Homeಮುಖಪುಟಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಎರಡು ದಿನ ಮುಂಚೆ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿಯನ್ನು ಕೊಂದು ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

- Advertisement -
- Advertisement -

ಎಪ್ಪತ್ತೈದು ವರ್ಷಗಳ ಹಿಂದೆ,  1945 ಏಪ್ರಿಲ್ 30 ರ ಇದೇ ದಿನ ಜಗತ್ತನ್ನೇ ಕಾಡಿದ್ದ ಸರ್ವಾಧಿಕಾರಿ, ನಾಝಿ ದಂಡ ನಾಯಕ ಅಡಾಲ್ಫ್‌ ಹಿಟ್ಲರ್‌ ತನ್ನ ಪತ್ನಿ ಇವಾ ಬ್ರಾನ್‌‌ನೊಂದಿಗೆ ಮಧ್ಯಾಹ್ನ 3:15 ರ ಹೊತ್ತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಮೂಲಕ ವಿಶ್ವದಾದ್ಯಂತ ಹರಡಿದ್ದ ಎರಡನೆ ವಿಶ್ವ ಯುದ್ದದ ಕರಾಳ ಛಾಯೆಯೊಂದು ಮುಗಿದ ದಿನವಿಂದು.

ತನ್ನ ಆತ್ಮಹತ್ಯೆಗಿಂತಲೂ ಮುಂಚೆ ಅಡಾಲ್ಫ್ ಹಿಟ್ಲರ್ ತನ್ನ ಪತ್ನಿ ಇವಾ ಬ್ರಾನ್‌ನೊಂದಿಗೆ ಭೂಗತ ಬಂಕರ್‌ವೊಂದಕ್ಕೆ ತೆರಳಿದ್ದ. ಅದಕ್ಕಿಂತ ಮುಂಚೆಯೆ ಅವನು ತನ್ನ ಸೇವಕರಿಗೆ ವಿದಾಯ ಹೇಳಿ ತನ್ನ ನಾಯಿಗೆ ವಿಷ ಕೊಟ್ಟಿದ್ದ. ಭೂಗತ ಬಂಕರ್‌ಗೆ ತೆರಳುವ ಮುಂಚೆ ಅವನ ಬಳಿ ಪಿಸ್ತೂಲ್ ಮತ್ತು ಇವಾ ಬ್ರಾನ್ ಬಳಿ ಸೈನೈಡ್ ಇತ್ತು. ಅವರಿಬ್ಬರು ಮದುವೆಯಾಗಿ ಕೇವಲ ಒಂದುವರೆ ದಿನವಷ್ಟೇ ಆಗಿತ್ತು.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಆತ್ಮಹತ್ಯೆ ಮಾಡಿದ ದಿನ ಹಿಟ್ಲರ್‌ ನಾಝಿ ಸಮವಸ್ತ್ರವಾದ ಜಾಕೆಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದ. ಇವಾ ಬ್ರಾನ್ ಬಿಳಿ ಬಣ್ಣದಲ್ಲಿ ಟ್ರಿಮ್ ಮಾಡಿದ ನೀಲಿ ಉಡುಪನ್ನು ಧರಿಸಿದ್ದಳು. ಸಾಯುವ ಹೊತ್ತಿಗೆ ಹಿಟ್ಲರ್‌ ವಯಸ್ಸು 56 ಹಾಗೂ ಪತ್ನಿಯ ವಯಸ್ಸು 33.

ಮಧ್ಯಾಹ್ನ 3:15 , ಏಪ್ರಿಲ್ 30, 1945 ರ ಗುರುವಾರ.

ಬರ್ಲಿನ್‌ ಅನ್ನು ನೆಲಸಮ ಮಾಡಿದ ರಷ್ಯಾದ ಪಿರಂಗಿದಳವು ಆರು ವರ್ಷಗಳ ಹಿಟ್ಲರ್‌‌ನ ಹತ್ಯಾಕಾಂಡದ ರಕ್ತಸಿಕ್ತ ಅಧ್ಯಾಯವನ್ನು ಮುಗಿಸಿದರು.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಲಕ್ಷಾಂತರ ಜನರ ಹತ್ಯೆಗೆ ಕಾರಣವಾದ, ಇಡೀ ಯುರೋಪ್‌ ಖಂಡವನ್ನು ಎರಡನೆಯ ಮಹಾಯುದ್ಧದಲ್ಲಿ ಮುಳುಗಿಸಿದ, ವಿಶ್ವದಾದ್ಯಂತ ದುಃಖ ಮತ್ತು ವಿನಾಶವನ್ನು ಹರಡಿದ, ತನ್ನನ್ನು ತಾನು ಆರ್ಯ ಜನಾಂಗೀಯ ಎಂದು ಘೋಷಿಸಿದ್ದ, ಜನಾಂಗೀಯವಾದಿ ಕ್ರೂರಿ ವ್ಯಕ್ತಿಯೊಬ್ಬ ಕೊನೆಗೂ ತನ್ನನ್ನು ತಾನೆ ಕೊಂದುಕೊಂಡು ಬಿಟ್ಟಿದ್ದ.

ಮಹಿಳೆ, ಮಕ್ಕಳು ಸೇರಿದಂತೆ ಹಿಟ್ಲರನ ಅಟ್ಟಹಾಸಕ್ಕೆ ಜೀವ ತೆತ್ತಿದ್ದು ಅಮಾಯಕ 60 ಲಕ್ಷ ಜೀವಗಳು!

ಇದಕ್ಕಿಂತಲೂ ಎರಡು ದಿನ ಮುಂಚೆ ಆಸ್ಟ್ರೀಯಾಕ್ಕೆ ಪಲಾಯನಕ್ಕೆ ಹೊರಟಿದ್ದ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿ ಮತ್ತು ಆತನ ಪತ್ನಿಯನ್ನು ಕಮ್ಯುನಿಷ್ಟ್‌ ಪಕ್ಷದ ಕಾರ್ಯಕರ್ತರು ಸೆರೆ ಹಿಡಿದಿದ್ದರು. ನಂತರ  ಅವರನ್ನು ಗುಂಡು ಹಾರಿಸಿ ಕೊಲ್ಲಲಾಗಿತ್ತು. ಅವರ ಮೃತದೇಹವನ್ನು ಟ್ರಕ್ ಮೂಲಕ ಇಟಲಿಯ ನಗರವಾದ ಮಿಲನ್‌ಗೆ ಸಾಗಿಸಿ, ಅಲ್ಲಿ ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇತಿಹಾಸ ಮರುಕಳಿಸುವ ದಿನಗಳು ಸಮೀಪಿಸಿವೆ. ಭಾರತ ದೇಶಕ್ಕೆ ರಾಹುವಿನಂತೆ ಅಂಟಿಕೊಂಡಿರುವ ಮೋ(ದಿ)ರಿ ಕಳಂಕವೊಂದು ಇದೇ ರೀತಿಯ ಅಂತ್ಯ ಕಾಣಬೇಕಿದೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...