Homeಮುಖಪುಟಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಇತಿಹಾಸ: 60 ಲಕ್ಷ ಜನರ ಹತ್ಯಾಕಾಂಡದ ರೂವಾರಿ ‘ಅಡಾಲ್ಫ್‌ ಹಿಟ್ಲರ್‌‌’ ಆತ್ಮಹತ್ಯೆ ಮಾಡಿಕೊಂಡ ದಿನವಿಂದು!

ಎರಡು ದಿನ ಮುಂಚೆ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿಯನ್ನು ಕೊಂದು ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

- Advertisement -
- Advertisement -

ಎಪ್ಪತ್ತೈದು ವರ್ಷಗಳ ಹಿಂದೆ,  1945 ಏಪ್ರಿಲ್ 30 ರ ಇದೇ ದಿನ ಜಗತ್ತನ್ನೇ ಕಾಡಿದ್ದ ಸರ್ವಾಧಿಕಾರಿ, ನಾಝಿ ದಂಡ ನಾಯಕ ಅಡಾಲ್ಫ್‌ ಹಿಟ್ಲರ್‌ ತನ್ನ ಪತ್ನಿ ಇವಾ ಬ್ರಾನ್‌‌ನೊಂದಿಗೆ ಮಧ್ಯಾಹ್ನ 3:15 ರ ಹೊತ್ತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಮೂಲಕ ವಿಶ್ವದಾದ್ಯಂತ ಹರಡಿದ್ದ ಎರಡನೆ ವಿಶ್ವ ಯುದ್ದದ ಕರಾಳ ಛಾಯೆಯೊಂದು ಮುಗಿದ ದಿನವಿಂದು.

ತನ್ನ ಆತ್ಮಹತ್ಯೆಗಿಂತಲೂ ಮುಂಚೆ ಅಡಾಲ್ಫ್ ಹಿಟ್ಲರ್ ತನ್ನ ಪತ್ನಿ ಇವಾ ಬ್ರಾನ್‌ನೊಂದಿಗೆ ಭೂಗತ ಬಂಕರ್‌ವೊಂದಕ್ಕೆ ತೆರಳಿದ್ದ. ಅದಕ್ಕಿಂತ ಮುಂಚೆಯೆ ಅವನು ತನ್ನ ಸೇವಕರಿಗೆ ವಿದಾಯ ಹೇಳಿ ತನ್ನ ನಾಯಿಗೆ ವಿಷ ಕೊಟ್ಟಿದ್ದ. ಭೂಗತ ಬಂಕರ್‌ಗೆ ತೆರಳುವ ಮುಂಚೆ ಅವನ ಬಳಿ ಪಿಸ್ತೂಲ್ ಮತ್ತು ಇವಾ ಬ್ರಾನ್ ಬಳಿ ಸೈನೈಡ್ ಇತ್ತು. ಅವರಿಬ್ಬರು ಮದುವೆಯಾಗಿ ಕೇವಲ ಒಂದುವರೆ ದಿನವಷ್ಟೇ ಆಗಿತ್ತು.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಆತ್ಮಹತ್ಯೆ ಮಾಡಿದ ದಿನ ಹಿಟ್ಲರ್‌ ನಾಝಿ ಸಮವಸ್ತ್ರವಾದ ಜಾಕೆಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದ. ಇವಾ ಬ್ರಾನ್ ಬಿಳಿ ಬಣ್ಣದಲ್ಲಿ ಟ್ರಿಮ್ ಮಾಡಿದ ನೀಲಿ ಉಡುಪನ್ನು ಧರಿಸಿದ್ದಳು. ಸಾಯುವ ಹೊತ್ತಿಗೆ ಹಿಟ್ಲರ್‌ ವಯಸ್ಸು 56 ಹಾಗೂ ಪತ್ನಿಯ ವಯಸ್ಸು 33.

ಮಧ್ಯಾಹ್ನ 3:15 , ಏಪ್ರಿಲ್ 30, 1945 ರ ಗುರುವಾರ.

