Homeಕರ್ನಾಟಕಕರ್ನಾಟಕದ ಒಕ್ಕೂಟ ರಾಜಕೀಯ ವ್ಯವಸ್ಥೆಯ ಚರಿತ್ರೆ: ಟಿ.ಆರ್ ಚಂದ್ರಶೇಖರ

ಕರ್ನಾಟಕದ ಒಕ್ಕೂಟ ರಾಜಕೀಯ ವ್ಯವಸ್ಥೆಯ ಚರಿತ್ರೆ: ಟಿ.ಆರ್ ಚಂದ್ರಶೇಖರ

ಭಾರತದಲ್ಲಿ ಯಾವತ್ತೂ ಪ್ರಾಂತೀಯತೆ ಎನ್ನುವುದು ರಾಷ್ಟ್ರೀಯತೆಗೆ ಎದುರಾಗಿ ನಿಂತಿಲ್ಲ.ಆದರೆ ಒಕ್ಕೂಟ ಮೌಲ್ಯವನ್ನು, ಸಾಂಸ್ಕೃತಿಕ ಬಹುತ್ವವನ್ನು ಕಳೆದುಕೊಂಡರೆ ನಾವು ಅನೇಕ ಗಂಡಾಂತರಗಳನ್ನು ಎದುರಿಸಬೇಕಾಗುತ್ತದೆ.

