Homeಕರ್ನಾಟಕಕರಾವಳಿಯಲ್ಲಿ ಕೋಮುಗಲಭೆಗಳ ಇತಿಹಾಸ - ನಿಖಿಲ್‌ ಕೋಲ್ಪೆ

ಕರಾವಳಿಯಲ್ಲಿ ಕೋಮುಗಲಭೆಗಳ ಇತಿಹಾಸ – ನಿಖಿಲ್‌ ಕೋಲ್ಪೆ

- Advertisement -
- Advertisement -

1968ರಲ್ಲಿ ಕರಾವಳಿ ಕರ್ನಾಟಕದಲ್ಲಿ ಅದರಲ್ಲೂ ಉತ್ತರ ಕನ್ನಡದಲ್ಲಿ ಕೋಮು ಉದ್ರಿಕ್ತತೆ ಹೆಚ್ಚಿತ್ತು. ಸುಳ್ಳು ವದಂತಿಗಳು ದಕ್ಷಿಣ ಕನ್ನಡ ಜಿಲ್ಲೆಗೂ ತಲಪಿದವು. ಆ ಸಂದರ್ಭದಲ್ಲಿಯೇ ಮಂಗಳೂರಿನಲ್ಲಿ ಮಟನ್ ಖಾದರ್ ಎಂಬಾತನಿಗೂ, ಮೀನು ಮಾರುವ ಮೊಗವೀರ ಮಹಿಳೆಗೂ ಪ್ರೇಮಸಂಬಂಧವಿದೆ ಎಂಬ ವದಂತಿ ಗಲಭೆಗೆ ಕಾರಣವಾಯಿತು. ಈ ಗಲಭೆಯಲ್ಲಿ ಬಂದರು ಪ್ರದೇಶದಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾದ ಬಗ್ಗೆ ಮಾಹಿತಿ ಸಿಗುತ್ತದೆ.

ಮತ್ತೆ 1979ರಲ್ಲಿ ಖ್ಯಾತ ಚಿತ್ರ ನಿರ್ದೇಶಕ, ಲೇಖಕ ವಿಶುಕುಮಾರ್ ಅವರ ಕನ್ನಡ ಚಿತ್ರ ‘ಕರಾವಳಿ’ಯ ಕಾರಣದಿಂದ ಗಲಭೆ ಉಂಟಾಯಿತು. ಅದು ಮೀನುಗಾರ ಮುಸ್ಲಿಂ ಯುವಕ ಮತ್ತು ಮೊಗವೀರ ಸಮುದಾಯದ ಮಹಿಳೆಯ ನಡುವಿನ ಪ್ರೇಮಕತೆಯಾಗಿದ್ದುದೇ ಇದಕ್ಕೆ ಕಾರಣ. ಈ ಗಲಭೆಗಳು ಹೊಯ್ಗೆಬಜಾರ್, ಕುದ್ರೋಳಿ, ಬಂದರು ಮುಂತಾದ ಪ್ರದೇಶಗಳಲ್ಲಿ ತೀವ್ರವಾಗಿತ್ತು. ಈ ಘಟನೆಯಲ್ಲಿ ಕೆಲವರು ಪ್ರಾಣಕಳೆದುಕೊಂಡರು ಎಂದು ಹೇಳಲಾಗುತ್ತದೆಯಾದರೂ, ನಿಖರ ಮಾಹಿತಿ ಲಭ್ಯವಿಲ್ಲ. ಈ ಘಟನೆಯಲ್ಲಿ ಮುಸ್ಲಿಮರ ಮತ್ತು ಗೌಡ ಸಾರಸ್ವತ ಸಮುದಾಯದವರ ಹಲವಾರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಕೋಮುವಾದದ ಸಾಮಾಜಿಕ ಹಿನ್ನೆಲೆ; ಮೊದಲ ಕೋಮುಗಲಭೆ!

