Homeಮುಖಪುಟಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಎರಡು ದಿನ ಮುಂಚೆ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿಯನ್ನು ಕೊಂದು ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

- Advertisement -
- Advertisement -

ಎಪ್ಪತ್ತೈದು ವರ್ಷಗಳ ಹಿಂದೆ,  1945 ಏಪ್ರಿಲ್ 30 ರ ಇದೇ ದಿನ ಜಗತ್ತನ್ನೇ ಕಾಡಿದ್ದ ಸರ್ವಾಧಿಕಾರಿ, ನಾಝಿ ದಂಡ ನಾಯಕ ಅಡಾಲ್ಫ್‌ ಹಿಟ್ಲರ್‌ ತನ್ನ ಪತ್ನಿ ಇವಾ ಬ್ರಾನ್‌‌ನೊಂದಿಗೆ ಮಧ್ಯಾಹ್ನ 3:15 ರ ಹೊತ್ತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಮೂಲಕ ವಿಶ್ವದಾದ್ಯಂತ ಹರಡಿದ್ದ ಎರಡನೆ ವಿಶ್ವ ಯುದ್ದದ ಕರಾಳ ಛಾಯೆಯೊಂದು ಮುಗಿದ ದಿನವಿಂದು.

ತನ್ನ ಆತ್ಮಹತ್ಯೆಗಿಂತಲೂ ಮುಂಚೆ ಅಡಾಲ್ಫ್ ಹಿಟ್ಲರ್ ತನ್ನ ಪತ್ನಿ ಇವಾ ಬ್ರಾನ್‌ನೊಂದಿಗೆ ಭೂಗತ ಬಂಕರ್‌ವೊಂದಕ್ಕೆ ತೆರಳಿದ್ದ. ಅದಕ್ಕಿಂತ ಮುಂಚೆಯೆ ಅವನು ತನ್ನ ಸೇವಕರಿಗೆ ವಿದಾಯ ಹೇಳಿ ತನ್ನ ನಾಯಿಗೆ ವಿಷ ಕೊಟ್ಟಿದ್ದ. ಭೂಗತ ಬಂಕರ್‌ಗೆ ತೆರಳುವ ಮುಂಚೆ ಅವನ ಬಳಿ ಪಿಸ್ತೂಲ್ ಮತ್ತು ಇವಾ ಬ್ರಾನ್ ಬಳಿ ಸೈನೈಡ್ ಇತ್ತು. ಅವರಿಬ್ಬರು ಮದುವೆಯಾಗಿ ಕೇವಲ ಒಂದುವರೆ ದಿನವಷ್ಟೇ ಆಗಿತ್ತು.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಆತ್ಮಹತ್ಯೆ ಮಾಡಿದ ದಿನ ಹಿಟ್ಲರ್‌ ನಾಝಿ ಸಮವಸ್ತ್ರವಾದ ಜಾಕೆಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದ. ಇವಾ ಬ್ರಾನ್ ಬಿಳಿ ಬಣ್ಣದಲ್ಲಿ ಟ್ರಿಮ್ ಮಾಡಿದ ನೀಲಿ ಉಡುಪನ್ನು ಧರಿಸಿದ್ದಳು. ಸಾಯುವ ಹೊತ್ತಿಗೆ ಹಿಟ್ಲರ್‌ ವಯಸ್ಸು 56 ಹಾಗೂ ಪತ್ನಿಯ ವಯಸ್ಸು 33.

ಮಧ್ಯಾಹ್ನ 3:15 , ಏಪ್ರಿಲ್ 30, 1945 ರ ಗುರುವಾರ.

ಬರ್ಲಿನ್‌ ಅನ್ನು ನೆಲಸಮ ಮಾಡಿದ ರಷ್ಯಾದ ಪಿರಂಗಿದಳವು ಆರು ವರ್ಷಗಳ ಹಿಟ್ಲರ್‌‌ನ ಹತ್ಯಾಕಾಂಡದ ರಕ್ತಸಿಕ್ತ ಅಧ್ಯಾಯವನ್ನು ಮುಗಿಸಿದರು.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಲಕ್ಷಾಂತರ ಜನರ ಹತ್ಯೆಗೆ ಕಾರಣವಾದ, ಇಡೀ ಯುರೋಪ್‌ ಖಂಡವನ್ನು ಎರಡನೆಯ ಮಹಾಯುದ್ಧದಲ್ಲಿ ಮುಳುಗಿಸಿದ, ವಿಶ್ವದಾದ್ಯಂತ ದುಃಖ ಮತ್ತು ವಿನಾಶವನ್ನು ಹರಡಿದ, ತನ್ನನ್ನು ತಾನು ಆರ್ಯ ಜನಾಂಗೀಯ ಎಂದು ಘೋಷಿಸಿದ್ದ, ಜನಾಂಗೀಯವಾದಿ ಕ್ರೂರಿ ವ್ಯಕ್ತಿಯೊಬ್ಬ ಕೊನೆಗೂ ತನ್ನನ್ನು ತಾನೆ ಕೊಂದುಕೊಂಡು ಬಿಟ್ಟಿದ್ದ.

ಮಹಿಳೆ, ಮಕ್ಕಳು ಸೇರಿದಂತೆ ಹಿಟ್ಲರನ ಅಟ್ಟಹಾಸಕ್ಕೆ ಜೀವ ತೆತ್ತಿದ್ದು ಅಮಾಯಕ 60 ಲಕ್ಷ ಜೀವಗಳು!

ಇದಕ್ಕಿಂತಲೂ ಎರಡು ದಿನ ಮುಂಚೆ ಆಸ್ಟ್ರೀಯಾಕ್ಕೆ ಪಲಾಯನಕ್ಕೆ ಹೊರಟಿದ್ದ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿ ಮತ್ತು ಆತನ ಪತ್ನಿಯನ್ನು ಕಮ್ಯುನಿಷ್ಟ್‌ ಪಕ್ಷದ ಕಾರ್ಯಕರ್ತರು ಸೆರೆ ಹಿಡಿದಿದ್ದರು. ನಂತರ  ಅವರನ್ನು ಗುಂಡು ಹಾರಿಸಿ ಕೊಲ್ಲಲಾಗಿತ್ತು. ಅವರ ಮೃತದೇಹವನ್ನು ಟ್ರಕ್ ಮೂಲಕ ಇಟಲಿಯ ನಗರವಾದ ಮಿಲನ್‌ಗೆ ಸಾಗಿಸಿ, ಅಲ್ಲಿ ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇತಿಹಾಸ ಮರುಕಳಿಸುವ ದಿನಗಳು ಸಮೀಪಿಸಿವೆ. ಭಾರತ ದೇಶಕ್ಕೆ ರಾಹುವಿನಂತೆ ಅಂಟಿಕೊಂಡಿರುವ ಮೋ(ದಿ)ರಿ ಕಳಂಕವೊಂದು ಇದೇ ರೀತಿಯ ಅಂತ್ಯ ಕಾಣಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...