998ರ ಡಿಸೆಂಬರ್ 29ರಂದು ಆರಂಭವಾದ ಈ ಗಲಭೆ ಸುರತ್ಕಲ್ ಸಮೀಪದ ಚೊಕ್ಕಬೆಟ್ಟುವಿನಲ್ಲಿ ಆರಂಭವಾಗಿ ನಂತರದಲ್ಲಿ ಸುತ್ತಲಿನ ಕೃಷ್ಣಾಪುರ, ಬೈಕಂಪಾಡಿ, ಕುಳಾಯಿ, ಹೊಸಬೆಟ್ಟು, ತಡಂಬೈಲ್, ಕಾನ, ಕಾಟಿಪಳ್ಳ, ನಂತರ ಮಂಗಳೂರು ನಗರ, ಬಂಟ್ವಾಳ ಮತ್ತು ಪುತ್ತೂರು ತಾಲೂಕುಗಳಿಗೆ ವ್ಯಾಪಿಸಿತ್ತು. ಈ ಗಲಭೆಯಲ್ಲಿ ಎಂಟು ಮಂದಿ ಅಧಿಕೃತ ಮೂಲಗಳ ಪ್ರಕಾರ ಪ್ರಾಣ ಕಳೆದುಕೊಂಡಿದ್ದರು. ಇವರಲ್ಲಿ ಆರು ಮಂದಿ ಮುಸ್ಲಿಮರು ಮತ್ತು ಇಬ್ಬರು ಹಿಂದೂಗಳು. ಅನಧಿಕೃತ ವರದಿಗಳ ಪ್ರಕಾರ ಈ ಸಂಖ್ಯೆ 16 ಆಗಿತ್ತು. 100ಕ್ಕೂ ಹೆಚ್ಚು ಮಂದಿ ಮಾರಣಾಂತಿಕವಾಗಿ ಗಾಯಗೊಂಡಿದ್ದರು. ಮನೆಗೆ ನುಗ್ಗಿ ಹೆಂಗಸರು, ಮಕ್ಕಳು, ವೃದ್ಧರ ಮೇಲೆಯೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಅಮಾನುಷ ಘಟನೆಗಳೂ ನಡೆದಿದ್ದವು. ಘಟನೆಯಲ್ಲಿ ಭಾರೀ ಆಸ್ತಿಪಾಸ್ತಿ ಹಾನಿ ಸಂಭವಿಸಿದ್ದು, 165 ಮನೆಗಳನ್ನು ಧ್ವಂಸ ಮಾಡಲಾಗಿದ್ದು, ಇವುಗಳಲ್ಲಿ 98 ಮುಸ್ಲಿಮರು ಮತ್ತು 67 ಹಿಂದೂಗಳ ಮನೆಗಳಾಗಿದ್ದವು. ಮುಸ್ಲಿಮರ ನಾಲ್ಕು ಪೂಜಾಸ್ಥಳಗಳನ್ನು ಧ್ವಂಸ ಮಾಡಲಾಗಿತ್ತು. ಈ ಅಂಕಿ-ಅಂಶಗಳನ್ನು ನೀಡುತ್ತಿರುವ ಕಾರಣವೆಂದರೆ- ಕಾರಣ ಏನೇ ಇರಲಿ, ಯಾರೇ ಇರಲಿ- ಎರಡೂ ಕಡೆಗಳವರು ಧರ್ಮಗಳ ಹೆಸರಿನಲ್ಲಿ ಮನುಷ್ಯತ್ವ ಮರೆತು ಪಶುಗಳ ರೀತಿ ಕಾದಾಡಿದ್ದರು ಎಂಬುದನ್ನು ಸೂಚಿಸುವುದಾಗಿದೆ.‌‌‌