ಹಿಂದೆಲ್ಲಾ ಉಳ್ಳಾಲ ಪ್ರದೇಶವು ಕೋಮುಸೌಹಾರ್ದಕ್ಕೆ ಹೆಸರಾಗಿತ್ತು. ಇದಕ್ಕೆ ದೊಡ್ಡ ಇತಿಹಾಸವಿದ್ದು, ಆ ಕುರಿತು ಈಗಾಗಲೇ ಬರೆಯಲಾಗಿದೆ. ಕೃಷ್ಣಜನ್ಮಾಷ್ಟಮಿಯ ಸಂದರ್ಭದಲ್ಲಿ ಮುಸ್ಲಿಮರು ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದರು. 1980ರ ದಶಕದಲ್ಲಿ ಮಲ್ಲಕಂಭಕ್ಕೆ ಹಂದಿಯ ಕೊಬ್ಬನ್ನು ಸವರಲಾಗುತ್ತದೆ ಎಂದು ಇಂತಹಾ ಉತ್ಸವಗಳಲ್ಲಿ ಭಾಗವಹಿಸುವುದನ್ನು ‘ಶಿರ್ಕ್’ ಎಂದು ಕರೆಯುವ ಕೆಲವು ಸಂಪ್ರದಾಯವಾದಿ ಮುಸ್ಲಿಮರು ವದಂತಿ ಹಬ್ಬಿದರು. ಆಗಿನಿಂದ ಮುಸ್ಲಿಮರ ಭಾಗವಹಿಸುವಿಕೆ ಕಡಿಮೆಯಾಗುತ್ತಾ ಹೋಯಿತು. ಇಂದು ಸಾಮಾನ್ಯ ಸ್ಥಿತಿಯಲ್ಲಿ ಹಿಂದೂ-ಮುಸ್ಲಿಮರು ಸೌಹಾರ್ದದಿಂದಲೇ ಸಹಬಾಳ್ವೆ ನಡೆಸುತ್ತಿದ್ದರೂ, ಸದಾ ಬೂದಿ ಮುಚ್ಚಿದ ಕೆಂಡದಂತೆ ಇರುತ್ತದೆ. ಕೆಲವು ಸಂದರ್ಭಗಳಲ್ಲಿ ಅದು ಸ್ಫೋಟಕ ಸ್ಥಿತಿ ತಲಪುತ್ತದೆ.

ನಂತರ, 1989ರಲ್ಲಿ ಬೈಕಂಪಾಡಿ, ಹೊಸಬೆಟ್ಟು- ಹೀಗೆ ದಕ್ಷಿಣ ಕನ್ನಡದ ಕಡಲತಡಿಯ ಉದ್ದಕ್ಕೂ ಕೋಮುಗಲಭೆ ಉಂಟಾಗಿತ್ತಾದರೂ, ಅದು ಮುಖ್ಯವಾಗಿ ಭಾರೀ ಪ್ರಮಾಣದಲ್ಲಿ ಅಂಗಡಿಗಳ ಲೂಟಿ, ಬೆಂಕಿ ಹಚ್ಚುವಿಕೆ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಲ್ಲಿಯೇ ಕೊನೆಗೊಂಡಿತು.