- Advertisement -
- Advertisement -

ನ್ಯಾಯಪಥ (ವಾರಪತ್ರಿಕೆ. ಸಂ. 3 ಸಂ. 11. ನವೆಂಬರ್ 18, 2020)ದಲ್ಲಿ ಪ್ರೊ. ಶಿವರಾಮಯ್ಯ ಅವರು ‘ಪಂಪನ ವಿಕ್ರಮಾರ್ಜುನ ವಿಜಯವೂ, ಕನ್ನಡ ರಾಷ್ಟ್ರೀಯತೆಯೂ’ ಎಂಬ ಲೇಖನದಲ್ಲಿ ಪಂಪ ಮಹಾಕವಿಯ ಮಹಾಭಾರತವನ್ನು ನಿದರ್ಶನವಾಗಿಟ್ಟುಕೊಂಡು ಕನ್ನಡ ರಾಷ್ಟ್ರೀಯತೆಯ ವಿವಿಧ ಆಯಾಮಗಳನ್ನು (ಜಾತಿವಿರೋಧಿ ಸಂಗತಿಗಳನ್ನು ಸೇರಿಸಿಕೊಂಡು) ಕುರಿತಂತೆ ಚರ್ಚಿಸಿದ್ದಾರೆ. ಕವಿರಾಜಮಾರ್ಗಕಾರನಲ್ಲಿನ ಕನ್ನಡ ರಾಷ್ಟ್ರೀಯತೆಯ ಎಳೆಗಳನ್ನು ಗುರುತಿಸಲು ಅವರು ಪ್ರಯತ್ನಿಸಿದ್ದಾರೆ. ಕನ್ನಡ ರಾಷ್ಟ್ರೀಯತೆಗೆ, ಒಕ್ಕೂಟ ರಾಜಕೀಯ ಪ್ರಣಾಳಿಕೆಗೆ ಮತ್ತು ನಾಡಿನ ಬಹುತ್ವ ಸಂಸ್ಕೃತಿಗೆ ಕರ್ನಾಟಕದಲ್ಲಿ ಸಾವಿರಾರು ವರ್ಷಗಳ ಚರಿತ್ರೆಯಿದೆ. ಕನ್ನಡ ಮನಸ್ಸು ಯಾವತ್ತೂ ವಿಶ್ವಾತ್ಮಕತೆ ಮತ್ತು ಸ್ಥಳೀಯತೆಗಳನ್ನು ಒಟ್ಟಿಗೆ ನಡೆಸಿಕೊಂಡು ಬಂದಿರುವುದಕ್ಕೆ ಇತಿಹಾಸದ ಸಾಕ್ಷಿಯಿದೆ. ಸಾಹಿತ್ಯದ ಮತ್ತು ಕನ್ನಡದ ಎಲ್ಲ ವಿದ್ವಾಂಸರಂತೆ ಪ್ರೊ. ಶಿವರಾಮಯ್ಯ ಅವರೂ ಸಹ ಕವಿರಾಜಮಾರ್ಗಕಾರನ ಪ್ರಸಿದ್ಧ ಕಂದ ಪದ್ಯದಲ್ಲಿನ ಭೌಗೋಳಿಕ ನೆಲೆಗಳನ್ನು ಕುರಿತಂತೆ (ಕಾವೇರಿಯಿಂದ ಆ ಗೋದಾವರಿವರೆಗಿರ್ಪ) ಮಾತನಾಡಿದ್ದಾರೆಯೇ ವಿನಾ ಆ ಪದ್ಯದ ಕೊನೆಯ ಸಾಲು ‘ವಸುಧಾ ವಲಯ ವಿಲೀನ ವಿಷದ ವಿಷಯ ವಿಶೇಷಂ’ ಎಂಬುದರ ಇಂಗಿತಾರ್ಥವನ್ನು ಕುರಿತಂತೆ ಹಚ್ಚು ಚರ್ಚೆಗಳಾಗಿಲ್ಲ. ಈ ಸಾಲಿನಲ್ಲಿ ಕವಿರಾಜಮಾರ್ಗಕಾರನು ಪ್ರಧಾನವಾಗಿ ಒಂದು ನೆಲೆಯಲ್ಲಿ ಬಹುತ್ವವನ್ನು ಮತ್ತೊಂದು ನೆಲೆಯಲ್ಲಿ ಒಕ್ಕೂಟ ವ್ಯವಸ್ಥೆಯ ಬಗ್ಗೆ ಮಾತನಾಡುತ್ತಿದ್ದಾನೆ. ವಸುಧೆಯಲ್ಲಿ ವಿಲೀನ ಎಂದರೆ ಅಲ್ಲಿ ಅನೇಕ ಭಾಷೆಗಳು, ಅನೇಕ ಧರ್ಮಗಳು, ಅನೇಕ ಸಂಸ್ಕೃತಿಗಳು, ಅನೇಕ ಪ್ರದೇಶ-ವಿಶಿಷ್ಟತೆಗಳು ಇರುತ್ತವೆ ಎಂದು ಅರ್ಥ (ಬಹುತ್ವ). ವಸುಧೆಯಲ್ಲಿ ವಿಲೀನವಾಗಿದ್ದರೂ ಅದು ವಿಶಿಷ್ಟವಾದುದು ಎಂಬುದು ಒಕ್ಕೂಟ ತತ್ವವನ್ನು ಹೇಳುತ್ತಿದೆ. ಇದನ್ನು ಯಾವ ಸಂಕೋಚವೂ ಇಲ್ಲದೆ ನಾವು ‘ಕನ್ನಡ ರಾಷ್ಟ್ರೀಯತೆ ಪ್ರಣಾಳಿಕೆ’ ಎಂದು ಕರೆಯಬಹುದು. ಈ ಸಾಲಿನಲ್ಲಿ ಮಾರ್ಗಕಾರ ಏನನ್ನು ಹೇಳುತ್ತಿದ್ದಾನೆ?