ಬರ್ಲಿನ್‌ ಅನ್ನು ನೆಲಸಮ ಮಾಡಿದ ರಷ್ಯಾದ ಪಿರಂಗಿದಳವು ಆರು ವರ್ಷಗಳ ಹಿಟ್ಲರ್‌‌ನ ಹತ್ಯಾಕಾಂಡದ ರಕ್ತಸಿಕ್ತ ಅಧ್ಯಾಯವನ್ನು ಮುಗಿಸಿದರು.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಲಕ್ಷಾಂತರ ಜನರ ಹತ್ಯೆಗೆ ಕಾರಣವಾದ, ಇಡೀ ಯುರೋಪ್‌ ಖಂಡವನ್ನು ಎರಡನೆಯ ಮಹಾಯುದ್ಧದಲ್ಲಿ ಮುಳುಗಿಸಿದ, ವಿಶ್ವದಾದ್ಯಂತ ದುಃಖ ಮತ್ತು ವಿನಾಶವನ್ನು ಹರಡಿದ, ತನ್ನನ್ನು ತಾನು ಆರ್ಯ ಜನಾಂಗೀಯ ಎಂದು ಘೋಷಿಸಿದ್ದ, ಜನಾಂಗೀಯವಾದಿ ಕ್ರೂರಿ ವ್ಯಕ್ತಿಯೊಬ್ಬ ಕೊನೆಗೂ ತನ್ನನ್ನು ತಾನೆ ಕೊಂದುಕೊಂಡು ಬಿಟ್ಟಿದ್ದ.

ಮಹಿಳೆ, ಮಕ್ಕಳು ಸೇರಿದಂತೆ ಹಿಟ್ಲರನ ಅಟ್ಟಹಾಸಕ್ಕೆ ಜೀವ ತೆತ್ತಿದ್ದು ಅಮಾಯಕ 60 ಲಕ್ಷ ಜೀವಗಳು!

ಇದಕ್ಕಿಂತಲೂ ಎರಡು ದಿನ ಮುಂಚೆ ಆಸ್ಟ್ರೀಯಾಕ್ಕೆ ಪಲಾಯನಕ್ಕೆ ಹೊರಟಿದ್ದ ಇಟಲಿಯ ಸರ್ವಾಧಿಕಾರಿ ಮುಸ್ಸಲೋನಿ ಮತ್ತು ಆತನ ಪತ್ನಿಯನ್ನು ಕಮ್ಯುನಿಷ್ಟ್‌ ಪಕ್ಷದ ಕಾರ್ಯಕರ್ತರು ಸೆರೆ ಹಿಡಿದಿದ್ದರು. ನಂತರ  ಅವರನ್ನು ಗುಂಡು ಹಾರಿಸಿ ಕೊಲ್ಲಲಾಗಿತ್ತು. ಅವರ ಮೃತದೇಹವನ್ನು ಟ್ರಕ್ ಮೂಲಕ ಇಟಲಿಯ ನಗರವಾದ ಮಿಲನ್‌ಗೆ ಸಾಗಿಸಿ, ಅಲ್ಲಿ ತಲೆಕೆಳಗಾಗಿ ನೇತುಹಾಕಿ ಸಾರ್ವಜನಿಕವಾಗಿ ಪ್ರದರ್ಶಿಸಲಾಯಿತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಾವಧಿಯಲ್ಲಿ ಕೇವಲ ಒಂದೇ ಒಂದು ಏಮ್ಸ್ ಸ್ಥಾಪನೆಯಾಯಿತೆ…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇತಿಹಾಸ ಮರುಕಳಿಸುವ ದಿನಗಳು ಸಮೀಪಿಸಿವೆ. ಭಾರತ ದೇಶಕ್ಕೆ ರಾಹುವಿನಂತೆ ಅಂಟಿಕೊಂಡಿರುವ ಮೋ(ದಿ)ರಿ ಕಳಂಕವೊಂದು ಇದೇ ರೀತಿಯ ಅಂತ್ಯ ಕಾಣಬೇಕಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...