ನಂತರ ಸಣ್ಣಪುಟ್ಟ ಸಂಘರ್ಷಗಳು ಅಲ್ಲಲ್ಲಿ ನಡೆದೇ ಇದ್ದರೂ, ಇತಿಹಾಸದ ಅತೀ ದೊಡ್ಡ ಕೋಮುಗಲಭೆ ನಡೆದದ್ದು 1998-99ರಲ್ಲಿ. 1998ರ ಡಿಸೆಂಬರ್ 29ರಂದು ಆರಂಭವಾದ ಈ ಗಲಭೆ ಸುರತ್ಕಲ್ ಸಮೀಪದ ಚೊಕ್ಕಬೆಟ್ಟುವಿನಲ್ಲಿ ಆರಂಭವಾಗಿ ನಂತರದಲ್ಲಿ ಸುತ್ತಲಿನ ಕೃಷ್ಣಾಪುರ, ಬೈಕಂಪಾಡಿ, ಕುಳಾಯಿ, ಹೊಸಬೆಟ್ಟು, ತಡಂಬೈಲ್, ಕಾನ, ಕಾಟಿಪಳ್ಳ, ನಂತರ ಮಂಗಳೂರು ನಗರ, ಬಂಟ್ವಾಳ ಮತ್ತು ಪುತ್ತೂರು ತಾಲೂಕುಗಳಿಗೆ ವ್ಯಾಪಿಸಿತ್ತು. ಈ ಗಲಭೆಯಲ್ಲಿ ಎಂಟು ಮಂದಿ ಅಧಿಕೃತ ಮೂಲಗಳ ಪ್ರಕಾರ ಪ್ರಾಣ ಕಳೆದುಕೊಂಡಿದ್ದರು. ಇವರಲ್ಲಿ ಆರು ಮಂದಿ ಮುಸ್ಲಿಮರು ಮತ್ತು ಇಬ್ಬರು ಹಿಂದೂಗಳು. ಅನಧಿಕೃತ ವರದಿಗಳ ಪ್ರಕಾರ ಈ ಸಂಖ್ಯೆ 16 ಆಗಿತ್ತು. 100ಕ್ಕೂ ಹೆಚ್ಚು ಮಂದಿ ಮಾರಣಾಂತಿಕವಾಗಿ ಗಾಯಗೊಂಡಿದ್ದರು. ಮನೆಗೆ ನುಗ್ಗಿ ಹೆಂಗಸರು, ಮಕ್ಕಳು, ವೃದ್ಧರ ಮೇಲೆಯೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಅಮಾನುಷ ಘಟನೆಗಳೂ ನಡೆದಿದ್ದವು. ಘಟನೆಯಲ್ಲಿ ಭಾರೀ ಆಸ್ತಿಪಾಸ್ತಿ ಹಾನಿ ಸಂಭವಿಸಿದ್ದು, 165 ಮನೆಗಳನ್ನು ಧ್ವಂಸ ಮಾಡಲಾಗಿದ್ದು, ಇವುಗಳಲ್ಲಿ 98 ಮುಸ್ಲಿಮರು ಮತ್ತು 67 ಹಿಂದೂಗಳ ಮನೆಗಳಾಗಿದ್ದವು. ಮುಸ್ಲಿಮರ ನಾಲ್ಕು ಪೂಜಾಸ್ಥಳಗಳನ್ನು ಧ್ವಂಸ ಮಾಡಲಾಗಿತ್ತು. ಈ ಅಂಕಿ-ಅಂಶಗಳನ್ನು ನೀಡುತ್ತಿರುವ ಕಾರಣವೆಂದರೆ- ಕಾರಣ ಏನೇ ಇರಲಿ, ಯಾರೇ ಇರಲಿ- ಎರಡೂ ಕಡೆಗಳವರು ಧರ್ಮಗಳ ಹೆಸರಿನಲ್ಲಿ ಮನುಷ್ಯತ್ವ ಮರೆತು ಪಶುಗಳ ರೀತಿ ಕಾದಾಡಿದ್ದರು ಎಂಬುದನ್ನು ಸೂಚಿಸುವುದಾಗಿದೆ.‌‌‌

ಗಲಭೆ ಕಾರಣ ಕ್ಷುಲ್ಲಕವಾದದ್ದು. ಚೊಕ್ಕಬೆಟ್ಟುವಿನಲ್ಲಿ ಗುಜರಿ ಮಾರುವವನೊಬ್ಬ ಒಂದು ಮನೆಯಿಂದ ಗುಜರಿ ಕದ್ದಿದ್ದ. ಆತನನ್ನು ಹಿಡಿದ ಮನೆಯವರು, ನೆರೆಯವರು ಆತನಿಗೆ ಥಳಿಸಿದ್ದರು. ಇದು ಒಂದು ಸಮುದಾಯದ ಕೆಲವರು, ಕಲ್ಲೆಸೆತ ಆರಂಭಿಸುವುದಕ್ಕೆ ಕಾರಣವಾಗಿತ್ತು. ಆದರೆ, ಇದು ಕೇವಲ ನೆಪವಾಗಿತ್ತು. ಇದಕ್ಕಿಂತಲೂ ಮೊದಲು ಬೇರೆ ಮೂರು ಪ್ರತ್ಯೇಕ ಘಟನೆಗಳು ನಡೆದಿದ್ದವು.