ಗಲಭೆ ಕಾರಣ ಕ್ಷುಲ್ಲಕವಾದದ್ದು. ಚೊಕ್ಕಬೆಟ್ಟುವಿನಲ್ಲಿ ಗುಜರಿ ಮಾರುವವನೊಬ್ಬ ಒಂದು ಮನೆಯಿಂದ ಗುಜರಿ ಕದ್ದಿದ್ದ. ಆತನನ್ನು ಹಿಡಿದ ಮನೆಯವರು, ನೆರೆಯವರು ಆತನಿಗೆ ಥಳಿಸಿದ್ದರು. ಇದು ಒಂದು ಸಮುದಾಯದ ಕೆಲವರು, ಕಲ್ಲೆಸೆತ ಆರಂಭಿಸುವುದಕ್ಕೆ ಕಾರಣವಾಗಿತ್ತು. ಆದರೆ, ಇದು ಕೇವಲ ನೆಪವಾಗಿತ್ತು. ಇದಕ್ಕಿಂತಲೂ ಮೊದಲು ಬೇರೆ ಮೂರು ಪ್ರತ್ಯೇಕ ಘಟನೆಗಳು ನಡೆದಿದ್ದವು.

1998ರ ನವೆಂಬರ್‌ನಲ್ಲಿ ಕುಳಾಯಿಯಲ್ಲಿ ಕ್ರೈಸ್ತರ ಸಣ್ಣ ಪಂಥವಾದ ಇವಾಂಜಲಿಕ್ ಚರ್ಚಿಗೆ ನುಗ್ಗಿದ ಹಿಂದೂತ್ವವಾದಿಗಳು ರಾಜಾರೋಷವಾಗಿ ನುಗ್ಗಿ ಎಲ್ಲರನ್ನು ಥಳಿಸಿ, ಅದನ್ನು ಧ್ವಂಸಗೊಳಿಸಿದ್ದರು. ಇದು ದೇಶದಾದ್ಯಂತ ಕ್ರೈಸ್ತ ಧಾರ್ಮಿಕ ಸಂಸ್ಥೆಗಳ ಮೇಲೆ ನಡೆಯುತ್ತಿದ್ದ ದಾಳಿಗಳ ಭಾಗವಾಗಿತ್ತು. ಇಲ್ಲಿ ಕೆಥೋಲಿಕರ ಮೇಲೆ ಯಾವುದೇ ದಾಳಿಗಳು ನಡೆದಿರಲಿಲ್ಲವಾದರೂ (ನಂತರ ನಡೆದವು) ಇಂತಹಾ ಭಯಹುಟ್ಟಿಸುವ ಕೃತ್ಯ ಎಲ್ಲಾ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಆತಂಕ ಸೃಷ್ಟಿಸಿತ್ತು.

ಇನ್ನೊಂದು ಘಟನೆ ಎಂದರೆ, ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯನ್ನು ಚುಡಾಯಿಸಿದ ಎಂಬ ಆರೋಪದಲ್ಲಿ ಆತನಿಗೆ ಹಿಂದೂತ್ವವಾದಿಗಳ ಗುಂಪೊಂದು ಥಳಿಸಿದ್ದು. ಅದರ ಆರೋಪಿಗಳನ್ನು ಪೊಲೀಸರು ಬಂಧಿಸಿದಾಗ ಪೊಲೀಸರು ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪ ಹೊರಿಸಲಾಗಿತ್ತು. ಪೊಲೀಸರ ಕೆಲಸವನ್ನು ತಾವೇ ಮಾಡುತ್ತೇವೆ, ತಮ್ಮನ್ನು ಅವರು ಬಂಧಿಸುವಂತಿಲ್ಲ ಎಂಬ ಮನೋಭಾವ ಹುಟ್ಟಿ ಇಂದಿನ ವರೆಗೆ ಬೆಳೆದುಬಂದಿರುವುದು ಬಹುಶಃ ಇದೇ ಘಟನೆಯಿಂದ. ಈ ಘಟನೆ ಕೂಡಾ ಕಂದರವನ್ನು ಆಳಗೊಳಿಸಿತ್ತು.

