Homeಕರ್ನಾಟಕಕರಾವಳಿಯಲ್ಲಿ ಕೋಮುಗಲಭೆಗಳ ಇತಿಹಾಸ - ನಿಖಿಲ್‌ ಕೋಲ್ಪೆ

ಕರಾವಳಿಯಲ್ಲಿ ಕೋಮುಗಲಭೆಗಳ ಇತಿಹಾಸ – ನಿಖಿಲ್‌ ಕೋಲ್ಪೆ

- Advertisement -
- Advertisement -

1968ರಲ್ಲಿ ಕರಾವಳಿ ಕರ್ನಾಟಕದಲ್ಲಿ ಅದರಲ್ಲೂ ಉತ್ತರ ಕನ್ನಡದಲ್ಲಿ ಕೋಮು ಉದ್ರಿಕ್ತತೆ ಹೆಚ್ಚಿತ್ತು. ಸುಳ್ಳು ವದಂತಿಗಳು ದಕ್ಷಿಣ ಕನ್ನಡ ಜಿಲ್ಲೆಗೂ ತಲಪಿದವು. ಆ ಸಂದರ್ಭದಲ್ಲಿಯೇ ಮಂಗಳೂರಿನಲ್ಲಿ ಮಟನ್ ಖಾದರ್ ಎಂಬಾತನಿಗೂ, ಮೀನು ಮಾರುವ ಮೊಗವೀರ ಮಹಿಳೆಗೂ ಪ್ರೇಮಸಂಬಂಧವಿದೆ ಎಂಬ ವದಂತಿ ಗಲಭೆಗೆ ಕಾರಣವಾಯಿತು. ಈ ಗಲಭೆಯಲ್ಲಿ ಬಂದರು ಪ್ರದೇಶದಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾದ ಬಗ್ಗೆ ಮಾಹಿತಿ ಸಿಗುತ್ತದೆ.

ಮತ್ತೆ 1979ರಲ್ಲಿ ಖ್ಯಾತ ಚಿತ್ರ ನಿರ್ದೇಶಕ, ಲೇಖಕ ವಿಶುಕುಮಾರ್ ಅವರ ಕನ್ನಡ ಚಿತ್ರ ‘ಕರಾವಳಿ’ಯ ಕಾರಣದಿಂದ ಗಲಭೆ ಉಂಟಾಯಿತು. ಅದು ಮೀನುಗಾರ ಮುಸ್ಲಿಂ ಯುವಕ ಮತ್ತು ಮೊಗವೀರ ಸಮುದಾಯದ ಮಹಿಳೆಯ ನಡುವಿನ ಪ್ರೇಮಕತೆಯಾಗಿದ್ದುದೇ ಇದಕ್ಕೆ ಕಾರಣ. ಈ ಗಲಭೆಗಳು ಹೊಯ್ಗೆಬಜಾರ್, ಕುದ್ರೋಳಿ, ಬಂದರು ಮುಂತಾದ ಪ್ರದೇಶಗಳಲ್ಲಿ ತೀವ್ರವಾಗಿತ್ತು. ಈ ಘಟನೆಯಲ್ಲಿ ಕೆಲವರು ಪ್ರಾಣಕಳೆದುಕೊಂಡರು ಎಂದು ಹೇಳಲಾಗುತ್ತದೆಯಾದರೂ, ನಿಖರ ಮಾಹಿತಿ ಲಭ್ಯವಿಲ್ಲ. ಈ ಘಟನೆಯಲ್ಲಿ ಮುಸ್ಲಿಮರ ಮತ್ತು ಗೌಡ ಸಾರಸ್ವತ ಸಮುದಾಯದವರ ಹಲವಾರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಕೋಮುವಾದದ ಸಾಮಾಜಿಕ ಹಿನ್ನೆಲೆ; ಮೊದಲ ಕೋಮುಗಲಭೆ!