1998ರ ನವೆಂಬರ್‌ನಲ್ಲಿ ಕುಳಾಯಿಯಲ್ಲಿ ಕ್ರೈಸ್ತರ ಸಣ್ಣ ಪಂಥವಾದ ಇವಾಂಜಲಿಕ್ ಚರ್ಚಿಗೆ ನುಗ್ಗಿದ ಹಿಂದೂತ್ವವಾದಿಗಳು ರಾಜಾರೋಷವಾಗಿ ನುಗ್ಗಿ ಎಲ್ಲರನ್ನು ಥಳಿಸಿ, ಅದನ್ನು ಧ್ವಂಸಗೊಳಿಸಿದ್ದರು. ಇದು ದೇಶದಾದ್ಯಂತ ಕ್ರೈಸ್ತ ಧಾರ್ಮಿಕ ಸಂಸ್ಥೆಗಳ ಮೇಲೆ ನಡೆಯುತ್ತಿದ್ದ ದಾಳಿಗಳ ಭಾಗವಾಗಿತ್ತು. ಇಲ್ಲಿ ಕೆಥೋಲಿಕರ ಮೇಲೆ ಯಾವುದೇ ದಾಳಿಗಳು ನಡೆದಿರಲಿಲ್ಲವಾದರೂ (ನಂತರ ನಡೆದವು) ಇಂತಹಾ ಭಯಹುಟ್ಟಿಸುವ ಕೃತ್ಯ ಎಲ್ಲಾ ಧಾರ್ಮಿಕ ಅಲ್ಪಸಂಖ್ಯಾತರಲ್ಲಿ ಆತಂಕ ಸೃಷ್ಟಿಸಿತ್ತು.

ಇನ್ನೊಂದು ಘಟನೆ ಎಂದರೆ, ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯನ್ನು ಚುಡಾಯಿಸಿದ ಎಂಬ ಆರೋಪದಲ್ಲಿ ಆತನಿಗೆ ಹಿಂದೂತ್ವವಾದಿಗಳ ಗುಂಪೊಂದು ಥಳಿಸಿದ್ದು. ಅದರ ಆರೋಪಿಗಳನ್ನು ಪೊಲೀಸರು ಬಂಧಿಸಿದಾಗ ಪೊಲೀಸರು ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪ ಹೊರಿಸಲಾಗಿತ್ತು. ಪೊಲೀಸರ ಕೆಲಸವನ್ನು ತಾವೇ ಮಾಡುತ್ತೇವೆ, ತಮ್ಮನ್ನು ಅವರು ಬಂಧಿಸುವಂತಿಲ್ಲ ಎಂಬ ಮನೋಭಾವ ಹುಟ್ಟಿ ಇಂದಿನ ವರೆಗೆ ಬೆಳೆದುಬಂದಿರುವುದು ಬಹುಶಃ ಇದೇ ಘಟನೆಯಿಂದ. ಈ ಘಟನೆ ಕೂಡಾ ಕಂದರವನ್ನು ಆಳಗೊಳಿಸಿತ್ತು.