ಆಗಲೇ ಇನ್ನೊಂದು ಘಟನೆಯೂ ನಡೆದಿತ್ತು. ಸುರತ್ಕಲ್‌ನಲ್ಲಿ ಹಾಕಿದ್ದ ಯಕ್ಷಗಾನದ ಬ್ಯಾನರ್ ಒಂದನ್ನು ಕಿಡಿಗೇಡಿಗಳು ಹರಿದುಹಾಕಿದ್ದರು. ಆಗ ಉಂಟಾದ ಉದ್ವಿಗ್ನತೆಯಿಂದ ಯಕ್ಷಗಾನ ಪ್ರದರ್ಶನವೇ ನಿಂತಿತ್ತು. ಇದು ಕೂಡಾ ಧಾರ್ಮಿಕ ಭಾವನೆಗೆ ನೋವುಂಟುಮಾಡುವ ಕೆಲಸವೇ ಆಗಿತ್ತು. ಕೆಲವೇ ಕಿಡಿಗೇಡಿ ಕೃತ್ಯಗಳು, ಪರಿಸ್ಥಿತಿ ಅರಿಯುವುದರಲ್ಲಿ ಪೊಲೀಸ್ ಗುಪ್ತಚರ್ಯೆಯ ವೈಫಲ್ಯ, ಪೊಲೀಸರ ಕಾರ್ಯದಲ್ಲಿ ರಾಜಕಾರಣದ ಹಸ್ತಕ್ಷೇಪ, ಕಾನೂನನ್ನು ಕೈಗೆತ್ತಿಕೊಳ್ಳುವುದು ಇತ್ಯಾದಿಗಳು ಹೇಗೆ ಪರಿಸ್ಥಿತಿಯನ್ನು ಹದಗೆಡಿಸಬಲ್ಲವು ಎಂಬುದನ್ನು ಈ ಘಟನೆ ತೋರಿಸುತ್ತದೆ.

ಇದನ್ನೂ ಓದಿ: ಕರಾವಳಿಯ ಕೋಮು ಸಂಘಟನೆಗಳ ನಿಜಬಣ್ಣ! ಅವುಗಳ ಕಾರ್ಯವಿಧಾನ…

ಈ ಗಲಭೆ ಹರಡುವುದಕ್ಕೆ ವದಂತಿಗಳೂ ಕಾರಣವಾಗಿದ್ದವು. ಇವುಗಳನ್ನು ಹರಡುವುದಕ್ಕೆ ರಾಜಕೀಯ ಹಿತಾಸಕ್ತಿಗಳ ಪ್ರೇರಣೆಯೂ ಇತ್ತು. ವದಂತಿಯ ಸ್ವರೂಪಗಳು ಉಳಿದ ಕಡೆಗಳಂತೆಯೇ ಇದ್ದವು; ಈಗಲೂ ಇವೆ. ‘ನಮ್ಮವರ’ ಮೇಲೆ ದಾಳಿ ಮಾಡುತ್ತಿದ್ದಾರೆ, ನಮ್ಮವರ ಮನೆಗೆ ನುಗ್ಗಿ ಹೊಡೆದಿದ್ದಾರೆ, ನಮ್ಮ ಹೆಣ್ಣು ಮಕ್ಕಳ ಮೇಲೆ, ಅಕ್ಕತಂಗಿಯರ ಮೇಲೆ ಅತ್ಯಾಚಾರ ಮಾಡಿದ್ದಾರೆ, ನಮ್ಮ ತಂದೆ ತಾಯಿಯ ಮೇಲೆ ಕೈ ಹಾಕಿದ್ದಾರೆ, ಪೊಲೀಸರು ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ, ನಮ್ಮವರಿಗೆ ಹೊಡೆದಿದ್ದಾರೆ- ಇವು ಹಿಂದೆ ನಡೆಯುತ್ತಿದ್ದವು, ಇಂದು ಸಾಮಾಜಿಕ ಜಾಲತಾಣಗಳ ಕಾರಣದಿಂದ ಕ್ಷಣಮಾತ್ರದಲ್ಲಿ ನಡೆಯುತ್ತಿವೆ.

ಇಲ್ಲಿ ಆರಂಭವಾದ ಗಲಭೆಗಳ ಪರಿಣಾಮ ಇಲ್ಲಿಗೇ ನಿಲ್ಲಲಿಲ್ಲ. ಸುರತ್ಕಲ್ ಪರಿಸರದಲ್ಲಿಯೇ ಹಲವಾರು ಕೊಲೆಗಳು, ಪ್ರತೀಕಾರಗಳು ನಡೆದವು, ಈಗಲೂ ಮುಂದುವರಿಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...