ಹಿಂದೆಲ್ಲಾ ಉಳ್ಳಾಲ ಪ್ರದೇಶವು ಕೋಮುಸೌಹಾರ್ದಕ್ಕೆ ಹೆಸರಾಗಿತ್ತು. ಇದಕ್ಕೆ ದೊಡ್ಡ ಇತಿಹಾಸವಿದ್ದು, ಆ ಕುರಿತು ಈಗಾಗಲೇ ಬರೆಯಲಾಗಿದೆ. ಕೃಷ್ಣಜನ್ಮಾಷ್ಟಮಿಯ ಸಂದರ್ಭದಲ್ಲಿ ಮುಸ್ಲಿಮರು ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದರು. 1980ರ ದಶಕದಲ್ಲಿ ಮಲ್ಲಕಂಭಕ್ಕೆ ಹಂದಿಯ ಕೊಬ್ಬನ್ನು ಸವರಲಾಗುತ್ತದೆ ಎಂದು ಇಂತಹಾ ಉತ್ಸವಗಳಲ್ಲಿ ಭಾಗವಹಿಸುವುದನ್ನು ‘ಶಿರ್ಕ್’ ಎಂದು ಕರೆಯುವ ಕೆಲವು ಸಂಪ್ರದಾಯವಾದಿ ಮುಸ್ಲಿಮರು ವದಂತಿ ಹಬ್ಬಿದರು. ಆಗಿನಿಂದ ಮುಸ್ಲಿಮರ ಭಾಗವಹಿಸುವಿಕೆ ಕಡಿಮೆಯಾಗುತ್ತಾ ಹೋಯಿತು. ಇಂದು ಸಾಮಾನ್ಯ ಸ್ಥಿತಿಯಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದದಿಂದಲೇ ಸಹಬಾಳ್ವೆ ನಡೆಸುತ್ತಿದ್ದರೂ, ಸದಾ ಬೂದಿ ಮುಚ್ಚಿದ ಕೆಂಡದಂತೆ ಇರುತ್ತದೆ. ಕೆಲವು ಸಂದರ್ಭಗಳಲ್ಲಿ ಅದು ಸ್ಫೋಟಕ ಸ್ಥಿತಿ ತಲಪುತ್ತದೆ.

ನಂತರ, 1989ರಲ್ಲಿ ಬೈಕಂಪಾಡಿ, ಹೊಸಬೆಟ್ಟು- ಹೀಗೆ ದಕ್ಷಿಣ ಕನ್ನಡದ ಕಡಲತಡಿಯ ಉದ್ದಕ್ಕೂ ಕೋಮುಗಲಭೆ ಉಂಟಾಗಿತ್ತಾದರೂ, ಅದು ಮುಖ್ಯವಾಗಿ ಭಾರೀ ಪ್ರಮಾಣದಲ್ಲಿ ಅಂಗಡಿಗಳ ಲೂಟಿ, ಬೆಂಕಿ ಹಚ್ಚುವಿಕೆ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಲ್ಲಿಯೇ ಕೊನೆಗೊಂಡಿತು.