ಇದನ್ನೂ ಓದಿ: ಪಂಪನ ವಿಕ್ರಮಾರ್ಜುನ ವಿಜಯವೂ, ಕನ್ನಡ ರಾಷ್ಟ್ರೀಯತೆಯೂ: ಪ್ರೊ.ಶಿವರಾಮಯ್ಯ

ಕನ್ನಡ ಜನಪದವು ‘ವಸುಧೆ’ಯಲ್ಲಿ ಲೀನವಾಗಿದೆ. ಅದು ಲೀನವಾಗಿದ್ದರೂ ತನ್ನ ‘ವಿಶಿಷ್ಟತೆ’ಯನ್ನು ಕಾಪಿಟ್ಟುಕೊಂಡು ಬಂದಿರುವುದನ್ನು ಇದು ಹೇಳುತ್ತಿದೆ. ಕನ್ನಡ ಸಂಸ್ಕೃತಿಯು ವಸುಧೆಯಲ್ಲಿನ ಎಲ್ಲ ಅಂಶಗಳನ್ನು ಒಳಗು ಮಾಡಿಕೊಂಡಿದೆ. ಅದೇ ಸಮಯದಲ್ಲಿ ತನ್ನತನವನ್ನು ಅದು ಬಿಟ್ಟುಕೊಟ್ಟಿಲ್ಲ. ಅದು ತನ್ನ ವಿಶಿಷ್ಟತೆಯನ್ನು ಉಳಿಸಿಕೊಂಡು ವಿಶ್ವಾತ್ಮಕವಾಗಿದೆ. ‘ವಸುಧಾ ವಲಯ ವಿಲೀನ’ ಎಂಬುದು ವಿಶ್ವಾತ್ಮಕತೆಯನ್ನು (ಕೇಂದ್ರ-ಏಕಾತ್ಮಕತೆ) ‘ವಿಶದ ವಿಷಯ ವಿಶೇಷಂ’ ಎಂಬುದು ಸ್ಥಳೀಯತೆಯನ್ನು (ಉಪರಾಷ್ಟ್ರೀಯತೆ) ಪ್ರತಿನಿಧಿಸುತ್ತಿದೆ. ಅನೇಕ ಕನ್ನಡ ವಿದ್ವಾಂಸರು ಗುರುತಿಸಿರುವಂತೆ ಕವಿರಾಜಮಾರ್ಗ ಕೃತಿಯು ಒಂದು ರಾಜಕೀಯ ಪಠ್ಯ. ಕನ್ನಡದ ಸ್ವಾಯತ್ತತೆಯನ್ನು ಇಲ್ಲಿ ಮಾರ್ಗಕಾರ ಗುರುತಿಸುತ್ತಿದ್ದಾನೆ.

