Homeಮುಖಪುಟಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಎರಡು ದಿನ ಮುಂಚೆ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿಯನ್ನು ಕೊಂದು ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

- Advertisement -
- Advertisement -

ಎಪ್ಪತ್ತೈದು ವರ್ಷಗಳ ಹಿಂದೆ,  1945 ಏಪ್ರಿಲ್ 30 ರ ಇದೇ ದಿನ ಜಗತ್ತನ್ನೇ ಕಾಡಿದ್ದ ಸರ್ವಾಧಿಕಾರಿ, ನಾಝಿ ದಂಡ ನಾಯಕ ಅಡಾಲ್ಫ್‌ ಹಿಟ್ಲರ್‌ ತನ್ನ ಪತ್ನಿ ಇವಾ ಬ್ರಾನ್‌‌ನೊಂದಿಗೆ ಮಧ್ಯಾಹ್ನ 3:15 ರ ಹೊತ್ತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಮೂಲಕ ವಿಶ್ವದಾದ್ಯಂತ ಹರಡಿದ್ದ ಎರಡನೆ ವಿಶ್ವ ಯುದ್ದದ ಕರಾಳ ಛಾಯೆಯೊಂದು ಮುಗಿದ ದಿನವಿಂದು.

ತನ್ನ ಆತ್ಮಹತ್ಯೆಗಿಂತಲೂ ಮುಂಚೆ ಅಡಾಲ್ಫ್ ಹಿಟ್ಲರ್ ತನ್ನ ಪತ್ನಿ ಇವಾ ಬ್ರಾನ್‌ನೊಂದಿಗೆ ಭೂಗತ ಬಂಕರ್‌ವೊಂದಕ್ಕೆ ತೆರಳಿದ್ದ. ಅದಕ್ಕಿಂತ ಮುಂಚೆಯೆ ಅವನು ತನ್ನ ಸೇವಕರಿಗೆ ವಿದಾಯ ಹೇಳಿ ತನ್ನ ನಾಯಿಗೆ ವಿಷ ಕೊಟ್ಟಿದ್ದ. ಭೂಗತ ಬಂಕರ್‌ಗೆ ತೆರಳುವ ಮುಂಚೆ ಅವನ ಬಳಿ ಪಿಸ್ತೂಲ್ ಮತ್ತು ಇವಾ ಬ್ರಾನ್ ಬಳಿ ಸೈನೈಡ್ ಇತ್ತು. ಅವರಿಬ್ಬರು ಮದುವೆಯಾಗಿ ಕೇವಲ ಒಂದುವರೆ ದಿನವಷ್ಟೇ ಆಗಿತ್ತು.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಆತ್ಮಹತ್ಯೆ ಮಾಡಿದ ದಿನ ಹಿಟ್ಲರ್‌ ನಾಝಿ ಸಮವಸ್ತ್ರವಾದ ಜಾಕೆಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದ. ಇವಾ ಬ್ರಾನ್ ಬಿಳಿ ಬಣ್ಣದಲ್ಲಿ ಟ್ರಿಮ್ ಮಾಡಿದ ನೀಲಿ ಉಡುಪನ್ನು ಧರಿಸಿದ್ದಳು. ಸಾಯುವ ಹೊತ್ತಿಗೆ ಹಿಟ್ಲರ್‌ ವಯಸ್ಸು 56 ಹಾಗೂ ಪತ್ನಿಯ ವಯಸ್ಸು 33.

ಮಧ್ಯಾಹ್ನ 3:15 , ಏಪ್ರಿಲ್ 30, 1945 ರ ಗುರುವಾರ.

ಬರ್ಲಿನ್‌ ಅನ್ನು ನೆಲಸಮ ಮಾಡಿದ ರಷ್ಯಾದ ಪಿರಂಗಿದಳವು ಆರು ವರ್ಷಗಳ ಹಿಟ್ಲರ್‌‌ನ ಹತ್ಯಾಕಾಂಡದ ರಕ್ತಸಿಕ್ತ ಅಧ್ಯಾಯವನ್ನು ಮುಗಿಸಿದರು.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಲಕ್ಷಾಂತರ ಜನರ ಹತ್ಯೆಗೆ ಕಾರಣವಾದ, ಇಡೀ ಯುರೋಪ್‌ ಖಂಡವನ್ನು ಎರಡನೆಯ ಮಹಾಯುದ್ಧದಲ್ಲಿ ಮುಳುಗಿಸಿದ, ವಿಶ್ವದಾದ್ಯಂತ ದುಃಖ ಮತ್ತು ವಿನಾಶವನ್ನು ಹರಡಿದ, ತನ್ನನ್ನು ತಾನು ಆರ್ಯ ಜನಾಂಗೀಯ ಎಂದು ಘೋಷಿಸಿದ್ದ, ಜನಾಂಗೀಯವಾದಿ ಕ್ರೂರಿ ವ್ಯಕ್ತಿಯೊಬ್ಬ ಕೊನೆಗೂ ತನ್ನನ್ನು ತಾನೆ ಕೊಂದುಕೊಂಡು ಬಿಟ್ಟಿದ್ದ.

ಮಹಿಳೆ, ಮಕ್ಕಳು ಸೇರಿದಂತೆ ಹಿಟ್ಲರನ ಅಟ್ಟಹಾಸಕ್ಕೆ ಜೀವ ತೆತ್ತಿದ್ದು ಅಮಾಯಕ 60 ಲಕ್ಷ ಜೀವಗಳು!

ಇದಕ್ಕಿಂತಲೂ ಎರಡು ದಿನ ಮುಂಚೆ ಆಸ್ಟ್ರೀಯಾಕ್ಕೆ ಪಲಾಯನಕ್ಕೆ ಹೊರಟಿದ್ದ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿ ಮತ್ತು ಆತನ ಪತ್ನಿಯನ್ನು ಕಮ್ಯುನಿಷ್ಟ್‌ ಪಕ್ಷದ ಕಾರ್ಯಕರ್ತರು ಸೆರೆ ಹಿಡಿದಿದ್ದರು. ನಂತರ  ಅವರನ್ನು ಗುಂಡು ಹಾರಿಸಿ ಕೊಲ್ಲಲಾಗಿತ್ತು. ಅವರ ಮೃತದೇಹವನ್ನು ಟ್ರಕ್ ಮೂಲಕ ಇಟಲಿಯ ನಗರವಾದ ಮಿಲನ್‌ಗೆ ಸಾಗಿಸಿ, ಅಲ್ಲಿ ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇತಿಹಾಸ ಮರುಕಳಿಸುವ ದಿನಗಳು ಸಮೀಪಿಸಿವೆ. ಭಾರತ ದೇಶಕ್ಕೆ ರಾಹುವಿನಂತೆ ಅಂಟಿಕೊಂಡಿರುವ ಮೋ(ದಿ)ರಿ ಕಳಂಕವೊಂದು ಇದೇ ರೀತಿಯ ಅಂತ್ಯ ಕಾಣಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...