ನಂತರ ಸಣ್ಣಪುಟ್ಟ ಸಂಘರ್ಷಗಳು ಅಲ್ಲಲ್ಲಿ ನಡೆದೇ ಇದ್ದರೂ, ಇತಿಹಾಸದ ಅತೀ ದೊಡ್ಡ ಕೋಮುಗಲಭೆ ನಡೆದದ್ದು 1998-99ರಲ್ಲಿ. 1998ರ ಡಿಸೆಂಬರ್ 29ರಂದು ಆರಂಭವಾದ ಈ ಗಲಭೆ ಸುರತ್ಕಲ್ ಸಮೀಪದ ಚೊಕ್ಕಬೆಟ್ಟುವಿನಲ್ಲಿ ಆರಂಭವಾಗಿ ನಂತರದಲ್ಲಿ ಸುತ್ತಲಿನ ಕೃಷ್ಣಾಪುರ, ಬೈಕಂಪಾಡಿ, ಕುಳಾಯಿ, ಹೊಸಬೆಟ್ಟು, ತಡಂಬೈಲ್, ಕಾನ, ಕಾಟಿಪಳ್ಳ, ನಂತರ ಮಂಗಳೂರು ನಗರ, ಬಂಟ್ವಾಳ ಮತ್ತು ಪುತ್ತೂರು ತಾಲೂಕುಗಳಿಗೆ ವ್ಯಾಪಿಸಿತ್ತು. ಈ ಗಲಭೆಯಲ್ಲಿ ಎಂಟು ಮಂದಿ ಅಧಿಕೃತ ಮೂಲಗಳ ಪ್ರಕಾರ ಪ್ರಾಣ ಕಳೆದುಕೊಂಡಿದ್ದರು. ಇವರಲ್ಲಿ ಆರು ಮಂದಿ ಮುಸ್ಲಿಮರು ಮತ್ತು ಇಬ್ಬರು ಹಿಂದೂಗಳು. ಅನಧಿಕೃತ ವರದಿಗಳ ಪ್ರಕಾರ ಈ ಸಂಖ್ಯೆ 16 ಆಗಿತ್ತು. 100ಕ್ಕೂ ಹೆಚ್ಚು ಮಂದಿ ಮಾರಣಾಂತಿಕವಾಗಿ ಗಾಯಗೊಂಡಿದ್ದರು. ಮನೆಗೆ ನುಗ್ಗಿ ಹೆಂಗಸರು, ಮಕ್ಕಳು, ವೃದ್ಧರ ಮೇಲೆಯೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಅಮಾನುಷ ಘಟನೆಗಳೂ ನಡೆದಿದ್ದವು. ಘಟನೆಯಲ್ಲಿ ಭಾರೀ ಆಸ್ತಿಪಾಸ್ತಿ ಹಾನಿ ಸಂಭವಿಸಿದ್ದು, 165 ಮನೆಗಳನ್ನು ಧ್ವಂಸ ಮಾಡಲಾಗಿದ್ದು, ಇವುಗಳಲ್ಲಿ 98 ಮುಸ್ಲಿಮರು ಮತ್ತು 67 ಹಿಂದೂಗಳ ಮನೆಗಳಾಗಿದ್ದವು. ಮುಸ್ಲಿಮರ ನಾಲ್ಕು ಪೂಜಾಸ್ಥಳಗಳನ್ನು ಧ್ವಂಸ ಮಾಡಲಾಗಿತ್ತು. ಈ ಅಂಕಿ-ಅಂಶಗಳನ್ನು ನೀಡುತ್ತಿರುವ ಕಾರಣವೆಂದರೆ- ಕಾರಣ ಏನೇ ಇರಲಿ, ಯಾರೇ ಇರಲಿ- ಎರಡೂ ಕಡೆಗಳವರು ಧರ್ಮಗಳ ಹೆಸರಿನಲ್ಲಿ ಮನುಷ್ಯತ್ವ ಮರೆತು ಪಶುಗಳ ರೀತಿ ಕಾದಾಡಿದ್ದರು ಎಂಬುದನ್ನು ಸೂಚಿಸುವುದಾಗಿದೆ.‌‌‌

ಗಲಭೆ ಕಾರಣ ಕ್ಷುಲ್ಲಕವಾದದ್ದು. ಚೊಕ್ಕಬೆಟ್ಟುವಿನಲ್ಲಿ ಗುಜರಿ ಮಾರುವವನೊಬ್ಬ ಒಂದು ಮನೆಯಿಂದ ಗುಜರಿ ಕದ್ದಿದ್ದ. ಆತನನ್ನು ಹಿಡಿದ ಮನೆಯವರು, ನೆರೆಯವರು ಆತನಿಗೆ ಥಳಿಸಿದ್ದರು. ಇದು ಒಂದು ಸಮುದಾಯದ ಕೆಲವರು, ಕಲ್ಲೆಸೆತ ಆರಂಭಿಸುವುದಕ್ಕೆ ಕಾರಣವಾಗಿತ್ತು. ಆದರೆ, ಇದು ಕೇವಲ ನೆಪವಾಗಿತ್ತು. ಇದಕ್ಕಿಂತಲೂ ಮೊದಲು ಬೇರೆ ಮೂರು ಪ್ರತ್ಯೇಕ ಘಟನೆಗಳು ನಡೆದಿದ್ದವು.