ನಮ್ಮ ನಾಡು (ಭಾರತ) ಚರಿತ್ರೆಯಲ್ಲಿ ಯಾವತ್ತೂ ಏಕಚಕ್ರಾಧಿಪತ್ಯವಾಗಿರಲಿಲ್ಲ. ಉದಾ: ರಾಷ್ಟ್ರಕೂಟ ಚಕ್ರವರ್ತಿ ಎರಡನೆಯ ಪುಲಿಕೇಶಿ ದಕ್ಷಿಣಾಪಥೇಶ್ವರ ಎಂಬ ಬಿರುದನ್ನು ಪಡೆದಿದ್ದರೆ ಅವನ ಸಮಕಾಲೀನನಾದ ಹರ್ಷವರ್ಧನನು ಉತ್ತರಾಪಥೇಶ್ವರ ಎನಿಸಿಕೊಂಡಿದ್ದನು. ಆದರೆ ಪುಲಿಕೇಶಿಯ ರಾಜ್ಯಾಡಳಿತದಲ್ಲಿ ಹತ್ತಾರು ಸಾಮಂತ ಅರಸರಿದ್ದರು. ಒಂದು ರೀತಿಯಲ್ಲಿ ಅದೊಂದು ಒಕ್ಕೂಟವಾಗಿತ್ತು. ಅದೇ ರೀತಿಯಲ್ಲಿ ಹರ್ಷವರ್ಧನನ ಸಾಮ್ರಾಜ್ಯದಲ್ಲಿಯೂ ಹತ್ತಾರು ಸಾಮಂತ ಅರಸರಿದ್ದರು. ಅದೊಂದು ಒಕ್ಕೂಟವಾಗಿತ್ತು. ಇವೆರಡೂ ಸೇರಿ ಮಹಾ ಒಕ್ಕೂಟವಾಗಿತ್ತು. ಹೀಗೆ ಚರಿತ್ರೆಯುದ್ದಕ್ಕೂ ಭಾರತದ ರಾಜಕೀಯವು ಹೀಗೆ ಒಕ್ಕೂಟ ವ್ಯವಸ್ಥೆಯಾಗಿತ್ತೇ ವಿನಾ ಏಕಚಕ್ರಾಧಿಪತ್ಯವಾಗಿರಲಿಲ್ಲ. ಇಂತಹ ಒಕ್ಕೂಟ ತತ್ವಕ್ಕೆ ನಮ್ಮ ಸಂವಿಧಾನವೂ ಮನ್ನಣೆ ನೀಡಿದೆ. ಭಾಷಾವಾರು ಪ್ರಾಂತ್ಯಗಳ ರಚನೆಯು ಇದಕ್ಕೆ ಒಂದು ನಿದರ್ಶನವಾಗಿದೆ. ಸ್ವಾತಂತ್ರೋತ್ತರ ಭಾರತದಲ್ಲಿ ಅನೇಕ ಇತಿಮಿತಿಗಳ ನಡುವೆ ಒಕ್ಕೂಟ ತತ್ವವನ್ನು ಪಾಲಿಸಿಕೊಂಡು ಬರಲಾಗಿದೆ. ಇದೀಗ ಇದಕ್ಕೆ ‘ಅಖಂಡವಾದಿ’ಗಳಿಂದ ಅಪಾಯ ಬಂದಿದೆ. ಇಂದು ಭಾರತ ರಾಜಕಾರಣವು ಅಖಂಡತೆಯ ವ್ಯಸನದಲ್ಲಿ ಮುಳುಗಿಹೋಗಿದೆ. ಒಂದು ದೇಶ-ಒಂದು ಧರ್ಮ, ಒಂದು ದೇಶ-ಒಂದು ಭಾಷೆ, ಒಂದು ದೇಶ-ಒಂದು ಮಾರುಕಟ್ಟೆ, ಒಂದು ದೇಶ-ಒಂದು ಬ್ಯಾಂಕು, ಒಂದು ದೇಶ-ಒಂದು ತೆರಿಗೆ, ಒಂದು ದೇಶ-ಒಂದು ಶಿಕ್ಷಣ, ಒಂದು ದೇಶ-ಒಂದು ಮಹಾಭಾರತ-ರಾಮಾಯಣ ಇತ್ಯಾದಿ ಘೋಷಣೆಗಳು ಶಾಸನವಾಗುವ ಪ್ರಕ್ರಿಯೆಯಲ್ಲಿವೆ. ಈ ಬೆಳವಣಿಗೆಯು ರಾಜಕೀಯವಾಗಿ ಒಕ್ಕೂಟ ವ್ಯವಸ್ಥೆಗೆ, ಭಾಷೆಯ ನೆಲೆಯಲ್ಲಿ ಭಾಷಾವಾರು ಪ್ರಾಂತ ಪ್ರಣಾಳಿಕೆಗೆ, ಸಾಂಸ್ಕೃತಿಕವಾಗಿ ಬಹುತ್ವಕ್ಕೆ, ಕೃಷಿ ವೈವಿಧ್ಯತೆಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ನಮ್ಮ ದೇಶವು ಚರಿತ್ರೆಯಲ್ಲಿ ಯಾವತ್ತೂ ಒಂದು ಆಗಿರಲಿಲ್ಲ. ಇದರರ್ಥ ಭಾರತ ಎಂಬುದಿರಲಿಲ್ಲ ಎಂಬುದಲ್ಲ. ಕವಿರಾಜಮಾರ್ಗಕಾರ ಹೇಳುವಂತೆ ಕನ್ನಡ ಜನಪದÀವು ಹೇಗೆ ಭಾವಿಸಿದ ಸಂಗತಿಯಾಗಿತ್ತೋ ಅದೇ ರೀತಿಯಲ್ಲಿ ಭಾರತವೂ ಒಂದು ಭಾವಿಸಿದ ರಾಷ್ಟ್ರವಾಗಿತ್ತು. ಸ್ವಾತಂತ್ರೋತ್ತರ ಭಾರತದಲ್ಲಿ ಒಕ್ಕೂಟ ತತ್ವವು, ಭಾಷಾ ಬಹುತ್ವವು, ಸಾಂಸ್ಕೃತಿಕ ಬಹುವಚನವು ಯಾವ ರೀತಿಯಲ್ಲಿಯೂ, ಯಾವತ್ತೂ ಭಾರತದ ಏಕತೆಗೆ ಕುತ್ತು ಉಂಟುಮಾಡಿಲ್ಲ.