ಆಗಲೇ ಇನ್ನೊಂದು ಘಟನೆಯೂ ನಡೆದಿತ್ತು. ಸುರತ್ಕಲ್‌ನಲ್ಲಿ ಹಾಕಿದ್ದ ಯಕ್ಷಗಾನದ ಬ್ಯಾನರ್ ಒಂದನ್ನು ಕಿಡಿಗೇಡಿಗಳು ಹರಿದುಹಾಕಿದ್ದರು. ಆಗ ಉಂಟಾದ ಉದ್ವಿಗ್ನತೆಯಿಂದ ಯಕ್ಷಗಾನ ಪ್ರದರ್ಶನವೇ ನಿಂತಿತ್ತು. ಇದು ಕೂಡಾ ಧಾರ್ಮಿಕ ಭಾವನೆಗೆ ನೋವುಂಟುಮಾಡುವ ಕೆಲಸವೇ ಆಗಿತ್ತು. ಕೆಲವೇ ಕಿಡಿಗೇಡಿ ಕೃತ್ಯಗಳು, ಪರಿಸ್ಥಿತಿ ಅರಿಯುವುದರಲ್ಲಿ ಪೊಲೀಸ್ ಗುಪ್ತಚರ್ಯೆಯ ವೈಫಲ್ಯ, ಪೊಲೀಸರ ಕಾರ್ಯದಲ್ಲಿ ರಾಜಕಾರಣದ ಹಸ್ತಕ್ಷೇಪ, ಕಾನೂನನ್ನು ಕೈಗೆತ್ತಿಕೊಳ್ಳುವುದು ಇತ್ಯಾದಿಗಳು ಹೇಗೆ ಪರಿಸ್ಥಿತಿಯನ್ನು ಹದಗೆಡಿಸಬಲ್ಲವು ಎಂಬುದನ್ನು ಈ ಘಟನೆ ತೋರಿಸುತ್ತದೆ.

ಇದನ್ನೂ ಓದಿ: ಕರಾವಳಿಯ ಕೋಮು ಸಂಘಟನೆಗಳ ನಿಜಬಣ್ಣ! ಅವುಗಳ ಕಾರ್ಯವಿಧಾನ…

ಈ ಗಲಭೆ ಹರಡುವುದಕ್ಕೆ ವದಂತಿಗಳೂ ಕಾರಣವಾಗಿದ್ದವು. ಇವುಗಳನ್ನು ಹರಡುವುದಕ್ಕೆ ರಾಜಕೀಯ ಹಿತಾಸಕ್ತಿಗಳ ಪ್ರೇರಣೆಯೂ ಇತ್ತು. ವದಂತಿಯ ಸ್ವರೂಪಗಳು ಉಳಿದ ಕಡೆಗಳಂತೆಯೇ ಇದ್ದವು; ಈಗಲೂ ಇವೆ. ‘ನಮ್ಮವರ’ ಮೇಲೆ ದಾಳಿ ಮಾಡುತ್ತಿದ್ದಾರೆ, ನಮ್ಮವರ ಮನೆಗೆ ನುಗ್ಗಿ ಹೊಡೆದಿದ್ದಾರೆ, ನಮ್ಮ ಹೆಣ್ಣು ಮಕ್ಕಳ ಮೇಲೆ, ಅಕ್ಕತಂಗಿಯರ ಮೇಲೆ ಅತ್ಯಾಚಾರ ಮಾಡಿದ್ದಾರೆ, ನಮ್ಮ ತಂದೆ ತಾಯಿಯ ಮೇಲೆ ಕೈ ಹಾಕಿದ್ದಾರೆ, ಪೊಲೀಸರು ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ, ನಮ್ಮವರಿಗೆ ಹೊಡೆದಿದ್ದಾರೆ- ಇವು ಹಿಂದೆ ನಡೆಯುತ್ತಿದ್ದವು, ಇಂದು ಸಾಮಾಜಿಕ ಜಾಲತಾಣಗಳ ಕಾರಣದಿಂದ ಕ್ಷಣಮಾತ್ರದಲ್ಲಿ ನಡೆಯುತ್ತಿವೆ.

ಇಲ್ಲಿ ಆರಂಭವಾದ ಗಲಭೆಗಳ ಪರಿಣಾಮ ಇಲ್ಲಿಗೇ ನಿಲ್ಲಲಿಲ್ಲ. ಸುರತ್ಕಲ್ ಪರಿಸರದಲ್ಲಿಯೇ ಹಲವಾರು ಕೊಲೆಗಳು, ಪ್ರತೀಕಾರಗಳು ನಡೆದವು, ಈಗಲೂ ಮುಂದುವರಿಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...