1998ರ ನವೆಂಬರ್‌ನಲ್ಲಿ ಕುಳಾಯಿಯಲ್ಲಿ ಕ್ರೈಸ್ತರ ಸಣ್ಣ ಪಂಥವಾದ ಇವಾಂಜಲಿಕ್ ಚರ್ಚಿಗೆ ನುಗ್ಗಿದ ಹಿಂದೂತ್ವವಾದಿಗಳು ರಾಜಾರೋಷವಾಗಿ ನುಗ್ಗಿ ಎಲ್ಲರನ್ನು ಥಳಿಸಿ, ಅದನ್ನು ಧ್ವಂಸಗೊಳಿಸಿದ್ದರು. ಇದು ದೇಶದಾದ್ಯಂತ ಕ್ರೈಸ್ತ ಧಾರ್ಮಿಕ ಸಂಸ್ಥೆಗಳ ಮೇಲೆ ನಡೆಯುತ್ತಿದ್ದ ದಾಳಿಗಳ ಭಾಗವಾಗಿತ್ತು. ಇಲ್ಲಿ ಕೆಥೋಲಿಕರ ಮೇಲೆ ಯಾವುದೇ ದಾಳಿಗಳು ನಡೆದಿರಲಿಲ್ಲವಾದರೂ (ನಂತರ ನಡೆದವು) ಇಂತಹಾ ಭಯಹುಟ್ಟಿಸುವ ಕೃತ್ಯ ಎಲ್ಲಾ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಆತಂಕ ಸೃಷ್ಟಿಸಿತ್ತು.

ಇನ್ನೊಂದು ಘಟನೆ ಎಂದರೆ, ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯನ್ನು ಚುಡಾಯಿಸಿದ ಎಂಬ ಆರೋಪದಲ್ಲಿ ಆತನಿಗೆ ಹಿಂದೂತ್ವವಾದಿಗಳ ಗುಂಪೊಂದು ಥಳಿಸಿದ್ದು. ಅದರ ಆರೋಪಿಗಳನ್ನು ಪೊಲೀಸರು ಬಂಧಿಸಿದಾಗ ಪೊಲೀಸರು ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪ ಹೊರಿಸಲಾಗಿತ್ತು. ಪೊಲೀಸರ ಕೆಲಸವನ್ನು ತಾವೇ ಮಾಡುತ್ತೇವೆ, ತಮ್ಮನ್ನು ಅವರು ಬಂಧಿಸುವಂತಿಲ್ಲ ಎಂಬ ಮನೋಭಾವ ಹುಟ್ಟಿ ಇಂದಿನ ವರೆಗೆ ಬೆಳೆದುಬಂದಿರುವುದು ಬಹುಶಃ ಇದೇ ಘಟನೆಯಿಂದ. ಈ ಘಟನೆ ಕೂಡಾ ಕಂದರವನ್ನು ಆಳಗೊಳಿಸಿತ್ತು.