‘ಪ್ರಾಂತೀಯತೆ’ಯನ್ನು ರಾಷ್ಟ್ರೀಯತೆಗೆ ಪ್ರತಿಯಾದುದು ಎಂದು ಭಾವಿಸಬೇಕಾಗಿಲ್ಲ, ಭಾರತದಲ್ಲಿ ಯಾವತ್ತೂ ಪ್ರಾಂತೀಯತೆ ಎನ್ನುವುದು ರಾಷ್ಟ್ರೀಯತೆಗೆ ಎದುರಾಗಿ ನಿಂತಿಲ್ಲ. ರಾಷ್ಟ್ರಕವಿ ಕುವೆಂಪು ಅವರು ಕನ್ನಡ ಮಾತೆಯನ್ನು ‘ಭಾರತ ಜನನಿಯ ತನುಜಾತೆ’ ಎಂದು ಕರೆದಿದ್ದಾರೆ. ಭಾರತದ ಎಲ್ಲ ಪ್ರಾಂತ್ಯಗಳಲ್ಲಿಯೂ ಇದೇ ಭಾವನೆಯು ನೆಲೆಯೂರಿದೆ. ಆದರೆ ಈ ಒಕ್ಕೂಟ ಮೌಲ್ಯವನ್ನು, ಸಾಂಸ್ಕೃತಿಕ ಬಹುತ್ವವನ್ನು ಕಳೆದುಕೊಂಡರೆ ನಾವು ಅನೇಕ ಗಂಡಾಂತರಗಳನ್ನು ಎದುರಿಸಬೇಕಾಗುತ್ತದೆ. ಎಲ್ಲಿಯವರೆಗೆ ನಮ್ಮ ನಾಡನಲ್ಲಿ ಬಹುಭಾಷೆ, ಬಹುಸಾಹಿತ್ಯ, ಬಹುಧರ್ಮ, ಬಹುಳಾಕಾರಿ ಮಾರುಕಟ್ಟೆ, ಪ್ರದೇಶ-ವಿಶಿಷ್ಟ ಕೃಷಿ, ಸ್ಥಳೀಯ ಬ್ಯಾಂಕಿಂಗ್ ವ್ಯವಸ್ಥೆ ಮುಂತಾದ ಬಹುವಚನ ಸಂಸ್ಕೃತಿಯನ್ನು ಪಾಲಿಸುತ್ತಾ ನಡೆಯುತ್ತೇವೆಯೋ ಅಲ್ಲಿಯವರೆಗೆ ನಮ್ಮ ಏಕತೆಗೆ, ಸಮಗ್ರತೆಗೆ ಅಪಾಯವಿರುವುದಿಲ್ಲ. ಅಭಿವೃದ್ಧಿಯ ನೆಲೆಯಲ್ಲಿಯೂ ಒಕ್ಕೂಟವು ಅಗತ್ಯವಾದ ಒಂದು ಪ್ರಣಾಳಿಕೆಯಾಗಿದೆ. ಒಕ್ಕೂಟ ತತ್ವವು ಕೇವಲ ರಾಜಕೀಯ ಸಂಗತಿಯಷ್ಟೇ ಅಲ್ಲ. ಅದಕ್ಕೆ ಭಾಷೆಯ, ಸಂಸ್ಕೃತಿಯ, ಸಾಮಾಜಿಕ ಆಯಾಮವಿದ್ದಂತೆ ಆರ್ಥಿಕ ಮುಖವೂ ಇದೆ.

ಈ ಹಿನ್ನೆಲೆಯಲ್ಲಿ ಇಂದು ಕನ್ನಡ ರಾಷ್ಟ್ರೀಯತೆಗೆ, ಕನ್ನಡ ಭಾಷೆಗೆ, ಕನ್ನಡ ಮನಸ್ಸಿಗೆ ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಕೇಂದ್ರದ ಒಕ್ಕೂಟ ಸರ್ಕಾರವು ಕುತ್ತನ್ನುಂಟುಮಾಡುತ್ತಿದೆ. ‘ಕೇಂದ್ರ ಸರ್ಕಾರ’ (ಯೂನಿಯನ್ ಗೌರ್ವನಮೆಂಟ್) ಎಂಬ ನುಡಿಯೇ ಅಸಂಬದ್ಧವಾದುದು. ನಮ್ಮ ಸಂವಿಧಾನದಲ್ಲಿ ಬಳಕೆಯಾಗಿರುವ ನುಡಿ ಒಕ್ಕೂಟ ಸರ್ಕಾರ (ಇಂಡಿಯಾ ದಟ್ ಈಸ್ ಭಾರತ್, ಶಲ್ ಬಿ ಎ ಯೂನಿಯನ್ ಆಫ್ ಸ್ಟೇಟ್ಸ್). ನಮ್ಮಲ್ಲಿರುವುದು ಸಂವಿಧಾನಾತ್ಮಕ ಒಕ್ಕೂಟ ಸರ್ಕಾರವೇ ವಿನಾ ಕೇಂದ್ರ ಸರ್ಕಾರವಲ್ಲ. ಒಕ್ಕೂಟತನವು ಭಾರತದ ಭದ್ರತೆಯ ತತ್ವ. ಪ್ರೊ. ಶಿವರಾಮಯ್ಯ ಅವರು ಸರಿಯಾಗಿ ಗುರುತಿಸಿರುವಂತೆ ಪಂಪ ಭಾರತವೆನ್ನುವುದು ಕನ್ನಡದ ಭಾರತವೇ ವಿನಾ ಭಾರತದ ‘ಭಾರತವಲ್ಲ. ಅಂದರೆ ನಮ್ಮ ದೇಶದಲ್ಲಿ ಪ್ರತಿಭಾಷೆಗೂ ಒಂದೊಂದು ಅಥವಾ ಅನೇಕ ಮಹಾಭಾರತ-ರಾಮಾಯಣಗಳಿವೆ. ಕನ್ನಡದಲ್ಲಿಯೇ ಇದನ್ನು ಕಾಣಬಹುದು.

ಡಾ. ಟಿ. ಆರ್. ಚಂದ್ರಶೇಖರ

ಕನ್ನಡ ರಾಷ್ಟ್ರೀಯತೆಯ ಚಳವಳಿಯ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚು ಅಗತ್ಯವಾಗಿದೆ. ಇದೇ ಸಂಪುಟದಲ್ಲಿನ ಟಿ. ಎ. ನಾರಾಯಣಗೌಡ ಅವರು ಕನ್ನಡ ರಾಷ್ಟ್ರೀಯತೆಯ ಸಂಘಟನೆಯ-ಹೋರಾಟದ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಕನ್ನಡ ರಾಷ್ಟ್ರೀಯತೆಯು ಕನ್ನಡಿಗರ ಬದುಕಿನ, ಉದ್ಯೋಗದ, ಒಕ್ಕಲುತನದ, ವ್ಯಾಪಾರ-ವ್ಯವಹಾರ-ವಹಿವಾಟಿನ, ಉದ್ದಿಮೆರಂಗದ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಎ ಪ್ರಾಮಿಸ್ಡ್ ಲ್ಯಾಂಡ್: ಒಬಾಮಾ ಪುಸ್ತಕದಲ್ಲಿ ನಿಜಕ್ಕೂ ಏನಿದೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...