ಆಗಲೇ ಇನ್ನೊಂದು ಘಟನೆಯೂ ನಡೆದಿತ್ತು. ಸುರತ್ಕಲ್‌ನಲ್ಲಿ ಹಾಕಿದ್ದ ಯಕ್ಷಗಾನದ ಬ್ಯಾನರ್ ಒಂದನ್ನು ಕಿಡಿಗೇಡಿಗಳು ಹರಿದುಹಾಕಿದ್ದರು. ಆಗ ಉಂಟಾದ ಉದ್ವಿಗ್ನತೆಯಿಂದ ಯಕ್ಷಗಾನ ಪ್ರದರ್ಶನವೇ ನಿಂತಿತ್ತು. ಇದು ಕೂಡಾ ಧಾರ್ಮಿಕ ಭಾವನೆಗೆ ನೋವುಂಟುಮಾಡುವ ಕೆಲಸವೇ ಆಗಿತ್ತು. ಕೆಲವೇ ಕಿಡಿಗೇಡಿ ಕೃತ್ಯಗಳು, ಪರಿಸ್ಥಿತಿ ಅರಿಯುವುದರಲ್ಲಿ ಪೊಲೀಸ್ ಗುಪ್ತಚರ್ಯೆಯ ವೈಫಲ್ಯ, ಪೊಲೀಸರ ಕಾರ್ಯದಲ್ಲಿ ರಾಜಕಾರಣದ ಹಸ್ತಕ್ಷೇಪ, ಕಾನೂನನ್ನು ಕೈಗೆತ್ತಿಕೊಳ್ಳುವುದು ಇತ್ಯಾದಿಗಳು ಹೇಗೆ ಪರಿಸ್ಥಿತಿಯನ್ನು ಹದಗೆಡಿಸಬಲ್ಲವು ಎಂಬುದನ್ನು ಈ ಘಟನೆ ತೋರಿಸುತ್ತದೆ.

ಇದನ್ನೂ ಓದಿ: ಕರಾವಳಿಯ ಕೋಮು ಸಂಘಟನೆಗಳ ನಿಜಬಣ್ಣ! ಅವುಗಳ ಕಾರ್ಯವಿಧಾನ…

ಈ ಗಲಭೆ ಹರಡುವುದಕ್ಕೆ ವದಂತಿಗಳೂ ಕಾರಣವಾಗಿದ್ದವು. ಇವುಗಳನ್ನು ಹರಡುವುದಕ್ಕೆ ರಾಜಕೀಯ ಹಿತಾಸಕ್ತಿಗಳ ಪ್ರೇರಣೆಯೂ ಇತ್ತು. ವದಂತಿಯ ಸ್ವರೂಪಗಳು ಉಳಿದ ಕಡೆಗಳಂತೆಯೇ ಇದ್ದವು; ಈಗಲೂ ಇವೆ. ‘ನಮ್ಮವರ’ ಮೇಲೆ ದಾಳಿ ಮಾಡುತ್ತಿದ್ದಾರೆ, ನಮ್ಮವರ ಮನೆಗೆ ನುಗ್ಗಿ ಹೊಡೆದಿದ್ದಾರೆ, ನಮ್ಮ ಹೆಣ್ಣು ಮಕ್ಕಳ ಮೇಲೆ, ಅಕ್ಕತಂಗಿಯರ ಮೇಲೆ ಅತ್ಯಾಚಾರ ಮಾಡಿದ್ದಾರೆ, ನಮ್ಮ ತಂದೆ ತಾಯಿಯ ಮೇಲೆ ಕೈ ಹಾಕಿದ್ದಾರೆ, ಪೊಲೀಸರು ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ, ನಮ್ಮವರಿಗೆ ಹೊಡೆದಿದ್ದಾರೆ- ಇವು ಹಿಂದೆ ನಡೆಯುತ್ತಿದ್ದವು, ಇಂದು ಸಾಮಾಜಿಕ ಜಾಲತಾಣಗಳ ಕಾರಣದಿಂದ ಕ್ಷಣಮಾತ್ರದಲ್ಲಿ ನಡೆಯುತ್ತಿವೆ.

ಇಲ್ಲಿ ಆರಂಭವಾದ ಗಲಭೆಗಳ ಪರಿಣಾಮ ಇಲ್ಲಿಗೇ ನಿಲ್ಲಲಿಲ್ಲ. ಸುರತ್ಕಲ್ ಪರಿಸರದಲ್ಲಿಯೇ ಹಲವಾರು ಕೊಲೆಗಳು, ಪ್ರತೀಕಾರಗಳು ನಡೆದವು, ಈಗಲೂ ಮುಂದುವರಿಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...